Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 2:21 - ಕನ್ನಡ ಸತ್ಯವೇದವು C.L. Bible (BSI)

21 ಆ ದಿನಗಳಲ್ಲಿ ಮೊರ್ದೆಕೈ, ಎಂದಿನಂತೆ ಅರಮನೆಯ ಹೆಬ್ಬಾಗಿಲಿನಲ್ಲಿ ಕುಳಿತುಕೊಂಡಿದ್ದಾಗ ದ್ವಾರಪಾಲಕರಾದ ಬಿಗೆತಾನ್ ಮತ್ತು ತೆರೆಷ್ ಎಂಬಿಬ್ಬರು ರಾಜಕಂಚುಕಿಗಳು ಅರಸನ ವಿರುದ್ಧ ಕೈಯೆತ್ತಬೇಕು ಎಂದು ಒಳಸಂಚು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆ ದಿನಗಳಲ್ಲಿ ಮೊರ್ದೆಕೈಯು ಅರಮನೆಯ ದ್ವಾರಪಾಲಕರಾದ ಬಿಗೆತಾನ್ ಮತ್ತು ತೆರೆಷ್ ಎಂಬ ಇಬ್ಬರು ರಾಜಕಂಚುಕಿಯರು ಕೋಪವುಳ್ಳವರಾಗಿ ಅರಸನಾದ ಅಹಷ್ವೇರೋಷನಿಗೆ ವಿರುದ್ಧವಾಗಿ ಕೈಯೆತ್ತಬೇಕೆಂದು ಒಳಸಂಚು ಮಾಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆ ದಿನಗಳಲ್ಲಿ ಮೊರ್ದೆಕೈಯು ಅರಮನೆಯ ಹೆಬ್ಬಾಗಲಿನಲ್ಲಿ ಕೂತುಕೊಂಡಿದ್ದಾಗ ಅರಮನೆಯ ದ್ವಾರಪಾಲಕರಾದ ಬಿಗೆತಾನ್ ತೆರೆಷ್ ಎಂಬ ಇಬ್ಬರು ರಾಜಕಂಚುಕಿಯರು ಕೋಪವುಳ್ಳವರಾಗಿ ಅರಸನಾದ ಅಹಷ್ವೇರೋಷನಿಗೆ ವಿರೋಧವಾಗಿ ಕೈಯೆತ್ತಬೇಕೆಂದು ಒಳಸಂಚುಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಮೊರ್ದೆಕೈ ಅರಮನೆಯ ಹೆಬ್ಬಾಗಿಲ ಬಳಿ ಕುಳಿತುಕೊಂಡಿದ್ದ ಸಮಯದಲ್ಲಿ ಒಂದು ವಿಷಯ ನಡೆಯಿತು. ಬಿಗೆತಾನ್ ಮತ್ತು ತೆರೆಷ್ ಎಂಬ ಇಬ್ಬರು ದ್ವಾರಪಾಲಕರು ಅರಸನ ಮೇಲೆ ಕೋಪಗೊಂಡು ಅವನನ್ನು ಕೊಲ್ಲಲು ಒಳಸಂಚು ಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆ ದಿವಸಗಳಲ್ಲಿ ಮೊರ್ದೆಕೈಯು ಅರಮನೆಯ ಬಾಗಿಲಲ್ಲಿ ಕುಳಿತಿರುವಾಗ, ದ್ವಾರಪಾಲಕರಾದಂಥ ಅರಸನ ರಾಜಕಂಚುಕಿಗಳಾದ ಬಿಗೆತಾನ್ ಮತ್ತು ತೆರೆಷ್ ಎಂಬಿಬ್ಬರು ಅರಸನಾದ ಅಹಷ್ವೇರೋಷನ ಮೇಲೆ ಕೋಪಗೊಂಡು ಅವನನ್ನು ಕೊಲ್ಲಬೇಕೆಂದು ಒಳಸಂಚು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 2:21
13 ತಿಳಿವುಗಳ ಹೋಲಿಕೆ  

ಅರಸನನ್ನು ಕೊಲ್ಲಲು ದ್ವಾರಪಾಲಕರಾದ ಬಿಗೆತಾನ್, ತೆರೆಷ್ ಎಂಬಿಬ್ಬರು ರಾಜಕಂಚುಕಿಗಳು ಪಿತೂರಿ ನಡೆಸಿದ್ದ ಪ್ರಕರಣ ಹಾಗೂ ಅದು ಮೊರ್ದೆಕೈಯ ಮುಖಾಂತರ ತಿಳಿದುಬಂದ ಲಿಖಿತ ವಿಷಯ ಅದರಲ್ಲಿ ಸಿಕ್ಕಿದವು.


ನೀನೇ ಅರಸುಗಳಿಗೆ ಜಯಪ್ರದನು I ದಾಸ ದಾವೀದನನು ಬಿಡಿಸಿದವನು II


ಅವನ ಸೇವಕರು ಅವನಿಗೆ ವಿರುದ್ಧ ಒಳಸಂಚು ಮಾಡಿ ಅವನನ್ನು ಅರಮನೆಯಲ್ಲಿಯೇ ಕೊಂದರು.


ಯೆಹೋವಾಷನ ಉದ್ಯೋಗಸ್ಥರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿದರು.


ಅವನ ಸೇವಕನೂ ಅವನ ರಥಬಲದ ಅರ್ಧಭಾಗಕ್ಕೆ ಅಧಿಪತಿಯೂ ಆಗಿದ್ದ ಜಿಮ್ರಿ ಎಂಬವನು ಅವನಿಗೆ ವಿರುದ್ಧ ಒಳಸಂಚು ಮಾಡಿದನು. ಒಮ್ಮೆ ಅರಸನು ತಿರ್ಚದಲ್ಲಿ ತನ್ನ ಮನೆಯ ಉಗ್ರಾಣಿಕನಾದ ಅರ್ಚನೆಂಬವನ ಮನೆಯಲ್ಲಿ ಕುಡಿದು ಮತ್ತನಾಗಿದ್ದನು.


ಇದಲ್ಲದೆ ಅವನು ಅಬೀಷೈಗೂ ತನ್ನ ಎಲ್ಲಾ ಸೇವಕರಿಗೂ, “ನೋಡಿ, ನನ್ನಿಂದ ಹುಟ್ಟಿದ ನನ್ನ ಮಗನೇ ನನ್ನ ಪ್ರಾಣವನ್ನು ತೆಗೆಯಬೇಕೆಂದಿರುವಲ್ಲಿ ಈ ಬೆನ್ಯಾಮೀನ್ಯನು ಹೀಗೆ ಮಾಡುವುದು ಯಾವ ಲೆಕ್ಕ? ಬಿಡಿ, ಅವನು ಶಪಿಸಲಿ; ಹೀಗೆ ಮಾಡಬೇಕೆಂದು ಸರ್ವೇಶ್ವರನೇ ಅವನಿಗೆ ಆಜ್ಞಾಪಿಸಿದ್ದಾರೆ.


ಇದಲ್ಲದೆ, ಅಹಷ್ಟೇರೋಷನ ಆಳ್ವಿಕೆಯ ಆರಂಭದಲ್ಲಿ ಅವರು ಜುದೇಯ ಹಾಗು ಜೆರುಸಲೇಮಿನಲ್ಲಿ ವಾಸಿಸುತ್ತಿದ್ದವರಿಗೆ ವಿರುದ್ಧ ಆಪಾದನ ಪತ್ರವನ್ನು ಬರೆದರು.


ಕನ್ಯೆಯರನ್ನು ಎರಡನೆಯ ಸಾರಿ ಕೂಡುಸುವಾಗ, ಮೊರ್ದೆಕೈ ಅರಮನೆಯ ಹೆಬ್ಬಾಗಿಲಿನಲ್ಲಿ ಕುಳಿತುಕೊಂಡಿದ್ದನು.


ದಾನಿಯೇಲನ ಕೋರಿಕೆಯ ಪ್ರಕಾರ ರಾಜನು ಶದ್ರಕ್, ಮೇಶಕ್ ಮತ್ತು ಅಬೇದ್‍ನೆಗೋ ಎಂಬುವರನ್ನು ಬಾಬಿಲೋನಿನ ಪ್ರಾಂತ್ಯಾಧಿಪತಿಗಳನ್ನಾಗಿ ನೇಮಿಸಿದನು. ದಾನಿಯೇಲನು ಮಾತ್ರ ಅರಮನೆಯಲ್ಲೇ ಕಾರ್ಯನಿರತನಾದನು.


ಆ ರಾತ್ರಿ ಅರಸನಿಗೆ ನಿದ್ದೆಯೇ ಬರಲಿಲ್ಲ. ಆದ್ದರಿಂದ, ಸ್ಮರಿಸತಕ್ಕ ಪೂರ್ವ ಘಟನೆಗಳನ್ನು ಬರೆದಿಟ್ಟಿದ್ದ ಗ್ರಂಥವನ್ನು ತರಿಸಿ, ಅದನ್ನು ಪಾರಾಯಣ ಮಾಡಿಸುತ್ತಿದ್ದಾಗ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು