Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 5:3 - ಕನ್ನಡ ಸತ್ಯವೇದವು C.L. Bible (BSI)

3 ಅರಸನು ಆಕೆಗೆ, “ಎಸ್ತೇರ್‍ರಾಣಿಯೇ, ನಿನ್ನ ಅಪೇಕ್ಷೆ ಏನು? ನಿನ್ನ ವಿಜ್ಞಾಪನೆ ಏನು? ನೀನು ನನ್ನ ರಾಜ್ಯದ ಅರ್ಧಭಾಗವನ್ನು ಕೇಳಿದರೂ ಸರಿ, ನಾನದನ್ನು ನಿನಗೆ ಕೊಡುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಎಸ್ತೇರಳು ಅರಸನ ಸಮೀಪಕ್ಕೆ ಹೋಗಿ ದಂಡದ ತುದಿಯನ್ನು ಮುಟ್ಟಿದಳು. ಆಗ ಅರಸನು ಆಕೆಗೆ, “ಎಸ್ತೇರ್ ರಾಣಿಯೇ, ನಿನಗೇನು ಬೇಕು? ನಿನ್ನ ವಿಜ್ಞಾಪನೆ ಯಾವುದು? ನನ್ನ ಅರ್ಧರಾಜ್ಯವನ್ನು ಕೇಳಿದರೂ ನಿನಗೆ ಕೊಡುತ್ತೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅರಸನು ಆಕೆಗೆ ಎಸ್ತೇರ್ ರಾಣಿಯೇ, ನಿನಗೇನು ಬೇಕು? ನಿನ್ನ ವಿಜ್ಞಾಪನೆ ಯಾವದು? ನನ್ನ ಅರ್ಧ ರಾಜ್ಯವನ್ನು ಕೇಳಿದರೂ ನಿನಗೆ ಕೊಡುತ್ತೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 “ಎಸ್ತೇರ್ ರಾಣಿಯೇ, ಯಾವುದು ನಿನ್ನ ಮನಸ್ಸನ್ನು ಭಾದಿಸುತ್ತದೆ? ನನ್ನನ್ನು ಏನು ಕೇಳಲು ಬಂದಿರುವಿ? ಕೇಳು, ನಾನು ನಿನಗೆ ಅರ್ಧ ರಾಜ್ಯವನ್ನು ಕೇಳಿದರೂ ಕೊಡುವೆನು” ಎಂದು ರಾಜನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಅರಸನು ಅವಳಿಗೆ, “ಎಸ್ತೇರ್ ರಾಣಿಯೇ, ನಿನ್ನ ವಿಜ್ಞಾಪನೆ ಏನು? ನಿನ್ನ ಬೇಡಿಕೆ ಏನು? ಅದು ನನ್ನ ರಾಜ್ಯದ ಅರ್ಧವಾಗಿದ್ದರೂ ಸರಿ, ನಾನು ಅದನ್ನು ನಿನಗೆ ಕೊಡುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 5:3
11 ತಿಳಿವುಗಳ ಹೋಲಿಕೆ  

ಆಗ ಅರಸ ಹೆರೋದನು ಅವಳಿಗೆ, “ನಿನಗೆ ಏನುಬೇಕಾದರೂ ಕೇಳು, ಕೊಡುತ್ತೇನೆ” ಎಂದನು. “ನೀನು ಏನು ಕೇಳಿಕೊಂಡರೂ ಸರಿ, ನನ್ನ ರಾಜ್ಯದಲ್ಲಿ ಅರ್ಧವನ್ನು ಕೇಳಿಕೊಂಡರೂ ಅದನ್ನು ನಿನಗೆ ಕೊಡುತ್ತೇನೆ,” ಎಂದು ಪ್ರಮಾಣ ಮಾಡಿದನು.


ಅರಸನು ಈ ಎರಡನೆಯ ದಿನದಲ್ಲೂ ದ್ರಾಕ್ಷಾರಸ ಪಾನಮಾಡುತ್ತಿರುವಾಗ ಎಸ್ತೇರಳಿಗೆ, “ಎಸ್ತೇರ್ ರಾಣಿಯೇ, ನಿನ್ನ ವಿಜ್ಞಾಪನೆ ಯಾವುದು ಹೇಳು; ಅದನ್ನು ನಾನು ನೆರವೇರಿಸುವೆನು. ನನ್ನ ರಾಜ್ಯದ ಅರ್ಧಭಾಗವನ್ನು ಕೇಳಿದರೂ ಸರಿ, ನಾನದನ್ನು ನಿನಗೆ ಕೊಡುವೆನು,” ಎನ್ನಲು


“ಯೆಹೂದ್ಯರು ಶೂಷನ್ ನಗರದಲ್ಲೇ ಐನೂರು ಮಂದಿಯನ್ನು, ಹಾಮಾನನ ಹತ್ತು ಮಕ್ಕಳನ್ನೂ ಸಂಹರಿಸಿಬಿಟ್ಟಿದ್ದಾರೆ. ಉಳಿದ ರಾಜಸಂಸ್ಥಾನಗಳಲ್ಲಿ ಇನ್ನೆಷ್ಟುಮಂದಿಯನ್ನು ಹತಮಾಡಿರಬಹುದೋ! ನಿನ್ನ ವಿಜ್ಞಾಪನೆ ಯಾವುದಿದ್ದರೂ ನೆರವೇರಿಸುವೆನು ಕೇಳು, ನೀನು ಏನು ಕೇಳಿದರೂ ಕೊಡುವೆನು ಹೇಳು,” ಎಂದನು.


ದ್ರಾಕ್ಷಾರಸ ಪಾನಮಾಡುತ್ತಿರುವಾಗ ಅರಸನು ಮತ್ತೊಮ್ಮೆ ಎಸ್ತೇರಳಿಗೆ, “ನಿನ್ನ ವಿಜ್ಞಾಪನೆ ಯಾವುದು ಹೇಳು. ನಾನದನ್ನು ನೆರವೇರಿಸುವೆನು. ನೀನು ನನ್ನ ರಾಜ್ಯದ ಅರ್ಧಭಾಗವನ್ನು ಕೇಳಿದರೂ ಸರಿ, ನಾನದನ್ನು ನಿನಗೆ ಕೊಡುವೆನು,” ಎನ್ನಲು


ದೇವರಾದ ಸರ್ವೇಶ್ವರ ಆ ರಾತ್ರಿ ಕನಸಿನಲ್ಲಿ ಅವನಿಗೆ ಕಾಣಿಸಿಕೊಂಡರು; “ನಿನಗೆ ಯಾವ ವರಬೇಕು ಕೇಳಿಕೋ,” ಎಂದು ಹೇಳಿದರು.


“ಒಂದು ಸಣ್ಣ ಬಿನ್ನಹವಿದೆ, ತಿರಸ್ಕರಿಸಬೇಡ,” ಎಂದು ಹೇಳಿದಳು. ಅರಸನು, “ತಾಯೇ, ಏನು ಬೇಕು, ಕೇಳಿ; ನಾನು ಆಗದು ಎನ್ನುವುದಿಲ್ಲ,” ಎಂದನು.


ಅವನು ಹತ್ತಿರಕ್ಕೆ ಬಂದಾಗ, “ನನ್ನಿಂದ ನಿನಗೇನಾಗಬೇಕು?” ಎಂದು ಕೇಳಲು ಅವನು, “ಸ್ವಾಮೀ, ನನಗೆ ಕಣ್ಣು ಕಾಣುವಂತೆ ಮಾಡಿ,” ಎಂದು ಪ್ರಾರ್ಥಿಸಿದನು.


ಪ್ರತ್ಯುತ್ತರವಾಗಿ ಎಸ್ತೇರಳು, “ಅರಸರ ಚಿತ್ತವಾದರೆ ನಾನು ತಮಗೋಸ್ಕರ ಸಿದ್ಧಮಾಡಿಸಿರುವ ಔತಣಕ್ಕೆ ತಾವು ಹಾಮಾನನೊಂದಿಗೆ ದಯಮಾಡಿಸಬೇಕು,” ಎಂದು ವಿನಂತಿಸಿದಳು.


ಆಗ ರಾಜ, “ನಿನ್ನ ಆಶೆಯೇನು?,” ಎಂದು ಕೇಳಿದನು. ನಾನು ಪರಲೋಕ ದೇವರನ್ನು ಪ್ರಾರ್ಥಿಸಿ, ಅವನಿಗೆ, “ರಾಜರ ಚಿತ್ತವಿರುವುದಾದರೆ,


ಆಗ ಸಹಸ್ರಾಧಿಪತಿ ಆ ಯುವಕನ ಕೈಹಿಡಿದು, ಪ್ರತ್ಯೇಕವಾಗಿ ಕರೆದುಕೊಂಡು ಹೋಗಿ, “ನೀನು ನನಗೆ ಹೇಳಬೇಕೆಂದು ಇರುವ ವಿಷಯವೇನು?” ಎಂದು ವಿಚಾರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು