Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 5:1 - ಕನ್ನಡ ಸತ್ಯವೇದವು C.L. Bible (BSI)

1 ದೇವರ ಅಕ್ಕರೆಯ ಮಕ್ಕಳು ನೀವು. ಆದ್ದರಿಂದ ದೇವರನ್ನೇ ಅನುಸರಿಸಿ ಬಾಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆದುದರಿಂದ ದೇವರ ಪ್ರಿಯರಾದ ಮಕ್ಕಳಿಗೆ ತಕ್ಕ ಹಾಗೆ ಆತನನ್ನು ಅನುಸರಿಸುವವರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ದೇವರು ನಿಮಗೆ ಕ್ರಿಸ್ತನಲ್ಲಿ ಕ್ಷವಿುಸಿದನಲ್ಲಾ; ಆದದರಿಂದ ದೇವರ ಪ್ರಿಯರಾದ ಮಕ್ಕಳಿಗೆ ತಕ್ಕ ಹಾಗೆ ಆತನನ್ನು ಅನುಸರಿಸುವವರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನೀವು ದೇವರ ಪ್ರಿಯ ಮಕ್ಕಳಾಗಿದ್ದೀರಿ; ಆದ್ದರಿಂದ ನೀವು ಆತನನ್ನು ಅನುಸರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆದ್ದರಿಂದ ನೀವು ದೇವರ ಪ್ರಿಯರಾದ ಮಕ್ಕಳಂತೆ ದೇವರ ಮಾದರಿಯನ್ನು ಅನುಸರಿಸಿ ಬಾಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ತುಮಿ ದೆವಾಚಿ ಪ್ರೆಮಾಚಿ ಪೊರಾ ಹೊಲ್ಯಾಸಿ, ತಸೆ ಹೊವ್ನ್ ತುಮಿ ತೆಚ್ಯಾ ಸಾರ್ಕೆ ಹೊವ್ಕ್ ಬಗುಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 5:1
13 ತಿಳಿವುಗಳ ಹೋಲಿಕೆ  

ಪ್ರಿಯರೇ, ದೇವರೇ ನಮ್ಮನ್ನು ಇಷ್ಟಾಗಿ ಪ್ರೀತಿಸಿರುವಲ್ಲಿ ನಾವು ಸಹ ಒಬ್ಬರನ್ನೊಬ್ಬರು ಪ್ರೀತಿಸಲೇಬೇಕು.


ಪರಸ್ಪರ ಕರುಣೆಯಿಂದಲೂ ಕನಿಕರದಿಂದಲೂ ವರ್ತಿಸಿರಿ. ಯೇಸುಕ್ರಿಸ್ತರಲ್ಲಿ ದೇವರು ನಿಮ್ಮನ್ನು ಕ್ಷಮಿಸಿದಂತೆಯೇ, ನೀವು ಸಹ ಒಬ್ಬರನ್ನೊಬ್ಬರು ಕ್ಷಮಿಸಿರಿ.


ಆದುದರಿಂದ ಸ್ವರ್ಗದಲ್ಲಿರುವ ನಿಮ್ಮ ತಂದೆ ಪರಿಪೂರ್ಣರಾಗಿರುವಂತೆ ನೀವೂ ಪರಿಪೂರ್ಣರಾಗಿರಿ.”


ನೀವು ದೇವರಿಂದ ಆಯ್ಕೆಯಾದವರು. ದೇವರಿಗೆ ಪ್ರಿಯವಾದವರು. ದೇವರ ಸ್ವಂತಜನರು. ಹೀಗಿರಲಾಗಿ ಕನಿಕರ, ದಯೆ, ದೀನತೆ, ವಿನಯಶೀಲತೆ, ಶಾಂತಿ, ಸಹನೆ ಎಂಬ ಸದ್ಗುಣಗಳೇ ನಿಮ್ಮ ಆಭರಣಗಳಾಗಿರಲಿ.


ನಿಮ್ಮ ದೇವರಾಗಿರುವುದಕ್ಕೆ ನಿಮ್ಮನ್ನು ಈಜಿಪ್ಟಿನಿಂದ ಬರಮಾಡಿದ ಸರ್ವೇಶ್ವರ ನಾನು; ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು.


ಕೆಲವರಾದರೋ ಅವರನ್ನು ಬರಮಾಡಿಕೊಂಡರು. ಅಂಥವರಿಗೆ, ಅಂದರೆ ಅವರಲ್ಲಿ ವಿಶ್ವಾಸ ಇಟ್ಟವರಿಗೆ, ದೇವರ ಮಕ್ಕಳಾಗುವ ಹಕ್ಕನ್ನು ಅವರು ಕೊಟ್ಟರು.


ಇದರಿಂದ ಸ್ವರ್ಗದಲ್ಲಿರುವ ನಿಮ್ಮ ತಂದೆಗೆ ನೀವು ಮಕ್ಕಳಾಗುವಿರಿ. ಅವರು ಸಜ್ಜನರ ಮೇಲೂ ದುರ್ಜನರ ಮೇಲೂ ತಮ್ಮ ಸೂರ್ಯನು ಉದಯಿಸುವಂತೆ ಮಾಡುತ್ತಾರೆ; ನೀತಿವಂತರ ಮೇಲೂ ಅನೀತಿವಂತರ ಮೇಲೂ ಮಳೆಗರೆಯುತ್ತಾರೆ.


ಸರ್ವೇಶ್ವರ ಹೀಗೆನ್ನುತ್ತಾರೆ: “ಎಫ್ರಯಿಮ್, ನನಗೆ ಪ್ರಿಯ ಪುತ್ರನಲ್ಲವೆ? ನನ್ನ ಮುದ್ದು ಮಗನಲ್ಲವೆ? ಅವನ ವಿರುದ್ಧ ನಾನು ಪದೇ ಪದೇ ಮಾತಾಡಿದ್ದರೂ ನನ್ನ ಜ್ಞಾಪಕಕ್ಕೆ ಬರುತ್ತಲೇ ಇರುತ್ತಾನೆ. ಅವನಿಗಾಗಿ ನನ್ನ ಕರುಳು ಮರುಗುತ್ತದೆ. ಅವನನ್ನು ನಿಶ್ಚಯವಾಗಿ ಕರುಣಿಸುವೆನು.”


ಆದರೂ ಇಸ್ರಯೇಲ್ ಜನಾಂಗ ಅಳೆಯುವುದಕ್ಕೂ ಎಣಿಸುವುದಕ್ಕೂ ಅಸಾಧ್ಯವಾದ ಕಡಲತೀರದ ಮರಳಿನಂತಾಗುವುದು. ದೇವರು ಅವರಿಗೆ ಇಂದು, “ನೀವು ನನ್ನ ಪ್ರಜೆಯಲ್ಲ” ಎಂದಿದ್ದಾರೆ; ಆದರೂ, “ನೀವು ಜೀವಸ್ವರೂಪಿಯಾದ ದೇವರ ಮಕ್ಕಳು” ಎನಿಸಿಕೊಳ್ಳುವ ದಿನ ಬರುವುದು.


ನಿರ್ದೋಷಿಗಳೂ ನಿಷ್ಕಳಂಕರೂ ಆಗಿರಿ. ವಕ್ರಬುದ್ಧಿಯ ದುಷ್ಟಜನರ ನಡುವೆ ದೇವರ ಪರಿಶುದ್ಧ ಮಕ್ಕಳಂತೆ ಬಾಳಿರಿ. ಜೀವದಾಯಕ ಸಂದೇಶವನ್ನು ಎತ್ತಿಹಿಡಿಯಿರಿ; ಆಗ ನಕ್ಷತ್ರಗಳು ಆಕಾಶವನ್ನು ಬೆಳಗಿಸುವಂತೆ ಪ್ರಪಂಚದಲ್ಲಿ ನೀವು ಕಂಗೊಳಿಸುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು