Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 1:15 - ಕನ್ನಡ ಸತ್ಯವೇದವು C.L. Bible (BSI)

15 “ಕಂಚುಕಿಗಳ ಮುಖಾಂತರ ತಿಳಿಯಪಡಿಸಿದ ರಾಜಾಜ್ಞೆಯನ್ನು ಉಲ್ಲಂಘಿಸಿದ ವಷ್ಟಿರಾಣಿಯ ವಿರುದ್ಧ ಯಾವ ನ್ಯಾಯಬದ್ಧವಾದ ಕ್ರಮ ತೆಗೆದುಕೊಳ್ಳಬೇಕು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅವನು ಸಮುಯೋಚಿತ ಜ್ಞಾನವುಳ್ಳವರಾದ ಇವರನ್ನು, “ಕಂಚುಕಿಗಳ ಮುಖಾಂತರ ತನಗುಂಟಾದ ರಾಜಾಜ್ಞೆಯನ್ನು ಕೈಗೊಳ್ಳದೆ ಹೋದ ವಷ್ಟಿ ರಾಣಿಗೆ ನಿಯಮದ ಪ್ರಕಾರ ಮಾಡತಕ್ಕದ್ದೇನು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಕಂಚುಕಿಗಳ ಮುಖಾಂತರ ತನಗುಂಟಾದ ರಾಜಾಜ್ಞೆಯನ್ನು ಕೈಕೊಳ್ಳದೆಹೋದ ವಷ್ಟಿರಾಣಿಗೆ ನಿಯಮದ ಪ್ರಕಾರ ಮಾಡತಕ್ಕದ್ದೇನು ಎಂದು ಕೇಳಲು ಮೆಮೂಕಾನನು ಅರಸನ ಮತ್ತು ಸರದಾರರ ಮುಂದೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 “ಆಸ್ಥಾನ ಸೇವಕರ ಮೂಲಕ ಹೇಳಿ ಕಳುಹಿಸಿದ ರಾಜಾಜ್ಞೆಯನ್ನು ವಷ್ಟಿ ರಾಣಿಯು ನಿರಾಕರಿಸಿದ್ದಾಳೆ. ಇಂಥಾ ತಪ್ಪಿಗೆ ಯಾವ ಶಿಕ್ಷೆಯನ್ನು ವಿಧಿಸಬೇಕು?” ಎಂದು ವಿಚಾರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅಹಷ್ವೇರೋಷನು, “ಅರಸನ ಅಧಿಕಾರಿಗಳ ಮುಖಾಂತರ ಹೇಳಿ ಕಳುಹಿಸಿದ ರಾಜಾಜ್ಞೆಯನ್ನು ಉಲ್ಲಂಘಿಸಿದ ವಷ್ಟಿ ರಾಣಿಯ ವಿರುದ್ಧ ನ್ಯಾಯದ ಪ್ರಕಾರ ಅವಳಿಗೆ ಮಾಡಬೇಕಾದ ಕ್ರಮವೇನು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 1:15
4 ತಿಳಿವುಗಳ ಹೋಲಿಕೆ  

ಹಾಮಾನನು ಒಳಗೆ ಬಂದಾಗ ಅರಸನು ಅವನಿಗೆ, “ಅರಸನು ಒಬ್ಬ ವ್ಯಕ್ತಿಯನ್ನು ಗೌರವಿಸಲು ಬಯಸಿದರೆ ಅಂಥ ವ್ಯಕ್ತಿಗೆ ನೀಡಬಹುದಾದ ತಕ್ಕ ಸನ್ಮಾನ ಯಾವುದು?” ಎಂದು ವಿಚಾರಿಸಲು,


ಇದಲ್ಲದೆ, ಅಹಷ್ಟೇರೋಷನ ಆಳ್ವಿಕೆಯ ಆರಂಭದಲ್ಲಿ ಅವರು ಜುದೇಯ ಹಾಗು ಜೆರುಸಲೇಮಿನಲ್ಲಿ ವಾಸಿಸುತ್ತಿದ್ದವರಿಗೆ ವಿರುದ್ಧ ಆಪಾದನ ಪತ್ರವನ್ನು ಬರೆದರು.


ಅರಸ ಅಹಷ್ವೇರೋಷನ ಆಸ್ಥಾನದಲ್ಲಿ ರಾಜಸಾನ್ನಿಧ್ಯ ಸೇವಕರೂ ಪದಾಧಿಕಾರಿಗಳೂ ಆಗಿದ್ದ ಕರ್ಷೆನಾ, ಶೇತಾರ್, ಅದ್ಮಾತಾ, ತರ್ಷೀಷ್, ಮೆರೆಸ್, ಮರ್ಸೆನಾ, ಮೆಮೂಕಾನ್ ಎಂಬ ಏಳು ಮಂದಿ ಪರ್ಷಿಯ ಮತ್ತು ಮೇದ್ಯ ದೇಶಗಳ ರಾಜಪ್ರಮುಖರು ಇದ್ದರು. ಸಮಯೋಚಿತ ವ್ಯವಹಾರ ಜ್ಞಾನಹೊಂದಿದವರಾದ ಇವರನ್ನು ಅರಸನು, ಈ ವಿಷಯವಾಗಿ ವಿಚಾರಿಸಿದನು.


ಅರಸನ ಮುಂದೆಯೂ ನೆರೆದಿದ್ದ ಪದಾಧಿಕಾರಿಗಳ ಮುಂದೆಯೂ ಇದಕ್ಕೆ ಉತ್ತರ ಈಯುತ್ತ ಮೆಮೂಕನು: “ವಷ್ಟಿರಾಣಿಯು ಬಗೆದಿರುವ ಅವಮಾನ ಅರಸನೊಬ್ಬನ ವಿರುದ್ಧ ಮಾತ್ರವಲ್ಲ, ಅರಸನ ರಾಜ್ಯದಲ್ಲಿರುವ ಎಲ್ಲಾ ಪದಾಧಿಕಾರಿಗಳ ಹಾಗೂ ಪ್ರಜೆಗಳ ವಿರುದ್ಧವೂ ಆಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು