Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 3:18 - ಕನ್ನಡ ಸತ್ಯವೇದವು C.L. Bible (BSI)

18 ಹೀಗೆ ದೇವಜನರೆಲ್ಲರೊಡನೆ, ಕ್ರಿಸ್ತಯೇಸುವಿನ ಅಗಾಧ ಪ್ರೀತಿಯ ಉದ್ದ-ಅಗಲ, ಆಳ-ಎತ್ತರ ಎಷ್ಟೆಂಬುದನ್ನು ನೀವು ಗ್ರಹಿಸಿಕೊಳ್ಳುವಂತಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನೀವು ದೇವರ ಪ್ರೀತಿಯಲ್ಲಿ ನೆಲೆಯಾಗಿ ನಿಂತು, ದೇವಜನರೆಲ್ಲರೊಂದಿಗೆ ಅದರ ಅಗಲ, ಉದ್ದ, ಎತ್ತರ, ಆಳ ಎಷ್ಟೆಂಬುದನ್ನು ಗ್ರಹಿಸುವುದಕ್ಕೆ ಶಕ್ತರಾಗುವಂತೆಯೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನೀವು ದೇವರ ಪ್ರೀತಿಯಲ್ಲಿ ನೆಲೆಗೊಂಡು ನಿಂತು ಅದರ ಅಗಲ ಉದ್ದ ಎತ್ತರ ಆಳ ಎಷ್ಟೆಂಬದನ್ನು ದೇವಜನರೆಲ್ಲರೊಂದಿಗೆ ಗ್ರಹಿಸಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನೀವು ಮತ್ತು ದೇವರ ಪರಿಶುದ್ಧ ಜನರೆಲ್ಲರೂ ಕ್ರಿಸ್ತನ ಪ್ರೀತಿಯ ಮಹತ್ವವನ್ನು ಅರ್ಥಮಾಡಿಕೊಳ್ಳಲು ಬೇಕಾದ ಶಕ್ತಿಯನ್ನು ಹೊಂದಿದವರಾಗಿರಬೇಕೆಂದು ಪ್ರಾರ್ಥಿಸುತ್ತೇನೆ. ಕ್ರಿಸ್ತನ ಪ್ರೀತಿಯ ಉದ್ದಗಲಗಳನ್ನು ಮತ್ತು ಆಳ ಎತ್ತರಗಳನ್ನು ನೀವು ಅರ್ಥಮಾಡಿಕೊಳ್ಳಲೆಂದು ಪ್ರಾರ್ಥಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ದೇವರ ಪರಿಶುದ್ಧರೆಲ್ಲರೊಂದಿಗೆ ಅದರ ಅಗಲ, ಉದ್ದ, ಆಳ ಮತ್ತು ಎತ್ತರವನ್ನು ಪೂರ್ಣವಾಗಿ ಕ್ರಿಸ್ತನ ಪ್ರೀತಿಯನ್ನು ಅರಿಯುವುದಕ್ಕೆ ಶಕ್ತರಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಅಸೆ ತುಮ್ಕಾ ದೆವಾಚ್ಯಾ ಸಗ್ಳ್ಯಾ ಲೊಕಾಂಚ್ಯಾ ವಾಂಗ್ಡಾ ಕ್ರಿಸ್ತಾಚೊ ಪ್ರೆಮ್ ಕೆವ್ಡೊ ರುಂದ್, ಲಾಂಬ್, ಉಪ್ಪರ್ ಅನಿ ಖೊಲ್ ಮನುನ್ ಕಳ್ವುನ್ ಘೆತಲೊ ಬಳ್ ಗಾಂವ್ದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 3:18
28 ತಿಳಿವುಗಳ ಹೋಲಿಕೆ  

ಗೆಳೆಯರಿಗಾಗಿ ತನ್ನ ಪ್ರಾಣವನ್ನೇ ಧಾರೆಯೆರೆಯುವ ಪ್ರೀತಿಗಿಂತ ಮಿಗಿಲಾದ ಪ್ರೀತಿ ಯಾರಲ್ಲೂ ಇಲ್ಲ.


ಭಯಭಕ್ತರಿಗೆ ಪ್ರಭುವಿನ ಪ್ರೀತಿಯಾದರೋ ಯುಗಯುಗಾಂತರಕು I ಅವರ ಮಕ್ಕಳ ಮಕ್ಕಳಿಗೆ ಆತನ ನೀತಿಯು ತಲತಲಾಂತರಕು II


ಹೌದು, ಜ್ಞಾನವನ್ನು ಮೀರಿದ ಈ ಪ್ರೀತಿಯನ್ನು ಅರಿತುಕೊಳ್ಳಲು ಆಸಕ್ತರಾಗಬೇಕು, ದೇವರ ಪರಿಪೂರ್ಣತೆಯಿಂದ ತುಂಬಿದವರಾಗಬೇಕು ಎಂದು ನಾನು ಬೇಡಿಕೊಳ್ಳುತ್ತೇನೆ.


“ಎಷ್ಟೋ ಉನ್ನತ ಆಕಾಶವು ಭೂಮಿಯಿಂದ ಅಷ್ಟೂ ಉನ್ನತ ನನ್ನ ಮಾರ್ಗ ನಿಮ್ಮ ಮಾರ್ಗಗಳಿಗಿಂತ, ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಿಗಿಂತ.


ಕ್ರಿಸ್ತಯೇಸುವಿನೊಂದಿಗೆ ನಾನೂ ಶಿಲುಬೆಗೇರಿಸಲಾದವನು. ಈಗ ಜೀವಿಸುವವನು ನಾನಲ್ಲ. ಕ್ರಿಸ್ತಯೇಸು ನನ್ನಲ್ಲಿ ಜೀವಿಸುತ್ತಾರೆ, ನನ್ನನ್ನು ಪ್ರೀತಿಸಿ ನನಗಾಗಿ ಪ್ರಾಣಾರ್ಪಣೆ ಮಾಡಿದ ದೇವರ ಪುತ್ರನಲ್ಲಿ ನಾನು ಇರಿಸಿರುವ ವಿಶ್ವಾಸದಿಂದಲೇ ನಾನೀಗ ಈ ದೇಹದಲ್ಲಿ ಜೀವಿಸುತ್ತಿದ್ದೇನೆ.


ಪ್ರಭು ಯೇಸುವಿನಲ್ಲಿ ನೀವಿಟ್ಟಿರುವ ವಿಶ್ವಾಸ ಹಾಗೂ ದೇವಜನರೆಲ್ಲರ ಮೇಲೆ ನಿಮಗಿರುವ ಪ್ರೀತಿಯನ್ನು ಕುರಿತು ಕೇಳಿದ್ದೇನೆ. ಅಂದಿನಿಂದ ನಿಮ್ಮ ಸಲುವಾಗಿ ದೇವರಿಗೆ ಸದಾ ಕೃತಜ್ಞತಾಸ್ತುತಿ ಸಲ್ಲಿಸಿ, ನನ್ನ ಪ್ರಾರ್ಥನೆಯಲ್ಲಿ ನಿಮ್ಮನ್ನು ಸ್ಮರಿಸಿಕೊಳ್ಳುತ್ತಿದ್ದೇನೆ.


ಪ್ರಭು, ನಿನ್ನನು ಸ್ತುತಿಪುದು ಸೃಷ್ಟಿಯೆಲ್ಲವು I ಕೊಂಡಾಡುವುದು ನಿನ್ನನು ಭಕ್ತ ಸಮೂಹವು II


ನಾನು ಜಯಗಳಿಸಿ ನನ್ನ ತಂದೆಯೊಡನೆ ಅವರ ಸಿಂಹಾಸನದಲ್ಲಿ ಕುಳಿತುಕೊಂಡಿದ್ದೇನೆ. ಅದೇ ಪ್ರಕಾರ ಜಯಹೊಂದಿದವನಿಗೆ ನನ್ನೊಡನೆ ಸಿಂಹಾಸನದಲ್ಲಿ ಕುಳಿತುಕೊಳ್ಳುವ ಹಕ್ಕನ್ನು ನಾನು ಕೊಡುತ್ತೇನೆ.


ಮರಕ್ಕೆ ತೂಗುಹಾಕಲಾದ ಪ್ರತಿ ಒಬ್ಬನೂ ಶಾಪಗ್ರಸ್ತನು,” ಎಂದು ಬರೆದಿರುವಂತೆ, ನಮಗೋಸ್ಕರ ಕ್ರಿಸ್ತಯೇಸು ಶಾಪಸ್ವರೂಪಿಯಾಗಿ ಧರ್ಮಶಾಸ್ತ್ರದಲ್ಲಿ ಹೇಳಲಾಗಿರುವ ಶಾಪದಿಂದ ನಮ್ಮನ್ನು ಪಾರುಮಾಡಿದರು.


ಕಾಲವು ಸಂಪೂರ್ಣಗೊಂಡಾಗ ಇಹಪರಗಳಲ್ಲಿರುವ ಸಮಸ್ತವನ್ನು ಕ್ರಿಸ್ತಯೇಸುವಿನಲ್ಲಿ ಒಂದುಗೂಡಿಸುವುದೇ ಈ ಯೋಜನೆಯ ಇಂಗಿತ:


ನನ್ನ ಕುರಿತು ನಿನಗಿರುವ ಅರಿವು ಅಗಾಧ I ನನ್ನ ಬುದ್ಧಿಗದು ಸಿಲುಕದಷ್ಟು ಉನ್ನತ II


ದೇವರೊಡನೆ ಸತ್ಸಂಬಂಧವನ್ನು ಪಡೆಯುವ ಮಾರ್ಗವನ್ನು ಅರಿಯದೆ ತಮ್ಮದೇ ಆದ ಧರ್ಮವನ್ನು ಸ್ಥಾಪಿಸಲು ಅವರು ಪ್ರಯತ್ನಿಸಿದರು. ಎಂದೇ ಅವರು ದೈವ ಸತ್ಸಂಬಂಧಕ್ಕೆ ಬಾಹಿರರಾದರು.


ನೀತಿಭೂಷಿತರಾಗಲಿ ನಿನ್ನ ಯಾಜಕರು I ಆನಂದ ಘೋಷಮಾಡಲಿ ನಿನ್ನ ಭಕ್ತಜನರು II


ದೇವರಾದ ಸರ್ವೇಶ್ವರಾ, ಎದ್ದು ಬನ್ನಿ, ನಿಮ್ಮ ತೇಜೋಮಯ ಮಂಜೂಷದೊಡನೆ ನಿಮ್ಮ ವಾಸಸ್ಥಾನದೊಳಗೆ ಸೇರಿಕೊಳ್ಳಿ. ದೇವರಾದ ಸರ್ವೇಶ್ವರಾ, ನಿಮ್ಮ ಯಾಜಕರು ರಕ್ಷಣೆಯೆಂಬ ಕವಚವನ್ನು ಹೊದ್ದುಕೊಳ್ಳಲಿ, ನಿಮ್ಮ ಭಕ್ತರು ಸೌಭಾಗ್ಯದಲ್ಲಿ ಹರ್ಷಿಸಲಿ.


ನಿಜವಾಗಿಯೂ ನಮ್ಮ ಧರ್ಮದ ನಿಗೂಢಾರ್ಥ ಶ್ರೇಷ್ಠವಾದದ್ದು ಎಂಬುದು ನಿಸ್ಸಂದೇಹವಾದ ವಿಷಯ. “ನರಮಾನವ ರೂಪದಲಿ ಪ್ರತ್ಯಕ್ಷನಾಗಿ ದೇವರಿಗೆ ಪ್ರಿಯನೆಂದು ಪವಿತ್ರಾತ್ಮನಿಂದ ಪ್ರಕಟಿತನಾಗಿ ದೇವದೂತರಿಗೆ ಪ್ರದರ್ಶಿತವಾಗಿ ಅನ್ಯಜನರಿಗೆ ಪ್ರಬೋಧಿತನಾಗಿ ಜಗದಲ್ಲೆಲ್ಲೂ ವಿಶ್ವಾಸಪಡೆದವನಾಗಿ ಸ್ವರ್ಗಕ್ಕೇರಿದಾತ ಮಹಿಮಾನ್ವಿತ ಯೇಸುಕ್ರಿಸ್ತ.


ನಮ್ಮ ಪ್ರಭು ಯೇಸುಕ್ರಿಸ್ತರ ವರಪ್ರಸಾದವೂ ದೇವರ ಪ್ರೀತಿಯೂ ಪವಿತ್ರಾತ್ಮರ ಅನ್ಯೋನ್ಯತೆಯೂ ನಿಮ್ಮೆಲ್ಲರೊಡನೆ ಇರಲಿ!


ನೀವು ಆ ಗುಡ್ಡಗಳ ನಡುವೆ ಉಂಟಾಗುವ ಕಣಿವೆಯ ಮೂಲಕ ಪಲಾಯನಗೈಯುವಿರಿ. ಆ ಕಣಿವೆ ಆಚೆಲಿನವರೆಗೆ ಹಬ್ಬಿರುವುದು. ಜುದೇಯದ ಅರಸನಾದ ಉಜ್ಜೀಯನ ಕಾಲದಲ್ಲಿ ಭೂಕಂಪವಾದಾಗ ನೀವು ಮಾಡಿದಂತೆ ಪಲಾಯನ ಗೈಯುವಿರಿ. ಆಗ ನನ್ನ ದೇವರಾದ ಸರ್ವೇಶ್ವರ ತಮ್ಮ ದೂತರ ಸಮೇತ ಬರುವರು.


ಪ್ರಭು ಅಲ್ಪವೆಂದೆಣಿಸನು I ತನ್ನ ಭಕ್ತರ ಮರಣವನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು