Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 1:12 - ಕನ್ನಡ ಸತ್ಯವೇದವು C.L. Bible (BSI)

12 ಆದರೆ, ಕಂಚುಕಿಗಳು ರಾಜಾಜ್ಞೆಯನ್ನು ವಷ್ಟಿರಾಣಿಗೆ ತಿಳಿಸಿದಾಗ, ಆಕೆ ಬರಲು ನಿರಾಕರಿಸಿದಳು. ಇದನ್ನು ಕೇಳಿದಾಗ ಅರಸನು ಕುಪಿತಗೊಂಡು, ರೌದ್ರಾವೇಶನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಕಂಚುಕಿಗಳು ತಿಳಿಸಿದ ರಾಜಾಜ್ಞೆಗೆ ವಷ್ಟಿ ರಾಣಿಯು, “ಬರುವುದಿಲ್ಲ” ಎಂದು ಉತ್ತರಕೊಟ್ಟಳು. ಇದರಿಂದ ಅರಸನು ಬಹುಕೋಪಗೊಂಡು ರೌದ್ರಾವೇಶವುಳ್ಳವನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಕಂಚುಕಿಗಳು ತಿಳಿಸಿದ ರಾಜಾಜ್ಞೆಗೆ ವಷ್ಟಿರಾಣಿಯು - ಬರುವದಿಲ್ಲ ಎಂದು ಉತ್ತರಕೊಟ್ಟಳು. ಇದರಿಂದ ಅರಸನು ಬಹುಕೋಪಗೊಂಡು ರೌದ್ರಾವೇಶನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆಸ್ಥಾನಸೇವಕರು ವಷ್ಟಿರಾಣಿಗೆ ರಾಜಾಜ್ಞೆಯನ್ನು ತಿಳಿಸಿದಾಗ ಆಕೆಯು ಬರಲು ನಿರಾಕರಿಸಿದಳು. ಇದರಿಂದ ರಾಜನು ಕೋಪೋದ್ರಿಕ್ತನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆದರೆ ಅರಸನು ಅವರಿಂದ ಹೇಳಿ ಕಳುಹಿಸಿದ ಮಾತಿಗೆ ವಷ್ಟಿ ರಾಣಿಯು, “ನಾನು ಬರುವುದಿಲ್ಲ,” ಎಂದು ಹೇಳಿದಳು. ಆದ್ದರಿಂದ ಅರಸನು ಬಹುಕೋಪಗೊಂಡು, ರೋಷಾವೇಶನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 1:12
19 ತಿಳಿವುಗಳ ಹೋಲಿಕೆ  

ರಾಜನ ರೋಷ ಸಿಂಹದ ಗರ್ಜನೆಯು; ಅವನ ದಯೆ ಹುಲ್ಲಿನ ಮೇಲಣ ಇಬ್ಬನಿಯು.


ಅಂತೆಯೇ ಸ್ತ್ರೀಯರೇ, ನೀವು ನಿಮ್ಮ ಪತಿಯರಿಗೆ ವಿಧೇಯರಾಗಿರಿ. ಅವರಲ್ಲಿ ಕೆಲವರು ದೇವರ ವಾಕ್ಯವನ್ನು ನಂಬದೆ ಇರಬಹುದು. ಆದರೂ ಯಾವ ಮಾತುಕತೆಯಿಲ್ಲದೆ ನಿಮ್ಮ ಸನ್ನಡತೆಯಿಂದಲೇ ಅವರನ್ನು ಜಯಿಸಬಹುದು.


ಧರ್ಮಸಭೆ ಕ್ರಿಸ್ತಯೇಸುವಿನ ಆಡಳಿತಕ್ಕೆ ಒಳಪಟ್ಟಿರುವಂತೆ ಪತ್ನಿಯೂ ಸಹ ಎಲ್ಲಾ ವಿಷಯಗಳಲ್ಲೂ ತನ್ನ ಪತಿಯ ಆಡಳಿತಕ್ಕೆ ಒಳಪಟ್ಟಿರಬೇಕು.


ಮಹಿಳೆಯರೇ, ನೀವು ಪ್ರಭುವಿಗೆ ಹೇಗೋ ಹಾಗೆ ನಿಮ್ಮ ನಿಮ್ಮ ಪತಿಯರಿಗೆ ವಿಧೇಯರಾಗಿರಿ.


ಯಾರು ತಡೆದಾರು ಆತನ ಸಿಟ್ಟಿಗೆ? ಯಾರು ನಿಂತಾರು ಆತನ ರೋಷಾಗ್ನಿಗೆ? ಆತನ ರೌದ್ರ ಜ್ವಾಲಾಪ್ರವಾಹದಂತೆ ಬಂಡೆಗಳು ಪುಡಿಪುಡಿ ಆತನ ಮುಂದೆ.


ನೆಬೂಕದ್ನೆಚ್ಚರನು ಉಗ್ರಕೋಪಗೊಂಡು ಶದ್ರಕ್, ಮೇಶಕ್, ಅಬೇದ್‍ನೆಗೋ ಎಂಬವರನ್ನು ಹಿಡಿದುತರಲು ಆಜ್ಞಾಪಿಸಿದನು.


ಇದನ್ನು ಕೇಳಿ ರಾಜನು ಉಗ್ರಕೋಪಗೊಂಡನು. ಬಾಬಿಲೋನಿನ ಸಕಲ ವಿದ್ವಾಂಸರನ್ನು ಕೊಲ್ಲಬೇಕೆಂದು ಆಜ್ಞಾಪಿಸಿದನು.


ರಾಜನು ಗರ್ಜಿಸುವ ಸಿಂಹದಂತೆ ಭಯಂಕರನು; ಅವನನ್ನು ಕೆಣಕುವವನು ಪ್ರಾಣಕ್ಕೆ ಅಪಾಯ ತಂದುಕೊಳ್ವನು.


ನಿನ್ನ ಕೋಪತಾಪ ಹೇ ಪ್ರಭೂ, ಇನ್ನೆಷ್ಟರವರೆಗೆ? I ಉರಿಯುತ್ತಿರಬೇಕೆ ಸದಾ ನಿನ್ನ ರೋಷಾಗ್ನಿಯ ಧಗೆ? II


ಹೇ ದೇವಾ, ನಮ್ಮ ನೀಪರಿ ವರ್ಜಿಸಿಬಿಟ್ಟೆ ಏಕೆ? I ನೀ ಪಾಲಿಪ ಮಂದೆಯ ಮೇಲೀಗ ಉರಿಗೋಪವೇಕೆ? II


ಸರ್ವೇಶ್ವರ ಅಂಥವನನ್ನು ಎಂದಿಗೂ ಕ್ಷಮಿಸರು; ಬದಲಿಗೆ ಅವನ ಮೇಲೆ ಸಿಟ್ಟುಗೊಂಡು, ತಮ್ಮ ಗೌರವವನ್ನು ಕಾಪಾಡಿಕೊಳ್ಳುವವರಾಗಿ, ಈ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪೋಕ್ತಿಗಳಿಗೂ ಅವನನ್ನು ಗುರಿಪಡಿಸುವರು. ಅವನ ಹೆಸರನ್ನು ಭೂಮಿಯ ಮೇಲೆ ಇಲ್ಲದಂತೆ ಮಾಡುವರು.


ಒಡೆಯಾ, ಕೋಪಗೊಳ್ಳಬೇಡಿ. ಈ ಜನರು ಎಂಥ ಹಟಮಾರಿಗಳೆಂದು ನೀವೇ ಬಲ್ಲಿರಿ.


ಮೋಶೆ ಪಾಳೆಯದ ಹತ್ತಿರಕ್ಕೆ ಬಂದು ಆ ಹೋರಿಕರುವನ್ನೂ ಜನರ ಕುಣಿದಾಟವನ್ನೂ ಕಂಡಾಗ ಕಡುಕೋಪಗೊಂಡನು. ಕೈಯಲ್ಲಿದ್ದ ಶಿಲಾಶಾಸನಗಳನ್ನು ಬೆಟ್ಟದ ಬುಡಕ್ಕೆ ಬಿಸಾಡಿ ಒಡೆದುಹಾಕಿಬಿಟ್ಟನು.


ಬಳಿಕ ಆ ಮಹಿಳೆಗೆ: “ಹೆಚ್ಚಿಸುವೆನು ಪ್ರಸವಕಾಲದ ನಿನ್ನ ವೇದನೆಯನ್ನು ಹೆರುವೆ ನೀನು ಸಂಕಷ್ಟದಿಂದಲೇ ಮಕ್ಕಳನ್ನು. ಆದರೂ ನಿನಗಿರುವುದು ಗಂಡನ ಬಯಕೆ ಒಳಗಾಗುವೆ ನೀನು ಆತನ ಒಡೆತನಕ್ಕೆ."


ಆಗ ನೆಬೂಕದ್ನೆಚ್ಚರನು ಕೋಪೋದ್ರೇಕಗೊಂಡನು. ಶದ್ರಕ್, ಮೇಶಕ್ ಮತ್ತು ಅಬೇದ್‍ನೆಗೋ ಅವರ ಬಗ್ಗೆ ಅವನ ಮುಖಚರ್ಯೆ ಬದಲಾಯಿತು. ಆವಿಗೆಯನ್ನು ವಾಡಿಕೆಗಿಂತ ಏಳರಷ್ಟು ಹೆಚ್ಚಾಗಿ ಉರಿಸಬೇಕೆಂದು ಆಜ್ಞಾಪಿಸಿದನು.


ಪತ್ನಿಯ ರೂಪರಾಶಿಯನ್ನು ತನ್ನ ಪ್ರಜೆಗಳ ಹಾಗೂ ಪದಾಧಿಕಾರಿಗಳ ಮುಂದೆ ಪ್ರದರ್ಶಿಸುವ ಸಲುವಾಗಿ ರಾಜಮುಕುಟವನ್ನು ಧರಿಸಿದ ಆಕೆಯನ್ನು ರಾಜಸನ್ನಿಧಿಗೆ ಕರೆತರುವಂತೆ ಆಸ್ಥಾನ ಸೇವಕರಾದ ಮೆಹೂಮಾನ್, ಬಿಜೆತಾ, ಹರ್ಬೋನಾ, ಬಿಗೆತಾ, ಅಬಗೆತಾ, ಜೇತರ್, ಕರ್ಕಸ್ ಎಂಬ ಏಳುಮಂದಿ ಕಂಚುಕಿಯರಿಗೆ ಅಪ್ಪಣೆಮಾಡಿದನು.


ವಿಧಿನಿಯಮಗಳನ್ನು ಬಲ್ಲ ಪಂಡಿತರೆಲ್ಲರ ಮುಂದೆ ಅರಮನೆಯ ಸಂಗತಿಗಳನ್ನು ಇಡುವ ಪದ್ಧತಿಯಿತ್ತು.


ರೌದ್ರಾವೇಶಗೊಂಡ ಅರಸ ದ್ರಾಕ್ಷಾರಸ ಪಾನಮಾಡುವುದನ್ನು ಬಿಟ್ಟೆದ್ದು, ತೋಟಕ್ಕೆ ಹೋದನು. ಅರಸನಿಂದ ತನಗೆ ಶಿಕ್ಷೆ ನಿಶ್ಚಿತವೆಂದರಿತ ಹಾಮಾನನು ಎಸ್ತೇರ್ ರಾಣಿಯ ಮುಂದೆ ಪ್ರಾಣಭಿಕ್ಷೆಗಾಗಿ ಅಂಗಲಾಚಿ ಬೇಡುತ್ತಾ ನಿಂತನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು