Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 3:13 - ಕನ್ನಡ ಸತ್ಯವೇದವು C.L. Bible (BSI)

13 ಪತ್ರಗಳನ್ನು ಅಂಚೆಯವರ ಮುಖಾಂತರ ಎಲ್ಲಾ ರಾಜಸಂಸ್ಥಾನಗಳಿಗೆ ಕಳಿಸಲಾಯಿತು. ಅವುಗಳಲ್ಲಿ ಈ ರೀತಿ ಬರೆದಿತ್ತು: “ಒಂದೇ ದಿನದಲ್ಲಿ, ಅಂದರೆ, ಹನ್ನೆರಡನೆ ತಿಂಗಳಾದ ಫಾಲ್ಗುಣ ಮಾಸದ ಹದಿಮೂರನೆಯ ದಿನದಲ್ಲಿ ಹಿರಿಯರು, ಕಿರಿಯರು, ಮಕ್ಕಳು, ಮಹಿಳೆಯರೆನ್ನದೆ ನಿಮ್ಮ ಮಧ್ಯೆ ವಾಸಿಸುವ ಎಲ್ಲಾ ಯೆಹೂದ್ಯರನ್ನು ಕೊಂದುಹಾಕಿ, ನಿರ್ಮೂಲಮಾಡಿ, ನಿರ್ನಾಮಗೊಳಿಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಪತ್ರಗಳು ಅಂಚೆಯವರ ಮುಖಾಂತರ ಎಲ್ಲಾ ರಾಜಸಂಸ್ಥಾನಗಳಿಗೆ ಕಳುಹಿಸಲ್ಪಟ್ಟವು. ಅವುಗಳಲ್ಲಿ, “ಒಂದೇ ದಿನದಲ್ಲಿ ಅಂದರೆ ಹನ್ನೆರಡನೆಯ ತಿಂಗಳಾದ ಫಾಲ್ಗುಣಮಾಸದ ಹದಿಮೂರನೆಯ ದಿನದಲ್ಲಿ ಹುಡುಗರು, ಹಿರಿಯರು, ಹೆಂಗಸರು, ಮಕ್ಕಳು ಎಂದು ನೋಡದೆ ಎಲ್ಲಾ ಯೆಹೂದ್ಯರನ್ನು ಕೊಲ್ಲಿರಿ, ಸಂಹರಿಸಿರಿ, ನಿರ್ನಾಮಗೊಳಿಸಿರಿ. ಅವರ ಸೊತ್ತನ್ನು ಸೂರೆಮಾಡಿರಿ” ಎಂದೂ ಬರೆದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಪತ್ರಗಳು ಅಂಚೆಯವರ ಮುಖಾಂತರ ಎಲ್ಲಾ ರಾಜಸಂಸ್ಥಾನಗಳಿಗೆ ಕಳುಹಿಸಲ್ಪಟ್ಟವು. ಅವುಗಳಲ್ಲಿ - ಒಂದೇ ದಿನದಲ್ಲಿ ಅಂದರೆ ಹನ್ನೆರಡನೆಯ ತಿಂಗಳಾದ ಫಾಲ್ಗುನ ಮಾಸದ ಹದಿಮೂರನೆಯ ದಿನದಲ್ಲಿ ಹುಡುಗರು, ಮುದುಕರು, ಹೆಂಗಸರು, ಮಕ್ಕಳು ಎಂದು ನೋಡದೆ ಎಲ್ಲಾ ಯೆಹೂದ್ಯರನ್ನು ಕೊಲ್ಲಿರಿ, ಸಂಹರಿಸಿರಿ, ನಿರ್ನಾಮಗೊಳಿಸಿರಿ, ಅವರ ಸೊತ್ತನ್ನು ಸೂರೆಮಾಡಿರಿ ಎಂದೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ರಾಜಾಜ್ಞೆಯನ್ನು ಹೊತ್ತ ಸಂದೇಶವಾಹಕರು ದೇಶದ ಎಲ್ಲಾ ಕಡೆಗಳಲ್ಲಿ ಹೊತ್ತುಕೊಂಡು ಬಂದರು. ಆ ಪತ್ರದಲ್ಲಿ ಹನ್ನೆರಡನೇ ತಿಂಗಳಿನ ಹದಿಮೂರನೇ ದಿವಸದಂದು ಆಯಾ ಪ್ರಾಂತ್ಯಗಳಲ್ಲಿರುವ ಎಲ್ಲಾ ಯೆಹೂದ್ಯರನ್ನು ಚಿಕ್ಕವರು ದೊಡ್ಡವರು ಎನ್ನದೆ ಕೊಂದು ಅವರ ವಸ್ತುಗಳನ್ನೆಲ್ಲ ಸೂರೆ ಮಾಡಬೇಕೆಂಬದಾಗಿ ಬರೆದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಹನ್ನೆರಡನೆಯ ತಿಂಗಳಾದ ಆದಾರ್ ಮಾಸದ ಹದಿಮೂರನೆಯ ದಿನದಲ್ಲಿ, ಹಿರಿಯರೂ, ಕಿರಿಯರೂ, ಮಕ್ಕಳೂ, ಮಹಿಳೆಯರೂ, ಒಟ್ಟು ಎಲ್ಲಾ ಯೆಹೂದ್ಯರನ್ನು ಒಂದೇ ದಿನದಲ್ಲಿ ಕೊಂದುಹಾಕುವುದಕ್ಕೂ ನಾಶಮಾಡುವುದಕ್ಕೂ ಅವರ ಆಸ್ತಿಯನ್ನು ಕೊಳ್ಳೆ ಹೊಡೆಯುವದಕ್ಕೂ ಅರಸನ ಎಲ್ಲಾ ಪ್ರಾಂತಗಳಿಗೆ ಅಂಚೆಯವರ ಮೂಲಕ ಪತ್ರಗಳನ್ನು ಕಳುಹಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 3:13
14 ತಿಳಿವುಗಳ ಹೋಲಿಕೆ  

ಅರಸನ ಮತ್ತು ಅವನ ಪದಾಧಿಕಾರಿಗಳ ಪತ್ರವನ್ನು ತೆಗೆದುಕೊಂಡುಹೋದ ದೂತರು ಇಸ್ರಯೇಲ್ ಹಾಗು ಜುದೇಯ ನಾಡುಗಳಲ್ಲೆಲ್ಲಾ ಸಂಚರಿಸಿ ರಾಜಾಜ್ಞೆಯಂತೆ ಹೀಗೆಂದು ಪ್ರಕಟಿಸಿದರು: “ಇಸ್ರಯೇಲರೇ, ಅಬ್ರಹಾಮ್, ಇಸಾಕ್, ಇಸ್ರಯೇಲರ ದೇವರಾದ ಸರ್ವೇಶ್ವರನಿಗೆ ಅಭಿಮುಖರಾಗಿರಿ. ಆಗ ಅವರೂ ನಿಮ್ಮಲ್ಲಿ ಅಸ್ಸೀರಿಯಾದ ಅರಸನ ಕೈಗೆ ಸಿಕ್ಕದೆ ತಪ್ಪಿಸಿಕೊಂಡ ಅಳಿದುಳಿದವರಿಗೆ ಅಭಿಮುಖರಾಗುವರು.


ಈಗ ನೀನು ಹೋಗಿ ಅವರನ್ನು ಸೋಲಿಸಿ ಅವರಿಗಿರುವುದನ್ನೆಲ್ಲಾ ಸಂಪೂರ್ಣವಾಗಿ ಹಾಳುಮಾಡು. ಗಂಡಸರನ್ನು, ಹೆಂಗಸರನ್ನು, ಮಕ್ಕಳನ್ನು, ಶಿಶುಗಳನ್ನು ಹಾಗು ಎತ್ತು, ಕುರಿ, ಕತ್ತೆ, ಒಂಟೆ ಇವುಗಳನ್ನೂ ಉಳಿಸದೆ ಕೊಂದುಹಾಕು ಎಂದು ಹೇಳುತ್ತಾರೆ ಸೇನಾಧೀಶ್ವರರಾದ ಸರ್ವೇಶ್ವರ,” ಎಂದನು.


ದಯೆತೋರದವನಿಗೆ, ದಯೆದಾಕ್ಷಿಣ್ಯವಿಲ್ಲದ ನ್ಯಾಯತೀರ್ಪು ಕಾದಿರುತ್ತದೆ. ನ್ಯಾಯಕ್ಕೂ ಮಿಗಿಲಾಗಿ ವಿಜೃಂಭಿಸುವುದು ದಯೆಯೇ.


ಕಾಲುಕೆರೆದು ನಿಂತಿಹರು ರಕುತ ಪಾತಕೆ


ಒಬ್ಬ ಸುದ್ದಿಗಾರ ಇನ್ನೊಬ್ಬ ಸುದ್ದಿಗಾರನತ್ತ ಓಡುತ್ತಾನೆ. ಒಬ್ಬ ದೂತ ಇನ್ನೊಬ್ಬ ದೂತನತ್ತ ದೌಡಾಯಿಸುತ್ತಾನೆ. ‘ರಾಜಧಾನಿಯನ್ನು ಎಲ್ಲಾ ಕಡೆಯಿಂದಲೂ ಆಕ್ರಮಿಸಿದ್ದಾರೆ.


ಆ ಧರ್ಮಭ್ರಷ್ಟ ಪ್ರಜೆಗೆ ಇದಿರಾಗಿ ಅಸ್ಸೀರಿಯವನ್ನು ಕಳುಹಿಸುತ್ತೇನೆ. ನನ್ನ ಕೋಪಕ್ಕೆ ಗುರಿಯಾದ ಜನರಿಗೆ ವಿರುದ್ಧ ಕಾರ್ಯವನ್ನು ಕೈಗೊಳ್ಳಲು ಆಜ್ಞೆ ಮಾಡುತ್ತೇನೆ. ನನ್ನ ಪ್ರಜೆಯನ್ನು ಸೂರೆಮಾಡಲು, ಕೊಳ್ಳೆಹೊಡೆಯಲು, ಬೀದಿಯ ಕಸದಂತೆ ತುಳಿದುಬಿಡಲು ಅದಕ್ಕೆ ಆಜ್ಞೆಮಾಡುತ್ತೇನೆ.


ನನ್ನ ದಿನಗಳು ಓಟಗಾರನಿಗಿಂತ ವೇಗ ಅವು ಓಡುತ್ತವೆ ಕಾಣದೆ ಯಾವುದೊಂದು ಸುಖ.


ಜನರು ನಮ್ಮನ್ನು ಕೊಂದು, ಸಂಹರಿಸಿ, ನಿರ್ನಾಮಗೊಳಿಸುವ ಹಾಗೆ ನಮ್ಮನ್ನು ಮಾರಲಾಯಿತು. ಬರೀ ಮಾರಾಟವಾಗಿದ್ದರೆ ಈ ದುರಂತ ಪರಿಸ್ಥಿತಿಯ ವಿಷಯದಲ್ಲಿ ಅರಸರಿಗೆ ತೊಂದರೆಪಡಿಸುವುದು ಸರಿಯಲ್ಲವೆಂದು ಸುಮ್ಮನಿದ್ದುಬಿಡುತ್ತಿದ್ದೆ,” ಎಂದಳು.


ಅನಂತರ ಅವನು ಯಾಜಕರ ಪಟ್ಟಣವಾದ ನೋಬಕ್ಕೆ ಹೋಗಿ ಅಲ್ಲಿನ ಸ್ತ್ರೀಪುರುಷರನ್ನೂ ಶಿಶುಬಾಲಕರನ್ನೂ ದನಕುರಿಕತ್ತೆಗಳನ್ನೂ ಕತ್ತಿಯಿಂದ ಸಂಹರಿಸಿದನು.


“ತಾವು ನನ್ನ ಮೇಲೆ ಕೃಪಾಕಟಾಕ್ಷವಿರಿಸಿ, ನನ್ನನ್ನು ಮೆಚ್ಚಿ, ನಾನು ಹೇಳುವ ಮಾತು ಸಮಂಜಸವಾದುದೆಂದು ಎಣಿಸಿ, ಅದಕ್ಕೆ ಸಮ್ಮತಿಸುವುದಾದರೆ, ತಮ್ಮ ಎಲ್ಲಾ ಸಂಸ್ಥಾನಗಳಲ್ಲಿರುವ ಯೆಹೂದ್ಯರನ್ನು ಸಂಹರಿಸುವ ಸಲುವಾಗಿ ಅಗಾಗನ ವಂಶದವನೂ ಹಮ್ಮೆದಾತನ ಮಗನೂ ಆದ ಹಾಮಾನನು ಬರೆಸಿದ ಪತ್ರಗಳನ್ನು ರದ್ದುಗೊಳಿಸಲು ಆಜ್ಞೆ ಹೊರಡಿಸಬೇಕು.


ಅರಸನ ಆಜ್ಞೆಯನ್ನು, ನಿರ್ಣಯವನ್ನು ನೆರವೇರಿಸತಕ್ಕ ದಿನವು ಅಂದರೆ, ಹನ್ನೆರಡನೆಯ ತಿಂಗಳಾದ ಫಾಲ್ಗುಣಮಾಸದ ಹದಿಮೂರನೆಯ ದಿನವು ಬಂದಿತು. ಆ ದಿನದಲ್ಲಿ ಯೆಹೂದ್ಯರನ್ನು ತಾವೇ ಸ್ವಾಧೀನಪಡಿಸಿಕೊಳ್ಳಬಹುದೆಂದು ಅವರ ವೈರಿಗಳು ನಿರೀಕ್ಷಿಸಿದ್ದರು. ಆದರೆ ಅದಕ್ಕೆ ಬದಲಾಗಿ ಯೆಹೂದ್ಯರೇ ತಮ್ಮ ವೈರಿಗಳನ್ನು ಸ್ವಾಧೀನಮಾಡಿಕೊಂಡರು.


ಹೀಗಾಗಿ ಯೆಹೂದ್ಯರು ತಮ್ಮ ವೈರಿಗಳನ್ನೆಲ್ಲಾ ಸೋಲಿಸಿ, ಕತ್ತಿಯಿಂದ ಇರಿದು ಕೊಂದು, ನಿರ್ನಾಮಗೊಳಿಸಿದರು. ತಮ್ಮನ್ನು ಹಗೆಮಾಡುತ್ತಿದ್ದ ಶತ್ರುಗಳಿಗೆ ತಮ್ಮ ಇಷ್ಟಾನುಸಾರ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು