Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 6:4 - ಕನ್ನಡ ಸತ್ಯವೇದವು C.L. Bible (BSI)

4 ತಂದೆತಾಯಿಗಳೇ, ನಿಮ್ಮ ಮಕ್ಕಳನ್ನು ಕೆಣಕಿ ಕೆರಳಿಸಬೇಡಿ. ಪ್ರತಿಯಾಗಿ ಪ್ರಭುವಿಗೆ ಮೆಚ್ಚುಗೆಯಾಗುವ ರೀತಿಯಲ್ಲಿ ಅವರಿಗೆ ಶಿಕ್ಷಣವನ್ನು ಕೊಟ್ಟು ಶಿಸ್ತಿನಿಂದ ಸಾಕಿಸಲಹಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ತಂದೆಗಳೇ, ನಿಮ್ಮ ಮಕ್ಕಳಿಗೆ ಕೋಪವನ್ನೆಬ್ಬಿಸದೆ, ಕರ್ತನಿಗೆ ಮೆಚ್ಚಿಗೆಯಾಗುವ ರೀತಿಯಲ್ಲಿ ಅವರನ್ನು ಶಿಸ್ತಿನಲ್ಲಿಯೂ ಉಪದೇಶದಲ್ಲಿಯೂ ಸಾಕಿ ಸಲಹಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ತಂದೆಗಳೇ, ನಿಮ್ಮ ಮಕ್ಕಳಿಗೆ ಕೋಪವನ್ನೆಬ್ಬಿಸದೆ ಕರ್ತನಿಗೆ ಮೆಚ್ಚಿಗೆಯಾಗಿರುವ ಬಾಲಶಿಕ್ಷೆಯನ್ನೂ ಬಾಲೋಪದೇಶವನ್ನೂ ಮಾಡುತ್ತಾ ಅವರನ್ನು ಸಾಕಿ ಸಲಹಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ತಂದೆಗಳೇ, ನಿಮ್ಮ ಮಕ್ಕಳನ್ನು ಸಿಟ್ಟಿಗೆಬ್ಬಿಸದೆ ಪ್ರಭುವಿನ ಉಪದೇಶದಿಂದಲೂ ಬಾಲಶಿಕ್ಷೆಯಿಂದಲೂ ಬೆಳೆಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ತಂದೆಗಳೇ, ನಿಮ್ಮ ಮಕ್ಕಳನ್ನು ಸಿಟ್ಟಿಗೆಬ್ಬಿಸಬೇಡಿರಿ; ಕರ್ತನ ಶಿಸ್ತಿನಲ್ಲಿಯೂ ಉಪದೇಶದಲ್ಲಿಯೂ ಮಕ್ಕಳನ್ನು ಬೆಳೆಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಬಾಯ್ ಬಾಬಾನು ತುಮ್ಚ್ಯಾ ಪೊರಾಕ್ನಿ ರಾಗ್ ಯೆಯ್ ಸಾರ್ಕೆ ಕರಿನಸ್ತಾನಾ ಧನಿಯಾಚ್ಯಾ ಶಿಕಾಪಾನಿ, ಅನಿ ಬಾರಿಕ್ ಪೊರಾಕ್ನಿ ದಿತಲಿ ಶಿಕ್ಷಾ ದಿವ್ನ್ ಬಾಳ್ಗಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 6:4
32 ತಿಳಿವುಗಳ ಹೋಲಿಕೆ  

ತಂದೆತಾಯಿಯರೇ, ನಿಮ್ಮ ಮಕ್ಕಳನ್ನು ಕೆರಳಿಸಿ ಮನಕುಗ್ಗಿಸದಿರಿ.


ಬಾಲ್ಯದಲ್ಲೇ ಮಕ್ಕಳನ್ನು ಸರಿದಾರಿಯಲ್ಲಿ ಪಳಗಿಸು; ಮುಪ್ಪಿನಲ್ಲೂ ಅವರು ಆ ಪದ್ಧತಿ ಮೀರಿ ನಡೆಯದಿರಲಿ.


ಬೆತ್ತ ಬೆದರಿಕೆಗಳು ಜ್ಞಾನ ತರುತ್ತವೆ; ಶಿಕ್ಷಿಸದೆ ಬಿಟ್ಟ ಮಗನು ತಾಯಿಗೆ ತರುತ್ತಾನೆ ಅಪಕೀರ್ತಿ.


ತಿದ್ದಿಕೊಳ್ಳುವನೆಂಬ ನಂಬಿಕೆಯಿರುವಾಗಲೆ ಮಗನನ್ನು ಶಿಕ್ಷಿಸು; ಇಲ್ಲವಾದರೆ ಅವನ ಅಳಿವಿಗೆ ನೀನೇ ಕಾರಣವಾಗುವೆ.


ಇವುಗಳನ್ನು ನಿನ್ನ ಮಕ್ಕಳಿಗೆ ಮನದಟ್ಟಾಗಿಸು; ಮನೆಯಲ್ಲಿರುವಾಗಲು, ಪ್ರಯಾಣದಲ್ಲಿರುವಾಗಲು, ಮಲಗುವಾಗಲು, ಏಳುವಾಗಲು ಇವುಗಳನ್ನು ಕುರಿತು ಪಾಠಹೇಳು.


ನಿನ್ನ ಮಗನನ್ನು ದಂಡಿಸಿ ಸರಿಪಡಿಸು; ಅವನು ನಿನ್ನನ್ನು ಸಂತೋಷಪಡಿಸುವನು, ಮನೋಲ್ಲಾಸಗೊಳಿಸುವನು.


ನಿನ್ನ ಬೋಧಕರು ಯಾರೆಂಬುದು ನಿನಗೆ ಗೊತ್ತಿದೆ. ಚಿಕ್ಕಂದಿನಿಂದಲೇ ನೀನು ಪವಿತ್ರಗ್ರಂಥವನ್ನು ಪರಿಚಯಮಾಡಿಕೊಂಡಿರುವೆ. ಯೇಸುಕ್ರಿಸ್ತರನ್ನು ವಿಶ್ವಾಸಿಸುವುದರ ಮೂಲಕ ಜೀವೋದ್ಧಾರವನ್ನು ಪಡೆಯಬಹುದೆಂಬ ಜ್ಞಾನವು ಲಭಿಸುವುದು ಆ ಪವಿತ್ರಗ್ರಂಥದಿಂದಲೇ.


ಅವನು ತನ್ನ ಪುತ್ರಪೌತ್ರರಿಗೆ, ‘ನೀವು ನ್ಯಾಯನೀತಿಯನ್ನು ಪಾಲಿಸುತ್ತಾ ಸರ್ವೇಶ್ವರ ಸ್ವಾಮಿಯ ಮಾರ್ಗದಲ್ಲೇ ನಡೆಯಬೇಕು; ಹಾಗೆ ಮಾಡಿದರೆ ವಾಗ್ದಾನ ಮಾಡಿದುದನ್ನೆಲ್ಲ ಈಡೇರಿಸುವರು,’ ಎಂದು ಬೋಧಿಸಲೆಂದೇ ನಾನು ಅವನನ್ನು ಆರಿಸಿಕೊಂಡಿದ್ದೇನೆ".


ಹೀಗಿರುವಲ್ಲಿ, ನೀವು ಬಹಳ ಜಾಗರೂಕತೆಯಿಂದಿರಿ; ನಿಮ್ಮ ಕಣ್ಣುಗಳಿಂದಲೇ ನೋಡಿದ ಘಟನೆಗಳನ್ನು ಎಷ್ಟು ಮಾತ್ರಕ್ಕೂ ಮರೆಯದಿರಿ; ಜೀವಮಾನಪರ್ಯಂತ ಇವುಗಳನ್ನು ನೆನಪಿನಲ್ಲಿ ಇಡಿ; ನಿಮ್ಮ ಮಕ್ಕಳಿಗೂ ಮೊಮ್ಮಕ್ಕಳಿಗೂ ತಿಳಿಸುತ್ತಾ ಹೋಗಿ,


ನಿನ್ನ ದೃಢವಿಶ್ವಾಸವು ನನ್ನ ನೆನಪಿನಲ್ಲಿದೆ. ನಿನ್ನ ಅಜ್ಜಿ ಲೋವಿಯಳಲ್ಲೂ ತಾಯಿ ಯೂನಿಸಳಲ್ಲೂ ನೆಲೆಗೊಂಡಿದ್ದ ವಿಶ್ವಾಸ ಈಗ ನಿನ್ನಲ್ಲೂ ಪೂರ್ಣವಾಗಿ ನೆಲೆಗೊಂಡಿದೆಯೆಂದು ನಾನು ನಂಬಿದ್ದೇನೆ.


ಮಂಕುತನ ಮಕ್ಕಳ ಮನಸ್ಸಿಗೆ ಸಹಜ; ಬೆತ್ತದ ಬಿಸಿಯಿಂದ ಅದನ್ನು ತೊಲಗಿಸಲು ಸಾಧ್ಯ.


ಆಮೇಲೆ ದಾವೀದನು ತನ್ನ ಮಗ ಸೊಲೊಮೋನನಿಗೆ, “ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಕೆಲಸಕ್ಕೆ ಕೈಹಾಕು; ಅಂಜಬೇಡ, ಕಳವಳಗೊಳ್ಳಬೇಡ. ನನ್ನ ದೇವರಾಗಿರುವ ಸರ್ವೇಶ್ವರಸ್ವಾಮಿ ನಿನ್ನೊಂದಿಗೆ ಇರುತ್ತಾರೆ; ಅವರು ತಮ್ಮ ಆಲಯದ ಎಲ್ಲಾ ಕೆಲಸ ತೀರುವವರೆಗೂ ನಿನ್ನನ್ನು ಕೈಬಿಡುವುದಿಲ್ಲ, ತೊರೆಯುವುದಿಲ್ಲ.


ಜೀವಂತನು, ಜೀವಂತನು ಮಾತ್ರವೇ ನಿನ್ನ ಸ್ತುತಿಮಾಡುವಂತೆ ನಾನಿಂದು ನಿನ್ನನ್ನು ಜೀವಂತನಾಗಿ ಸ್ತುತಿಮಾಡುತ್ತಿರುವೆ ನಿನ್ನ ಸತ್ಯಸಂಧತೆಯನ್ನು ಮಕ್ಕಳಿಗೆ ಬೋಧಿಸುವನು ತಂದೆ.


ಸರ್ವೇಶ್ವರನಿಗೆ ಸೇವೆಸಲ್ಲಿಸಿರಿ. ನಿಮಗೆ ಇದು ಸರಿಕಾಣದಿದ್ದರೆ ಯಾರಿಗೆ ಸೇವೆಸಲ್ಲಿಸಬೇಕೆಂದಿದ್ದೀರಿ? ಇಂದೇ ಆರಿಸಿಕೊಳ್ಳಿ: ನಿಮ್ಮ ಪೂರ್ವಜರು ಯೂಫ್ರಟಿಸ್ ನದಿಯ ಆಚೆಯಲ್ಲಿ ಪೂಜಿಸುತ್ತಿದ್ದ ದೇವತೆಗಳಿಗೋ? ಈ ನಾಡಿನ ಮೂಲನಿವಾಸಿಗಳಾದ ಅಮೋರಿಯರ ದೇವತೆಗಳಿಗೋ? ಹೇಳಿ. ನಾನು ಮತ್ತು ನನ್ನ ಮನೆಯವರು ಮಾತ್ರ ಸರ್ವೇಶ್ವರನಿಗೇ ಸೇವೆ ಸಲ್ಲಿಸುತ್ತೇವೆ,” ಎಂದನು.


ನನ್ನ ಮಗ ಸೊಲೊಮೋನನು ನಿಮ್ಮ ಆಜ್ಞಾವಿಧಿನಿಯಮಗಳನ್ನು ಅನುಸರಿಸುವಂತೆ ಮಾಡಿರಿ; ನಾನು ಯಾವ ಮಂದಿರ ನಿರ್ಮಾಣಕ್ಕಾಗಿ ಇದನ್ನೆಲ್ಲಾ ಸಂಗ್ರಹಿಸಿದ್ದೇನೋ ಆ ನಿಮ್ಮ ಮಂದಿರವನ್ನು ಇವನು ನಿಷ್ಠೆಯಿಂದ ಕಟ್ಟಿಸಿ ಮುಗಿಸುವಂತೆ ಅನುಗ್ರಹಿಸಿರಿ.”


ಇದನ್ನು ಪಾಲಿಸಿದರೆ ನಿನಗೆ ಶುಭವಾಗುವುದು; ನೀನು ಬಹುಕಾಲ ಬಾಳುವೆ.


“ಹೌದು, ನಾನೇ,” ಎಂದನು. ಆಗ ಮಾನೋಹನು, “ನೀವು ಹೇಳಿದ್ದು ನೆರವೇರಿದಾಗ ನಾವು ಆ ಮಗುವಿಗಾಗಿ ಮಾಡತಕ್ಕದ್ದೇನು? ಅವನನ್ನು ಹೇಗೆ ನಡಿಸತಕ್ಕದ್ದು?” ಎಂದು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು