Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 4:11 - ಕನ್ನಡ ಸತ್ಯವೇದವು C.L. Bible (BSI)

11 “ಅರಸನು ಹೇಳಿಕಳುಹಿಸಿದ ಹೊರತು ಅವನ ಬಳಿಗೆ ಅರಮನೆಯ ಒಳಾಂಗಣಕ್ಕೆ ಹೋಗುವವರು ಮರಣದಂಡನೆಗೆ ಗುರಿಯಾಗುವರು ಎಂಬ ನಿಷೇಧಾಜ್ಞೆ ಸ್ತ್ರೀಪುರುಷರೆನ್ನದೆ ಎಲ್ಲರಿಗೂ ಅನ್ವಯಿಸುತ್ತದೆ. ಯಾರ ಕಡೆಗೆ ಅವನು ತನ್ನ ಸ್ವರ್ಣದಂಡವನ್ನು ಚಾಚುವನೋ ಅವರು ಮಾತ್ರ ಜೀವದಿಂದುಳಿಯುವರು. ಇದು ಅರಸನ ಎಲ್ಲಾ ಸೇವಕರಿಗೂ ಸಂಸ್ಥಾನಗಳ ಎಲ್ಲಾ ನಿವಾಸಿಗಳಿಗೂ ತಿಳಿದ ವಿಷಯ; ನನಗಂತೂ ಕಳೆದ ಮೂವತ್ತು ದಿನಗಳಿಂದ ಅರಸನ ಬಳಿಗೆ ಹೋಗುವುದಕ್ಕೆ ಆಮಂತ್ರಣವೇ ಬರಲಿಲ್ಲ,” ಎಂದು ತಿಳಿಸುವಂತೆ ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 “ಅರಸನು ತನ್ನ ಬಳಿಗೆ ಬರಲು ಹೇಳಿದ ಹೊರತು ಅವನ ಬಳಿಗೆ ಒಳಗಣ ಪ್ರಾಕಾರಕ್ಕೆ ಹೋಗುವವರು ಮರಣದಂಡನೆಗೆ ಪಾತ್ರರಾಗುವರು ಎಂಬ ಒಂದೇ ನಿಯಮವು ಎಲ್ಲಾ ಸ್ತ್ರೀಪುರುಷರಿಗುಂಟು. ಯಾರ ಕಡೆಗೆ ಅವನು ತನ್ನ ಸುವರ್ಣದಂಡವನ್ನು ಚಾಚುವನೋ ಅವರು ಮಾತ್ರ ಜೀವದಿಂದುಳಿಯುವರು ಎಂಬುದು ಅರಸನ ಎಲ್ಲಾ ಸೇವಕರಿಗೂ ಮತ್ತು ಸಂಸ್ಥಾನಗಳ ಎಲ್ಲಾ ಜನರಿಗೂ ಗೊತ್ತು. ನನಗಂತೂ ಮೂವತ್ತು ದಿನಗಳಿಂದ ಅರಸನ ಬಳಿಗೆ ಹೋಗುವುದಕ್ಕೆ ಆಮಂತ್ರಣವಾಗಲಿಲ್ಲ” ಎಂದು ಹೇಳಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅರಸನು ಕರಿಸಿದರೆ ಹೊರತು ಅವನ ಬಳಿಗೆ ಒಳಗಣ ಪ್ರಾಕಾರಕ್ಕೆ ಹೋಗುವವರು ಮರಣದಂಡನೆಗೆ ಪಾತ್ರರಾಗುವರು ಎಂಬ ಒಂದೇ ನಿಯಮವು ಎಲ್ಲಾ ಸ್ತ್ರೀ ಪುರುಷರಿಗುಂಟು; ಯಾರ ಕಡೆಗೆ ಅವನು ತನ್ನ ಸುವರ್ಣದಂಡವನ್ನು ಚಾಚುವನೋ ಅವರು ಮಾತ್ರ ಜೀವದಿಂದುಳಿಯುವರೆಂಬದು ಅರಸನ ಎಲ್ಲಾ ಸೇವಕರಿಗೂ ಸಂಸ್ಥಾನಗಳ ಎಲ್ಲಾ ಜನರಿಗೂ ಗೊತ್ತುಂಟಲ್ಲಾ; ನನಗಂತೂ ಮೂವತ್ತು ದಿನಗಳಿಂದ ಅರಸನ ಬಳಿಗೆ ಹೋಗುವದಕ್ಕೆ ಆಮಂತ್ರಣವಾಗಲಿಲ್ಲ ಎಂದು ಹೇಳಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಮೊರ್ದೆಕೈ, ಸಾಮ್ರಾಜ್ಯದಲ್ಲಿರುವ ಎಲ್ಲಾ ಅಧಿಕಾರಿಗಳಿಗೂ ಪ್ರಜೆಗಳಿಗೂ ತಿಳಿದಿರುವ ಒಂದು ವಿಷಯವೇನೆಂದರೆ, ರಾಜನು ಕರೆಯದೆ ಯಾರಾದರೂ ಆತನ ಬಳಿಗೆ ಹೋದರೆ ಅದಕ್ಕೆ ಮರಣದಂಡನೆಯೇ ಶಿಕ್ಷೆ ಎಂಬುದು. ರಾಜನು ತನ್ನ ಬಂಗಾರದ ದಂಡವನ್ನು ಯಾರ ಮೇಲೆ ತೋರಿಸುವನೋ ಅವನು ಮರಣಶಿಕ್ಷೆಯಿಂದ ಪಾರಾಗುವನು. ಈಗ ರಾಜನು ನನ್ನನ್ನು ಕರೆದು ಮೂವತ್ತು ದಿವಸಗಳಾದವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 “ಅರಸನು ಹೇಳಿಕಳುಹಿಸದೆ ಅರಸನ ಬಳಿಗೆ ಅರಮನೆಯ ಒಳಾಂಗಣಕ್ಕೆ ಹೋಗುವ ಗಂಡಸರಿಗಾಗಲಿ, ಹೆಂಗಸರಿಗಾಗಲಿ ಮರಣದಂಡನೆಯಾಗುವುದು. ಒಂದು ವೇಳೆ ಒಳಗೆ ಬಂದ ವ್ಯಕ್ತಿಯ ಕಡೆಗೆ ಅರಸನು ತನ್ನ ಸ್ವರ್ಣದಂಡವನ್ನು ಚಾಚಿದರೆ ಅವನಿಗೆ ಮಾತ್ರ ಮರಣದಂಡನೆಯಾಗದೆ ಜೀವದಿಂದ ಉಳಿಯುವರು. ಈ ರಾಜಾಜ್ಞೆಯನ್ನು ಅರಸನ ಸಮಸ್ತ ಸೇವಕರೂ ಅರಸನ ಪ್ರಾಂತಗಳ ಜನರೂ ತಿಳಿದಿದ್ದಾರೆ. ಆದರೆ ಕಳೆದ ಮೂವತ್ತು ದಿನಗಳಿಂದ ಅರಸನ ಬಳಿಗೆ ಹೋಗುವುದಕ್ಕೆ ನನಗೆ ಆಮಂತ್ರಣವೇ ಬರಲಿಲ್ಲ,” ಎಂದು ತಿಳಿಸುವಂತೆ ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 4:11
9 ತಿಳಿವುಗಳ ಹೋಲಿಕೆ  

ಕಾಲ ಬದಲಾಗುತ್ತಿರುತ್ತದೆ ಎಂದುಕೊಂಡೇ ನನ್ನ ಮುಂದೆ ಇಲ್ಲಸಲ್ಲದ್ದನ್ನು ಆಡಲು ಒಪ್ಪಂದ ಮಾಡಿಕೊಂಡಿದ್ದೀರಿ. ಅಂತು ಆ ಕನಸನ್ನು ನೀವು ನನಗೆ ತಿಳಿಸಲೇಬೇಕು. ಆಗ ಅದರ ಉದ್ದೇಶವನ್ನು ವಿವರಿಸಬಲ್ಲಿರೆಂದು ನಾನು ತಿಳಿದುಕೊಳ್ಳುವೆನು,” ಎಂದು ಹೇಳಿದನು.


ಅರಸನು ತನ್ನ ಸ್ವರ್ಣದಂಡವನ್ನು ಆಕೆಯ ಕಡೆಗೆ ಚಾಚಲು, ಆಕೆ ಅವನ ಮುಂದೆ ಎದ್ದು ನಿಂತು,


ಆಕೆ ರಾಜನಿವಾಸಕ್ಕೆ ಸಾಯಂಕಾಲ ಹೋದವಳು ಮಾರನೆಯ ದಿನ ಬೆಳಗ್ಗೆ ಅರಸನ ಉಪಪತ್ನಿಗಳ ಪಾಲಕನಾದ ಶವಷ್ಗಜನೆಂಬ ರಾಜಕಂಚುಕಿಯ ವಶದಲ್ಲಿದ್ದ ಎರಡನೆಯ ಅಂತಃಪುರಕ್ಕೆ ಬರಬೇಕಾಗಿತ್ತು. ಅರಸನು ಅವಳನ್ನು ಬಯಸಿ ಅವಳ ಹೆಸರು ಹಿಡಿದು ಕರೆಕಳುಹಿಸಿದ ಹೊರತು ಅವಳು ಪುನಃ ಅರಸನ ಬಳಿಗೆ ಹೋಗುವಂತಿರಲಿಲ್ಲ.


ಕೂಡಲೆ ಅರಸನು, “ಯಾರಲ್ಲಿ, ಅಂಗಳದಲ್ಲಿ?” ಎಂದು ವಿಚಾರಿಸಿದನು. ಅಷ್ಟರಲ್ಲಿ, ತಾನೇ ಸಿದ್ಧಮಾಡಿಸಿದ್ದ ಗಲ್ಲುಮರಕ್ಕೆ ಮೊರ್ದೆಕೈಯನ್ನು ನೇಣುಹಾಕಿಸಲು ಅರಸನ ಅಪ್ಪಣೆಯನ್ನು ಪಡೆಯುವುದಕ್ಕೋಸ್ಕರ ಹಾಮಾನನು ಆಗತಾನೆ ಅರಮನೆಯ ಹೊರಗಣ ಅಂಗಳಕ್ಕೆ ಬಂದಿದ್ದನು.


ಅರಸರು ಸಮ್ಮತಿಸುವುದಾದರೆ, ವಷ್ಟಿರಾಣಿಯು ಅರಸರ ಸನ್ನಿಧಿಗೆ ಇನ್ನೆಂದೂ ಬಾರದಂತೆ ನಿಷೇಧಾಜ್ಞೆಯಾಗಬೇಕು. ಪಟ್ಟದರಸಿ ಆದ ಆಕೆಯ ಸ್ಥಾನವನ್ನು ಅವಳಿಗಿಂತಲೂ ಉತ್ತಮಳಾದ ಮತ್ತೊಬ್ಬಳಿಗೆ ಕೊಡುವಂತಾಗಬೇಕು. ಈ ಬಗ್ಗೆ ರಾಜಾಜ್ಞೆಯೊಂದನ್ನು ಹೊರಡಿಸಿ ಅದು ರದ್ದಾಗದಂತೆ ಪರ್ಷಿಯರ, ಮೇದ್ಯರ ಶಾಸನಗಳಲ್ಲಿ ಲಿಖಿತವಾಗಬೇಕು.


ಅದೇ ಪ್ರಕಾರ ಪುರುಷರೇ, ಸರಿಯಾದ ತಿಳುವಳಿಕೆಯಿಂದ ನಿಮ್ಮ ನಿಮ್ಮ ಪತ್ನಿಯರೊಡನೆ ಸಹಜೀವನ ನಡೆಸಿರಿ. ಅವರು ಅಬಲೆಯರು ಮಾತ್ರವಲ್ಲ, ಸಜ್ಜೀವ ಕೊಡುಗೆಗೆ ನಿಮ್ಮೊಂದಿಗೆ ಸಮಬಾಧ್ಯರು ಎಂದು ತಿಳಿದು ಅವರನ್ನು ಗೌರವಿಸಿರಿ. ಆಗ ನಿಮ್ಮ ಪ್ರಾರ್ಥನೆಗೆ ಅಡಚಣೆ ಉಂಟಾಗದು.


ಎಸ್ತೇರಳು ಮತ್ತೊಮ್ಮೆ, ಅವನನ್ನು ಮೊರ್ದೆಕೈಯ ಬಳಿಗೆ ಕಳುಹಿಸಿ,


ಹತಾಕನು, ಎಸ್ತೇರಳ ಈ ಸಂದೇಶವನ್ನು ಮೊರ್ದೆಕೈಗೆ ತಿಳಿಸಲು ಅವನು ಪುನಃ ಎಸ್ತೇರಳಿಗೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು