Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 4:28 - ಕನ್ನಡ ಸತ್ಯವೇದವು C.L. Bible (BSI)

28 ಕಳ್ಳತನ ಮಾಡುವವನು ಕಳ್ಳತನವನ್ನು ಬಿಟ್ಟುಬಿಡಲಿ; ಶ್ರಮಪಟ್ಟು ದುಡಿದು ಸಂಪಾದಿಸಲಿ. ಆಗ ತನ್ನ ಪ್ರಾಮಾಣಿಕ ದುಡಿಮೆಯಿಂದ ಕಷ್ಟದಲ್ಲಿರುವವರಿಗೆ ನೆರವು ನೀಡಲು ಸಾಧ್ಯವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಕಳವು ಮಾಡುವವನು ಇನ್ನು ಮುಂದೆ ಕಳವು ಮಾಡದೇ ಸ್ವಂತ ಕೈಯಿಂದ ಒಳ್ಳೇ ಉದ್ಯೋಗವನ್ನು ಮಾಡಿ ದುಡಿಯಲಿ. ಆಗ ಕೊರತೆಯಲ್ಲಿರುವವರಿಗೆ ಕೊಡುವುದಕ್ಕೆ ಅವನಿಂದಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಕಳವು ಮಾಡುವವನು ಇನ್ನು ಮೇಲೆ ಕಳವುಮಾಡದೆ ಕೈಯಿಂದ ಯಾವದೊಂದು ಒಳ್ಳೇ ಉದ್ಯೋಗವನ್ನು ಮಾಡಿ ದುಡಿಯಲಿ; ಆಗ ಕಷ್ಟದಲ್ಲಿರುವವರಿಗೆ ಕೊಡುವದಕ್ಕೆ ಅವನಿಂದಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಕಳ್ಳನು ಕದಿಯುವುದನ್ನು ನಿಲ್ಲಿಸಿ ತಾನೇ ದುಡಿದು ಸಂಪಾದಿಸಲಿ; ಅವನು ತನ್ನ ಕೈಗಳನ್ನು ಒಳ್ಳೆಯದನ್ನು ಮಾಡುವುದಕ್ಕಾಗಿ ಉಪಯೋಗಿಸಲಿ. ಆಗ ಬಡವರಿಗೂ ಸಹಾಯ ಮಾಡಲು ಅವನಿಗೆ ಸಾಧ್ಯವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಕಳ್ಳತನ ಮಾಡುವವನು ಇನ್ನು ಮೇಲೆ ಕಳ್ಳತನ ಮಾಡದೆ, ಕೈಯಿಂದ ಯಾವುದಾದರೊಂದು ಒಳ್ಳೆಯ ಉದ್ಯೋಗವನ್ನು ಮಾಡಿ ದುಡಿಯಲಿ. ಆಗ ಕೊರತೆಯಲ್ಲಿರುವವನಿಗೆ ಕೊಡುವುದಕ್ಕೆ ಅವನಿಂದಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಚೊರ್ ಚೊರಿಕರ್ತಲೆ ಸೊಡುನ್ ಘೊಳುನ್ ಜಮ್ವುನ್ದಿತ್; ತೊ ಅಪ್ಲಿ ಹಾತಾ ಬರ್‍ಯಾ ಕಾಮಾಕ್ನಿ ವಾಪ್ರುನ್ ಘೆಂವ್ದಿತ್, ತನ್ನಾ ಗರಿಬಾಕ್ನಿ ಮಜ್ಜತ್ ಕರುಕ್ ತೆಜ್ಯಾನ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 4:28
33 ತಿಳಿವುಗಳ ಹೋಲಿಕೆ  

ಅವರು ಸದ್ಗುಣಶೀಲರಾಗಬೇಕು, ಸತ್ಕಾರ್ಯಗಳನ್ನು ಮಾಡುವುದರಲ್ಲಿ ಶ್ರೀಮಂತರಾಗಿರಬೇಕು. ದಾನಶೀಲರೂ ಇತರರೊಂದಿಗೆ ಪಾಲು ಹಂಚಿಕೊಳ್ಳುವವರೂ ಪರೋಪಕಾರಿಗಳೂ ಆಗಿರಬೇಕು.


ಎಂದೇ ಸಮಯಸಂದರ್ಭಗಳು ಇರುವಾಗಲೇ ಸರ್ವರಿಗೂ ಉಪಕಾರಮಾಡೋಣ. ಅದರಲ್ಲೂ ಮುಖ್ಯವಾಗಿ, ಒಂದೇ ಕುಟುಂಬದವರಂತೆ ಇರುವ ಕ್ರೈಸ್ತವಿಶ್ವಾಸಿಗಳಿಗೆ ಉಪಕಾರ ಮಾಡೋಣ.


ಆಗ ಅವನು ನನಗೆ “ನಾಡಿನ ಮೇಲೆ ಬಂದೆರಗಲಿರುವ ಶಾಪ ಅದರಲ್ಲಿ ಲಿಖಿತ ಆಗಿದೆ. ಒಂದು ಕಡೆ ಬರೆದಿರುವಂತೆ, ಪ್ರತಿಯೊಬ್ಬ ಕಳ್ಳನನ್ನು ನಾಡಿನಿಂದ ಹೊರದೂಡಲಾಗುವುದು. ಮತ್ತೊಂದು ಕಡೆ ಬರೆದಿರುವಂತೆ, ಸುಳ್ಳಾಣೆ ಇಡುವ ಪ್ರತಿಯೊಬ್ಬನನ್ನೂ ನಾಡಿನಿಂದ ಹೊರದೂಡಲಾಗುವುದು.


ಬಡವರ ಹಿತಚಿಂತನೆಯಿಂದೇನೂ ಅವನು ಹೀಗೆ ಹೇಳಲಿಲ್ಲ. ತನ್ನ ವಶದಲ್ಲಿ ಇಡಲಾಗಿದ್ದ ಹಣದ ಚೀಲದಿಂದ ಸ್ವಂತ ಉಪಯೋಗಕ್ಕಾಗಿ ಬಳಸುತ್ತಿದ್ದ ಕಳ್ಳ ಅವನು.


ಜಕ್ಕಾಯನು ನೆರೆದಿದ್ದ ಜನರ ಮುಂದೆ ಎದ್ದುನಿಂತು ಯೇಸುವಿಗೆ, “ಪ್ರಭುವೇ, ನನ್ನ ಆಸ್ತಿಪಾಸ್ತಿಯಲ್ಲಿ ಅರ್ಧಭಾಗವನ್ನು ಬಡಬಗ್ಗರಿಗೆ ಕೊಟ್ಟುಬಿಡುತ್ತೇನೆ. ಯಾರಿಗಾದರೂ ಮೋಸಮಾಡಿ ಅವರಿಂದೇನಾದರೂ ನಾನು ಕಸಿದುಕೊಂಡಿದ್ದರೆ ಅದಕ್ಕೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ,” ಎಂದನು.


ಸುಳ್ಳುಸಾಕ್ಷಿ, ನರಹತ್ಯೆ, ಕಳ್ಳತನ, ವ್ಯಭಿಚಾರ ಇವೆಲ್ಲ ತುಂಬಿಕೊಂಡಿವೆ; ದೊಂಬಿದಾಂಧಲೆಗಳು ನಡೆಯುತ್ತಿವೆ, ನಾಡೆಲ್ಲ ರಕ್ತಮಯವಾಗಿದೆ.


ಕಳವು, ಕೊಲೆ, ವ್ಯಭಿಚಾರಗಳನ್ನು ಮಾಡುತ್ತೀರಿ. ಸುಳ್ಳುಸಾಕ್ಷಿ ಹೇಳುತ್ತೀರಿ. ಬಾಳನಿಗೆ ಧೂಪಾರತಿ ಎತ್ತುತ್ತೀರಿ. ಕಂಡು ಕೇಳದ ಅನ್ಯದೇವತೆಗಳನ್ನು ಆರಾಧಿಸುತ್ತೀರಿ.


ನೆರೆಯವನ ಮನೆಯನ್ನು ಬಯಸಬೇಡ; ಅವನ ಹೆಂಡತಿ, ಗಂಡಾಳು, ಹೆಣ್ಣಾಳು, ಎತ್ತು, ಕತ್ತೆ ಮುಂತಾದ ಯಾವುದನ್ನೂ ಬಯಸಬೇಡ.


ಒಬ್ಬನು ಕೊಡುವುದಕ್ಕೆ ಮನಸ್ಸುಳ್ಳವನಾಗಿದ್ದರೆ, ಅವನು ತನ್ನಲ್ಲಿ ಇರುವುದಕ್ಕೆ ತಕ್ಕಂತೆ ಕೊಟ್ಟರೆ ಸಾಕು. ನಿಮ್ಮಲ್ಲಿ ಇಲ್ಲದ್ದನ್ನು ದೇವರು ಬಯಸುವುದಿಲ್ಲ.


ಈ ಸಭೆಗಳವರು ಕಷ್ಟಸಂಕಟಗಳ ಕುಲುಮೆಯಲ್ಲಿ ಬೆಂದಿದ್ದರೂ ಹರ್ಷಭರಿತರಾಗಿದ್ದಾರೆ. ಕಡುಬಡತನದಲ್ಲಿ ನರಳುತ್ತಿದ್ದರೂ ಅಪಾರ ಔದಾರ್ಯದಿಂದ ನಡೆದುಕೊಳ್ಳುತ್ತಿದ್ದಾರೆ.


ಕೊರತೆಯಲ್ಲಿರುವ ದೇವಜನರಿಗೆ ನೆರವು ನೀಡಿರಿ. ಅತಿಥಿಸತ್ಕಾರದಲ್ಲಿ ತತ್ಪರರಾಗಿರಿ.


ಯೂದನ ವಶದಲ್ಲಿ ಹಣದ ಚೀಲವಿದ್ದುದರಿಂದ, ‘ಹಬ್ಬಕ್ಕೆ ನಮಗೆ ಬೇಕಾದುದನ್ನು ಕೊಂಡು ಬಾ,’ ಎಂದೋ, ‘ಬಡವರಿಗೆ ಏನಾದರೂ ಕೊಡು’ ಎಂದೋ, ಯೇಸು ಹೇಳಿರಬೇಕೆಂದು ಕೆಲವು ಶಿಷ್ಯರು ಭಾವಿಸಿದರು.


ಪಾಪಕ್ಕೆ ವಿಮುಖರಾಗಿದ್ದೀರಿ ಎಂಬುದನ್ನು ಸತ್ಕಾರ್ಯಗಳಿಂದ ವ್ಯಕ್ತಪಡಿಸಿರಿ. ‘ಅಬ್ರಹಾಮನೇ ನಮ್ಮ ಪಿತಾಮಹ,’ ಎಂದು ನಿಮ್ಮ ನಿಮ್ಮಲ್ಲೇ ಕೊಚ್ಚಿಕೊಳ್ಳಬೇಡಿ; ಈ ಕಲ್ಲುಗಳಿಂದಲೂ ದೇವರು ಅಬ್ರಹಾಮನಿಗೆ ಸಂತಾನ ಪ್ರಾಪ್ತಿಯಾಗುವಂತೆ ಮಾಡಬಲ್ಲರೆಂದು ನಾನು ನಿಮಗೆ ಹೇಳುತ್ತೇನೆ.


ಎಲ್ಲವೂ ಇದ್ದರೆ “ಸರ್ವೇಶ್ವರನು ಯಾರು?” ಎಂದು ನಿನ್ನನ್ನೆ ನಾನು ತಿರಸ್ಕರಿಸೇನು. ಬಡವನಾದರೆ ಕಳ್ಳತನಮಾಡಿ ನನ್ನ ದೇವರಾದ ನಿನ್ನ ಹೆಸರಿಗೆ ಅಪಕೀರ್ತಿ ತಂದೇನು.


ಪಾಪಗಳನ್ನು ಮುಚ್ಚಿಟ್ಟುಕೊಳ್ಳುವವನಿಗೆ ಮುಕ್ತಿ ದೊರಕದು; ಅವುಗಳನ್ನು ಒಪ್ಪಿಕೊಂಡು ಬಿಟ್ಟರೆ ಕರುಣೆ ದೊರಕುವುದು.


ದುಡಿಮೆಯಿಂದ ಸದಾ ಲಾಭವುಂಟು; ಬರಿ ಮಾತಿನಿಂದ ಬಡತನ ಬರುವುದುಂಟು.


ಬಿಟ್ಟಿಯಾಗಿ ಸಿಕ್ಕಿದ ಸಂಪತ್ತು ಬೇಗನೆ ಕರಗುವುದು; ದುಡಿದು ಕೂಡಿಸಿದ ಹಣ ಅಭಿವೃದ್ಧಿಯಾಗುವುದು.


ಕಾಣದಿರುವ ಮಾರ್ಗವನ್ನು ತೋರೆನಗೆ ತಪ್ಪುಮಾಡಿದ್ದರೂ ಮತ್ತೆ ಮಾಡೆ’ ಎಂದು ಹೇಳಿದ್ದಾದರೆ,


“ಒಬ್ಬನು ಮತ್ತೊಬ್ಬನನ್ನು ಕದ್ದೊಯ್ದು ಅವನನ್ನು ಮಾರಿದ್ದರೂ ಅಥವಾ ತನ್ನಲ್ಲೇ ಖೈದಿಯಾಗಿಟ್ಟುಕೊಂಡಿದ್ದರೂ ಅಂಥವನಿಗೆ ಮರಣ ದಂಡನೆಯಾಗಬೇಕು.”


ಇಲ್ಲವೆನ್ನದೆ ಕೊಡುವವರು ಸಜ್ಜನರು; ದಾನವೆಲ್ಲ ಬೇಕೆನ್ನುತ್ತಿರುವವನು ಜಿಪುಣನು.


ಬಡವರಿಗೆ ಕೈಬಿಚ್ಚಿ ಕೊಡುತ್ತಾಳೆ; ದಿಕ್ಕಿಲ್ಲದವರಿಗೆ ಕೈಚಾಚಿ ನೀಡುತ್ತಾಳೆ.


ಸ್ವಂತ ದುಡಿಮೆಯಿಂದ ಜೀವಿಸುತ್ತೇವೆ; ನಮ್ಮನ್ನು ಶಪಿಸುವವರನ್ನು ಆಶೀರ್ವದಿಸುತ್ತೇವೆ; ಹಿಂಸೆಗೊಳಗಾದಾಗ ಸಹಿಸಿಕೊಳ್ಳುತ್ತೇವೆ.


ದೇವರಲ್ಲಿ ವಿಶ್ವಾಸವಿಟ್ಟವರು ಸತ್ಕಾರ್ಯಗಳಲ್ಲಿ ನಿರತರಾಗುವಂತೆ ನೀನು ಇವೆಲ್ಲವನ್ನೂ ದೃಢವಾಗಿ ಬೋಧಿಸಬೇಕೆಂಬುದೇ ನನ್ನ ಅಪೇಕ್ಷೆ. ಇವು ಎಲ್ಲರಿಗೂ ಹಿತಕರವಾಗಿವೆ ಹಾಗೂ ಪ್ರಯೋಜನಕರವಾಗಿವೆ.


ನಮ್ಮ ಜನರು ಸತ್ಕ್ರಿಯೆಗಳಲ್ಲಿ ನಿರತರಾಗಿರಲಿ. ಕುಂದುಕೊರತೆಯಲ್ಲಿರುವವರಿಗೆ ನೆರವಾಗಲಿ. ಪರೋಪಕಾರವನ್ನು ಕಲಿತುಕೊಳ್ಳಲಿ. ವ್ಯರ್ಥಜೀವನವನ್ನು ನಡೆಸದಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು