Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 6:1 - ಕನ್ನಡ ಸತ್ಯವೇದವು C.L. Bible (BSI)

1 ಆ ರಾತ್ರಿ ಅರಸನಿಗೆ ನಿದ್ದೆಯೇ ಬರಲಿಲ್ಲ. ಆದ್ದರಿಂದ, ಸ್ಮರಿಸತಕ್ಕ ಪೂರ್ವ ಘಟನೆಗಳನ್ನು ಬರೆದಿಟ್ಟಿದ್ದ ಗ್ರಂಥವನ್ನು ತರಿಸಿ, ಅದನ್ನು ಪಾರಾಯಣ ಮಾಡಿಸುತ್ತಿದ್ದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆ ರಾತ್ರಿಯಲ್ಲಿ ಅರಸನಿಗೆ ನಿದ್ರೆಬರಲಿಲ್ಲ; ಆದುದರಿಂದ ಅವನು ಪೂರ್ವ ಘಟನೆಗಳ ಗ್ರಂಥವನ್ನು ತರಲು ಸೇವಕರಿಗೆ ಅಪ್ಪಣೆಮಾಡಿ ಅದನ್ನು ಪಾರಾಯಣಮಾಡಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆ ರಾತ್ರಿಯಲ್ಲಿ ಅರಸನಿಗೆ ನಿದ್ರೆ ಬರಲಿಲ್ಲ; ಆದದರಿಂದ ಸ್ಮರಿಸತಕ್ಕ ಪೂರ್ವವೃತ್ತಾಂತಗಳ ಗ್ರಂಥವನ್ನು ಅವನು ತರಿಸಿ ಪಾರಾಯಣಮಾಡಿಸುತ್ತಿರುವಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆ ರಾತ್ರಿ ಅರಸನಿಗೆ ನಿದ್ರಿಸಲಾಗಲಿಲ್ಲ. ಒಬ್ಬ ಸೇವಕನನ್ನು ಕರೆದು ರಾಜಕಾಲವೃತ್ತಾಂತ ಪುಸ್ತಕವನ್ನು ತರಹೇಳಿ ಅವನಿಂದ ಅದನ್ನು ಓದಿಸಿದನು. (ಈ ಪುಸ್ತಕದಲ್ಲಿ ಅರಸರ ರಾಜ್ಯ ಆಳ್ವಿಕೆಯಲ್ಲಿ ನಡೆದ ಘಟನೆಗಳು ಲಿಖಿತವಾಗಿರುತ್ತದೆ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆ ರಾತ್ರಿ ಅರಸನಿಗೆ ನಿದ್ರೆ ಬರಲಿಲ್ಲ. ಆದ್ದರಿಂದ ಅರಸನು ಇತಿಹಾಸ ಘಟನೆಗಳನ್ನು ಬರೆದಿಟ್ಟಿದ್ದ ಗ್ರಂಥವನ್ನು ತೆಗೆದುಕೊಂಡು ಬರಲು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 6:1
12 ತಿಳಿವುಗಳ ಹೋಲಿಕೆ  

ಬಳಿಕ ರಾಜನು ಅರಮನೆಗೆ ಹಿಂದಿರುಗಿದನು. ಆ ರಾತ್ರಿಯೆಲ್ಲಾ ಉಪವಾಸವಿದ್ದನು. ವಾದ್ಯ ವಿನೋದಾವಳಿ ಯಾವುದನ್ನೂ ಹತ್ತಿರಬರಲು ಬಿಡಲಿಲ್ಲ. ನಿದ್ರೆ ಅವನ ಕಣ್ಣುಗಳಿಂದ ಮಾಯವಾಯಿತು.


ನೆಬೂಕದ್ನೆಚ್ಚರನು ತನ್ನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಒಂದು ಕನಸು ಕಂಡು ತತ್ತರಗೊಂಡನು. ಅವನಿಗೆ ನಿದ್ರೆ ತಪ್ಪಿತು.


ಈ ವಿಷಯ ವಿಚಾರಣೆಗೆ ಬಂದು ಅದು ಸತ್ಯಸಂಗತಿಯೆಂದು ರುಜುವಾತು ಆಗಲು, ಆ ಇಬ್ಬರು ಪಿತೂರಿಗಾರರನ್ನು ಗಲ್ಲಿಗೇರಿಸಲಾಯಿತು. ಈ ಸಂಗತಿಯನ್ನು ರಾಜನ ದಿನಚರಿಯ ಪುಸ್ತಕದಲ್ಲಿ ಬರೆದಿಡಲಾಯಿತು.


ದೇವರ ಸಿರಿಸಂಪತ್ತು, ಜ್ಞಾನವಿಜ್ಞಾನ ಎಷ್ಟು ಅಗಾಧ! ಪರಿಶೋಧನೆಗೂ ನಿಲುಕದ ಅವರ ನಿರ್ಣಯ ಎಷ್ಟು ಅಗಮ್ಯ! ಅವರ ನಿಯೋಜನೆಗಳು ಗ್ರಹಿಕೆಗೂ ಎಷ್ಟು ಅಸಾಧ್ಯ!


ದೀನದರಿದ್ರರು ನೀರಿಗಾಗಿ ಪರದಾಡುವಾಗ ಬಾಯಾರಿ ಅವರ ನಾಲಿಗೆ ಒಣಗಿಹೋದಾಗ ಪ್ರಸನ್ನನಾಗುವೆ ಸರ್ವೇಶ್ವರನಾದ ನಾನೇ. ಇಸ್ರಯೇಲಿನ ದೇವರಾದ ನಾನವರನ್ನು ಕೈಬಿಡುವೆನೆ?


ಅವನ ಶಕ್ತಿಸಾಮರ್ಥ್ಯದ ಸಾಹಸಕಾರ್ಯಗಳೆಲ್ಲವು ಹಾಗೂ ಅರಸನು ಮೊರ್ದೆಕೈಯನ್ನು ಅತ್ಯುನ್ನತ ಗೌರವಸ್ಥಾನಕ್ಕೆ ಏರಿಸಿದ್ದನ್ನು ಕುರಿತ ಪೂರ್ಣ ವಿವರವು ಮೇದ್ಯ ಮತ್ತು ಪರ್ಷಿಯ ದೇಶಗಳ ಅರಸರ ವೃತ್ತಾಂತಗ್ರಂಥದಲ್ಲಿ ಬರೆಯಲಾಗಿವೆ.


ಆ ಸ್ಥಳಕ್ಕೆ “ಯೆಹೋವ ಯೀರೆ" ಎಂದು ಹೆಸರಿಟ್ಟ.


ಇಂಥ ಮಾತುಗಳನ್ನು ಕೇಳಿ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರು ತಮ್ಮ ತಮ್ಮಲ್ಲೇ ಮಾತನಾಡಿಕೊಂಡರು. ಸರ್ವೇಶ್ವರ ಅವರಿಗೆ ಕಿವಿಗೊಟ್ಟು ಆಲಿಸಿದರು. ಭಯಭಕ್ತಿಯಿಂದ ತಮ್ಮ ನಾಮಸ್ಮರಣೆ ಮಾಡುವವರ ಹೆಸರುಗಳನ್ನು ತಮ್ಮ ಮುಂದಿದ್ದ ದಾಖಲೆ ಪುಸ್ತಕದಲ್ಲಿ ಬರೆಸಿದರು.


ನಾನು ತಮಗೋಸ್ಕರ ಮಾಡಿಸಲಿರುವ ಔತಣಕ್ಕೆ ನಾಳೆಯೂ ಹಾಮಾನನೊಂದಿಗೆ ದಯಮಾಡಿಸಬೇಕು. ಆಗ ತಾವು ಹೇಳಿದಂತೆ ನಾನು ಮಾಡುವೆನು. ಇದೇ ನನ್ನ ದೈನ್ಯ ಮನವಿ,” ಎಂದು ಉತ್ತರವಿತ್ತಳು.


ಈ ವಿಷಯ ಮೊರ್ದೆಕೈಗೆ ತಿಳಿದುಬಂದಾಗ, ಆತನು ಎಸ್ತೇರಳಿಗೆ ತಿಳಿಸಿದನು. ರಾಣಿಯು ಅವನ ಹೆಸರನ್ನು ಅರಸನಿಗೆ ಹೇಳಿ ಅವರು ನಡೆಸುತ್ತಿದ್ದ ಆ ಪಿತೂರಿ ಬಗ್ಗೆ ತಿಳಿಸಿದಳು.


ಆ ದಿನಗಳಲ್ಲಿ ಮೊರ್ದೆಕೈ, ಎಂದಿನಂತೆ ಅರಮನೆಯ ಹೆಬ್ಬಾಗಿಲಿನಲ್ಲಿ ಕುಳಿತುಕೊಂಡಿದ್ದಾಗ ದ್ವಾರಪಾಲಕರಾದ ಬಿಗೆತಾನ್ ಮತ್ತು ತೆರೆಷ್ ಎಂಬಿಬ್ಬರು ರಾಜಕಂಚುಕಿಗಳು ಅರಸನ ವಿರುದ್ಧ ಕೈಯೆತ್ತಬೇಕು ಎಂದು ಒಳಸಂಚು ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು