Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 4:13 - ಕನ್ನಡ ಸತ್ಯವೇದವು C.L. Bible (BSI)

13 ಹೀಗೆ ನಾವೆಲ್ಲರೂ ಒಂದೇ ವಿಶ್ವಾಸದಿಂದಲೂ ದೇವರ ಪುತ್ರನನ್ನು ಕುರಿತ ಜ್ಞಾನದಿಂದಲೂ ಐಕಮತ್ಯವನ್ನು ಮತ್ತು ಪರಿಪಕ್ವತೆಯನ್ನು ಪಡೆಯುತ್ತೇವೆ. ಜ್ಞಾನಾರ್ಜನೆಯನ್ನು ಪಡೆದವರಾಗಿ, ಕ್ರಿಸ್ತಯೇಸುವಿನ ಪರಿಪೂರ್ಣತೆಯ ಮಟ್ಟವನ್ನು ಮುಟ್ಟುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ದೇವಜನರನ್ನು ದೇವರ ಸೇವೆಗೆ ಸಿದ್ಧಗೊಳಿಸುವುದಕ್ಕೂ, ಕ್ರಿಸ್ತನ ದೇಹವೆಂಬ ಸಭೆಯು ಅಭಿವೃದ್ಧಿಯಾಗುವುದಕ್ಕೋಸ್ಕರವೂ ಆತನು ಇವರನ್ನು ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಾವೆಲ್ಲರು ನಂಬಿಕೆಯಿಂದಲೂ ದೇವಕುಮಾರನ ವಿಷಯವಾದ ಜ್ಞಾನದಿಂದಲೂ ಉಂಟಾಗುವ ಐಕ್ಯವನ್ನು ಹೊಂದಿ ಪ್ರವೀಣತೆಗೆ ಬಂದವರಾಗಿ ಕ್ರಿಸ್ತನ ಪರಿಪೂರ್ಣತೆಯೆಂಬ ಪ್ರಮಾಣವನ್ನು ಮುಟ್ಟುವ ತನಕ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಾವೆಲ್ಲರೂ ಒಂದೇ ನಂಬಿಕೆಯಿಂದಲೂ ದೇವಕುಮಾರನ ವಿಷಯವಾದ ಜ್ಞಾನದಿಂದಲೂ ಐಕ್ಯರಾಗುವತನಕ ಈ ಸೇವೆಯು ಮುಂದುವರಿಯಬೇಕು. ನಾವು ಪರಿಪೂರ್ಣರಾಗುವ ತನಕ ಅಂದರೆ ಕ್ರಿಸ್ತನ ಸರ್ವಸಂಪೂರ್ಣತೆಯನ್ನು ಮುಟ್ಟುವತನಕ ಬೆಳೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನಾವೆಲ್ಲರೂ ಕ್ರಿಸ್ತನ ಪರಿಪೂರ್ಣತೆಯ ಬೆಳವಣಿಗೆಯಲ್ಲಿ ವಿಶ್ವಾಸದಲ್ಲಿಯೂ ದೇವಪುತ್ರನ ತಿಳುವಳಿಕೆಯಲ್ಲಿ ಒಂದು ಮನಸ್ಸುಳ್ಳವರಾಗಿ ಪರಿಪಕ್ವತೆಯನ್ನು ಹೊಂದುವುದೇ ಆ ಉದ್ದೇಶವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಅನಿ ಅಸೆ ಅಮ್ಚ್ಯಾ ವಿಶ್ವಾಸಾತ್ ಅನಿ ದೆವಾಚ್ಯಾ ಲೆಕಾಚ್ಯಾ ಶಾನೆಪಾನಾತ್ ಎಕಾಕ್ಡೆ ಗೊಳಾ ಹೊವ್ನ್ ಅಮಿ ಸಗ್ಳೆ ಎಕ್ ಹೊವ್ಚೆ, ಅಮಿ ವಾಡ್ವಳ್ಕಿ ಹೊಲ್ಲಿ ಲೊಕಾ ಹೊವ್ಚೆ ಅನಿ ಕ್ರಿಸ್ತಾಚ್ಯಾ ಸಗ್ಳ್ಯಾ ಸಂಪುರ್ನತೆಚ್ಯಾ ಹಂತಾಕ್ ಪಾವುಚೆ ಮನುನ್ ತೆನಿ ಅಸೆ ಕರ್ಲ್ಯಾನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 4:13
34 ತಿಳಿವುಗಳ ಹೋಲಿಕೆ  

ನಾವು ಸಾರುತ್ತಲಿರುವುದೂ ಯೇಸುಕ್ರಿಸ್ತರನ್ನೇ. ಎಲ್ಲರಿಗೂ ಬುದ್ಧಿಹೇಳುತ್ತಾ ಎಲ್ಲರಿಗೂ ಪೂರ್ಣಜ್ಞಾನವನ್ನು ಉಪದೇಶಿಸುತ್ತಾ ದೇವರ ಮುಂದೆ ಎಲ್ಲರನ್ನು ಕ್ರಿಸ್ತಯೇಸುವಿನಲ್ಲಿ ಪರಿಣತರನ್ನಾಗಿ ಊರ್ಜಿತಗೊಳಿಸಲು ಪ್ರಯತ್ನಿಸುತ್ತಿದ್ದೇವೆ.


ಪಿತನೇ, ಇವರೆಲ್ಲಾ ಒಂದಾಗಿರಲಿ. ನೀವು ನನ್ನಲ್ಲಿ, ನಾನು ನಿಮ್ಮಲ್ಲಿ ಇರುವಂತೆಯೇ ಇವರೂ ನಮ್ಮಲ್ಲಿ ಒಂದಾಗಿರಲಿ. ಹೀಗೆ, ನನ್ನನ್ನು ಕಳುಹಿಸಿದವರು ನೀವೇ ಎಂದು ಲೋಕವು ವಿಶ್ವಾಸಿಸುವಂತಾಗಲಿ.


ನಮ್ಮೆಲ್ಲರಿಗೂ ಪ್ರಭು ಒಬ್ಬರೇ; ವಿಶ್ವಾಸವೂ ಒಂದೇ; ದೀಕ್ಷಾಸ್ನಾನವೂ ಒಂದೇ.


ಪವಿತ್ರಾತ್ಮರಿಂದ ಉಂಟಾಗುವ ಐಕ್ಯತೆಯನ್ನು ಕಾಪಾಡಿಕೊಳ್ಳಲು ಆಸಕ್ತರಾಗಿರಿ. ಅದು ನಿಮ್ಮನ್ನು ಸಮಾಧಾನದಲ್ಲಿ ಬಂಧಿಸುವುದು.


ನಮ್ಮ ಪ್ರಭು ಮತ್ತು ಉದ್ಧಾರಕರಾದ ಯೇಸುಕ್ರಿಸ್ತರ ಅನುಗ್ರಹದಲ್ಲೂ ಅವರನ್ನು ಕುರಿತ ಜ್ಞಾನದಲ್ಲೂ ನೀವು ಅಭಿವೃದ್ಧಿಹೊಂದಿರಿ. ಅವರಿಗೆ ಈಗಲೂ ಯುಗಯುಗಾಂತರಕ್ಕೂ ಮಹಿಮೆಯುಂಟಾಗಲಿ! ಆಮೆನ್.


ಇದರಿಂದ ಅವರು ಅಂತರಂಗದಲ್ಲಿ ಉತ್ತೇಜನಗೊಂಡು ಪ್ರೀತಿಯಲ್ಲಿ ಒಂದಾಗಬೇಕು; ನೈಜ ಅರಿವಿನಿಂದ ಅವರಿಗೆ ಪೂರ್ಣಜ್ಞಾನ ಲಭಿಸಬೇಕು ಎಂಬುದೇ ನನ್ನ ಆಶಯ. ಆಗ ಅವರು ದೇವರ ರಹಸ್ಯವನ್ನು, ಅಂದರೆ ಕ್ರಿಸ್ತಯೇಸುವನ್ನು ಅರಿತುಕೊಳ್ಳಲು ಸಾಧ್ಯ.


ಗಟ್ಟಿಯಾದ ಆಹಾರ ಬೆಳೆದವರಿಗೆ; ಸ್ವಂತ ಅನುಭವದಿಂದ ಒಳ್ಳೆಯದಾವುದು ಕೆಟ್ಟದ್ದಾವುದು ಎಂದು ಅರಿತುಕೊಳ್ಳಬಲ್ಲವರಿಗೆ.


ನಿಶ್ಚಯವಾಗಿಯೂ ನನ್ನ ಪ್ರಭು ಯೇಸುಕ್ರಿಸ್ತರನ್ನು ಅರಿತುಕೊಳ್ಳುವುದೇ ಉತ್ಕೃಷ್ಟವಾದುದೆಂದು ಮನದಟ್ಟಾಗಿರುವುದರಿಂದ ಸಮಸ್ತವನ್ನೂ ವ್ಯರ್ಥವೆಂದೇ ಎಣಿಸುತ್ತೇನೆ. ಅವರನ್ನು ಲಭ್ಯವಾಗಿಸಿಕೊಳ್ಳುವ ಸಲುವಾಗಿ ಎಲ್ಲವನ್ನೂ ತೊರೆದುಬಿಟ್ಟಿದ್ದೇನೆ, ಎಲ್ಲವನ್ನೂ ಕಸವೆಂದೇ ಪರಿಗಣಿಸುತ್ತೇನೆ.


ಸಹೋದರರೇ, ಬುದ್ಧಿಯ ವಿಷಯದಲ್ಲಿ ಬಾಲಕರಾಗಿರಬೇಡಿ. ದುಷ್ಟ ವಿಷಯಗಳಲ್ಲಿ ಶಿಶುಗಳಂತೆ ಮುಗ್ಧರಾಗಿರಿ; ಬುದ್ಧಿಯ ವಿಷಯದಲ್ಲಿ ಪ್ರಾಯಸ್ಥರಂತೆ ಪ್ರೌಢರಾಗಿರಿ.


ಧರ್ಮಸಭೆಯೇ ಯೇಸುಕ್ರಿಸ್ತರ ದೇಹ. ಎಲ್ಲವನ್ನೂ ಎಲ್ಲಾ ವಿಧದಲ್ಲೂ ಪೂರೈಸುವಾತನಿಂದ ಅದು ಪರಿಪೂರ್ಣ ಉಳ್ಳದ್ದಾಗಿದೆ.


ಭಕ್ತವಿಶ್ವಾಸಿಗಳು ಒಗ್ಗಟ್ಟಿನಿಂದಲೂ ಒಮ್ಮನಸ್ಸಿನಿಂದಲೂ ಬಾಳುತ್ತಿದ್ದರು. ಯಾರೂ ತಮ್ಮ ಸೊತ್ತನ್ನು ತನ್ನದೇ ಎಂದು ಭಾವಿಸದೆ ಹುದುವಾಗಿ ಹಂಚಿಕೊಳ್ಳುತ್ತಿದ್ದರು.


ಆಗ ಸರ್ವೇಶ್ವರ ಜಗಕ್ಕೆಲ್ಲಾ ಅರಸರಾಗಿರುವರು. ಅವರೊಬ್ಬರೇ ದೇವರೆಂದು, ಅವರ ಹೆಸರೊಂದೇ ಸ್ತುತ್ಯಾರ್ಹವೆಂದು ಎಲ್ಲರಿಗೂ ತಿಳಿದಿರುವುದು.


ದೇವರ ಪುತ್ರ ಆಗಮಿಸಿ, ಸತ್ಯಸ್ವರೂಪರಾದ ದೇವರನ್ನು ನಾವು ತಿಳಿದುಕೊಳ್ಳುವಂತೆ ನಮಗೆ ಅರಿವನ್ನು ನೀಡಿದ್ದಾರೆ. ಇದನ್ನು ನಾವು ಬಲ್ಲೆವು. ದೇವರ ಪುತ್ರರಾದ ಯೇಸುಕ್ರಿಸ್ತರಲ್ಲಿ ನೆಲೆಸಿರುವ ನಾವು ಸತ್ಯಸ್ವರೂಪಿಯಲ್ಲೇ ನೆಲೆಸಿದ್ದೇವೆ. ನಿಜವಾದ ದೇವರೂ ನಿತ್ಯಜೀವವೂ ಇವರೇ.


“ಆಗ ಎಲ್ಲರೂ ಒಮ್ಮನಸ್ಸಿನಿಂದ ನನ್ನನ್ನು ಪೂಜಿಸಿ ನನ್ನ ಹೆಸರೆತ್ತಿ ಪ್ರಾರ್ಥಿಸುವಂತೆ ಜನಾಂಗಗಳ ಬಾಯನ್ನು ಪರಿವರ್ತಿಸಿ ಶುದ್ಧೀಕರಿಸುವೆನು.


ದೇವಜನರನ್ನು ಪರಿಣಿತರನ್ನಾಗಿಸಿ ದೇವರ ಸೇವೆಗೆ ಸಿದ್ಧಗೊಳಿಸಲೆಂದು ಮತ್ತು ಯೇಸುಕ್ರಿಸ್ತರ ದೇಹವಾದ ಧರ್ಮಸಭೆ ಅಭಿವೃದ್ಧಿಹೊಂದಲೆಂದು ಈ ವರಗಳನ್ನು ಅವರಿಗೆ ನೀಡಿದರು.


ವಿಧಿನಿಯಮಗಳಿಂದ ಕೂಡಿದ ಧರ್ಮಶಾಸ್ತ್ರವನ್ನು ನಿರರ್ಥಕಗೊಳಿಸಿದ್ದಾರೆ. ಉಭಯರನ್ನು ಒಂದುಗೂಡಿಸಿ, ಶಾಂತಿ ಸಮಾಧಾನವನ್ನೇರ್ಪಡಿಸಿ, ನೂತನ ಮಾನವನನ್ನಾಗಿ ಪರಿವರ್ತಿಸಿದ್ದಾರೆ.


“ಕತ್ತಲೆಯಿಂದ ಬೆಳಕು ಹೊಳೆಯಲಿ,” ಎಂದ ದೇವರೇ, ತಮ್ಮ ಜ್ಯೋತಿಯಿಂದ ನಮ್ಮ ಅಂತರಂಗವನ್ನು ಬೆಳಗಿಸಿದ್ದಾರೆ. ಇದರ ಪರಿಣಾಮವಾಗಿ ಕ್ರಿಸ್ತಯೇಸುವಿನ ಮುಖಮಂಡಲದಲ್ಲಿ ಪ್ರಜ್ವಲಿಸುತ್ತಿರುವ ದೇವರ ಮಹಿಮೆಯ ದಿವ್ಯಜ್ಞಾನವು ನಮ್ಮಲ್ಲಿ ಉದಯಿಸುವಂತಾಗಿದೆ.


ಸಹೋದರರೇ, ನಮ್ಮ ಪ್ರಭು ಯೇಸುಕ್ರಿಸ್ತರ ಹೆಸರಿನಲ್ಲಿ ನಾನು ಕೇಳಿಕೊಳ್ಳುವುದೇನೆಂದರೆ: ವಾದವಿವಾದವಿಲ್ಲದೆ, ಭಿನ್ನಭೇದಗಳಿಲ್ಲದೆ ಒಂದೇ ಮನಸ್ಸಿನಿಂದಲೂ ಒಂದೇ ಉದ್ದೇಶದಿಂದಲೂ ನೀವು ಐಕಮತ್ಯದಿಂದ ಬಾಳಿರಿ.


ಏಕೈಕ ನಿಜದೇವರಾದ ನಿಮ್ಮನ್ನೂ ನೀವು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ಅರಿತುಕೊಳ್ಳುವುದೇ ನಿತ್ಯಜೀವ.


ನನ್ನನ್ನಾಗಲಿ, ಪಿತನನ್ನಾಗಲಿ ಅವರು ಅರಿತಿಲ್ಲದ ಕಾರಣ ನಿಮಗೆ ಹೀಗೆ ಮಾಡುವರು.


ತೃಪ್ತನಾಗುವನಾತ ಕಂಡು ತನ್ನ ಪ್ರಾಣಯಾತನೆಯ ಫಲವನು. ಸಜ್ಜನನಾದ ಆ ನನ್ನ ದಾಸ ತರುವನು ಸನ್ಮಾರ್ಗಕೆ ಬಹುಜನರನು. ತಾನೇ ಹೊತ್ತುಕೊಳ್ಳುವನು ಅವರ ಅಪರಾಧಗಳ ಹೊರೆಯನು.


“ನನ್ನ ಪಿತ ಸಮಸ್ತವನ್ನೂ ನನ್ನ ವಶಕ್ಕೆ ಒಪ್ಪಿಸಿದ್ದಾರೆ; ಪುತ್ರನು ಯಾರೆಂಬುದನ್ನು ಪಿತನೇ ಹೊರತು ಬೇರಾರೂ ಅರಿಯರು. ಪಿತನು ಯಾರು ಎಂಬುದನ್ನು ಪುತ್ರನು ಮತ್ತು ಯಾವನಿಗೆ ಪುತ್ರನು ಅವರನ್ನು ಶ್ರುತಪಡಿಸಲು ಇಚ್ಛಿಸುತ್ತಾನೋ, ಅವರೇ ಹೊರತು ಮತ್ತಾರೂ ಅರಿಯರು.


ಅವರ ಪರಿಪೂರ್ಣತೆಯಿಂದ ನಾವೆಲ್ಲರು ವರಪ್ರಸಾದದ ಮೇಲೆ ವರಪ್ರಸಾದವನ್ನು ಪಡೆದಿದ್ದೇವೆ.


ತಾವೇ ದೇವರಿಂದ ಬಂದ ಪರಮಪೂಜ್ಯರು. ಹೌದು, ಇದೇ ನಮ್ಮ ವಿಶ್ವಾಸ ಮತ್ತು ಗ್ರಹಿಕೆ,” ಎಂದು ಹೇಳಿದನು.


ನಾನು ಪರಿಣಿತರೊಂದಿಗೆ ಜ್ಞಾನವನ್ನೇ ಕುರಿತು ಮಾತನಾಡುತ್ತೇನೆ. ಆದರೆ ಇದು ಇಹಲೋಕದ ಜ್ಞಾನವಲ್ಲ, ಅಳಿದುಹೋಗುವಂಥ ಅಧಿಪತಿಗಳ ಜ್ಞಾನವೂ ಅಲ್ಲ.


ನನ್ನ ಪ್ರಿಯ ಮಕ್ಕಳೇ, ತಾಯಿ ತನ್ನ ಮಗುವಿಗಾಗಿ ಪ್ರಸವವೇದನೆಪಡುವ ಪ್ರಕಾರ ಕ್ರಿಸ್ತಯೇಸು ನಿಮ್ಮಲ್ಲಿ ರೂಪುಗೊಳ್ಳುವ ತನಕ ನಿಮಗಾಗಿ ನಾನು ಮತ್ತೆ ಅಂಥ ವೇದನೆಯನ್ನು ಪಡುತ್ತಿದ್ದೇನೆ.


ನಮ್ಮ ಪ್ರಭು ಯೇಸುಕ್ರಿಸ್ತರ ದೇವರೂ ಮಹಿಮಾನ್ವಿತ ತಂದೆಯೂ ಆದವರು, ನಿಮಗೆ ಜ್ಞಾನವನ್ನೂ ವಿವೇಚನೆಯನ್ನೂ ನೀಡುವ ಆತ್ಮವನ್ನು ದಯಪಾಲಿಸಲಿ; ತಮ್ಮನ್ನು ಸಂಪೂರ್ಣವಾಗಿ ಅರಿತುಕೊಳ್ಳುವ ವರವನ್ನು ಈಯಲಿ, ಎಂದು ಪ್ರಾರ್ಥಿಸುತ್ತೇನೆ.


ಯೇಸುಸ್ವಾಮಿಯನ್ನು ಅರಿಯಬೇಕು; ಅವರ ಪುನರುತ್ಥಾನದ ಪ್ರಭಾವವನ್ನು ಅನುಭವಿಸಬೇಕು; ಅವರ ಯಾತನೆಗಳಲ್ಲಿ ಪಾಲುಗೊಳ್ಳಬೇಕು; ಅವರ ಮರಣದಲ್ಲಿ ಅವರಂತೆಯೇ ಆಗಬೇಕು - ಇದೇ ನನ್ನ ಹೆಬ್ಬಯಕೆ.


ಹೀಗೆ ನೀವು ಲೋಕದಲ್ಲಿ ಆಶಾಪಾಶಗಳಿಂದ ಉಂಟಾಗುವ ಭ್ರಷ್ಟಾಚಾರದಿಂದ ತಪ್ಪಿಸಿಕೊಂಡು ದೈವಿಕಸ್ವಭಾವದಲ್ಲಿ ಪಾಲುಗಾರರಾಗುವಂತೆ, ದೇವರು ಅಮೂಲ್ಯವೂ ಅತ್ಯುತ್ತಮವೂ ಆದ ವಾಗ್ದಾನಗಳನ್ನು ಅನುಗ್ರಹಿಸಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು