Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 5:9 - ಕನ್ನಡ ಸತ್ಯವೇದವು C.L. Bible (BSI)

9 ಅಂದು ಹಾಮಾನನು ಹರ್ಷಭರಿತನಾಗಿ ಮನೆಗೆ ಹಿಂದಿರುಗುತ್ತಿರುವಾಗ ಮೊರ್ದೆಕೈ ತನಗೆ ಭಯಪಡದೆ, ತನ್ನ ಮುಂದೆ ಏಳದೆಯೂ ಅರಮನೆಯ ಹೆಬ್ಬಾಗಿಲಿನಲ್ಲಿ ಕುಳಿತುಕೊಂಡೇ ಇರುವುದನ್ನು ಕಂಡು ಅವನ ಮೇಲೆ ಕಡುಕೋಪಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆ ದಿನ ಹಾಮಾನನು ಆನಂದಲಹರಿಯಲ್ಲಿ ಮನೆಗೆ ಹೋಗುತ್ತಿರುವಾಗ ಮೊರ್ದೆಕೈಯು ತನಗೆ ಭಯಪಡದೆ, ತನ್ನ ಮುಂದೆ ಏಳದೆ ಅರಮನೆಯ ಹೆಬ್ಬಾಗಿಲಿನಲ್ಲಿ ಕುಳಿತಿರುವುದನ್ನು ಕಂಡು ಅವನ ಮೇಲೆ ಕೋಪಭರಿತನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆ ದಿನ ಹಾಮಾನನು ಆನಂದಲಹರಿಯಲ್ಲಿ ಮನೆಗೆ ಹೋಗುತ್ತಿರುವಾಗ ಮೊರ್ದೆಕೈಯು ತನಗೆ ಭಯಪಡದೆ ತನ್ನ ಮುಂದೆ ಏಳದೆ ಅರಮನೆಯ ಹೆಬ್ಬಾಗಲಿನಲ್ಲಿ ಕೂತಿರುವದನ್ನು ಕಂಡು ಅವನ ಮೇಲೆ ಕೋಪಭರಿತನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಹಾಮಾನನು ಹರ್ಷ ತುಂಬಿದವನಾಗಿ ರಾಜ ಸನ್ನಿಧಿಯಿಂದ ತನ್ನ ಮನೆಗೆ ತೆರಳಿದನು. ಆದರೆ ಹೆಬ್ಬಾಗಿಲ ಬಳಿಯಲ್ಲಿ ಮೊರ್ದೆಕೈಯನ್ನು ನೋಡಿದಾಗ ಅವನ ಮೇಲೆ ಹಾಮಾನನ ಕೋಪ ಉಕ್ಕಿ ಬಂತು. ಯಾಕೆಂದರೆ ಮೊರ್ದೆಕೈ ಹಾಮಾನನಿಗೆ ಯಾವ ಗೌರವವನ್ನೂ ಕೊಟ್ಟಿರಲಿಲ್ಲ ಮತ್ತು ಅವನಿಗೆ ಭಯಪಡಲಿಲ್ಲ. ಇದು ಹಾಮಾನನನ್ನು ಸಿಟ್ಟಿಗೇರುವಂತೆ ಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆ ದಿನದಲ್ಲಿ ಹಾಮಾನನು ಹರ್ಷಭರಿತನಾಗಿ ಹೊರಟುಹೋದನು. ಆದರೆ ಅರಮನೆಯ ಹೆಬ್ಬಾಗಿಲಲ್ಲಿರುವ ಮೊರ್ದೆಕೈ ತನಗೆ ಭಯಪಡದೆ ಕುಳಿತುಕೊಂಡೇ ಇರುವುದನ್ನು ಹಾಮಾನನು ಕಂಡು ಮೊರ್ದೆಕೈಯ ಮೇಲೆ ಕೋಪಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 5:9
19 ತಿಳಿವುಗಳ ಹೋಲಿಕೆ  

ಮೊರ್ದೆಕೈಯು ತನಗೆ ಬಾಗಿ ನಮಸ್ಕಾರ ಮಾಡದಿದ್ದುದನ್ನು ಕಂಡು ಹಾಮಾನನು ಅವನ ಮೇಲೆ ಕಡುಗೋಪಗೊಂಡನು.


ಜ್ಯೋತಿಷಿಗಳಿಂದ ತಾನು ವಂಚಿತನಾದೆ ಎಂದು ಅರಿತ ಹೆರೋದನು ರೋಷಾವೇಶಗೊಂಡನು. ಬೆತ್ಲೆಹೇಮಿಗೂ ಅದರ ಸುತ್ತಮುತ್ತಲಿಗೂ ಆಳುಗಳನ್ನು ಕಳುಹಿಸಿದನು. ತಾನು ಜ್ಯೋತಿಷಿಗಳಿಂದ ತಿಳಿದುಕೊಂಡಿದ್ದ ಕಾಲದ ಆಧಾರದ ಮೇಲೆ ಅಲ್ಲಿದ್ದ, ಎರಡು ವರ್ಷಗಳಿಗೆ ಮೀರದ, ಎಲ್ಲಾ ಗಂಡುಮಕ್ಕಳನ್ನು ಕೊಂದುಹಾಕಿಸಿದನು.


ನಿಮ್ಮ ಹೀನಸ್ಥಿತಿಗಾಗಿ ವ್ಯಥೆಪಡಿರಿ. ಕಣ್ಣೀರಿಟ್ಟು ಗೋಳಾಡಿರಿ. ನಗುವುದನ್ನು ಬಿಟ್ಟು ದುಃಖಿಸಿರಿ; ಸಂತೋಷವನ್ನು ಬಿಟ್ಟು ಶೋಕಿಸಿರಿ.


ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ; ನೀವು ಅತ್ತುಗೋಳಾಡುವಿರಿ; ಲೋಕವಾದರೋ ನಕ್ಕು ನಲಿದಾಡುವುದು. ನೀವು ದುಃಖಪಡುವಿರಿ. ಆದರೆ ನಿಮ್ಮ ದುಃಖ ಆನಂದವಾಗಿ ಮಾರ್ಪಡುವುದು.


ಈಗ ತಿಂದು ತೃಪ್ತಿಯಾಗಿರುವವರೇ, ನಿಮಗೆ ಧಿಕ್ಕಾರ! ನೀವು ಹಸಿದು ಬಳಲುವಿರಿ. ಈಗ ನಕ್ಕುನಲಿದಾಡುವವರೇ, ನಿಮಗೆ ಧಿಕ್ಕಾರ! ನೀವು ದುಃಖಿಸಿ ಗೋಳಾಡುವಿರಿ.


ನೆಬೂಕದ್ನೆಚ್ಚರನು ಉಗ್ರಕೋಪಗೊಂಡು ಶದ್ರಕ್, ಮೇಶಕ್, ಅಬೇದ್‍ನೆಗೋ ಎಂಬವರನ್ನು ಹಿಡಿದುತರಲು ಆಜ್ಞಾಪಿಸಿದನು.


ಸೇನೆ ಸಮೇತ ಶತ್ರು ಬಂದರೂ ಎದೆಗುಂದೆನು I ಸಮರಕ್ಕೆರಗಿದರೂ ನಾ ಭರವಸೆಯಿಂದಿರುವೆನು II


ಭ್ರಷ್ಟರನು ಧಿಕ್ಕರಿಸುವನು, ಭಕ್ತರನು ಗೌರವಿಸುವನು I ನಷ್ಟವಾದರೂ ಕೊಟ್ಟ ಮಾತನು ತಪ್ಪನವನು II


‘ಆತ ಬಡಿಸಿದ ಭೋಜನದಿಂದ ತೃಪ್ತರಾಗದವರು ಎಲ್ಲಾದರೂ ಉಂಟೆ?’ ಎಂದು ನನ್ನ ಗುಡಾರದ ಆಳುಗಳೇ ಹೇಳಿಕೊಳ್ಳುತ್ತಿದ್ದರಲ್ಲವೆ?


ದುಷ್ಟನ ಜಯಘೋಷ ಅಲ್ಪಕಾಲದ್ದು ಭ್ರಷ್ಟನ ಉಲ್ಲಾಸ ಕ್ಷಣಿಕವಾದದ್ದು.


ಅರಸನ ಆಜ್ಞಾನುಸಾರ ಅರಮನೆಯಲ್ಲಿದ್ದ ಪರಿಚಾರಕರೆಲ್ಲರೂ ಅವನಿಗೆ ನಮಸ್ಕರಿಸುತ್ತಿದ್ದರು. ಆದರೆ ಮೊರ್ದೆಕೈ ಮಾತ್ರ ಹಾಗೆ ಮಾಡುತ್ತಿರಲಿಲ್ಲ.


ಕನ್ಯೆಯರನ್ನು ಎರಡನೆಯ ಸಾರಿ ಕೂಡುಸುವಾಗ, ಮೊರ್ದೆಕೈ ಅರಮನೆಯ ಹೆಬ್ಬಾಗಿಲಿನಲ್ಲಿ ಕುಳಿತುಕೊಂಡಿದ್ದನು.


ಪಿತ್ರಾರ್ಜಿತ ಸೊತ್ತನ್ನು ನಿನಗೆ ಕೊಡುವುದಿಲ್ಲವೆಂದು ನಾಬೋತನು ಹೇಳಿದ್ದರಿಂದ ಅಹಾಬನು ಸಿಟ್ಟುಗೊಂಡನು; ಗಂಟುಮೋರೆ ಮಾಡಿಕೊಂಡು ಮನೆಗೆ ಹೋಗಿ, ಊಟಮಾಡಲೊಲ್ಲದೆ ಮಂಚದ ಮೇಲೆ ಮಲಗಿ, ಗೋಡೆಯ ಕಡೆಗೆ ಮುಖ ತಿರುಗಿಸಿಕೊಂಡನು.


ಸ್ತೇಫನನ ಮಾತುಗಳನ್ನು ಕೇಳಿದ ನ್ಯಾಯಸಭೆಯ ಸದಸ್ಯರು ಅವನ ಮೇಲೆ ಕೋಪೋದ್ರಿಕ್ತರಾದರು. ಕಟಕಟನೆ ಹಲ್ಲುಕಡಿದರು.


ದೇಹವನ್ನು ಕೊಂದು ಹಾಕುವವರಿಗೆ ಭಯಪಡಬೇಡಿ; ಏಕೆಂದರೆ, ಅವರಿಂದ ಆತ್ಮವನ್ನು ಕೊಲ್ಲಲು ಆಗದು. ಆದರೆ ದೇಹಾತ್ಮಗಳೆರಡನ್ನೂ ನರಕದಲ್ಲಿ ನಾಶಮಾಡಬಲ್ಲ ದೇವರಿಗೆ ಭಯಪಡಿ.


ಆದರೂ ಯೆಹೂದ್ಯನಾದ ಮೊರ್ದೆಕೈ ಅರಮನೆಯ ಬಾಗಿಲಿನಲ್ಲಿ ತನ್ನ ಕಣ್ಣೆದುರು ಕುಳಿತಿರುವವರೆಗೂ ತನಗೆ ಯಾವ ಪ್ರಯೋಜನವೂ ಇಲ್ಲವೆಂದು ಹೇಳಿದನು.


ಅವನು, “ನಾನು ಜೆಸ್ರೀಲಿನವನಾದ ನಾಬೋತನಿಗೆ, ‘ನಿನ್ನ ದ್ರಾಕ್ಷೀತೋಟವನ್ನು ನನಗೆ ಮಾರಿಬಿಡು; ಹಣ ಬೇಡವಾದರೆ ನಿನಗೆ ಬೇರೊಂದು ದ್ರಾಕ್ಷೀತೋಟವನ್ನು ಕೊಡುತ್ತೇನೆ ಎಂದು ಹೇಳಿದೆ; ಆದರೆ ಅವನು ಕೊಡುವುದಿಲ್ಲ ಎಂದುಬಿಟ್ಟ,” ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು