Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 6:3 - ಕನ್ನಡ ಸತ್ಯವೇದವು C.L. Bible (BSI)

3 ಇದನ್ನು ಪಾಲಿಸಿದರೆ ನಿನಗೆ ಶುಭವಾಗುವುದು; ನೀನು ಬಹುಕಾಲ ಬಾಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಗೌರವಿಸಿದರೆ ನಿನಗೆ ಶುಭವಾಗುವುದು, ನೀನು ಭೂಮಿಯ ಮೇಲೆ ಬಹುಕಾಲ ಬದುಕುವಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಸನ್ಮಾನಿಸಿದರೆ ನಿನಗೆ ಮೇಲಾಗುವದು, ನೀನು ಭೂವಿುಯ ಮೇಲೆ ಬಹುಕಾಲ ಬದುಕುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆ ವಾಗ್ದಾನವು ಇಂತಿದೆ: “ಆಗ ನಿಮಗೆ ಒಳ್ಳೆಯದಾಗುವುದು ಮತ್ತು ನೀವು ಭೂಮಿಯ ಮೇಲೆ ಬಹುಕಾಲ ಬದುಕುವಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 “ಸನ್ಮಾನಿಸಿದರೆ ನಿನಗೆ ಶುಭವಾಗುವುದು. ನೀನು ಭೂಮಿಯ ಮೇಲೆ ಬಹುಕಾಲ ಬದುಕುವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತಿ ಗೊಸ್ಟ್ ಅಸಿ ಹಾಯ್; “ತನ್ನಾ ತುಮ್ಕಾ ಬರೆ ಹೊತಾ ಅನಿ ತುಮಿ ಹ್ಯಾ ಜಿಮ್ನಿವರ್ತಿ ಲೈ ಯೆಳ್ ಜಿವನ್ ಕರ್ತ್ಯಾಸಿ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 6:3
15 ತಿಳಿವುಗಳ ಹೋಲಿಕೆ  

‘ನಿನ್ನ ದೇವರಾದ ಸರ್ವೇಶ್ವರ ಆಜ್ಞಾಪಿಸಿದಂತೆ, ನಿನ್ನ ತಂದೆತಾಯಿಗಳನ್ನು ಗೌರವಿಸು; ಗೌರವಿಸಿದರೆ ನಿನ್ನ ದೇವರೂ ಸರ್ವೇಶ್ವರನೂ ಆದ ನಾನು ನಿನಗೆ ಅನುಗ್ರಹಿಸುವ ನಾಡಿನಲ್ಲಿ ಬಹುಕಾಲ ಸುಕ್ಷೇಮವಾಗಿ ಬಾಳುವೆ.


ನಾನು ಇಂದು ನಿಮಗೆ ತಿಳಿಸಿದ ಅವರ ಆಜ್ಞಾವಿಧಿಗಳನ್ನು ಅನುಸರಿಸಿ ನಡೆಯಿರಿ. ಆಗ ನಿಮಗೂ ನಿಮ್ಮ ಸಂತತಿಗೂ ಶುಭವುಂಟಾಗುವುದು; ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಶಾಶ್ವತವಾಗಿ ಕೊಡುವ ನಾಡಿನಲ್ಲಿ ನೀವು ದೀರ್ಘಕಾಲ ಬಾಳುವಿರಿ.”


“ನಾನು ಬೋಧಿಸುವ ಈ ಎಲ್ಲಾ ಆಜ್ಞೆಗಳಿಗೆ ನೀವು ಚೆನ್ನಾಗಿ ಕಿವಿಗೊಟ್ಟು, ಅವುಗಳನ್ನು ಅನುಸರಿಸಿದರೆ ನಿಮಗೂ ನಿಮ್ಮ ಸಂತತಿಯವರಿಗೂ ಸದಾಕಾಲ ಶುಭವುಂಟಾಗುವುದು. ಏಕೆಂದರೆ ಹೀಗೆ ಮಾಡುವುದರಿಂದ ನಿಮ್ಮ ದೇವರಾದ ಸರ್ವೇಶ್ವರನ ದೃಷ್ಟಿಯಲ್ಲಿ ಸರಿಯಾದುದನ್ನೂ ಸೂಕ್ತವಾದುದನ್ನೂ ಮಾಡುತ್ತೀರಿ.


ನೀವು ಅದನ್ನು ಸೇವಿಸದೆ ಸರ್ವೇಶ್ವರನಿಗೆ ಮೆಚ್ಚಿಗೆಯಾಗಿರುವುದನ್ನೇ ಮಾಡಿದರೆ ನಿಮಗೂ ನಿಮ್ಮ ಸಂತತಿಯವರಿಗೂ ಶುಭವುಂಟಾಗುವುದು.


ಆದುದರಿಂದ ಇಸ್ರಯೇಲರೇ, ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರ ವಾಗ್ದಾನ ಮಾಡಿದ ಪ್ರಕಾರ, ಹಾಲೂಜೇನೂ ಹರಿಯುವ ಆ ನಾಡಿನಲ್ಲಿ ನಿಮಗೆ ಶುಭವುಂಟಾಗುವಂತೆ, ನೀವು ಬಹಳವಾಗಿ ಹೆಚ್ಚಿ, ಅಭಿವೃದ್ಧಿಯಾಗುವಂತೆ, ಈ ಆಜ್ಞೆಗಳನ್ನು ಲಕ್ಷ್ಯವಿಟ್ಟು ಕೇಳಿ ಅನುಸರಿಸಿರಿ.


ನೀವು ಹೀಗೆ ನಡೆದುಕೊಂಡರೆ, ನಿಮಗೆ ಶ್ರೇಯಸ್ಸುಂಟಾಗುವುದು, ಮತ್ತು ಬಹುಕಾಲ ಬಾಳುವಿರಿ.


ನಮ್ಮ ದೇವರಾದ ಸರ್ವೇಶ್ವರನ ಮಾತು ಹಿತವಾಗಿರಲಿ, ಅಹಿತವಾಗಿರಲಿ ಅದನ್ನು ಕೈಗೊಳ್ಳುತ್ತೇವೆ. ಅವರ ಸನ್ನಿಧಿಯಲ್ಲಿ ವಿಚಾರಿಸುವುದಕ್ಕೆ ನಿಮ್ಮನ್ನು ನಾವು ಕಳುಹಿಸಿದ್ದೇವೆ. ನಮ್ಮ ದೇವರಾದ ಸರ್ವೇಶ್ವರನ ಮಾತನ್ನು ಕೇಳಿದರೆ ನಮಗೇ ಶುಭವಾಗುವುದು,” ಎಂದು ಹೇಳಿದರು.


ಸಜ್ಜನರಿಗೆ ಶುಭವೆಂದು ಸಾರಿರಿ. ಅವರು ತಮ್ಮ ಕ್ರಿಯೆಗಳ ಸತ್ಫಲವನ್ನು ಸವಿಯುತ್ತಾರೆ.


ಒಂದು ದಿನ ನವೊಮಿ ರೂತಳಿಗೆ, “ಮಗಳೇ, ನೀನು ಮತ್ತೆ ಗೃಹಿಣಿಯಾಗಿ ಸುಖದಿಂದ ಬಾಳುವಂತೆ ಏರ್ಪಾಟು ಮಾಡುವುದು ನನ್ನ ಕರ್ತವ್ಯವಲ್ಲವೇ?


ಸರ್ವೇಶ್ವರನ ದೃಷ್ಟಿಯಲ್ಲಿ ಯಾವುದು ನ್ಯಾಯವೋ, ಯೋಗ್ಯವೋ ಅದನ್ನೇ ಮಾಡಬೇಕು. ಹೀಗೆ ನಡೆದರೆ ನಿಮಗೆ ಶುಭ ಉಂಟಾಗುವುದು ಮತ್ತು ಸರ್ವೇಶ್ವರ ನಿಮ್ಮ ಪಿತೃಗಳಿಗೆ ಪ್ರಮಾಣಪೂರ್ವಕವಾಗಿ ಕೊಟ್ಟ ಉತ್ತಮ ನಾಡನ್ನು ನೀವು ಸೇರಿ ಸ್ವಾಧೀನಮಾಡಿಕೊಳ್ಳುವಿರಿ.


ಆಗ, ನೀವು ಸ್ವಾಧೀನಪಡಿಸಿಕೊಳ್ಳಲಿರುವ ನಾಡಿನಲ್ಲಿ ದೀರ್ಘಕಾಲ ಸುಕ್ಷೇಮದಿಂದ ಬಾಳುವಿರಿ.”


ಮನೆ ಕಟ್ಟಬಾರದು, ಬೀಜಬಿತ್ತಬಾರದು, ತೋಟಮಾಡಬಾರದು, ಕೊಂಡು ಸೊತ್ತಾಗಿಸಿಕೊಳ್ಳಬಾರದು. ಜೀವಮಾನವೆಲ್ಲ ಗುಡಾರಗಳಲ್ಲೇ ವಾಸಿಸಬೇಕು. ಇದರಿಂದ ನೀವು ತಂಗುವ ನಾಡಿನಲ್ಲಿ ದೀರ್ಘಕಾಲ ಉಳಿಯುವಿರಿ,’ ಎಂದು ಆಜ್ಞಾಪಿಸಿದ್ದಾನೆ.


‘ನಿನ್ನ ತಂದೆತಾಯನ್ನು ಗೌರವಿಸು’ ಎಂಬುದು ವಾಗ್ದಾನದಿಂದ ಕೂಡಿದ ಮೊದಲನೆಯ ಆಜ್ಞೆ.


ತಂದೆತಾಯಿಗಳೇ, ನಿಮ್ಮ ಮಕ್ಕಳನ್ನು ಕೆಣಕಿ ಕೆರಳಿಸಬೇಡಿ. ಪ್ರತಿಯಾಗಿ ಪ್ರಭುವಿಗೆ ಮೆಚ್ಚುಗೆಯಾಗುವ ರೀತಿಯಲ್ಲಿ ಅವರಿಗೆ ಶಿಕ್ಷಣವನ್ನು ಕೊಟ್ಟು ಶಿಸ್ತಿನಿಂದ ಸಾಕಿಸಲಹಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು