Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 5:16 - ಕನ್ನಡ ಸತ್ಯವೇದವು C.L. Bible (BSI)

16 ಈ ದಿನಗಳು ಕೆಟ್ಟ ದಿನಗಳಾಗಿರುವುದರಿಂದ ನಿಮಗಿರುವ ಸದವಕಾಶಗಳನ್ನು ಸದ್ವಿನಿಯೋಗಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಈ ದಿನಗಳು ಕೆಡುಕಿನಿಂದ ಕೂಡಿದವುಗಳಾಗಿರುವುದ್ದರಿಂದ ಕಾಲವನ್ನು ಸದುಪಯೋಗಪಡಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಈ ದಿನಗಳು ಕೆಟ್ಟವುಗಳಾಗಿವೆ; ಆದದರಿಂದ ಕಾಲವನ್ನು ಸುಮ್ಮನೆ ಕಳಕೊಳ್ಳದೆ ಅದನ್ನು ಬೆಲೆಯುಳ್ಳದ್ದೆಂದು ಉಪಯೋಗಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಈ ದಿನಗಳು ಕೆಟ್ಟವುಗಳಾಗಿವೆ. ಆದ್ದರಿಂದ ನಿಮಗಿರುವ ಪ್ರತಿಯೊಂದು ಅವಕಾಶವನ್ನು ಒಳ್ಳೆಯದಕ್ಕಾಗಿ ಉಪಯೋಗಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಈ ದಿನಗಳು ಕೆಟ್ಟವುಗಳಾಗಿರುವುದರಿಂದ, ಸರ್ವ ಸದಾವಕಾಶಗಳನ್ನೂ ಸದ್ವಿನಿಯೋಗಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಹಿ ದಿಸಾ ಲೈ ಬುರ್ಶಿ ಹೊವ್ನ್ ಹಾತ್ ತಸೆ ಹೊವ್ನ್, ತುಮ್ಕಾ ಗಾವಲೊ ಹರ್ ಎಕ್ ಅವಕಾಸ್‍ಬಿ ಬರ್‍ಯಾ ಕಾಮಾಕ್ ವಾಪ್ರುನ್ ಘೆವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 5:16
18 ತಿಳಿವುಗಳ ಹೋಲಿಕೆ  

ನೆರೆಯವರ ವಿಷಯದಲ್ಲಿ ಜಾಣತನದಿಂದ ವರ್ತಿಸಿರಿ. ನಿಮಗಿರುವ ಸಮಯ ಸಂದರ್ಭವನ್ನು ಸದುಪಯೋಗಪಡಿಸಿಕೊಳ್ಳಿರಿ.


ಕಾಲವು ಕೆಟ್ಟದ್ದಾಗಿ ಇರುವುದರಿಂದ ವಿವೇಕಿಯಾದವನು ಸುಮ್ಮನಿರುವುದು ಲೇಸು.


ಅದಕ್ಕೆ ಯೇಸು, “ಇನ್ನು ತುಸುಕಾಲ ಮಾತ್ರ ಜ್ಯೋತಿ ನಿಮ್ಮ ನಡುವೆ ಇರುತ್ತದೆ. ನಿಮ್ಮನ್ನು ಕತ್ತಲು ಕವಿಯದಂತೆ ಜ್ಯೋತಿಯಿರುವಾಗಲೇ ನಡೆಯಿರಿ. ಕತ್ತಲಲ್ಲಿ ನಡೆಯುವವನಿಗೆ ಗೊತ್ತುಗುರಿ ಕಾಣದು.


ಎಂದೇ, ದೇವರು ಕೊಡುವ ಸಕಲ ಶಸ್ತ್ರಾಸ್ತ್ರಗಳೊಂದಿಗೆ ಸುಸಜ್ಜಿತರಾಗಿರಿ. ಆ ದುರ್ದಿನದಂದು ವೈರಿಗಳನ್ನು ಎದುರಿಸಲು ಆಗ ನೀವು ಶಕ್ತರಾಗುತ್ತೀರಿ. ಮಾತ್ರವಲ್ಲ, ಕಟ್ಟಕಡೆಯವರೆಗೆ ಹಿಮ್ಮೆಟ್ಟದೆ ನಿಲ್ಲುತ್ತೀರಿ;


ಎಂದೇ ಸಮಯಸಂದರ್ಭಗಳು ಇರುವಾಗಲೇ ಸರ್ವರಿಗೂ ಉಪಕಾರಮಾಡೋಣ. ಅದರಲ್ಲೂ ಮುಖ್ಯವಾಗಿ, ಒಂದೇ ಕುಟುಂಬದವರಂತೆ ಇರುವ ಕ್ರೈಸ್ತವಿಶ್ವಾಸಿಗಳಿಗೆ ಉಪಕಾರ ಮಾಡೋಣ.


ಆದುದರಿಂದ ಯೌವನದಲ್ಲಿ ನಿನ್ನ ಸೃಷ್ಟಿಕರ್ತನನ್ನು ಸ್ಮರಿಸಿಕೊ. ಕಷ್ಟಕರವಾದ ದಿನಗಳು ಬರುವುದಕ್ಕೆ ಮುನ್ನ, ಜೀವನ ಬೇಸರವಾಗಿದೆ ಎಂದು ನೀನು ಹೇಳುವುದಕ್ಕೆ ಮುಂಚೆ ಆತನನ್ನು ಸ್ಮರಿಸು.


ಇದೆಂಥ ಕಾಲವೆಂದು ತಿಳಿದಿರುವ ನೀವು ಇದೆಲ್ಲವನ್ನು ಮಾಡಬೇಕು. ನಿದ್ರೆಯಿಂದ ಎಚ್ಚೆತ್ತುಕೊಳ್ಳುವ ವೇಳೆಯು ಸಮೀಪಿಸಿತು. ನಾವು ಕ್ರಿಸ್ತಯೇಸುವನ್ನು ವಿಶ್ವಾಸಿಸಲು ಆರಂಭಿಸಿದಾಗ ಇದ್ದುದಕ್ಕಿಂತಲೂ ಈಗ ನಮ್ಮ ಉದ್ಧಾರವು ಸಮೀಪವಾಗಿದೆ.


ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲ ಪೂರ್ಣಶಕ್ತಿಯಿಂದ ಮಾಡು. ಏಕೆಂದರೆ ನೀನು ಹೋಗಲಿಕ್ಕಿರುವ ಪಾತಾಳದಲ್ಲಿ ಯಾವ ಕೆಲಸವೂ ಯೋಜನೆಯೂ ತಿಳುವಳಿಕೆಯೂ ಜ್ಞಾನವೂ ಇರುವುದಿಲ್ಲ.


ಯೇಸುಕ್ರಿಸ್ತರು, ನಮ್ಮ ತಂದೆಯಾದ ದೇವರ ಚಿತ್ತಕ್ಕನುಸಾರವಾಗಿ, ನಮ್ಮನ್ನು ಸದ್ಯದ ದುಷ್ಟಕಾಲದಿಂದ ಬಿಡುಗಡೆ ಮಾಡುವುದಕ್ಕಾಗಿ ಹಾಗು ನಮ್ಮ ಪಾಪಗಳ ಪರಿಹಾರಕ್ಕಾಗಿ ತಮ್ಮನ್ನೇ ಬಲಿಯಾಗಿ ಅರ್ಪಿಸಿದರು.


ಇಂದಿನ ಸಂದಿಗ್ಧ ಪರಿಸ್ಥಿತಿಯಲ್ಲಿ ಒಬ್ಬನು ತಾನು ಇದ್ದ ಸ್ಥಿತಿಯಲ್ಲೇ ಇರುವುದು ಉತ್ತಮವೆಂದು ಭಾವಿಸುತ್ತೇನೆ.


ಮಾನನಷ್ಟವಿರದು ಕಷ್ಟಕಾಲದಲಿ I ಕುಂದುಕೊರತೆಯಿರದು ಬರಗಾಲದಲಿ II


ಶಾಂತಿಯ ಶುಭಸಂದೇಶವನ್ನು ಸಾರಲು ಶ್ರದ್ಧೆಯೆಂಬ ಪಾದರಕ್ಷೆಯನ್ನು ಮೆಟ್ಟುಕೊಳ್ಳಿರಿ.


ನಿನ್ನ ಹಣವನ್ನು ವಿಭಾಗಿಸಿ ಏಳೆಂಟು ಸ್ಥಳಗಳಲ್ಲಿ ಇಡು. ಏಕೆಂದರೆ ಎಲ್ಲಿ, ಎಂಥ ಕೇಡು ಸಂಭವಿಸಬಹುದೆಂದು ನಿನಗೆ ತಿಳಿಯದು.


ಯಕೋಬನು, “ಇನ್ನೂ ಬಹಳ ಹೊತ್ತು ಇದೆ; ಕುರಿಗಳನ್ನು ಒಟ್ಟುಗೂಡಿಸುವ ಸಮಯ ಆಗಿಲ್ಲ; ನೀರು ಕುಡಿಸಿ ಅವುಗಳನ್ನು ಮೇಯಿಸಬಾರದೇಕೆ?” ಎಂದನು.


ಅದಕ್ಕೆ ರಾಜನು, “ನೀವು ಆ ಕನಸನ್ನು ನನಗೆ ತಿಳಿಸದಿದ್ದರೆ ನಿಮಗೆ ಮರಣದಂಡನೆಯಾಗುವುದು ಖಚಿತವೆಂದು ತಿಳಿದೇ ಕಾಲಹರಣ ಮಾಡುತ್ತಿದ್ದೀರಿ. ಇದು ನನಗೆ ಚೆನ್ನಾಗಿ ಗೊತ್ತು.


ಎರಡು ಪಡೆದವನೂ ಹಾಗೆಯೇ ಮಾಡಿ ಇನ್ನೂ ಎರಡನ್ನು ಸಂಪಾದಿಸಿದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು