Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 1:1 - ಕನ್ನಡ ಸತ್ಯವೇದವು C.L. Bible (BSI)

1 ಭಾರತ (ಇಂಡಿಯಾ) ದೇಶ ಮೊದಲುಗೊಂಡು ಇಥಿಯೋಪಿಯ ದೇಶದವರೆಗೂ ಇದ್ದ ನೂರಿಪ್ಪತ್ತೇಳು ಸಂಸ್ಥಾನಗಳನ್ನು ಅರಸ ಅಹಷ್ವೇರೋಷನು ಆಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಭಾರತ ಮೊದಲುಗೊಂಡು ಕೂಷಿನ ವರೆಗೂ ಇರುವ ನೂರಿಪ್ಪತ್ತೇಳು ಸಂಸ್ಥಾನಗಳನ್ನು ಆಳುತ್ತಿದ್ದ ಅಹಷ್ವೇರೋಷನ ಕಾಲದಲ್ಲಿ ನಡೆದ ಚರಿತ್ರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಹಿಂದುಸ್ಥಾನ ಮೊದಲುಗೊಂಡು ಕೂಷಿನವರೆಗೂ ಇರುವ ನೂರಿಪ್ಪತ್ತೇಳು ಸಂಸ್ಥಾನಗಳನ್ನು ಆಳುತ್ತಿದ್ದ ಅಹಷ್ವೇರೋಷನ ಕಾಲದಲ್ಲಿ ನಡೆದ ಚರಿತ್ರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಅಹಷ್ವೇರೋಷನು ರಾಜನಾಗಿದ್ದಾಗ ನಡೆದ ಘಟನೆ. ಹಿಂದೂಸ್ಥಾನದಿಂದ ಇಥಿಯೋಪ್ಯದ ತನಕ ನೂರಿಪ್ಪತ್ತೇಳು ಸಂಸ್ಥಾನಗಳನ್ನು ಅವನು ಆಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಭಾರತ ದೇಶ ಮೊದಲುಗೊಂಡು ಇಥಿಯೋಪಿಯ ದೇಶದವರೆಗಿನ ನೂರ ಇಪ್ಪತ್ತೇಳು ಸಂಸ್ಥಾನಗಳನ್ನು ಅಹಷ್ವೇರೋಷನು ಆಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 1:1
10 ತಿಳಿವುಗಳ ಹೋಲಿಕೆ  

ಅದು, ದಾರ್ಯಾವೆಷನ ಆಳ್ವಿಕೆಯ ಮೊದಲನೆಯ ವರ್ಷ. ಈತನು ಅಹಷ್ವೇರೋಷನ ಮಗ, ಮೇದ್ಯ ವಂಶದವನು ಹಾಗು ಬಾಬಿಲೋನಿನ ರಾಜ್ಯದ ದೊರೆ.


ಆಗ ರಾಜಲೇಖಕರನ್ನು ಕರೆಯಿಸಲಾಯಿತು. ಇವರು ಮೂರನೆಯ ತಿಂಗಳಾದ ಜೇಷ್ಠಮಾಸದ ಇಪ್ಪತ್ತಮೂರನೇ ದಿನದಲ್ಲಿ ಬಂದು ಮೊರ್ದೆಕೈಯ ಆಜ್ಞಾನುಸಾರ, ಯೆಹೂದ್ಯರಿಗೂ ಭಾರತ ಮೊದಲ್ಗೊಂಡು ಕೂಷಿನವರೆಗೂ ಹರಡಿರುವ ನೂರಿಪ್ಪತ್ತೇಳು ಸಂಸ್ಥಾನಗಳ ಉಪರಾಜರಿಗೂ ದೇಶಾಧಿಪತಿಗಳಿಗೂ ಅಧಿಕಾರಿಗಳಿಗೂ, ಆಯಾ ಸಂಸ್ಥಾನಗಳ ಲಿಪಿಯಲ್ಲೂ ಆಯಾ ಜನಾಂಗಗಳ ಭಾಷೆಯಲ್ಲೂ ಪತ್ರಗಳನ್ನು ಬರೆದರು.


ರಾಜ್ಯಾಡಳಿತ ನಿರ್ವಹಣೆಗಾಗಿ ದಾರ್ಯಾವೆಷನು ನೂರಿಪ್ಪತ್ತು ಮಂದಿ ಪ್ರಾಂತ್ಯಾಧಿಪತಿಗಳನ್ನು ಆಯಾಯ ಪ್ರಾಂತ್ಯಗಳ ಮೇಲೆ ನೇಮಿಸಲು ತೀರ್ಮಾನಿಸಿದನು.


ಮೊರ್ದೆಕೈ, ಅಹಷ್ವೇರೋಷನ ರಾಜ್ಯದ ನೂರಿಪ್ಪತ್ತೇಳು ಸಂಸ್ಥಾನಗಳಲ್ಲಿ ವಾಸಿಸುತ್ತಿದ್ದ ಯೆಹೂದ್ಯರೆಲ್ಲರಿಗೂ ಆ ಪತ್ರಗಳನ್ನು ಕಳುಹಿಸಿದನು.


ಇದಲ್ಲದೆ, ಅಹಷ್ಟೇರೋಷನ ಆಳ್ವಿಕೆಯ ಆರಂಭದಲ್ಲಿ ಅವರು ಜುದೇಯ ಹಾಗು ಜೆರುಸಲೇಮಿನಲ್ಲಿ ವಾಸಿಸುತ್ತಿದ್ದವರಿಗೆ ವಿರುದ್ಧ ಆಪಾದನ ಪತ್ರವನ್ನು ಬರೆದರು.


ಅಷ್ಟರಲ್ಲೆ ಸುಡಾನಿನ ಅರಸ ತಿರ್ಹಾಕನು ತನಗೆ ವಿರುದ್ಧವಾಗಿ ಹೊರಟಿದ್ದಾನೆ ಎಂಬ ಸುದ್ದಿ ಅಸ್ಸೀರಿಯದ ಅರಸನಿಗೆ ಮುಟ್ಟಿತು. ಆಗ ಅವನು ಜುದೇಯದ ಅರಸ ಹಿಜ್ಕೀಯನಿಗೆ,


ಎಥಿಯೋಪಿಯದ ನದಿಗಳಾಚೆ ಇರುವ ಸೀಮೆಗೆ ಧಿಕ್ಕಾರ ! ರೆಕ್ಕೆಗಳನ್ನು ಪಟಪಟನೆ ಬಡಿಯುವ ಮಿಡತೆಗಳಿಂದ ಕೂಡಿರುವ ನಾಡಿಗೆ ಧಿಕ್ಕಾರ !


ಇದಕ್ಕಾಗಿ ರಾಜ್ಯದ ಎಲ್ಲಾ ಸಂಸ್ಥಾನಗಳಿಗೂ ಅಧಿಕಾರಿಗಳನ್ನೂ ಕಳುಹಿಸಬೇಕು. ಇವರು ಸುರಸುಂದರಿಯರಾದ ಕನ್ಯೆಯರನ್ನೆಲ್ಲಾ ಶೂಷನ್ ನಗರಕ್ಕೆ ಕರೆತಂದು ಅಂತಃಪುರದ ಪಾಲಕನೂ ರಾಜಕಂಚುಕಿಯೂ ಆದ ಹೇಗೈಯ ವಶಕ್ಕೆ ಒಪ್ಪಿಸಬೇಕು. ಇವನು ಅವರಿಗೆ ಸೌಂದರ್ಯವರ್ಧಕ ಸಾಧನಗಳನ್ನು, ಲೇಪನದ್ರವ್ಯಗಳನ್ನು ಕೊಡುವಂತೆ ವ್ಯವಸ್ಥೆ ಮಾಡಬೇಕು.


ಅರಸ ಅಹಷ್ವೇರೋಷನು ತನ್ನ ರಾಜ್ಯಕ್ಕೆ ಸೇರಿದ ಎಲ್ಲಾ ದೇಶಗಳ ಮೇಲೂ ಸಮುದ್ರ-ದ್ವೀಪಗಳ ಮೇಲೂ ತೆರಿಗೆಯನ್ನು ವಿಧಿಸಿದನು.


“ಈಗ ಸತ್ಯಾಂಶವನ್ನು ತಿಳಿಸುತ್ತೇನೆ, ಕೇಳು: ಪರ್ಷಿಯ ದೇಶದಲ್ಲಿ ಇನ್ನೂ ಮೂವರು ರಾಜರು ಏಳುವರು. ನಾಲ್ಕನೆಯ ರಾಜನು ಎಲ್ಲರಿಗಿಂತಲೂ ಅಧಿಕ ಧನವಂತನಾಗಿರುವನು. ಅವನು ತನ್ನ ಧನದಿಂದ ಪ್ರಬಲನಾಗಿ ಗ್ರೀಕ್ ರಾಜ್ಯಕ್ಕೆ ವಿರುದ್ಧ ತನ್ನ ಬಲವನ್ನೆಲ್ಲ ಪ್ರಯೋಗಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು