Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 2:9 - ಕನ್ನಡ ಸತ್ಯವೇದವು C.L. Bible (BSI)

9 ಎಸ್ತೇರಳು ಹೇಗೈಯನ ಮೆಚ್ಚುಗೆಯನ್ನು ಗಳಿಸಿ ಅವನ ದಯೆಗೆ ಪಾತ್ರಳಾದಳು. ಈ ಕಾರಣದಿಂದ ಅವನು ಆಕೆಗೆ ತಕ್ಕ ಸೌಂದರ್ಯವರ್ಧಕ ಲೇಪನದ್ರವ್ಯಗಳನ್ನು ಹಾಗು ಉತ್ತಮ ಭೋಜನಾಂಶವನ್ನು ಕೊಟ್ಟು, ಆಕೆಯನ್ನೂ ಆಕೆಯ ಸೇವೆಗೆ ಆರಿಸಿದ ಏಳುಮಂದಿ ದಾಸಿಯರನ್ನೂ ಅಂತಃಪುರದ ಉತ್ತಮ ಭಾಗದಲ್ಲಿರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಹೇಗೈಯು ಆಕೆಯನ್ನು ಮೆಚ್ಚಿ, ತನ್ನ ದಯೆಗೆ ಪಾತ್ರಳಾದ ಆಕೆಗೋಸ್ಕರ ತಕ್ಕ ಲೇಪನದ್ರವ್ಯಗಳನ್ನೂ ಮತ್ತು ಭೋಜನವನ್ನು ಒದಗಿಸಿದನು. ಅವನು ಆಕೆಗೊಸ್ಕರ ಏಳು ಮಂದಿ ಸೇವಕಿಯರನ್ನೂ ಅರಮನೆಯಿಂದ ಆರಿಸಿಕೊಂಡು ಆಕೆಯನ್ನೂ ಮತ್ತು ಆಕೆಯ ಸೇವಕಿಯರನ್ನೂ ಅಂತಃಪುರದ ಉತ್ತಮ ಭಾಗದಲ್ಲಿರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಹೇಗೈಯು ಆಕೆಯನ್ನು ಮೆಚ್ಚಿ ತನ್ನ ದಯೆಗೆ ಪಾತ್ರಳಾದ ಆಕೆಗೋಸ್ಕರ ತಕ್ಕ ಲೇಪನ ದ್ರವ್ಯಗಳನ್ನೂ ಭೋಜನಾಂಶವನ್ನೂ ಆರಿಸಿದ ಏಳು ಮಂದಿ ಸೇವಕಿಯರನ್ನೂ ಅರಮನೆಯಿಂದ ಬೇಗನೆ ಏರ್ಪಡಿಸಿ ಆಕೆಯನ್ನೂ ಆಕೆಯ ಸೇವಕಿಯರನ್ನೂ ಅಂತಃಪುರದ ಉತ್ತಮಭಾಗದಲ್ಲಿರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಹೇಗೈ ಎಸ್ತೇರಳನ್ನು ಇಷ್ಟಪಟ್ಟನು. ಆಕೆ ಅವನ ಮೆಚ್ಚಿಗೆಗೆ ಪಾತ್ರಳಾದಳು. ಆಕೆಗೆ ಅರಮನೆಯಿಂದ ಏಳು ಮಂದಿ ಸೇವಕಿಯರನ್ನು ಕೊಟ್ಟು ಆಕೆಯ ಊಟೋಪಚಾರಗಳಲ್ಲಿ ಅಥವಾ ಸೌಂದರ್ಯ ಅಭಿವೃದ್ಧಿಗಾಗಿ ಲೇಪನ ವಸ್ತುಗಳ ವಿಷಯದಲ್ಲಿ ಹೆಚ್ಚಿನ ಆಸಕ್ತಿ ತೋರಿಸುತ್ತಿದ್ದನು. ಇದಾದ ಬಳಿಕ ಎಸ್ತೇರ್ ಮತ್ತು ಆಕೆಯ ಸೇವಕಿಯರನ್ನು ಅಂತಃಪುರದ ಉತ್ತಮ ಭಾಗದಲ್ಲಿ ಇಳಿದುಕೊಳ್ಳುವ ವ್ಯವಸ್ಥೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಎಸ್ತೇರಳು ಹೇಗೈಯ ಮೆಚ್ಚುಗೆಯನ್ನು ಗಳಿಸಿದ್ದರಿಂದ ಅವನ ಸಮ್ಮುಖದಲ್ಲಿ ಅವಳಿಗೆ ದಯೆ ದೊರಕಿತು. ಆದಕಾರಣ ಅವನು ತ್ವರೆಯಾಗಿ ಸೌಂದರ್ಯವರ್ಧಕ ಸಾಧನಗಳನ್ನೂ ಅರಸನ ಅರಮನೆಯಿಂದ ಏಳುಮಂದಿ ದಾಸಿಯರನ್ನೂ ಅವಳಿಗೆ ಕೊಟ್ಟನು. ಇದಲ್ಲದೆ ಸ್ತ್ರೀಯರಿದ್ದ ಕೋಣೆಯಲ್ಲಿ ಉತ್ತಮವಾದ ಭೋಜನಾಂಶಗಳನ್ನು ಅವಳಿಗೂ ಅವಳ ದಾಸಿಯರಿಗೂ ಕೊಟ್ಟನು. ಆಕೆಯನ್ನೂ ಮತ್ತು ಆಕೆಯ ಸೇವಕಿಯರನ್ನೂ ಅಂತಃಪುರದ ಉತ್ತಮ ಭಾಗದಲ್ಲಿರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 2:9
12 ತಿಳಿವುಗಳ ಹೋಲಿಕೆ  

ಒಬ್ಬನ ನಡತೆಯನ್ನುಸರ್ವೇಶ್ವರ ಮೆಚ್ಚಿದರೆ, ಅವನ ಶತ್ರುಗಳನ್ನು ಆತ ಮಿತ್ರರನ್ನಾಗಿಸುತ್ತಾನೆ.


ಆದರೂ ಸರ್ವೇಶ್ವರ, ಜೋಸೆಫನ ಸಂಗಡ ಇದ್ದರು. ಅವನಿಗೆ ಅಪಾರ ಪ್ರೀತಿ ತೋರಿಸಿ, ಅವನಿಗೆ ಸೆರೆಯಜಮಾನನ ದಯೆ ದೊರಕುವಂತೆ ಮಾಡಿದರು.


ಕನ್ಯೆಯರ ಲೇಪನಕಾಲವು ಪೂರೈಸುವುದಕ್ಕೆ ಸುಗಂಧತೈಲದ ಪ್ರಯೋಗದಲ್ಲಿ ಆರು ತಿಂಗಳು, ಕಾಂತಿವರ್ಧಕ ಪರಿಮಳ ದ್ರವ್ಯಗಳ ಪ್ರಯೋಗದಲ್ಲಿ ಆರು ತಿಂಗಳು ಹೀಗೆ ಒಂದು ವರ್ಷ ಕಳೆಯಿತು. ಇದಾದನಂತರ ಪದ್ಧತಿಯ ಪ್ರಕಾರ ಸಿಂಗರಿಸಿಕೊಂಡ ಪ್ರತಿಯೊಬ್ಬ ಕನ್ಯೆಯು ತನ್ನ ಸರದಿಯಂತೆ ಅರಸನ ಬಳಿಗೆ ಹೋಗಬೇಕಿತ್ತು.


ಇದಕ್ಕಾಗಿ ರಾಜ್ಯದ ಎಲ್ಲಾ ಸಂಸ್ಥಾನಗಳಿಗೂ ಅಧಿಕಾರಿಗಳನ್ನೂ ಕಳುಹಿಸಬೇಕು. ಇವರು ಸುರಸುಂದರಿಯರಾದ ಕನ್ಯೆಯರನ್ನೆಲ್ಲಾ ಶೂಷನ್ ನಗರಕ್ಕೆ ಕರೆತಂದು ಅಂತಃಪುರದ ಪಾಲಕನೂ ರಾಜಕಂಚುಕಿಯೂ ಆದ ಹೇಗೈಯ ವಶಕ್ಕೆ ಒಪ್ಪಿಸಬೇಕು. ಇವನು ಅವರಿಗೆ ಸೌಂದರ್ಯವರ್ಧಕ ಸಾಧನಗಳನ್ನು, ಲೇಪನದ್ರವ್ಯಗಳನ್ನು ಕೊಡುವಂತೆ ವ್ಯವಸ್ಥೆ ಮಾಡಬೇಕು.


ಕಂಚುಕಿಯರ ನಾಯಕನು ದಾನಿಯೇಲನ ಮೇಲೆ ಕನಿಕರ ಮತ್ತು ದಯೆತೋರುವಂತೆ ದೇವರು ಅನುಗ್ರಹಿಸಿದ್ದರು.


ಎಜ್ರನು, ಇಸ್ರಯೇಲ್ ದೇವರಾದ ಸರ್ವೇಶ್ವರನಿಂದ ದೊರಕಿದ ಮೋಶೆಯ ಧರ್ಮೋಪದೇಶದಲ್ಲಿ ಪಾಂಡಿತ್ಯ ಪಡೆದ ಒಬ್ಬ ಧರ್ಮಶಾಸ್ತ್ರಿ ಆಗಿದ್ದನು. ಅವನ ದೇವರಾದ ಸರ್ವೇಶ್ವರನ ಕೃಪಾಹಸ್ತ ಅವನ ಮೇಲಿತ್ತು. ಆದುದರಿಂದ ಅರಸನು ಅವನಿಗೆ ಇಷ್ಟವಾದುದನ್ನೆಲ್ಲ ಅನುಗ್ರಹಿಸಿದನು.


ಎಲ್ಲಾ ಆಪತ್ತು ವಿಪತ್ತುಗಳಿಂದ ಅವನನ್ನು ಪಾರುಮಾಡಿದರು. ಅವನು ಈಜಿಪ್ಟಿನ ಅರಸ ಫರೋಹನ ಆಸ್ಥಾನಕ್ಕೆ ಬಂದಾಗ ದೇವರು ಅವನಿಗೆ ಜ್ಞಾನಸಂಪನ್ನತೆಯನ್ನಿತ್ತು ಅರಸನ ಮೆಚ್ಚುಗೆಗೆ ಪಾತ್ರನಾಗುವಂತೆ ಅನುಗ್ರಹಿಸಿದರು. ಫರೋಹನು ಅವನನ್ನು ರಾಜ್ಯಪಾಲನನ್ನಾಗಿಯೂ ಅರಮನೆಯ ಮೇಲ್ವಿಚಾರಕನನ್ನಾಗಿಯೂ ನೇಮಿಸಿದನು.


ಕಬ್ಬಿಣ ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಈಜಿಪ್ಟ್ ದೇಶದಿಂದ ನೀವು ಬಿಡಿಸಿದ ಈ ಜನರು ನಿಮ್ಮ ಸ್ವಕೀಯಜನರಾಗಿದ್ದಾರೆಂಬುದನ್ನು ನೆನಸಿ,


ರಾಜ ವನಪಾಲಕನಾದ ಆಸಾಫನು ದೇವಾಲಯದ ಕೋಟೆಯ ಬಾಗಿಲುಗಳನ್ನೂ ಪಟ್ಟಣದ ಪೌಳಿಗೋಡೆಯನ್ನೂ ನಾನು ಸೇರುವ ಮನೆಯನ್ನೂ, ಕಟ್ಟಲು ಬೇಕಾಗುವ ತೊಲೆಗಳಿಗಾಗಿ ಮರಗಳನ್ನು ಕೊಡಬೇಕಾಗುತ್ತದೆ; ಇದನ್ನೆಲ್ಲಾ ಕೊಡುವಂತೆ ರಾಜರು ನನ್ನ ಕೈಯಲ್ಲಿ ಪತ್ರಗಳನ್ನು ದಯಮಾಡಿ ನೀಡಬೇಕು,” ಎಂದು ಬಿನ್ನವಿಸಿದೆ. ನನ್ನ ದೇವರ ಕೃಪಾಹಸ್ತ ನನ್ನ ಮೇಲೆ ಇದ್ದುದರಿಂದ ರಾಜನು ಅವುಗಳನ್ನು ನನಗೆ ಕೊಟ್ಟನು.


ಪ್ರಾಕಾರದಲ್ಲಿ ನಿಂತಿದ್ದ ಎಸ್ತೇರ್‍ರಾಣಿಯನ್ನು ಅವನು ಕಂಡೊಡನೆ, ಆಕೆಯೆಡೆ ಮೆಚ್ಚುಗೆ ತೋರಿ ತನ್ನ ಕೈಯಲ್ಲಿದ್ದ ಸ್ವರ್ಣರಾಜದಂಡವನ್ನು ಆಕೆಯ ಕಡೆಗೆ ಚಾಚಿದನು. ಎಸ್ತೇರಳು ಸಮೀಪಕ್ಕೆ ಬಂದು ರಾಜದಂಡದ ತುದಿಯನ್ನು ಮುಟ್ಟಿದಳು.


ಜೋಸೆಫ್ ಅವನ ಕೃಪೆಗೆ ಪಾತ್ರನಾದ. ದಣಿ ಅವನನ್ನು ತನ್ನ ಆಪ್ತಸೇವಕನನ್ನಾಗಿ ನೇಮಿಸಿಕೊಂಡ. ಅದು ಮಾತ್ರವಲ್ಲ, ತನ್ನ ಮನೆಯಲ್ಲೇ ಮೇಲ್ವಿಚಾರಕನನ್ನಾಗಿ ಮಾಡಿ, ತನ್ನ ಆಸ್ತಿಪಾಸ್ತಿಯನ್ನೆಲ್ಲ ಅವನ ವಶಕ್ಕೆ ಒಪ್ಪಿಸಿದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು