Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 1:4 - ಕನ್ನಡ ಸತ್ಯವೇದವು C.L. Bible (BSI)

4 ಅರಸನು ತನ್ನ ಘನರಾಜ್ಯದ ಸಿರಿಸಂಪತ್ತನ್ನು, ವೈಭವವನ್ನು ಹಾಗು ರಾಜ್ಯದ ಆಡಂಬರವನ್ನು ಅವರೆಲ್ಲರ ಮುಂದೆ ಬಹುದಿನಗಳವರೆಗೆ ಅಂದರೆ, ನೂರೆಂಬತ್ತು ದಿನಗಳವರೆಗೆ ಪ್ರದರ್ಶಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವನು ಅನೇಕ ದಿನ ಅಂದರೆ, ನೂರ ಎಂಭತ್ತು ದಿನಗಳವರೆಗೂ ಅವರಿಗೆ ತನ್ನ ಘನವಾದ ರಾಜ್ಯದ ಐಶ್ವರ್ಯವನ್ನೂ ಮತ್ತು ಮಹಾಮಹಿಮೆಯ ವೈಭವದ ಪ್ರತಾಪಗಳನ್ನೂ ಪ್ರದರ್ಶಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವನು ಅನೇಕ ದಿವಸ ಅಂದರೆ ನೂರೆಂಭತ್ತು ದಿವಸಗಳವರೆಗೂ ಅವರಿಗೆ ತನ್ನ ಘನವಾದ ರಾಜ್ಯದ ಐಶ್ವರ್ಯವನ್ನೂ ಮಹಾಮಹಿಮೆಯ ವೈಭವಗಳನ್ನೂ ತೋರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಔತಣ ಸಮಾರಂಭವು ನೂರೆಂಭತ್ತು ದಿವಸಗಳ ತನಕ ಮುಂದುವರೆಯಿತು. ಆ ಸಮಯದಲ್ಲಿ ತನ್ನ ರಾಜ್ಯದ ಸಕಲ ವೈಭವವನ್ನೂ ಅರಮನೆಯ ಐಶ್ವರ್ಯವನ್ನೂ ಅತಿಥಿಗಳಿಗೆ ಪ್ರದರ್ಶಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವನು ನೂರ ಎಂಬತ್ತು ದಿವಸಗಳವರೆಗೆ ತನ್ನ ಘನವುಳ್ಳ ರಾಜ್ಯದ ಐಶ್ವರ್ಯವನ್ನೂ ತನ್ನ ವೈಭವ ಹಾಗು ಆಡಂಬರವನ್ನು ತೋರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 1:4
25 ತಿಳಿವುಗಳ ಹೋಲಿಕೆ  

ಮಹಿಮೆ ಘನತೆಗಳಿಂದ ಅಲಂಕರಿಸಿಕೊ! ಗೌರವ ಪ್ರಭಾವಗಳನು ಧರಿಸಿಕೊ!


ನೀನೆಮ್ಮ ಪ್ರಭು ಹೇ ದೇವಾ, ಘನಮಾನ ಶಕ್ತಿಸನ್ಮಾನಗಳಿಗರ್ಹ, ಸಮಸ್ತವನು ನೀ ಸೃಷ್ಟಿಸಿದಾತ ಇರುವುದೆಲ್ಲವು ಜೀವಿಪುದೆಲ್ಲವು ನಿನ್ನ ಚಿತ್ತದಿಂದ,” ಎಂದು ಹಾಡುತ್ತಿದ್ದರು.


ಈ ರಹಸ್ಯ ಎಷ್ಟು ಶ್ರೀಮಂತವಾದುದು, ಎಷ್ಟು ಮಹಿಮಾನ್ವಿತವಾದುದು ಎಂಬುದನ್ನು ಎಲ್ಲಾ ಜನಾಂಗಗಳಿಗೂ ತಿಳಿಸಲು ದೇವರು ಇಚ್ಛಿಸಿದರು. ಕ್ರಿಸ್ತಯೇಸು ನಿಮ್ಮಲ್ಲಿದ್ದು ಮುಂದಿನ ಮಹಿಮೆಯ ನಿರೀಕ್ಷೆಗೆ ಆಧಾರವಾಗಿದ್ದಾರೆ ಎಂಬುದೇ ಈ ರಹಸ್ಯ.


ದೇವರು ನಿಮ್ಮ ಮನೋನೇತ್ರಗಳನ್ನು ತೆರೆಯಲಿ; ಅವರ ಬೆಳಕು ನಿಮಗೆ ಕಾಣುವಂತೆ ಆಗಲಿ. ಹೀಗೆ, ಅವರು ಕರೆದಿರುವ ಜನರಿಗೆ ಲಭಿಸುವ ಭರವಸೆಯ ಭಾಗ್ಯ ಎಂಥದ್ದೆಂದೂ ದೇವಜನರಿಗೆ ಕಾಯ್ದಿರಿಸಿರುವ ಸ್ವಾಸ್ತ್ಯ ಸಂಪತ್ತು ಎಂಥದ್ದೆಂದೂ ನೀವು ಅರಿತುಕೊಳ್ಳಬೇಕು.


ಈ ಮೂಲಕ ತಮ್ಮ ಕರುಣೆಯನ್ನು ಹೊಂದಲು ಅವರು ಮೊದಲೇ ತಯಾರಿಸಿದ್ದ ಕುಡಿಕೆಯನ್ನು ಹೋಲುವವರಿಗೆ ದೇವರು ತಮ್ಮ ಮಹಿಮಾತಿಶಯವನ್ನು ತೋರ್ಪಡಿಸಲು ಇಚ್ಛಿಸಿದರು.


ನಮ್ಮನ್ನು ಶೋಧನೆಗೆ ಒಳಪಡಿಸಬೇಡಿ; ಕೇಡಿನಿಂದ ನಮ್ಮನ್ನು ರಕ್ಷಿಸಿರಿ.’


ಅನಂತರ ಪಿಶಾಚಿ ಯೇಸುವನ್ನು ಬಹಳ ಎತ್ತರವಾದ ಬೆಟ್ಟಕ್ಕೆ ಕೊಂಡೊಯ್ದು, ಪ್ರಪಂಚದ ಎಲ್ಲಾ ರಾಜ್ಯಗಳನ್ನೂ ಅವುಗಳ ವೈಭವವನ್ನೂ ತೋರಿಸಿತು.


ಪರಾತ್ಪರ ದೇವರು ನಿಮ್ಮ ತಂದೆಯಾದ ನೆಬೂಕದ್ನೆಚ್ಚರ್ ಅವರಿಗೆ ರಾಜ್ಯ ಮಹತ್ವವನ್ನು ಹಾಗೂ ಮಾನ ಸನ್ಮಾನಗಳನ್ನು ದಯಪಾಲಿಸಿದ್ದರು.


ಅದೇ ಸಮಯದಲ್ಲಿ ನನ್ನ ಬುದ್ಧಿ ನನಗೆ ಮತ್ತೆ ಸ್ವಾಧೀನವಾಯಿತು. ಘನತೆ ಗೌರವಗಳು ನನಗೆ ಮತ್ತೆ ಲಭಿಸಿದವು. ನನ್ನ ರಾಜ್ಯದ ಕೀರ್ತಿ ಬೆಳಗತೊಡಗಿತು. ನನ್ನ ಮಂತ್ರಿಗಳೂ ಪದಾಧಿಕಾರಿಗಳೂ ನನ್ನನ್ನು ಸ್ವಾಗತಿಸಲು ಬಂದರು. ರಾಜ್ಯದಲ್ಲಿ ನಾನು ನೆಲೆಗೊಂಡೆ. ಹಿಂದೆ ಇದ್ದುದಕ್ಕಿಂತಲೂ ಹೆಚ್ಚಿನ ಪ್ರತಿಭೆ ನನ್ನದಾಯಿತು.


ಆಗ ಅವನು, “ಹಾ, ಬಾಬಿಲೋನ್ ಎಂಥಾ ಮಹಾನಗರ! ಇಗೋ, ನನ್ನ ಶಕ್ತಿ ಸಾಮರ್ಥ್ಯದಿಂದ ನಾನು ಕಟ್ಟಿಸಿರುವ ರಾಜಭವನ! ನನ್ನ ಕೀರ್ತಿ ಪರಾಕ್ರಮವನ್ನು ಇದು ಪ್ರಕಟಿಸುತ್ತಿದೆ!” ಎಂದು ಕೊಚ್ಚಿಕೊಂಡನು.


ನಿನ್ನ ಅಧಿಕ ಜ್ಞಾನದಿಂದ ಹಾಗು ವ್ಯಾಪಾರದಿಂದ ಸಿರಿಸಂಪತ್ತನ್ನು ವೃದ್ಧಿಮಾಡಿಕೊಂಡಿರುವೆ. ಆದುದರಿಂದ ನಿನ್ನ ಮನಸ್ಸು ನಿನ್ನ ಆಸ್ತಿಯ ನಿಮಿತ್ತ ಉಬ್ಬಿಹೋಗಿದೆ.


ಹಿಜ್ಕೀಯನು ಆ ದೂತರನ್ನು ಸಂತೋಷದಿಂದ ಬರಮಾಡಿಕೊಂಡು ಅವರಿಗೆ ಬೆಳ್ಳಿಬಂಗಾರ, ಸುಗಂಧದ್ರವ್ಯ, ಪರಿಮಳತೈಲ ಮೊದಲಾದ ಪದಾರ್ಥಗಳಿಂದ ಕೂಡಿದ ಕರಂಡಗಳನ್ನು, ಆಯುಧ ಶಾಲೆಯನ್ನು ಮತ್ತು ತನ್ನ ಭಂಡಾರದಲ್ಲಿದ್ದ ಒಡವೆವಸ್ತುಗಳನ್ನು ತೋರಿಸಿದನು. ಅವನ ಅರಮನೆಯಲ್ಲೂ ರಾಜ್ಯದಲ್ಲೂ ಇದ್ದ ಸಮಸ್ತವನ್ನು ತೋರಿಸಿದನು.


ಧ್ಯಾನಿಸುವೆನು ನಿನ್ನ ಅದ್ಭುತಕಾರ್ಯಗಳನು I ನಿನ್ನ ಮಹೋನ್ನತ ಮಹಿಮಾಪ್ರಭಾವವನು II


ವಹಿಸಿಹನು ಪ್ರಭು, ರಾಜ್ಯಾಧಿಕಾರವನು I ಧರಿಸಿಹನು ಘನತೆಯ ವಸ್ತ್ರ ಲಾಂಛನವನು I ತೊಟ್ಟಿಹನು ಶೌರ್ಯವೆಂಬ ನಡುಕಟ್ಟನು I ಸ್ಥಿರಪಡಿಸಿಹನು ಕದಲದಂತೆ ಜಗವನು II


ಕಟ್ಟಿಕೋ ಶೂರನೇ, ಪಟ್ಟಗತ್ತಿಯನು ಸೊಂಟಕೆ I ಸಂಭ್ರಮ,‍ ಶೋಭೆ, ಸಡಗರ ಸಲ್ಲತಕ್ಕವು ನಿನಗೆ II


ನಿನ್ನ ನೆರವಿಂದೇರಿತು ಆತನ ಘನತೆ I ಶೋಭೆ, ಪ್ರಭಾವಗಳ ನೀನವನಿಗಿತ್ತೆ II


ಸರ್ವೇಶ್ವರ ಇಸ್ರಯೇಲರೆಲ್ಲರಿಗೆ ಗೊತ್ತಾಗುವಂತೆ ಸೊಲೊಮೋನನನ್ನು ಅಭಿವೃದ್ಧಿಪಡಿಸಿದರು; ಅವನಿಗಿಂತ ಮೊದಲು ಇಸ್ರಯೇಲರನ್ನಾಳಿದ ಎಲ್ಲಾ ಅರಸರ ವೈಭವಕ್ಕಿಂತಲೂ ಹೆಚ್ಚಿನ ವೈಭವವನ್ನು ಅವನಿಗೆ ಅನುಗ್ರಹಿಸಿದರು.


ಪರ್ಷಿಯ ಮತ್ತು ಮೇದ್ಯ ದೇಶಗಳ ದಂಡನಾಯಕರೂ ಪದಾಧಿಕಾರಿಗಳೂ ಸಂಸ್ಥಾನದ ಅಧಿಕಾರಿಗಳೂ ಅರಸನ ಮುಂದೆ ಉಪಸ್ಥಿತರಿದ್ದರು.


ಆ ದಿನಗಳು ಕಳೆದ ನಂತರ ಅರಸನು ಶೂಷನ್ ನಗರದ ನಿವಾಸಿಗಳಿಗೆ ಶ್ರೀಮಂತ-ಬಡವ ಎಂಬ ಯಾವ ಭೇದಭಾವ ಮಾಡದೆ ಎಲ್ಲರಿಗೂ ಅರಮನೆಯ ತೋಟದ ಅಂಗಳದಲ್ಲಿ ಏಳು ದಿನಗಳ ಪರಿಯಂತರ ದೊಡ್ಡ ಔತಣವನ್ನೇರ್ಪಡಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು