Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 6:5 - ಕನ್ನಡ ಸತ್ಯವೇದವು C.L. Bible (BSI)

5 ಸೇವಕರೇ, ನೀವು ಮಾಡುತ್ತಿರುವುದು ಕ್ರಿಸ್ತಯೇಸುವಿನ ಸೇವೆಯನ್ನೇ ಎಂದು ಭಾವಿಸಿ, ನಿಮ್ಮ ಲೌಕಿಕ ಧಣಿಗಳಿಗೆ ಭಯಭಕ್ತಿಯಿಂದಲೂ ಏಕಮನಸ್ಸಿನಿಂದಲೂ ವಿಧೇಯರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ದಾಸರೇ, ಈ ಲೋಕದಲ್ಲಿ ನಿಮಗೆ ಯಜಮಾನರಾಗಿರುವವರಿಗೆ ಕ್ರಿಸ್ತನಿಗೆ ವಿಧೇಯರಾಗುವ ಹಾಗೆಯೇ ಮನೋಭೀತಿಯಿಂದ ನಡುಗುವವರಾಗಿಯೂ ಸರಳಹೃದಯರಾಗಿಯೂ ವಿಧೇಯರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ದಾಸತ್ವದಲ್ಲಿರುವವರೇ, ಈ ಲೋಕದಲ್ಲಿ ನಿಮಗೆ ಯಜಮಾನರಾಗಿರುವವರಿಗೆ ಕ್ರಿಸ್ತನಿಗೆಂದು ಮನೋಭೀತಿಯಿಂದ ನಡುಗುವವರಾಗಿಯೂ ಸರಳಹೃದಯರಾಗಿಯೂ ವಿಧೇಯರಾಗಿರ್ರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಸೇವಕರೇ, ನಿಮ್ಮ ಇಹಲೋಕದ ಯಜಮಾನರಿಗೆ ಭಯದಿಂದಲೂ ಗೌರವದಿಂದಲೂ ವಿಧೇಯರಾಗಿರಿ. ನೀವು ಕ್ರಿಸ್ತನಿಗೆ ವಿಧೇಯರಾಗುವಂತೆ ಯಥಾರ್ಥವಾದ ಹೃದಯದಿಂದ ವಿಧೇಯರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಸೇವಕರೇ, ಭಯಭಕ್ತಿಯಿಂದಲೂ ಸರಳ ಹೃದಯದಿಂದ ಕ್ರಿಸ್ತನಿಗೆ ವಿಧೇಯರಾಗುವ ಪ್ರಕಾರ ಲೌಕಿಕವಾಗಿ ನಿಮ್ಮ ಯಜಮಾನನಾಗಿರುವವರಿಗೆ ವಿಧೇಯರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಗುಲಾಮಾನು, ತುಮ್ಚ್ಯಾ ಹ್ಯಾ ಜಗಾಚ್ಯಾ ಯಜಮಾನಾಕ್ನಿ ಭಿಂಯಾನ್, ಥರ್ತರುನ್ಗೆತ್ ಅನಿ ಮಾನ್ ದಿವ್ನ್ ಖಾಲ್ತಿ ಹೊವ್ನ್ ರಾವಾ, ತುಮಿ ಕ್ರಿಸ್ತಾಕ್ ಖಾಲ್ತಿ ಹೊಲ್ಯಾ ಸಾರ್ಕೆ ಸರಳ್ ಮನಾನ್ ಖಾಲ್ತಿ ಹೊವ್ನ್ ರಾವಾ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 6:5
27 ತಿಳಿವುಗಳ ಹೋಲಿಕೆ  

ಮಹಿಳೆಯರೇ, ನೀವು ಪ್ರಭುವಿಗೆ ಹೇಗೋ ಹಾಗೆ ನಿಮ್ಮ ನಿಮ್ಮ ಪತಿಯರಿಗೆ ವಿಧೇಯರಾಗಿರಿ.


“ನನ್ನ ನಾಮವನ್ನು ಅವಮಾನಗೊಳಿಸುವ ಯಾಜಕರೇ, ಮಗನು ತಂದೆಯನ್ನು, ದಾಸನು ದಣಿಯನ್ನು ಸನ್ಮಾನಿಸುವುದು ಸಹಜ. ನಾನು ತಂದೆಯಾಗಿದ್ದರೂ ನೀವು ನನಗೆ ಸಲ್ಲಿಸುವ ಸನ್ಮಾನವೆಲ್ಲಿ? ನಾನು ದಣಿಯಾಗಿದ್ದರೂ ನೀವು ನನಗೆ ತೋರಿಸುವ ಭಯಭಕ್ತಿ ಎಲ್ಲಿ?” ಎಂದು ಸೇನಾಧೀಶ್ವರ ಸರ್ವೇಶ್ವರ ನಿಮ್ಮನ್ನೇ ಕೇಳುತ್ತಾರೆ. ಆದರೆ, ನೀವು: “ಯಾವ ವಿಷಯದಲ್ಲಿ ನಿಮ್ಮ ನಾಮವನ್ನು ಅವಮಾನಗೊಳಿಸಿದ್ದೇವೆ?” ಎಂದು ಕೇಳುತ್ತೀರಿ.


ಅವರು ಗಮನಿಸುವುದು ತಮ್ಮ ಪತ್ನಿಯರ ಭಯಭಕ್ತಿಯನ್ನು, ಸುಗುಣಶೀಲತೆಯನ್ನು.


ಈಗ ಅವನು ನಿನ್ನ ಬಳಿಗೆ ಬರುತ್ತಿರುವುದು ಕೇವಲ ಗುಲಾಮನಂತೆ ಅಲ್ಲ. ಅದಕ್ಕಿಂತಲೂ ಬಹಳ ಮೇಲಾದವನಂತೆ, ಕ್ರಿಸ್ತಯೇಸುವಿನಲ್ಲಿ ಪ್ರಿಯ ಸಹೋದರನಂತೆ, ಅವನೆಂದರೆ ನನಗೆಷ್ಟೋ ಪ್ರೀತಿ. ಹಾಗಾದರೆ ನಿನ್ನ ಸೇವಕನೂ ನಮ್ಮ ಪ್ರಭುವಿನಲ್ಲಿ ನಿನ್ನ ಪ್ರಿಯ ಸಹೋದರನೂ ಆಗಿರುವ ಅವನ ಬಗ್ಗೆ ನಿನಗೆ ಮತ್ತಷ್ಟು ಪ್ರೀತಿ ಇರಬೇಕಲ್ಲವೇ?


ಪ್ರಿಯ ಸಹೋದರರೇ, ನಾನು ನಿಮ್ಮಲ್ಲಿದ್ದಾಗ ನೀವು ಯಾವಾಗಲೂ ನನ್ನ ಮಾತಿನಂತೆ ನಡೆದುಕೊಂಡಿರಿ. ಈಗ, ನಾನು ದೂರವಿರುವಾಗ ಇನ್ನೂ ಹೆಚ್ಚಿನ ಆಸಕ್ತಿಯಿಂದ ನಡೆದುಕೊಳ್ಳಿ. ನಿಮ್ಮ ಜೀವೋದ್ಧಾರಕ್ಕಾಗಿ ಭಯಭಕ್ತಿಯಿಂದ ಶ್ರಮಿಸಿರಿ.


ನಿನ್ನ ಸತ್ಯಪಥದಲಿ ನಾ ನಡೆವಂತೆ I ಬೋಧಿಸೆನಗೆ ಪ್ರಭು, ನಿನ್ನ ಮಾರ್ಗವನು II ನಿನ್ನ ನಾಮದಲಿ ಭಯಭಕ್ತಿಯಿರುವಂತೆ I ಅನುಗ್ರಹಿಸೆನಗೆ ನೀ ಏಕಾಗ್ರತೆಯನು II


ಲೋಕದ ಜನರೊಡನೆ, ವಿಶೇಷವಾಗಿ ನಿಮ್ಮೊಡನೆ ವ್ಯವಹರಿಸುವಾಗ ನಾವು ಕೇವಲ ಮಾನವ ಜ್ಞಾನವನ್ನಾಶ್ರಯಿಸದೆ ದೇವರ ಅನುಗ್ರಹವನ್ನೇ ಆಶ್ರಯಿಸಿ ನಡೆದುಕೊಂಡೆವು. ದೇವದತ್ತವಾದ ನಿಷ್ಕಪಟ ಮನಸ್ಸಿನಿಂದಲೂ ಪರಿಶುದ್ಧತೆಯಿಂದಲೂ ವರ್ತಿಸಿದೆವು. ಇದಕ್ಕೆ ನಮ್ಮ ಮನಸ್ಸೇ ಸಾಕ್ಷಿ. ಇದಕ್ಕಾಗಿ ನಾವು ಹೆಮ್ಮೆಪಡುತ್ತೇವೆ.


ಪ್ರಭುವಿನಿಂದ ಕರೆಹೊಂದಿದವನು ದಾಸನಾಗಿದ್ದರೂ ಪ್ರಭುವಿನಲ್ಲಿ ಅವನು ಸ್ವತಂತ್ರನೆ. ಅದೇ ಮೇರೆಗೆ ಸ್ವತಂತ್ರನಾದವನು ಕ್ರಿಸ್ತಯೇಸುವಿನಿಂದ ಕರೆಹೊಂದಿದ್ದರೆ ಅವನು ಕ್ರಿಸ್ತಯೇಸುವಿನ ದಾಸನೇ ಆಗುತ್ತಾನೆ.


ಏಕೆಂದರೆ, ನಾನೂ ಮತ್ತೊಬ್ಬರ ಕೈಕೆಳಗಿರುವವನು. ನನ್ನ ಅಧೀನದಲ್ಲೂ ಸೈನಿಕರಿದ್ದಾರೆ. ಅವರಲ್ಲಿ ಒಬ್ಬನಿಗೆ ನಾನು, ‘ಬಾ’ ಎಂದರೆ ಬರುತ್ತಾನೆ. ಇನ್ನೊಬ್ಬನಿಗೆ, ‘ಹೋಗು’ ಎಂದರೆ ಹೋಗುತ್ತಾನೆ. ಸೇವಕನಿಗೆ, ‘ಇಂಥದ್ದನ್ನು ಮಾಡು’ ಎಂದರೆ ಮಾಡುತ್ತಾನೆ,” ಎಂದನು.


“ಯಾರೂ ಇಬ್ಬರು ಯಜಮಾನರಿಗೆ ಜೀತಮಾಡಲಾಗದು. ಅವನು ಒಬ್ಬನನ್ನು ದ್ವೇಷಿಸಿ, ಇನ್ನೊಬ್ಬನನ್ನು ಪ್ರೀತಿಸುತ್ತಾನೆ; ಅಥವಾ, ಒಬ್ಬನೊಡನೆ ಹೊಂದಿಕೊಂಡು ಇನ್ನೊಬ್ಬನನ್ನು ತಾತ್ಸಾರ ಮಾಡುತ್ತಾನೆ. ದೇವರಿಗೂ ದ್ರವ್ಯಕ್ಕೂ ಒಟ್ಟಿಗೆ ಸೇವೆಮಾಡಲು ನಿಮ್ಮಿಂದಾಗದು.”


ಅದಕ್ಕೆ ಆ ದೂತನು, “ನಿನ್ನ ಯಜಮಾನಿಯ ಬಳಿಗೆ ಹಿಂತಿರುಗು, ಅವಳಿಗೆ ತಗ್ಗಿ ನಡೆದುಕೊ,” ಎಂದು ತಿಳಿಸಿದನು.


ಪ್ರಭು ಯೇಸುಕ್ರಿಸ್ತರಲ್ಲಿ ಚಿರಪ್ರೀತಿಯನ್ನಿಟ್ಟ ಎಲ್ಲರಿಗೂ ದೇವರ ಅನುಗ್ರಹ ಲಭಿಸಲಿ!


ದಾಸನ ಕಣ್ಣು ಯಜಮಾನನತ್ತ I ದಾಸಿಯ ಕಣ್ಣು ಯಜಮಾನಿಯತ್ತ II ನನ್ನ ಕಣ್ಣು ಸ್ವಾಮಿದೇವನತ್ತ I ಆತನ ಕಟಾಕ್ಷವನ್ನು ನಿರೀಕ್ಷಿಸುತ್ತಾ II


ನನ್ನ ದೇವರೇ, ನೀವು ಹೃದಯವನ್ನು ಪರೀಕ್ಷಿಸುವವರು ಹಾಗೂ ಯಥಾರ್ಥಚಿತ್ತರನ್ನು ಮೆಚ್ಚುವವರು ಎಂಬುವುದನ್ನು ನಾನು ಬಲ್ಲೆ. ನಾನಿದನ್ನೆಲ್ಲಾ ಅರ್ಪಿಸಿರುವುದು ಶುದ್ಧಮನಸ್ಸಿನಿಂದಲೇ, ಸ್ವಂತ ಇಷ್ಟದಿಂದಲೇ. ಇಲ್ಲಿ ಕೂಡಿರುವ ನಿಮ್ಮ ಪ್ರಜೆಗಳೂ ಸ್ವಂತ ಇಷ್ಟದಿಂದಲೇ ನಿಮಗೆ ಕಾಣಿಕೆಗಳನ್ನು ಅರ್ಪಿಸಿದ್ದಾರೆ ಎಂದು ನೋಡಿ ಸಂತೋಷಿಸುತ್ತೇನೆ.


“ಈ ಕಾರಣ ನೀವು ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗಿರಿ. ಪೂರ್ಣ ಮನಸ್ಸಿನಿಂದ ಯಥಾರ್ಥಚಿತ್ತದಿಂದ ಅವರಿಗೆ ಸೇವೆಸಲ್ಲಿಸಿರಿ. ನಿಮ್ಮ ಪೂರ್ವಜರು ಯೂಫ್ರಟಿಸ್ ನದಿಯಾಚೆಯಲ್ಲೂ ಈಜಿಪ್ಟಿನಲ್ಲೂ ಪೂಜಿಸುತ್ತಿದ್ದ ದೇವತೆಗಳನ್ನು ತೊರೆದುಬಿಡಿ.


ನಿಮ್ಮೆಲ್ಲರ ವಿನಯ-ವಿಧೇಯತೆಯನ್ನು, ಭಯಭಕ್ತಿಯಿಂದ ನೀವು ನೀಡಿದ ಸ್ವಾಗತವನ್ನು ಸ್ಮರಿಸಿಕೊಳ್ಳುವಾಗಲೆಲ್ಲ ನಿಮ್ಮ ಮೇಲೆ ಆತನಿಗಿರುವ ಪ್ರೀತಿ ಉಕ್ಕಿ ಹರಿಯುತ್ತದೆ.


ಈ ಕಾರಣ, ನಾನು ನಿಮ್ಮ ನಡುವೆ ದುರ್ಬಲನೂ ಭಯಭೀತನೂ ಆಗಿದ್ದೆ.


ದಿನಂಪ್ರತಿ ಅವರು ಒಮ್ಮನಸ್ಸಿನಿಂದ ದೇವಾಲಯದಲ್ಲಿ ಸಭೆ ಸೇರುತ್ತಿದ್ದರು. ತಮ್ಮ ಮನೆಗಳಲ್ಲಿ ರೊಟ್ಟಿ ಮುರಿಯುವ ಸಹಭೋಜನವನ್ನು ಏರ್ಪಡಿಸಿ ಸಂತೋಷದಿಂದಲೂ ಸಹೃದಯದಿಂದಲೂ ಭಾಗವಹಿಸುತ್ತಿದ್ದರು.


“ಕಣ್ಣೇ ದೇಹಕ್ಕೆ ದೀಪ. ನಿನ್ನ ಕಣ್ಣು ಸರಿಯಿದ್ದರೆ ದೇಹವೆಲ್ಲ ಕಾಂತಿಮಯವಾಗುವುದು. ಅದು ಕೆಟ್ಟಿದ್ದರೆ ನಿನ್ನ ದೇಹವೆಲ್ಲ ಕತ್ತಲೆಮಯವಾಗುವುದು.


ಸ್ವದೇಶಿಯರೂ ರಕ್ತಸಂಬಂಧಿಕರೂ ಆದ ನನ್ನ ಸಹೋದರರ ಪರವಾಗಿ ನಾನು ಕ್ರಿಸ್ತಯೇಸುವಿನಿಂದ ಬಹಿಷ್ಕೃತನಾಗಿ ಶಾಪಗ್ರಸ್ತನಾಗಲು ಸಹ ಸಿದ್ಧನಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು