Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 6:1 - ಕನ್ನಡ ಸತ್ಯವೇದವು C.L. Bible (BSI)

1 ಮಕ್ಕಳೇ, ಪ್ರಭುವಿನಲ್ಲಿ ನಿಮ್ಮ ತಂದೆತಾಯಿಗಳ ಮಾತಿಗೆ ಕಿವಿಗೊಡಿ. ಇದು ಧರ್ಮಸಮ್ಮತವಾದುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಮಕ್ಕಳೇ, ನೀವು ಕರ್ತನಲ್ಲಿರುವವರಿಗೆ ತಕ್ಕ ಹಾಗೆ ನಿಮ್ಮ ತಂದೆತಾಯಿಗಳ ವಿಧೇಯರಾಗಿರಿ. ಇದು ನ್ಯಾಯವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಮಕ್ಕಳೇ, ನೀವು ಕರ್ತನಲ್ಲಿರುವವರಿಗೆ ತಕ್ಕ ಹಾಗೆ ನಿಮ್ಮ ತಂದೆತಾಯಿಗಳ ಮಾತನ್ನು ಕೇಳಬೇಕು; ಇದು ಧರ್ಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಮಕ್ಕಳೇ, ಪ್ರಭುವಿನ ಚಿತ್ತಕ್ಕನುಸಾರವಾಗಿ ನಿಮ್ಮ ತಂದೆತಾಯಿಗಳಿಗೆ ವಿಧೇಯರಾಗಿರಿ. ಅದು ನ್ಯಾಯಬದ್ಧವಾದದ್ದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಮಕ್ಕಳೇ, ನೀವು ಕರ್ತನಲ್ಲಿ ನಿಮ್ಮ ತಂದೆತಾಯಿಗಳಿಗೆ ವಿಧೇಯರಾಗಿರಿ, ಇದು ಸೂಕ್ತವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಪೊರಾನು, ಧನಿಯಾಚ್ಯಾ ಇಚ್ಛ್ಯಾ ಸಾರ್ಕೆ ತುಮ್ಚ್ಯಾ ಬಾಯ್ ಬಾಬಾಕ್ನಿ ಖಾಲ್ತಿ ಹೊವ್ನ್ ರಾವಾ, ಹೆ ತುಮಿ ಕರ್ತಲೆ ಸಮಾ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 6:1
33 ತಿಳಿವುಗಳ ಹೋಲಿಕೆ  

ಹೆತ್ತ ತಂದೆಯ ಮಾತಿಗೆ ಕಿವಿಗೊಡು; ಮುಪ್ಪಿನ ತಾಯಿಯನ್ನು ಅಸಡ್ಡೆಮಾಡದಿರು.


ಮಗನೇ, ನಿನ್ನ ತಂದೆಯ ಆಜ್ಞೆಗೆ ಕಿವಿಗೊಡು, ನಿನ್ನ ತಾಯಿಯ ಉಪದೇಶವನ್ನು ತೊರೆಯದೆ ಮಾಡು.


ಮಗನೇ, ನಿನ್ನ ತಂದೆಯ ಬೋಧೆಗೆ ಕಿವಿಗೊಡು, ನಿನ್ನ ತಾಯಿಯ ಉಪದೇಶವನ್ನು ತೊರೆಯದಿರು.


“ಒಬ್ಬ ಮಗನು ತಂದೆತಾಯಿಗಳ ಆಜ್ಞೆಗೆ ಒಳಗಾಗದೆ, ಶಿಕ್ಷಿಸಿದ್ದರೂ ಮೊಂಡನೂ ಅವಿಧೇಯನೂ ಆಗಿ, ಅವರ ಮಾತನ್ನು ಕೇಳದೆಹೋದರೆ,


ಪ್ರತಿಯೊಬ್ಬ ವ್ಯಕ್ತಿಯು ತನ್ನ ತಂದೆತಾಯಿಗಳ ವಿಷಯ಼ದಲ್ಲಿ ಭಯಭಕ್ತಿಯಿಂದ ನಡೆದುಕೊಳ್ಳಬೇಕು. ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ಆಚರಿಸಬೇಕು. ನಾನೇ ನಿಮ್ಮ ದೇವರಾದ ಸರ್ವೇಶ್ವರ.


ವಿಧವೆಯಾದವಳಿಗೆ ಮಕ್ಕಳಾಗಲಿ ಮೊಮ್ಮಕ್ಕಳಾಗಲಿ ಇದ್ದರೆ, ಆ ಮಕ್ಕಳು ಮೊತ್ತಮೊದಲು ತಮ್ಮ ಸ್ವಂತ ಕುಟುಂಬಕ್ಕೆ ಸಹಾಯಮಾಡಬೇಕಾದುದು ಅವರ ಧಾರ್ಮಿಕ ಕರ್ತವ್ಯವೆಂಬುದು ಅವರಿಗೆ ತಿಳಿದಿರಲಿ. ಹೀಗೆ ಅವರು ತಮ್ಮ ತಂದೆತಾಯಿಯರಿಗೆ ಪ್ರತ್ಯುಪಕಾರಮಾಡಿದಂತಾಗುತ್ತದೆ. ಅಲ್ಲದೆ, ಇದು ದೇವರ ದೃಷ್ಟಿಯಲ್ಲಿ ಮೆಚ್ಚುಗೆ ಪಡೆದುದು.


ಇಹಲೋಕದ ಆಚಾರವಿಚಾರಗಳಿಗೆ ಮಾರುಹೋಗಬೇಡಿ. ಬದಲಿಗೆ, ಮಾನಸಾಂತರಗೊಂಡು ನೂತನ ಜೀವಿಗಳಾಗಿ ಬಾಳಿರಿ. ಆಗ ನೀವು ದೇವರ ಚಿತ್ತಾನುಸಾರ ಯಾವುದು ಉತ್ತಮವಾದುದು, ಯಾವುದು ಉನ್ನತವಾದುದು, ಯಾವುದು ಉತ್ಕೃಷ್ಟವಾದುದು ಎಂಬುದನ್ನು ಅರಿತುಕೊಳ್ಳುವಿರಿ.


ತಂದೆಯನ್ನು ಪರಿಹಾಸ್ಯಮಾಡುವ ಕಣ್ಣನ್ನು, ತಾಯಿಯ ಆಜ್ಞೆಯನ್ನು ಧಿಕ್ಕರಿಸುವ ನೇತ್ರವನ್ನು ಹಳ್ಳಕೊಳ್ಳದ ಕಾಗೆಗಳು ಕುಕ್ಕುವುವು, ರಣಹದ್ದುಗಳು ತಿಂದುಬಿಡುವುವು.


ಧರ್ಮಶಾಸ್ತ್ರ ಪವಿತ್ರವಾದುದು. ಅಂತೆಯೇ, ಆಜ್ಞೆಯೂ ಪವಿತ್ರವಾದುದು. ನ್ಯಾಯವಾದುದು ಮತ್ತು ಹಿತಕರವಾದುದು.


ಬಳಿಕ ಯೇಸು ತಂದೆತಾಯಿಗಳೊಡನೆ ನಜರೇತಿಗೆ ಬಂದರು. ಅಲ್ಲಿ ಅವರಿಗೆ ವಿಧೇಯರಾಗಿ ನಡೆದುಕೊಳ್ಳುತ್ತಿದ್ದರು. ಈ ವಿಷಯಗಳನ್ನೆಲ್ಲಾ ತಾಯಿ ಮರಿಯಳು ತನ್ನ ಮನಸ್ಸಿನಲ್ಲಿ ಸಂಗ್ರಹಿಸಿ ಇಟ್ಟುಕೊಂಡಳು.


ಆಗ ಅವನು ಜನರ ಮುಂದೆ ಈ ಪರಿ ಹಾಡುವನು: ‘ಪಾಪ ಮಾಡಿದೆ; ಸನ್ಮಾರ್ಗ ಬಿಟ್ಟು ನಡೆದೆ ಆದರೂ ದಂಡಿಸಲಿಲ್ಲ ದೇವರು ನನ್ನ ಪಾಪಕ್ಕೆ ತಕ್ಕಂತೆ.


ಎಲ್ಲ ಮಾನವ ಅಧಿಕಾರಿಗಳಿಗೂ ಪ್ರಭುವಿನ ನಿಮಿತ್ತ ಅಧೀನರಾಗಿರಿ. ಸಕಲ ಅಧಿಕಾರವನ್ನು ಪಡೆದಿರುವ ದೇಶಾಧಿಕಾರಿಗೆ ಅಧೀನರಾಗಿ ನಡೆಯಿರಿ.


ಬುದ್ಧಿವಂತನು ಈ ಮಾತುಗಳನ್ನು ಗ್ರಹಿಸಿಕೊಳ್ಳಲಿ. ವಿವೇಕಿಯು ಈ ನುಡಿಗಳನ್ನು ಅರ್ಥಮಾಡಿಕೊಳ್ಳಲಿ. ಸರ್ವೇಶ್ವರಸ್ವಾಮಿಯ ಮಾರ್ಗಗಳು ನೇರವಾದವುಗಳು. ಸನ್ಮಾರ್ಗಿಗಳು ಅವುಗಳನ್ನು ಕೈಗೊಂಡು ನಡೆಯುವರು. ದುರ್ಮಾರ್ಗಿಗಳು ಅವುಗಳನ್ನು ಕೈಬಿಟ್ಟು ಮುಗ್ಗರಿಸಿ ಬೀಳುವರು.


ತಂದೆಯನ್ನೇ ಶಪಿಸುವ, ತಾಯಿಗು ಮರ್ಯಾದೆಯನ್ನೂ ತರದ ಮಕ್ಕಳುಂಟು.


ಹಾಗೂ ಯಕೋಬನು ತನ್ನ ತಂದೆ ತಾಯಿಗಳು ಹೇಳಿದಂತೆ ಮೆಸಪೊಟೇಮಿಯಗೆ ಹೋದದ್ದು - ಇದೆಲ್ಲವನ್ನು ಇತ್ತ ಏಸಾವನು ತಿಳಿದುಕೊಂಡನು.


ಪ್ರಭುವಿನ ನಿಯಮ ನೀತಿಬದ್ಧ; ಮನಸ್ಸಿಗದು ಒಸಗೆ I ಪ್ರಭುವಿನ ಕಟ್ಟಳೆ ಪರಿಶುದ್ಧ; ಕಣ್ಣಿಗದು ದೀವಿಗೆ II


ಮೊರ್ದೆಕೈಯ ಆದೇಶದಂತೆ ಎಸ್ತೇರಳು ತನ್ನ ಬಂಧುಬಳಗದವರ ಬಗ್ಗೆಯಾಗಲಿ, ಸ್ವಜನರ ಬಗ್ಗೆಯಾಗಲಿ ಯಾರಿಗೂ ತಿಳಿಸಿರಲಿಲ್ಲ. (ಮೊರ್ದೆಕೈಯ) ಆರೈಕೆಯಲ್ಲಿದ್ದಾಗ ಆಕೆ ಯಾವ ರೀತಿ ನಡೆದುಕೊಂಡಿದ್ದಳೋ ಹಾಗೆಯೇ ಪ್ರಸ್ತುತಕಾಲದಲ್ಲೂ ಆತನ ಆಜ್ಞೆಯನ್ನು ಪಾಲಿಸುತ್ತಿದ್ದಳು.


ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿರಿ; ನಿಶ್ಚಲರಾಗಿರಿ. ಪ್ರಭುವಿನ ಸೇವೆಯಲ್ಲಿ ನೀವು ಪಡುವ ಪ್ರಯಾಸ ಎಂದಿಗೂ ನಿಷ್ಫಲವಾಗದು. ಆದ್ದರಿಂದ ಅವರ ಸೇವೆಯಲ್ಲಿ ನಿರಂತರ ಶ್ರದ್ಧೆಯುಳ್ಳವರಾಗಿರಿ.


ದೇವಜನರ ಯೋಗ್ಯತೆಗೆ ತಕ್ಕಂತೆ ಈಕೆಯನ್ನು ಪ್ರಭುವಿನ ಹೆಸರಿನಲ್ಲಿ ಬರಮಾಡಿಕೊಳ್ಳಿ. ನನಗೂ ಅನೇಕರಿಗೂ ನೆರವು ನೀಡಿರುವ ಈಕೆಗೆ ನಿಮ್ಮಿಂದಾದ ಎಲ್ಲಾ ಸಹಾಯವನ್ನು ಮಾಡಿ.


ನಾ ಬಲ್ಲೆ ಪ್ರಭು, ನಿನ್ನ ವಿಧಿಗಳು ನೀತಿಯುತವೆಂದು I ಕಷ್ಟಕೆ ನನ್ನನು ಗುರಿಪಡಿಸಿರುವುದು ಉಚಿತವೆಂದು II


ಯಕೋಬನು ಜೋಸೆಫನಿಗೆ, “ನಿನ್ನ ಅಣ್ಣಂದಿರು ಶೆಕೆಮಿನಲ್ಲಿ ಆಡುಕುರಿಗಳನ್ನು ಮೇಯಿಸುತ್ತಿದ್ದಾರೆ, ಅಲ್ಲವೆ? ಅವರ ಬಳಿಗೆ ನಿನ್ನನ್ನು ಕಳಿಸಬೇಕೆಂದಿದ್ದೇನೆ,” ಎನ್ನಲು


‘ರೇಕಾಬನ ಮಗ ಯೋನಾದಾಬನು ತನ್ನ ಸಂತಾನದವರಿಗೆ ದ್ರಾಕ್ಷಾರಸವನ್ನು ಕುಡಿಯಬಾರದೆಂದು ಕೊಟ್ಟ ಅಪ್ಪಣೆ ನೆರವೇರಿದೆ. ಅವರು ಇಂದಿನವರೆಗೂ ಕುಡಿಯಲಿಲ್ಲ. ತಮ್ಮ ಪೂರ್ವಜನ ಆಜ್ಞೆಯನ್ನು ಕೈಗೊಂಡಿದ್ದಾರೆ. ನೀವೋ, ನಾನು ನಿಮಗೆ ಪದೇ ಪದೇ ಹೇಳುತ್ತಾ ಬಂದರೂ ನನ್ನ ಮಾತಿಗೆ ಕಿವಿಗೊಡಲಿಲ್ಲ.


ಸೀನಾಯಿ ಬೆಟ್ಟದ ಮೇಲೆ ಇಳಿದುಬಂದು ಆಕಾಶದ ಕಡೆಯಿಂದ ಅವರೊಡನೆ ಮಾತಾಡಬಂದು ಅವರಿಗನುಗ್ರಹಿಸಿದಿರಿ ನೀತಿನಿಯಮಗಳನು ಸತ್ಯಧರ್ಮೋಪದೇಶವನು, ಶ್ರೇಷ್ಠ ಆಜ್ಞಾವಿಧಿಗಳನು.


ದಾವೀದನು ಮರುದಿನ ಬೆಳಿಗ್ಗೆ ಎದ್ದು ಕುರಿಗಾಹಿಗೆ ಕುರಿಗಳನ್ನು ಒಪ್ಪಿಸಿ, ತನ್ನ ತಂದೆ ಜೆಸ್ಸೆಯನು ಹೇಳಿದವುಗಳನ್ನು ತೆಗೆದುಕೊಂಡು ಪಾಳೆಯದ ಬಂಡಿಗಳು ನಿಂತಿದ್ದ ಸ್ಥಳಕ್ಕೆ ಬಂದನು. ಸೈನ್ಯಗಳು ಯುದ್ಧಘೋಷಣೆಗಳನ್ನು ಹಾಕುವ ಸಮಯ ಅದು.


ನ್ಯಾಯವಾಗಿವೆ ನಿನ್ನ ನಿಯಮಗಳೆಲ್ಲ I ನನಗೆ ಹಗೆ ಮಿಥ್ಯಮಾರ್ಗಗಳೆಲ್ಲ II


ರೂತಳು: “ನೀನು ಹೇಳಿದಂತೆಯೇ ನಾನು ಮಾಡುತ್ತೇನೆ,” ಎಂದು ಮರುತ್ತರಕೊಟ್ಟಳು.


ನಮ್ಮ ಪೂರ್ವಜನಾದ ರೇಕಾಬನ ಮಗ ಯೋನಾದಾಬನು ನಮಗೆ ಕೊಟ್ಟ ಈ ಅಪ್ಪಣೆಯನ್ನು ಎಲ್ಲ ವಿಷಯದಲ್ಲೂ ಕೈಗೊಂಡು ಬರುತ್ತಿದ್ದೇವೆ. ನಾವಾಗಲಿ, ನಮ್ಮ ಮಡದಿ ಮಕ್ಕಳಾಗಲಿ, ಜೀವಮಾನದಲ್ಲೆಲ್ಲಾ ‘ದ್ರಾಕ್ಷಾರಸ ಕುಡಿಯುವುದಿಲ್ಲ.


ಯೆರೆಮೀಯನು ರೇಕಾಬ್ಯರಿಗೆ, “ಇಸ್ರಯೇಲರ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ಹೀಗೆನ್ನುತ್ತಾರೆ: ‘ನೀವು ನಿಮ್ಮ ಪೂರ್ವಜ ಯೋನಾದಾಬನ ಅಪ್ಪಣೆಯನ್ನು ಕೇಳಿ ಅವನ ಎಲ್ಲ ವಿಧಿಗಳನ್ನು ಅನುಸರಿಸಿ, ಅವನು ಆಜ್ಞಾಪಿಸಿದ್ದನ್ನೆಲ್ಲ ನೆರವೇರಿಸಿದ ಕಾರಣ


ಆಗ ಜೋಸೆಫನು ತಂದೆಯ ಮಡಲಿನಿಂದ ತನ್ನ ಮಕ್ಕಳನ್ನು ಎತ್ತಿಕೊಂಡು ತಂದೆಗೆ ನೆಲದ ತನಕ ಬಾಗಿ ನಮಸ್ಕರಿಸಿದನು.


ಯಕೋಬನ ಮಕ್ಕಳು ತಂದೆಯ ಅಪ್ಪಣೆಯಂತೆ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು