Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 2:16 - ಕನ್ನಡ ಸತ್ಯವೇದವು C.L. Bible (BSI)

16 ಅರಸ ಅಹಷ್ವೇರೋಷನ ಆಳ್ವಿಕೆಯ ಏಳನೇ ವರ್ಷದ ಹತ್ತನೆ ತಿಂಗಳಾದ ಪುಷ್ಯಮಾಸದಲ್ಲಿ (ತೇಬೆತ್ ಮಾಸದಲ್ಲಿ) ಆಕೆಯನ್ನು ಅರಸನ ಬಳಿಗೆ ಕರೆತರಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅರಸನಾದ ಅಹಷ್ವೇರೋಷನ ಬಳಿಗೆ ಅವನ ಆಳ್ವಿಕೆಯ ಏಳನೆಯ ವರ್ಷದ ಹತ್ತನೆಯ ತಿಂಗಳಾದ ಪುಷ್ಯ ಮಾಸದಲ್ಲಿ ಆಕೆಯನ್ನು ರಾಜಗೃಹಕ್ಕೆ ಕರೆದುಕೊಂಡು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅರಸನಾದ ಅಹಷ್ವೇರೋಷನ ಬಳಿಗೆ ಅವನ ಆಳಿಕೆಯ ಏಳನೆಯ ವರುಷದ ಹತ್ತನೆಯ ತಿಂಗಳಾದ ಪುಷ್ಯ ಮಾಸದಲ್ಲಿ ಆಕೆಯನ್ನು ರಾಜಗೃಹಕ್ಕೆ ಕರತಂದರು. ಅರಸನು ಎಲ್ಲಾ ಸ್ತ್ರೀಯರಲ್ಲಿ ಎಸ್ತೇರಳನ್ನು ಮೆಚ್ಚಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಹೀಗೆ ಹತ್ತನೇ ತಿಂಗಳಾದ ಟೆಬೇತ್ ಮಾಸದಲ್ಲಿ ರಾಜನ ಏಳನೇ ವರ್ಷದಲ್ಲಿ ಎಸ್ತೇರಳು ಅಹಷ್ವೇರೋಷನ ರಾಜನಿವಾಸಕ್ಕೆ ಕರೆದೊಯ್ಯಲ್ಪಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಎಸ್ತೇರಳು ಅರಸನಾದ ಅಹಷ್ವೇರೋಷನ ಆಳಿಕೆಯ ಏಳನೆಯ ವರ್ಷದ ಹತ್ತನೆಯ ತಿಂಗಳಾದ ತೇಬೆತ್ ಎಂಬ ಪುಷ್ಯ ಮಾಸದಲ್ಲಿ ಅರಸನ ಬಳಿಗೆ ಕರೆತರಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 2:16
7 ತಿಳಿವುಗಳ ಹೋಲಿಕೆ  

ಆಗ ರಾಜಲೇಖಕರನ್ನು ಕರೆಯಿಸಲಾಯಿತು. ಇವರು ಮೂರನೆಯ ತಿಂಗಳಾದ ಜೇಷ್ಠಮಾಸದ ಇಪ್ಪತ್ತಮೂರನೇ ದಿನದಲ್ಲಿ ಬಂದು ಮೊರ್ದೆಕೈಯ ಆಜ್ಞಾನುಸಾರ, ಯೆಹೂದ್ಯರಿಗೂ ಭಾರತ ಮೊದಲ್ಗೊಂಡು ಕೂಷಿನವರೆಗೂ ಹರಡಿರುವ ನೂರಿಪ್ಪತ್ತೇಳು ಸಂಸ್ಥಾನಗಳ ಉಪರಾಜರಿಗೂ ದೇಶಾಧಿಪತಿಗಳಿಗೂ ಅಧಿಕಾರಿಗಳಿಗೂ, ಆಯಾ ಸಂಸ್ಥಾನಗಳ ಲಿಪಿಯಲ್ಲೂ ಆಯಾ ಜನಾಂಗಗಳ ಭಾಷೆಯಲ್ಲೂ ಪತ್ರಗಳನ್ನು ಬರೆದರು.


ಇದಕ್ಕಾಗಿ ರಾಜ್ಯದ ಎಲ್ಲಾ ಸಂಸ್ಥಾನಗಳಿಗೂ ಅಧಿಕಾರಿಗಳನ್ನೂ ಕಳುಹಿಸಬೇಕು. ಇವರು ಸುರಸುಂದರಿಯರಾದ ಕನ್ಯೆಯರನ್ನೆಲ್ಲಾ ಶೂಷನ್ ನಗರಕ್ಕೆ ಕರೆತಂದು ಅಂತಃಪುರದ ಪಾಲಕನೂ ರಾಜಕಂಚುಕಿಯೂ ಆದ ಹೇಗೈಯ ವಶಕ್ಕೆ ಒಪ್ಪಿಸಬೇಕು. ಇವನು ಅವರಿಗೆ ಸೌಂದರ್ಯವರ್ಧಕ ಸಾಧನಗಳನ್ನು, ಲೇಪನದ್ರವ್ಯಗಳನ್ನು ಕೊಡುವಂತೆ ವ್ಯವಸ್ಥೆ ಮಾಡಬೇಕು.


ಇದಾದ ಕೆಲವು ದಿನಗಳ ನಂತರ ಅರಸನ ಕೋಪವು ಶಾಂತವಾದಾಗ, ಅವನು ವಷ್ಟಿರಾಣಿಯನ್ನು, ಆಕೆಯ ವರ್ತನೆಯನ್ನು, ಆಕೆಯ ವಿರುದ್ಧ ತಾನು ನೀಡಿದ್ದ ತೀರ್ಪನ್ನು ಜ್ಞಾಪಿಸಿಕೊಂಡನು.


ಎಜ್ರನು ಆ ಅರಸನ ಆಳ್ವಿಕೆಯ ಏಳನೆಯ ವರ್ಷದ ಐದನೆಯ ತಿಂಗಳಲ್ಲಿ ಜೆರುಸಲೇಮನ್ನು ಮುಟ್ಟಿದನು.


ಹೀಗೆ ಅರಸನ ಬಳಿಗೆ ಹೋಗಲು ಮೊರ್ದೆಕೈಯ ದತ್ತುಮಗಳೂ ಅವನ ಚಿಕ್ಕಪ್ಪನಾದಅಬಿಹೈಲನ ಮಗಳೂ ಆದ ಎಸ್ತೇರಳ ಸರದಿ ಬಂದಾಗ, ಅಂತಃಪುರಪಾಲಕ ಹೇಗೈ ಎಂಬ ರಾಜಕಂಚುಕಿ ನೇಮಿಸಿದ್ದನ್ನೇ ಹೊರತು ಬೇರಾವುದನ್ನೂ ಆಕೆ ಕೇಳಲಿಲ್ಲ. ನೋಡಿದವರೆಲ್ಲರೂ ಆಕೆಯನ್ನು ಬಹುವಾಗಿ ಮೆಚ್ಚುತ್ತಿದ್ದರು.


ಅರಸನು, ಎಲ್ಲಾ ಸ್ತ್ರೀಯರಿಗಿಂತಲೂ ಹೆಚ್ಚಾಗಿ ಎಸ್ತೇರಳನ್ನು ಮೆಚ್ಚಿಕೊಂಡನು. ಎಲ್ಲಾ ಕನ್ಯೆಯರ ಪೈಕಿ ಅರಸನ ವಿಶೇಷ ದಯೆಗೂ ಪ್ರೀತಿಗೂ ಪಾತ್ರಳಾದಳು. ಈ ಕಾರಣ, ಅರಸನು ಆಕೆಯ ತಲೆಯ ಮೇಲೆ ರಾಜಮುಕುಟವನ್ನಿಟ್ಟು ವಷ್ಟಿರಾಣಿಗೆ ಬದಲಾಗಿ ಆಕೆಯನ್ನು ತನ್ನ ಪಟ್ಟದರಸಿಯನ್ನಾಗಿ ಆರಿಸಿಕೊಂಡನು.


ಇದಲ್ಲದೆ, ಅಹಷ್ಟೇರೋಷನ ಆಳ್ವಿಕೆಯ ಆರಂಭದಲ್ಲಿ ಅವರು ಜುದೇಯ ಹಾಗು ಜೆರುಸಲೇಮಿನಲ್ಲಿ ವಾಸಿಸುತ್ತಿದ್ದವರಿಗೆ ವಿರುದ್ಧ ಆಪಾದನ ಪತ್ರವನ್ನು ಬರೆದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು