Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 4:4 - ಕನ್ನಡ ಸತ್ಯವೇದವು C.L. Bible (BSI)

4 ನೀವೆಲ್ಲರೂ ಒಂದೇ ಶರೀರಕ್ಕೆ ಸೇರಿದವರು; ಒಬ್ಬರೇ ಪವಿತ್ರಾತ್ಮರನ್ನು ಪಡೆದವರು; ಒಂದೇ ನಿರೀಕ್ಷೆಗಾಗಿ ಕರೆಹೊಂದಿದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನೀವು ಕರೆಯಲ್ಪಟ್ಟಾಗ ಒಂದೇ ನಿರೀಕ್ಷೆಗಾಗಿ ಕರೆಯಲ್ಪಟ್ಟವರಂತೆಯೇ, ನೀವೆಲ್ಲರೂ ಒಂದೇ ದೇಹಕ್ಕೆ ಸೇರಿದವರು, ಒಬ್ಬನೇ ಆತ್ಮನನ್ನು ಹೊಂದಿದವರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನೀವೆಲ್ಲರೂ ಒಂದೇ ದೇಹಕ್ಕೆ ಸೇರಿದವರು, ಒಬ್ಬನೇ ಆತ್ಮನನ್ನು ಹೊಂದಿದವರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ದೇಹವು ಒಂದೇ ಮತ್ತು ಆತ್ಮನು ಒಬ್ಬನೇ. ನೀವೆಲ್ಲರೂ ಒಂದೇ ನಿರೀಕ್ಷೆಯನ್ನು ಹೊಂದಿರಬೇಕೆಂದು ದೇವರು ನಿಮ್ಮನ್ನು ಕರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಒಂದೇ ನಿರೀಕ್ಷೆಗೆ ನೀವು ಕರೆಹೊಂದಿದಂತೆಯೇ ದೇಹವು ಒಂದೇ, ಪವಿತ್ರಾತ್ಮರು ಒಬ್ಬರೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತುಮ್ಕಾ ಎಕುಚ್ ಬರೊಸೊ ದೆವಾಕ್ನಾ ಬಲ್ವಲ್ಲ್ಯಾ ತನ್ನಾ ಹೊತ್ತ್ಯಾ ಸಾರ್ಕೆ ಎಕುಚ್ ಆಂಗ್ ಅನಿ ಎಕುಚ್ ಪವಿತ್ರ್ ಆತ್ಮೊ ಹಾಯ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 4:4
28 ತಿಳಿವುಗಳ ಹೋಲಿಕೆ  

ಇದರ ಪರಿಣಾಮವಾಗಿ ಅವರ ಮುಖಾಂತರವೇ ಉಭಯತ್ರರು ಒಂದೇ ಪವಿತ್ರಾತ್ಮ ಅವರಲ್ಲಿ ಪಿತನ ಸಾನ್ನಿಧ್ಯವನ್ನು ಸೇರಲು ಮಾರ್ಗವಾಯಿತು.


ಪ್ರಭುವಿನ ಸೇವೆಯ ನಿಮಿತ್ತ ಸೆರೆಯಾಳಾಗಿ ಇರುವ ನಾನು ನಿಮ್ಮಲ್ಲಿ ಬಿನ್ನವಿಸುವುದು ಏನೆಂದರೆ: ದೇವರ ಕರೆಗೆ ಅನುಗುಣವಾಗಿ ಯೋಗ್ಯ ಬಾಳುವೆ ನಡೆಸಿರಿ.


ದೇವರು ನಿಮ್ಮ ಮನೋನೇತ್ರಗಳನ್ನು ತೆರೆಯಲಿ; ಅವರ ಬೆಳಕು ನಿಮಗೆ ಕಾಣುವಂತೆ ಆಗಲಿ. ಹೀಗೆ, ಅವರು ಕರೆದಿರುವ ಜನರಿಗೆ ಲಭಿಸುವ ಭರವಸೆಯ ಭಾಗ್ಯ ಎಂಥದ್ದೆಂದೂ ದೇವಜನರಿಗೆ ಕಾಯ್ದಿರಿಸಿರುವ ಸ್ವಾಸ್ತ್ಯ ಸಂಪತ್ತು ಎಂಥದ್ದೆಂದೂ ನೀವು ಅರಿತುಕೊಳ್ಳಬೇಕು.


ಹೀಗೆ ಅಂಗಗಳು ಅನೇಕವಾಗಿದ್ದರೂ ದೇಹ ಮಾತ್ರ ಏಕ.


ಸತ್ಯ ವಾಕ್ಯದ, ಅಂದರೆ ಶುಭಸಂದೇಶದ ಮೂಲಕ ನೀವು ಕೇಳಿ ತಿಳಿದಂಥ ಹಾಗೂ ನಿರೀಕ್ಷಿಸುವಂಥ ಸೌಭಾಗ್ಯವನ್ನು ಸ್ವರ್ಗಲೋಕದಲ್ಲಿ ನಿಮಗಾಗಿ ಕಾದಿರಿಸಲಾಗಿದೆ.


ಕ್ರಿಸ್ತಯೇಸುವಿನಲ್ಲಿ ನಂಬಿಕೆ ನಿರೀಕ್ಷೆಯನ್ನಿಟ್ಟಿರುವ ಪ್ರತಿಯೊಬ್ಬನೂ ಅವರು ಶುದ್ಧರಾಗಿರುವಂತೆಯೇ ತನ್ನನ್ನು ಶುದ್ಧವಾಗಿಟ್ಟುಕೊಳ್ಳುತ್ತಾನೆ.


ಮರಣದಿಂದ ಪುನರುತ್ಥಾನಗೊಳಿಸಿ ಮಹಿಮೆಪಡಿಸಿದ ದೇವರಲ್ಲಿ ನೀವು ವಿಶ್ವಾಸವಿಟ್ಟದ್ದು ಇವರ ಮುಖಾಂತರವೇ. ಹೀಗೆ ನಿಮ್ಮ ವಿಶ್ವಾಸವೂ ನಿರೀಕ್ಷೆಯೂ ದೇವರಲ್ಲೇ ನೆಲೆಗೊಂಡಿವೆ.


ನಮ್ಮನ್ನು ಪ್ರೀತಿಸಿ ನಿತ್ಯಾದರಣೆಯನ್ನೂ ಉತ್ತಮ ನಿರೀಕ್ಷೆಯನ್ನೂ ಅನುಗ್ರಹವಾಗಿ ಕೊಟ್ಟಿರುವ ನಮ್ಮ ಪ್ರಭುವಾದ ಯೇಸುಕ್ರಿಸ್ತರು ಹಾಗೂ ಪಿತನಾದ ದೇವರು ನಿಮ್ಮ ಹೃನ್ಮನಗಳನ್ನು ಉತ್ತೇಜನಗೊಳಿಸಲಿ.


ನಿಮ್ಮ ಹೃನ್ಮನಗಳು ಕ್ರಿಸ್ತಯೇಸುವಿನ ಶಾಂತಿಸಮಾಧಾನದಿಂದ ತುಂಬಿರಲಿ. ನೀವು ಒಂದೇ‍ ಶರೀರವಾಗಿ ಬಾಳಲು ಕರೆಯಲ್ಪಟ್ಟಿದ್ದೀರಿ; ಕೃತಜ್ಞತೆ ಉಳ್ಳವರಾಗಿ ಜೀವಿಸಿರಿ.


ಯೇಸುಕ್ರಿಸ್ತರ ಅನ್ಯೋನ್ಯತೆಯಲ್ಲಿ ನೀವು ಸಹ ಇತರರೆಲ್ಲರೊಡನೆ ದೇವರ ನಿವಾಸಕ್ಕೆ ತಕ್ಕ ಮಂದಿರವಾಗಿ ಪವಿತ್ರಾತ್ಮ ಅವರಿಂದ ಕಟ್ಟಲ್ಪಡುತ್ತಿದ್ದೀರಿ.


ತಮ್ಮ ಶಿಲುಬೆಯ ಮರಣದ ಮೂಲಕ ಹಗೆತನವನ್ನು ನಿರ್ಮೂಲಗೊಳಿಸಿ ಉಭಯತ್ರರನ್ನು ಒಂದೇ ದೇಹದಂತೆ ಮಾಡಿ ದೇವರೊಂದಿಗೆ ಸಂಧಾನಗೊಳಿಸಿದ್ದಾರೆ.


ಆದ್ದರಿಂದ ನೀವು ಹೋಗಿ, ಸಕಲ ದೇಶಗಳ ಜನರನ್ನು ನನ್ನ ಶಿಷ್ಯರನ್ನಾಗಿ ಮಾಡಿರಿ; ಪಿತ, ಸುತ, ಮತ್ತು ಪವಿತ್ರಾತ್ಮ ನಾಮದಲ್ಲಿ ಅವರಿಗೆ ದೀಕ್ಷಾಸ್ನಾನ ಮಾಡಿಸಿರಿ.


ಸರ್ವೇಶ್ವರಾ, ಇಸ್ರಯೇಲರಿಗೆ ನೀವೇ ನಿರೀಕ್ಷೆ ಇಕ್ಕಟ್ಟಿನಲ್ಲಿ ಅವರಿಗೆ ನೀವೇ ರಕ್ಷೆ. ನಾಡಿನಲ್ಲಿ ಅನ್ಯದೇಶೀಯನಂತಿರುವಿರಿ, ಏಕೆ? ರಾತ್ರಿ ಕಳೆಯಲು ಗುಡಾರಹಾಕಿದ ಪ್ರಯಾಣಿಕನಂತಿರುವಿರಿ, ಏಕೆ?


ಹೀಗೆ ದೈವಾನುಗ್ರಹದಿಂದ ನಾವು ದೇವರೊಡನೆ ಸತ್ಸಂಬಂಧವನ್ನು ಹೊಂದಿದೆವು. ನಿತ್ಯಜೀವದ ಭರವಸೆಯನ್ನು ಪಡೆದು ಆ ಜೀವಕ್ಕೆ ಬಾಧ್ಯಸ್ಥರಾದೆವು. ಇದು ಸತ್ಯವಾದ ಮಾತು.


ಕ್ರೈಸ್ತವಿಶ್ವಾಸದಲ್ಲಿ ಸತ್‍ಪುತ್ರನಾದ ತಿಮೊಥೇಯನಿಗೆ-ಪೌಲನು ಬರೆಯುವ ಪತ್ರ.


ರೊಟ್ಟಿ ಒಂದೇ; ಆದ್ದರಿಂದ ನಾವು ಅನೇಕರಿದ್ದರೂ ಒಂದೇ ಶರೀರವಾಗುತ್ತೇವೆ. ಏಕೆಂದರೆ ನಾವೆಲ್ಲರೂ ಆ ಒಂದೇ ರೊಟ್ಟಿಯಲ್ಲಿ ಭಾಗಿಗಳಾಗುತ್ತೇವೆ.


ಏಕೆಂದರೆ, ಯಾರಾದರೂ ಬಂದು, ನಾವು ಬೋಧಿಸದೆ ಇರುವ ಬೇರೊಬ್ಬ ಯೇಸುವನ್ನು ಬೋಧಿಸಿದರೆ ನೀವು ಸ್ವೀಕರಿಸುತ್ತೀರಿ. ನೀವು ಹೊಂದಿರುವ ಪವಿತ್ರಾತ್ಮರಿಗೆ ಬದಲಾಗಿ ಬೇರೊಬ್ಬ ಆತ್ಮವನ್ನು ಪಡೆಯುವಂತೆ ಮಾಡಿದರೆ, ನೀವು ಸ್ವಾಗತಿಸುತ್ತೀರಿ. ನಿಮಗೆ ಈಗಾಗಲೇ ದೊರಕಿರುವ ಶುಭಸಂದೇಶವಲ್ಲದೆ ಬೇರೊಂದು ಸಂದೇಶವನ್ನು ನಿಮಗೆ ಸಾರಿದರೆ, ನೀವು ಒಮ್ಮೆಗೇ ಒಪ್ಪಿಕೊಳ್ಳುತ್ತೀರಿ. ಇದು ನಿಜಕ್ಕೂ ಆಶ್ಚರ್ಯವೇ ಸರಿ.


ಇಲ್ಲ, ಇದು ಸರಿಯಲ್ಲ. ನಮಗೇ ಆಗಲಿ, ಅವರಿಗೇ ಆಗಲಿ, ಜೀವೋದ್ಧಾರ ದೊರಕುವುದು ಪ್ರಭು ಯೇಸುವಿನ ಅನುಗ್ರಹದಿಂದಲೇ. ಇದೇ ನಮ್ಮ ವಿಶ್ವಾಸ.”


ಸರ್ವೇಶ್ವರನಲ್ಲಿ ಭರವಸೆಯಿಟ್ಟವನಾದರೋ ಧನ್ಯ ! ಅಂಥವನಿಗೆ ಸರ್ವೇಶ್ವರನಲ್ಲೇ ವಿಶ್ವಾಸ.


ದೇವರು ತಾವೇ ನೀಡುವ ವರಗಳನ್ನಾಗಲಿ, ಕೊಡುವ ಕರೆಯನ್ನಾಗಲಿ ಹಿಂತೆಗೆದುಕೊಳ್ಳುವವರಲ್ಲ.


ನನ್ನ ಬಂಧುಬಳಗದವರ ನಿಮಿತ್ತ I “ನಿನಗೆ ಶುಭವಿರಲಿ” ಎಂಬುದು ನನ್ನ ಮತ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು