Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 1:3 - ಕನ್ನಡ ಸತ್ಯವೇದವು C.L. Bible (BSI)

3 ಪರ್ಷಿಯ ಮತ್ತು ಮೇದ್ಯ ದೇಶಗಳ ದಂಡನಾಯಕರೂ ಪದಾಧಿಕಾರಿಗಳೂ ಸಂಸ್ಥಾನದ ಅಧಿಕಾರಿಗಳೂ ಅರಸನ ಮುಂದೆ ಉಪಸ್ಥಿತರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವನು ತನ್ನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ತನ್ನ ಎಲ್ಲಾ ಸರದಾರರಿಗೋಸ್ಕರವೂ ಮತ್ತು ಪರಿವಾರದವರಿಗಾಗಿ ಒಂದು ಔತಣ ಏರ್ಪಡಿಸಿದ್ದನು. ಪಾರಸಿಯ ಮತ್ತು ಮೇದ್ಯ ಸೇನಾಧಿಪತಿಗಳೂ, ಪ್ರಧಾನರೂ ಮತ್ತು ಸಂಸ್ಥಾನದ ಅಧಿಕಾರಿಗಳೂ, ರಾಜನ ಸನ್ನಿಧಿಗೆ ಸೇರಿ ಬಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಎಲ್ಲಾ ಸರದಾರರಿಗೋಸ್ಕರವೂ ಪರಿವಾರದವರಿಗೋಸ್ಕರವೂ ಔತಣಮಾಡಿಸಿದನು. ಪಾರಸಿಯ ಮತ್ತು ಮೇದ್ಯ ಸೇನಾಧಿಪತಿಗಳೂ ಪ್ರಧಾನರೂ ಸಂಸ್ಥಾನಾಧಿಕಾರಿಗಳೂ ಅವನ ಸನ್ನಿಧಿಗೆ ಬಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ತನ್ನ ಆಳ್ವಿಕೆಯ ಮೂರನೆ ವರ್ಷದಲ್ಲಿ ರಾಜ್ಯದ ಅಧಿಕಾರಿಗಳಿಗೂ ನಾಯಕರುಗಳಿಗೂ ಒಂದು ಔತಣವನ್ನು ಏರ್ಪಡಿಸಿದನು. ಮೇದ್ಯ. ಪರ್ಶಿಯದ ಎಲ್ಲಾ ಸೈನ್ಯಾಧಿಕಾರಿಗಳೂ ಪ್ರಧಾನರೂ ಔತಣದಲ್ಲಿ ಭಾಗವಹಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ತನ್ನ ಆಳಿಕೆಯ ಮೂರನೆಯ ವರ್ಷದಲ್ಲಿ ಅವನು ತನ್ನ ಸಮಸ್ತ ಶ್ರೇಷ್ಠರಿಗೂ ಅಧಿಕಾರಿಗಳಿಗೂ ಔತಣವನ್ನು ಮಾಡಿಸಿದನು. ಪಾರಸಿಯ ಮತ್ತು ಮೇದ್ಯ ದೇಶಗಳ ಸೇನಾಧಿಪತಿಗಳೂ ಪ್ರಾಂತಗಳ ಶ್ರೇಷ್ಠರೂ ಪ್ರಧಾನರೂ ಉಪಸ್ಥಿತರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 1:3
16 ತಿಳಿವುಗಳ ಹೋಲಿಕೆ  

ಕಡೆಗೊಮ್ಮೆ, ಹೆರೋದಿಯಳಿಗೆ ಅನುಕೂಲವಾದ ಸಂದರ್ಭ ಒದಗಿತು. ಹೆರೋದನು ತನ್ನ ಹುಟ್ಟುಹಬ್ಬದ ದಿನಾಚರಣೆಯಂದು, ಆಸ್ಥಾನಿಕರಿಗೂ ಸೇನಾಧಿಪತಿಗಳಿಗೂ ಗಲಿಲೇಯ ಪ್ರಾಂತ್ಯದ ಪ್ರಮುಖರಿಗೂ ಔತಣಕೂಟವನ್ನು ಏರ್ಪಡಿಸಿದನು.


ಬೇಲ್ಶಚ್ಚರ ಎಂಬ ಅರಸನು ತನ್ನ ರಾಜ್ಯದ ಪ್ರಮುಖರಲ್ಲಿ ಸಾವಿರ ಮಂದಿಯನ್ನು ಸೇರಿಸಿ ಒಂದು ಔತಣವನ್ನು ಏರ್ಪಡಿಸಿದ. ಆ ಸಾವಿರ ಜನರ ಮುಂದೆ ಅವನೂ ದ್ರಾಕ್ಷಾರಸವನ್ನು ಕುಡಿದ.


ತನ್ನ ಎಲ್ಲಾ ಪದಾಧಿಕಾರಿಗಳಿಗೂ ಪರಿವಾರದವರಿಗೂ ಎಸ್ತೇರಳ ಗೌರವಾರ್ಥವಾಗಿ ಒಂದು ಭಾರಿ ಔತಣವನ್ನೇರ್ಪಡಿಸಿದನು. ತನ್ನ ಎಲ್ಲಾ ಸಂಸ್ಥಾನಗಳಲ್ಲಿ, ಸೆರೆಯಲ್ಲಿದ್ದ ಬಂಧಿತರಿಗೆ ಬಿಡುಗಡೆಯನ್ನು ಘೋಷಿಸಿದನು. ರಾಜಮರ್ಯಾದೆಗೆ ತಕ್ಕಂತೆ ಪ್ರಜೆಗಳಿಗೆ ಉದಾರವಾಗಿ ದಾನಧರ್ಮಗಳನ್ನು ಮಾಡಿದನು.


ಸೊಲೊಮೋನನು ನಿದ್ರೆಯಿಂದ ಎಚ್ಚೆತ್ತಾಗ, ಅದು ಕನಸೆಂದು ತಿಳಿದುಕೊಂಡನು. ಅವನು ಜೆರುಸಲೇಮಿಗೆ ಬಂದನಂತರ ಸರ್ವೇಶ್ವರನ ಒಡಂಬಡಿಕೆಯ ಮಂಜೂಷದ ಮುಂದೆ ನಿಂತು ದಹನಬಲಿಗಳನ್ನೂ ಶಾಂತಿಸಮಾಧಾನದ ಬಲಿಗಳನ್ನೂ ಸಮರ್ಪಿಸಿ, ತನ್ನ ಎಲ್ಲಾ ಪರಿವಾರದವರಿಗೆ ಔತಣವನ್ನು ಏರ್ಪಡಿಸಿದನು.


ಸರ್ವೇಶ್ವರನು ಬಾಬಿಲೋನನ್ನು ಹಾಳುಮಾಡಬೇಕೆಂದು ಉದ್ದೇಶಿಸಿ, ಅದನ್ನು ಮೇದ್ಯರ ಅರಸರು ನಾಶಮಾಡುವಂತೆ ಅವರನ್ನು ಪ್ರೇರೇಪಿಸಿದ್ದಾರೆ. ಆ ನಾಶವು, ಸರ್ವೇಶ್ವರನು ತನ್ನ ಆಲಯವನ್ನು ಕೆಡವಿದವರಿಗೆ ಮಾಡಬೇಕೆಂದಿದ್ದ ಪ್ರತೀಕಾರವೇ ಆಗಿದೆ. ‘ಮೇದ್ಯರೇ, ಬಾಣಗಳನ್ನು ಮಸೆಯಿರಿ, ಯುದ್ಧಸನ್ನದ್ಧರಾಗಿರಿ;


ಘೋರ ದರ್ಶನವೊಂದು ನನಗೆ ಕಂಡುಬಂತು: ದ್ರೋಹಿ ದ್ರೋಹವೆಸಗುತ್ತಿದ್ದಾನೆ. ಕೊಳ್ಳೆಗಾರ ಕೊಳ್ಳೆಹೊಡೆಯುತ್ತಿದ್ದಾನೆ. ಏಲಾಮೇ ಮುನ್ನುಗ್ಗು ! ಮೇದ್ಯವೇ, ಮುತ್ತಿಗೆ ಹಾಕು ! ಬಾಬಿಲೋನಿನಿಂದ ನಿನಗೊದಗಿದ ಗೋಳಾಟವನ್ನು ನಿಲ್ಲಿಸುತ್ತೇನೆ.


ಮೂರನೆಯ ದಿನ ಫರೋಹನು ಹುಟ್ಟಿದ ಹಬ್ಬದಿನವಾಗಿತ್ತು. ಅವನು ತನ್ನ ಪರಿವಾರದವರಿಗೆಲ್ಲ ಔತಣವನ್ನು ಏರ್ಪಡಿಸಿದ್ದ. ಮುಖ್ಯ ಪಾನಸೇವಕನನ್ನೂ ಮುಖ್ಯ ಅಡಿಗೆಭಟ್ಟನನ್ನೂ ಬಿಡಿಸಿ ಬರಮಾಡಿದ, ತನ್ನ ಪರಿವಾರದವರ ಮಧ್ಯದಲ್ಲೆ ಅವರ ತಲೆಯನ್ನು ಎತ್ತಿಸಿದ.


“ನೀನು ನೋಡಿದ ಎರಡು ಕೊಂಬಿನ ಟಗರು ಮೇದ್ಯದ ಮತ್ತು ಪರ್ಷಿಯದ ರಾಜ್ಯ.


ರಾಜ್ಯಾಡಳಿತ ನಿರ್ವಹಣೆಗಾಗಿ ದಾರ್ಯಾವೆಷನು ನೂರಿಪ್ಪತ್ತು ಮಂದಿ ಪ್ರಾಂತ್ಯಾಧಿಪತಿಗಳನ್ನು ಆಯಾಯ ಪ್ರಾಂತ್ಯಗಳ ಮೇಲೆ ನೇಮಿಸಲು ತೀರ್ಮಾನಿಸಿದನು.


‘ಫರ್ಸಿನ್’ ಎಂದರೆ ನಿನ್ನ ರಾಜ್ಯವನ್ನು ವಿಭಾಗಮಾಡಿ ಮೇದ್ಯರಿಗೂ ಪರ್ಷಿಯದವರಿಗೂ ಕೊಡಲಾಗಿದೆ,” ಎಂದು ಅರಿಕೆಮಾಡಿದನು.


ಅರಸ ಅಹಷ್ವೇರೋಷನ ಆಸ್ಥಾನದಲ್ಲಿ ರಾಜಸಾನ್ನಿಧ್ಯ ಸೇವಕರೂ ಪದಾಧಿಕಾರಿಗಳೂ ಆಗಿದ್ದ ಕರ್ಷೆನಾ, ಶೇತಾರ್, ಅದ್ಮಾತಾ, ತರ್ಷೀಷ್, ಮೆರೆಸ್, ಮರ್ಸೆನಾ, ಮೆಮೂಕಾನ್ ಎಂಬ ಏಳು ಮಂದಿ ಪರ್ಷಿಯ ಮತ್ತು ಮೇದ್ಯ ದೇಶಗಳ ರಾಜಪ್ರಮುಖರು ಇದ್ದರು. ಸಮಯೋಚಿತ ವ್ಯವಹಾರ ಜ್ಞಾನಹೊಂದಿದವರಾದ ಇವರನ್ನು ಅರಸನು, ಈ ವಿಷಯವಾಗಿ ವಿಚಾರಿಸಿದನು.


ಪರ್ಷಿಯ ರಾಜನಾದ ಸೈರಸೆಂಬ ನನ್ನ ಮಾತನ್ನು ಕೇಳಿರಿ; ಪರಲೋಕ ದೇವರಾದ ಸರ್ವೇಶ್ವರಸ್ವಾಮಿ ಭೂಲೋಕದ ಎಲ್ಲ ರಾಜ್ಯಗಳನ್ನು ನನಗೆ ಕೊಟ್ಟಿದ್ದಾರೆ; ‘ನನಗಾಗಿ ಜುದೇಯ ನಾಡಿನ ಜೆರುಸಲೇಮಿನಲ್ಲಿ ಒಂದು ಆಲಯವನ್ನು ಕಟ್ಟಿಸಬೇಕು’ ಎಂದು ಅವರು ಆಜ್ಞಾಪಿಸಿದ್ದಾರೆ.


ಅರಸನು ತನ್ನ ಘನರಾಜ್ಯದ ಸಿರಿಸಂಪತ್ತನ್ನು, ವೈಭವವನ್ನು ಹಾಗು ರಾಜ್ಯದ ಆಡಂಬರವನ್ನು ಅವರೆಲ್ಲರ ಮುಂದೆ ಬಹುದಿನಗಳವರೆಗೆ ಅಂದರೆ, ನೂರೆಂಬತ್ತು ದಿನಗಳವರೆಗೆ ಪ್ರದರ್ಶಿಸಿದನು.


ಅರಸ ಅಹಷ್ವೇರೋಷನ ಆಳ್ವಿಕೆಯ ಹನ್ನೆರಡನೆಯ ವರ್ಷದ ಮೊದಲನೆಯ ತಿಂಗಳು ಆದ ಚೈತ್ರಮಾಸದಲ್ಲಿ ಹಾಮಾನನ ಮುಂದೆ ಶುಭಮಾಸವೂ ಶುಭದಿನವೂ ಯಾವುದು ಎಂದು ತಿಳಿದುಕೊಳ್ಳಲು ‘ಪೂರ’ನ್ನು ಅಂದರೆ ಚೀಟನ್ನು ಹಾಕಲು ಚೀಟು ಹನ್ನೆರಡನೆ ತಿಂಗಳಾದ ಫಾಲ್ಗುಣಮಾಸದ ಹದಿಮೂರನೆಯ ದಿನಕ್ಕೆ ಬಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು