Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 3:9 - ಕನ್ನಡ ಸತ್ಯವೇದವು C.L. Bible (BSI)

9 ಅರಸರಿಗೆ ಸಮ್ಮತಿ ಆದರೆ ಅವರನ್ನು ನಿರ್ಮೂಲಮಾಡುವಂತೆ ಆಜ್ಞೆ ಒಂದನ್ನು ಹೊರಡಿಸಬೇಕು. ಹಾಗೆ ಮಾಡಿದ್ದಲ್ಲಿ, ನಾನು ರಾಜಭಂಡಾರಕ್ಕಾಗಿ 340,000 ಕಿಲೋಗ್ರಾಂ ಬೆಳ್ಳಿಯನ್ನು ಖಜಾಂಚಿಯರ ಕೈಗೊಪ್ಪಿಸುವೆನು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅರಸನ ಚಿತ್ತವಾದರೆ ಅವರನ್ನು ಸಂಹರಿಸಬೇಕು ಎಂಬ ಆಜ್ಞೆಯು ಹೊರಡಲಿ; ಹಾಗೆ ಮಾಡಿದರೆ ನಾನು ರಾಜಭಂಡಾರಕ್ಕಾಗಿ ಹತ್ತು ಸಾವಿರ ತಲಾಂತು ಬೆಳ್ಳಿಯನ್ನು ತೂಕ ಮಾಡಿ ಉದ್ಯೋಗಸ್ಥರ ಕೈಗೆ ಒಪ್ಪಿಸುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅರಸನ ಚಿತ್ತ ಬಂದರೆ ಅವರನ್ನು ಸಂಹರಿಸಬೇಕು ಎಂಬ ರಾಯಸವು ಹೊರಡಲಿ; ಹಾಗೆ ಮಾಡಿದರೆ ನಾನು ರಾಜ ಭಂಡಾರಗಳಿಗೆ ಸೇರಿಸುವದಕ್ಕೋಸ್ಕರ ಹತ್ತು ಸಾವಿರ ತಲಾಂತು ಬೆಳ್ಳಿಯನ್ನು ತೂಕ ಮಾಡಿ ಉದ್ಯೋಗಸ್ಥರ ಕೈಗೆ ಒಪ್ಪಿಸುವೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ರಾಜನೇ, ನೀನು ಸಮ್ಮತಿಸುವದಾದರೆ ನನ್ನ ಸಲಹೆ ಏನೆಂದರೆ, ಆ ಜನರನ್ನು ನಿರ್ಮೂಲ ಮಾಡಲು ಅಪ್ಪಣೆ ಕೊಡು. ನಾನು ಹತ್ತು ಸಾವಿರ ಬೆಳ್ಳಿನಾಣ್ಯಗಳನ್ನು ರಾಜ ಖಜಾನೆಯಲ್ಲಿ ಹಾಕುವೆನು. ಆ ಹಣವನ್ನು ಆ ಕಾರ್ಯ ಮಾಡುವ ಜನರ ಸಂಬಳಕ್ಕಾಗಿ ವಿನಿಯೋಗಿಸಬಹುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅರಸನಿಗೆ ಸಮ್ಮತಿಯಾದರೆ, ಅವರೆಲ್ಲರಿಗೂ ಮರಣದಂಡನೆ ವಿಧಿಸುವಂತೆ ಒಂದು ಆಜ್ಞೆಯನ್ನು ಹೊರಡಿಸಬೇಕು. ಆಗ ನಾನು ರಾಜಭಂಡಾರಕ್ಕೆ 340 ಮೆಟ್ರಿಕ್ ಟನ್ ಬೆಳ್ಳಿಯನ್ನು ಖಜಾಂಚಿಗೆ ಕೊಡುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 3:9
7 ತಿಳಿವುಗಳ ಹೋಲಿಕೆ  

ಅಬ್ರಹಾಮನು ಎಫ್ರೋನನ ಮಾತಿಗೆ ಒಪ್ಪಿ, ಅವನು ಆ ಹಿತ್ತಿಯರ ಮುಂದೆ ಸೂಚಿಸಿದ ನಾನೂರು ಬೆಳ್ಳಿ ನಾಣ್ಯಗಳನ್ನು, ವ್ಯಾಪಾರಿಗಳಲ್ಲಿ ಪ್ರಚಲಿತವಾಗಿದ್ದ ಬೆಳ್ಳಿಯಿಂದ ತೂಕಮಾಡಿ ಕೊಟ್ಟನು.


ಲೆಕ್ಕ ತೆಗೆದುಕೊಳ್ಳಲು ಆರಂಭಿಸಿದಾಗ ಹತ್ತು ಸಾವಿರ ‘ಚಿನ್ನದ ನಾಣ್ಯ’ಗಳನ್ನು ಸಾಲವಾಗಿ ತೆರಬೇಕಾಗಿದ್ದ ಒಬ್ಬನನ್ನು ಅವನ ಸಮ್ಮುಖಕ್ಕೆ ಕರೆತರಲಾಯಿತು.


ಹಾಮಾನನು ಅರಸ ಅಹಷ್ವೇರೋಷನಿಗೆ ಹೀಗೆಂದನು: “ನಿಮ್ಮ ರಾಜ್ಯದ ಎಲ್ಲಾ ಸಂಸ್ಥಾನಗಳಲ್ಲಿ ವಾಸಿಸುವ ಒಂದು ಜನಾಂಗವಿದೆ. ಅದು ಇತರ ಜನಾಂಗಗಳ ಮಧ್ಯೆ ಹರಡಿಕೊಂಡಿದ್ದರೂ ತನ್ನ ರೀತಿನೀತಿಗಳಲ್ಲಿ ಅವರಿಂದ ಪ್ರತ್ಯೇಕವಾಗಿಯೇ ಉಳಿಯುತ್ತದೆ. ಅರಸರ ನಿಯಮಗಳನ್ನಂತೂ ಈ ಜನಾಂಗದವರು ಅನುಸರಿಸುವುದೇ ಇಲ್ಲ. ಹೀಗಿರುವಲ್ಲಿ ಇಂಥವರನ್ನು ಅರಸರು ಸುಮ್ಮನೆ ಬಿಡುವುದು ಸರಿಯಲ್ಲ.


ಇದನ್ನು ಕೇಳಿದ ಅರಸನು ತನ್ನ ಕೈಬೆರಳಿನಲ್ಲಿದ್ದ ಮುದ್ರೆ ಉಂಗುರವನ್ನು ತೆಗೆದು ಆಗಾಗನ ವಂಶಸ್ಥನೂ ಹೆಮ್ಮೆದಾತನ ಮಗನೂ ಯೆಹೂದ್ಯರ ಕಡುವೈರಿಯೂ ಆದ ಹಾಮಾನನಿಗೆ ಕೊಟ್ಟು,


ಅವನು, ನಡೆದ ಎಲ್ಲಾ ವಿಷಯಗಳನ್ನು ಮತ್ತು ಯೆಹೂದ್ಯರನ್ನು ನಾಶಮಾಡಲು ಅನುಮತಿ ಪಡೆದುಕೊಳ್ಳುವುದಕ್ಕಾಗಿ ಹಾಮಾನನು ರಾಜಭಂಡಾರಕ್ಕೆ ಕೊಡಲು ವಾಗ್ದಾನಮಾಡಿದ ನಿಗದಿತ ಹಣದ ವಿಷಯವನ್ನು ಅವನಿಗೆ ವಿವರಿಸಿ ಹೇಳಿದನು.


ಜನರು ನಮ್ಮನ್ನು ಕೊಂದು, ಸಂಹರಿಸಿ, ನಿರ್ನಾಮಗೊಳಿಸುವ ಹಾಗೆ ನಮ್ಮನ್ನು ಮಾರಲಾಯಿತು. ಬರೀ ಮಾರಾಟವಾಗಿದ್ದರೆ ಈ ದುರಂತ ಪರಿಸ್ಥಿತಿಯ ವಿಷಯದಲ್ಲಿ ಅರಸರಿಗೆ ತೊಂದರೆಪಡಿಸುವುದು ಸರಿಯಲ್ಲವೆಂದು ಸುಮ್ಮನಿದ್ದುಬಿಡುತ್ತಿದ್ದೆ,” ಎಂದಳು.


ಆಗ ಕೆಲವು ಮಂದಿ ಬಾಬಿಲೋನಿಯರು ಯೆಹೂದ್ಯರ ಮೇಲೆ ದೂರು ಹೊರಿಸಲು ರಾಜ ನೆಬೂಕದ್ನೆಚ್ಚರನ ಬಳಿಗೆ ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು