Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 2:10 - ಕನ್ನಡ ಸತ್ಯವೇದವು C.L. Bible (BSI)

10 ತನ್ನ ಸ್ವಜನರ ಹಾಗು ಬಂಧುಬಳಗದವರ ಬಗ್ಗೆ ಎಸ್ತೇರಳು ಯಾರಿಗೂ ತಿಳಿಸಿರಲಿಲ್ಲ. ತಿಳಿಸಬಾರದೆಂದು ಮೊರ್ದೆಕೈ ವಿಧಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಎಸ್ತೇರಳು ತಾನು ಇಂಥ ಜನಾಂಗದವಳು, ಇಂಥ ಕುಲದವಳು ಎಂಬುದನ್ನು ತೋರ್ಪಡಿಸಿಕೊಳ್ಳಲಿಲ್ಲ; ಮೊರ್ದೆಕೈಯು ಹೀಗೆ ಅಪ್ಪಣೆಕೊಟ್ಟಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಎಸ್ತೇರಳು ತಾನು ಇಂಥ ಜನಾಂಗದವಳು, ಇಂಥ ಕುಲದವಳು ಎಂಬದನ್ನು ತೋರ್ಪಡಿಸಿಕೊಳ್ಳಲಿಲ್ಲ; ಮೊರ್ದೆಕೈಯು ಹೀಗೆ ಅಪ್ಪಣೆಕೊಟ್ಟಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ತಾನು ಯೆಹೂದ್ಯಳು ಎಂದು ಎಸ್ತೇರಳು ಯಾರಿಗೂ ಹೇಳಲಿಲ್ಲ. ತನ್ನ ವಂಶ, ಮನೆತನದ ವಿಚಾರವಾಗಿಯೂ ಯಾರಿಗೂ ತಿಳಿಸಲಿಲ್ಲ. ಯಾಕೆಂದರೆ ಮೊರ್ದೆಕೈ ಆಕೆಗೆ ತನ್ನ ವಿಷಯವಾಗಿ ಯಾರಿಗೂ ಹೇಳಬಾರದೆಂದೂ ಕಟ್ಟಪ್ಪಣೆ ಮಾಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆದರೆ ಎಸ್ತೇರಳು ತಾನು ಇಂಥ ದೇಶದವಳು ಮತ್ತು ಇಂಥ ಕುಟುಂಬದ ಹಿನ್ನೆಲೆಯವಳು ಎಂಬುದನ್ನು ತಿಳಿಸಲಿಲ್ಲ. ಏಕೆಂದರೆ ತಿಳಿಸಬಾರದೆಂದು ಮೊರ್ದೆಕೈ ಅವಳಿಗೆ ಆಜ್ಞಾಪಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 2:10
9 ತಿಳಿವುಗಳ ಹೋಲಿಕೆ  

“ಗಮನಿಸಿರಿ, ತೋಳಗಳ ನಡುವೆ ಕುರಿಗಳನ್ನು ಬಿಟ್ಟಂತೆ ನಾನು ನಿಮ್ಮನ್ನು ಕಳುಹಿಸುತ್ತಿದ್ದೇನೆ. ಆದುದರಿಂದ ಸರ್ಪಗಳಂತೆ ಸೂಕ್ಷ್ಮಬುದ್ಧಿಯುಳ್ಳವರೂ ಪಾರಿವಾಳಗಳಂತೆ ಸರಳಜೀವಿಗಳೂ ಆಗಿರಿ.


ಮೊರ್ದೆಕೈಯ ಆದೇಶದಂತೆ ಎಸ್ತೇರಳು ತನ್ನ ಬಂಧುಬಳಗದವರ ಬಗ್ಗೆಯಾಗಲಿ, ಸ್ವಜನರ ಬಗ್ಗೆಯಾಗಲಿ ಯಾರಿಗೂ ತಿಳಿಸಿರಲಿಲ್ಲ. (ಮೊರ್ದೆಕೈಯ) ಆರೈಕೆಯಲ್ಲಿದ್ದಾಗ ಆಕೆ ಯಾವ ರೀತಿ ನಡೆದುಕೊಂಡಿದ್ದಳೋ ಹಾಗೆಯೇ ಪ್ರಸ್ತುತಕಾಲದಲ್ಲೂ ಆತನ ಆಜ್ಞೆಯನ್ನು ಪಾಲಿಸುತ್ತಿದ್ದಳು.


ಮಕ್ಕಳೇ, ಪ್ರಭುವಿನಲ್ಲಿ ನಿಮ್ಮ ತಂದೆತಾಯಿಗಳ ಮಾತಿಗೆ ಕಿವಿಗೊಡಿ. ಇದು ಧರ್ಮಸಮ್ಮತವಾದುದು.


ಹಾಮಾನನು ಅರಸ ಅಹಷ್ವೇರೋಷನಿಗೆ ಹೀಗೆಂದನು: “ನಿಮ್ಮ ರಾಜ್ಯದ ಎಲ್ಲಾ ಸಂಸ್ಥಾನಗಳಲ್ಲಿ ವಾಸಿಸುವ ಒಂದು ಜನಾಂಗವಿದೆ. ಅದು ಇತರ ಜನಾಂಗಗಳ ಮಧ್ಯೆ ಹರಡಿಕೊಂಡಿದ್ದರೂ ತನ್ನ ರೀತಿನೀತಿಗಳಲ್ಲಿ ಅವರಿಂದ ಪ್ರತ್ಯೇಕವಾಗಿಯೇ ಉಳಿಯುತ್ತದೆ. ಅರಸರ ನಿಯಮಗಳನ್ನಂತೂ ಈ ಜನಾಂಗದವರು ಅನುಸರಿಸುವುದೇ ಇಲ್ಲ. ಹೀಗಿರುವಲ್ಲಿ ಇಂಥವರನ್ನು ಅರಸರು ಸುಮ್ಮನೆ ಬಿಡುವುದು ಸರಿಯಲ್ಲ.


ಜನರು ನಮ್ಮನ್ನು ಕೊಂದು, ಸಂಹರಿಸಿ, ನಿರ್ನಾಮಗೊಳಿಸುವ ಹಾಗೆ ನಮ್ಮನ್ನು ಮಾರಲಾಯಿತು. ಬರೀ ಮಾರಾಟವಾಗಿದ್ದರೆ ಈ ದುರಂತ ಪರಿಸ್ಥಿತಿಯ ವಿಷಯದಲ್ಲಿ ಅರಸರಿಗೆ ತೊಂದರೆಪಡಿಸುವುದು ಸರಿಯಲ್ಲವೆಂದು ಸುಮ್ಮನಿದ್ದುಬಿಡುತ್ತಿದ್ದೆ,” ಎಂದಳು.


ತಂದೆತಾಯಿಗಳನ್ನು ಕಳೆದುಕೊಂಡು ಅನಾಥಳಾಗಿದ್ದ ತನ್ನ ಚಿಕ್ಕಪ್ಪನ ಮಗಳಾದ ಎಸ್ತೇರಳನ್ನು (ಹದೆಸ್ಸಾ ಆಕೆಯ ಇನ್ನೊಂದು ಹೆಸರು) ತನ್ನ ಸ್ವಂತ ಮಗಳಂತೆ ಸ್ವೀಕರಿಸಿ ಸಾಕುತ್ತಿದ್ದನು. ಈಕೆ ಬಲು ರೂಪಸಿ ಹಾಗು ಲಾವಣ್ಯವತಿಯಾಗಿದ್ದಳು.


ಎಸ್ತೇರಳ ಯೋಗಕ್ಷೇಮವನ್ನು ವಿಚಾರಿಸಿಕೊಳ್ಳಲು ಮೊರ್ದೆಕೈ ಪ್ರತಿದಿನ ಅಂತಃಪುರದ ಅಂಗಳದ ಬಳಿ ಬಂದು ಹೋಗುತ್ತಿದ್ದನು.


ಅದರಂತೆ ರೂತಳು ಕಣಕ್ಕೆ ಹೋಗಿ ಅತ್ತೆ ಹೇಳಿಕೊಟ್ಟಂತೆ ಮಾಡಿದಳು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು