Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 5:2 - ಕನ್ನಡ ಸತ್ಯವೇದವು C.L. Bible (BSI)

2 ಪ್ರಾಕಾರದಲ್ಲಿ ನಿಂತಿದ್ದ ಎಸ್ತೇರ್‍ರಾಣಿಯನ್ನು ಅವನು ಕಂಡೊಡನೆ, ಆಕೆಯೆಡೆ ಮೆಚ್ಚುಗೆ ತೋರಿ ತನ್ನ ಕೈಯಲ್ಲಿದ್ದ ಸ್ವರ್ಣರಾಜದಂಡವನ್ನು ಆಕೆಯ ಕಡೆಗೆ ಚಾಚಿದನು. ಎಸ್ತೇರಳು ಸಮೀಪಕ್ಕೆ ಬಂದು ರಾಜದಂಡದ ತುದಿಯನ್ನು ಮುಟ್ಟಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವನು ಪ್ರಾಕಾರದಲ್ಲಿ ನಿಂತಿರುವ ಎಸ್ತೇರ್ ರಾಣಿಯನ್ನು ಕಂಡ ಕೂಡಲೆ ಆಕೆಯ ಮೇಲೆ ದಯವಿಟ್ಟು ತನ್ನ ಕೈಯಲ್ಲಿದ್ದ ಸುವರ್ಣದಂಡವನ್ನು ಆಕೆಯ ಕಡೆಗೆ ಚಾಚಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವನು ಪ್ರಾಕಾರದಲ್ಲಿ ನಿಂತಿರುವ ಎಸ್ತೇರ್ ರಾಣಿಯನ್ನು ಕಂಡ ಕೂಡಲೆ ಆಕೆಯ ಮೇಲೆ ದಯವಿಟ್ಟು ತನ್ನ ಕೈಯಲ್ಲಿದ್ದ ಸುವರ್ಣದಂಡವನ್ನು ಆಕೆಯ ಕಡೆಗೆ ಚಾಚಿದನು. ಎಸ್ತೇರಳು ಸಮೀಪಕ್ಕೆ ಹೋಗಿ ದಂಡದ ತುದಿಯನ್ನು ಮುಟ್ಟಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅರಸನು ಒಳಾಂಗಣದಲ್ಲಿ ನಿಂತಿದ್ದ ಎಸ್ತೇರಳನ್ನು ಕಂಡ ಕೂಡಲೇ ಆಕೆಯನ್ನು ಮೆಚ್ಚಿಕೊಂಡು ತನ್ನ ಕೈಯಲ್ಲಿದ್ದ ರಾಜದಂಡವನ್ನು ಆಕೆಯ ಕಡೆಗೆ ಚಾಚಿದನು. ಆಗ ಎಸ್ತೇರಳು ಒಳಾಂಗಣವನ್ನು ಪ್ರವೇಶಿಸಿ ರಾಜನ ಬಳಿ ಹೋದಳು ಮತ್ತು ರಾಜದಂಡದ ತುದಿಯನ್ನು ತನ್ನ ಬೆರಳಿನಿಂದ ಮುಟ್ಟಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅರಸನು ಪ್ರಾಕಾರದಲ್ಲಿ ನಿಂತಿರುವ ಎಸ್ತೇರ್ ರಾಣಿಯನ್ನು ಕಂಡ ಕೂಡಲೆ, ಆಕೆಗೆ ತನ್ನ ಮೆಚ್ಚುಗೆಯನ್ನು ತೋರಿ ತನ್ನ ಕೈಯಲ್ಲಿದ್ದ ಸ್ವರ್ಣದಂಡವನ್ನು ಎಸ್ತೇರಳ ಕಡೆಗೆ ಚಾಚಿದನು. ಎಸ್ತೇರಳು ಸಮೀಪಕ್ಕೆ ಬಂದು ರಾಜದಂಡದ ತುದಿಯನ್ನು ಮುಟ್ಟಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 5:2
9 ತಿಳಿವುಗಳ ಹೋಲಿಕೆ  

ಅರಸನು ತನ್ನ ಸ್ವರ್ಣದಂಡವನ್ನು ಆಕೆಯ ಕಡೆಗೆ ಚಾಚಲು, ಆಕೆ ಅವನ ಮುಂದೆ ಎದ್ದು ನಿಂತು,


“ಅರಸನು ಹೇಳಿಕಳುಹಿಸಿದ ಹೊರತು ಅವನ ಬಳಿಗೆ ಅರಮನೆಯ ಒಳಾಂಗಣಕ್ಕೆ ಹೋಗುವವರು ಮರಣದಂಡನೆಗೆ ಗುರಿಯಾಗುವರು ಎಂಬ ನಿಷೇಧಾಜ್ಞೆ ಸ್ತ್ರೀಪುರುಷರೆನ್ನದೆ ಎಲ್ಲರಿಗೂ ಅನ್ವಯಿಸುತ್ತದೆ. ಯಾರ ಕಡೆಗೆ ಅವನು ತನ್ನ ಸ್ವರ್ಣದಂಡವನ್ನು ಚಾಚುವನೋ ಅವರು ಮಾತ್ರ ಜೀವದಿಂದುಳಿಯುವರು. ಇದು ಅರಸನ ಎಲ್ಲಾ ಸೇವಕರಿಗೂ ಸಂಸ್ಥಾನಗಳ ಎಲ್ಲಾ ನಿವಾಸಿಗಳಿಗೂ ತಿಳಿದ ವಿಷಯ; ನನಗಂತೂ ಕಳೆದ ಮೂವತ್ತು ದಿನಗಳಿಂದ ಅರಸನ ಬಳಿಗೆ ಹೋಗುವುದಕ್ಕೆ ಆಮಂತ್ರಣವೇ ಬರಲಿಲ್ಲ,” ಎಂದು ತಿಳಿಸುವಂತೆ ಹೇಳಿದಳು.


ರಾಜನ ಹೃದಯ ಸರ್ವೇಶ್ವರನ ಕೈಯಲ್ಲಿ; ತಿರುಗಿಸಬಲ್ಲ ಆತ ಅದನ್ನು ನೀರಿನ ಕಾಲುವೆಯ ಪರಿ.


ಕೊರ್ನೇಲಿಯನು ಭಯದಿಂದ ದೇವದೂತನನ್ನು ದಿಟ್ಟಿಸಿನೋಡುತ್ತಾ, “ಏನು ಸ್ವಾಮಿ?” ಎಂದನು. ಅದಕ್ಕೆ ದೇವದೂತನು, “ನಿನ್ನ ಪ್ರಾರ್ಥನೆ ಮತ್ತು ದಾನಧರ್ಮ ದೇವರನ್ನು ಮುಟ್ಟಿವೆ. ಅವರು ನಿನ್ನನ್ನು ಮೆಚ್ಚಿದ್ದಾರೆ; ನಿನ್ನ ಕೋರಿಕೆಗಳನ್ನು ಈಡೇರಿಸಲಿದ್ದಾರೆ.


ಎಲ್ಲಾ ಆಪತ್ತು ವಿಪತ್ತುಗಳಿಂದ ಅವನನ್ನು ಪಾರುಮಾಡಿದರು. ಅವನು ಈಜಿಪ್ಟಿನ ಅರಸ ಫರೋಹನ ಆಸ್ಥಾನಕ್ಕೆ ಬಂದಾಗ ದೇವರು ಅವನಿಗೆ ಜ್ಞಾನಸಂಪನ್ನತೆಯನ್ನಿತ್ತು ಅರಸನ ಮೆಚ್ಚುಗೆಗೆ ಪಾತ್ರನಾಗುವಂತೆ ಅನುಗ್ರಹಿಸಿದರು. ಫರೋಹನು ಅವನನ್ನು ರಾಜ್ಯಪಾಲನನ್ನಾಗಿಯೂ ಅರಮನೆಯ ಮೇಲ್ವಿಚಾರಕನನ್ನಾಗಿಯೂ ನೇಮಿಸಿದನು.


ನನಗಿದೆ ಪ್ರಭುವಿನಲ್ಲಿ ಪ್ರೀತಿ I ಆಲಿಸಿಹನಾತ ನನ್ನ ವಿನಂತಿ II


ಎಸ್ತೇರಳು ಹೇಗೈಯನ ಮೆಚ್ಚುಗೆಯನ್ನು ಗಳಿಸಿ ಅವನ ದಯೆಗೆ ಪಾತ್ರಳಾದಳು. ಈ ಕಾರಣದಿಂದ ಅವನು ಆಕೆಗೆ ತಕ್ಕ ಸೌಂದರ್ಯವರ್ಧಕ ಲೇಪನದ್ರವ್ಯಗಳನ್ನು ಹಾಗು ಉತ್ತಮ ಭೋಜನಾಂಶವನ್ನು ಕೊಟ್ಟು, ಆಕೆಯನ್ನೂ ಆಕೆಯ ಸೇವೆಗೆ ಆರಿಸಿದ ಏಳುಮಂದಿ ದಾಸಿಯರನ್ನೂ ಅಂತಃಪುರದ ಉತ್ತಮ ಭಾಗದಲ್ಲಿರಿಸಿದನು.


ಸ್ವಾಮೀ, ಕೃಪೆಮಾಡಿ; ನಿಮ್ಮ ದಾಸನಾದ ನನ್ನ ಪ್ರಾರ್ಥನೆಗೂ ನಿಮ್ಮ ನಾಮಸ್ಮರಣೆಯಲ್ಲಿ ಆನಂದಿಸುವ ನಿಮ್ಮ ಭಕ್ತರ ಪ್ರಾರ್ಥನೆಗೂ ಕಿವಿಗೊಡಿ. ನಿಮ್ಮ ದಾಸನಾದ ನಾನು ಈ ದಿನ ಈ ಮನುಷ್ಯನ ದಯೆಗೆ ಪಾತ್ರನಾಗಿ ಕೃತಾರ್ಥನಾಗುವಂತೆ ಅನುಗ್ರಹಿಸಿ,” ಎಂದು ಬೇಡಿಕೊಂಡೆನು.


ಅವನು ಯಕೋಬನಿಗೆ, “ಇನ್ನು ಮೇಲೆ ನೀನು ಯಕೋಬ ಎನಿಸಿಕೊಳ್ಳುವುದಿಲ್ಲ; ದೇವರ ಸಂಗಡ ಹಾಗು ಮನುಷ್ಯರ ಸಂಗಡ ಹೋರಾಡಿ ಗೆದ್ದವನಾದ್ದರಿಂದ ನಿನಗೆ ‘ಇಸ್ರಾಯೇಲ್’ ಎಂದು ಹೆಸರುಂಟಾಗುವುದು,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು