Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 6:10 - ಕನ್ನಡ ಸತ್ಯವೇದವು C.L. Bible (BSI)

10 ಕೂಡಲೆ ಅರಸನು ಹಾಮಾನನಿಗೆ, “ನೀನು ಹೇಳಿದ ಪ್ರಕಾರವೇ ಬೇಗನೆ ಹೋಗಿ ರಾಜವಸ್ತ್ರಗಳನ್ನೂ ಪಟ್ಟದ ಕುದುರೆಯನ್ನೂ ತೆಗೆದುಕೊಂಡು ಅರಮನೆಯ ಬಾಗಿಲಲ್ಲಿ ಕುಳಿತಿರುವ ಮೊರ್ದೆಕೈ ಎಂಬ ಯೆಹೂದ್ಯನಿಗೆ ಹಾಗೆಯೇ ಮಾಡು. ನೀನು ಸಲಹೆ ಮಾಡಿದವುಗಳಲ್ಲಿ ಒಂದನ್ನೂ ಬಿಡದೆ, ಚಾಚೂತಪ್ಪದೆ ನೆರವೇರಿಸು,” ಎಂದು ಅಪ್ಪಣೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಕೂಡಲೆ ಅರಸನು ಹಾಮಾನನಿಗೆ, “ನೀನು ಹೇಳಿದ ವಸ್ತ್ರಗಳನ್ನೂ ಮತ್ತು ಕುದುರೆಯನ್ನೂ ಬೇಗನೆ ತೆಗೆದುಕೊಂಡು ಬಂದು ಅರಮನೆಯ ಬಾಗಿಲಿನಲ್ಲಿ ಕುಳಿತುಕೊಂಡಿರುವ ಮೊರ್ದೆಕೈ ಎಂಬ ಯೆಹೂದ್ಯನಿಗೆ ಹಾಗೆಯೇ ಮಾಡು; ನೀನು ಹೇಳಿದವುಗಳಲ್ಲಿ ಒಂದನ್ನೂ ನೆರವೇರಿಸದೆ ಬಿಡಬೇಡ” ಎಂದು ಅಪ್ಪಣೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಕೂಡಲೆ ಅರಸನು ಹಾಮಾನನಿಗೆ - ನೀನು ಹೇಳಿದ ವಸ್ತ್ರಗಳನ್ನೂ ಕುದುರೆಯನ್ನೂ ಬೇಗನೆ ತೆಗೆದುಕೊಂಡು ಬಂದು ಅರಮನೆಯ ಬಾಗಲಿನಲ್ಲಿ ಕೂತಿರುವ ಮೊರ್ದೆಕೈ ಎಂಬ ಯೆಹೂದ್ಯನಿಗೆ ಹಾಗೆಯೇ ಮಾಡು; ನೀನು ಹೇಳಿದವುಗಳಲ್ಲಿ ಒಂದನ್ನೂ ನೆರವೇರಿಸದೆ ಬಿಡಬೇಡ ಎಂದು ಅಪ್ಪಣೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “ಈಗಲೇ,” ಅರಸನು ಹಾಮಾನನಿಗೆ ಆಜ್ಞೆಕೊಟ್ಟು “ಈಗಲೇ ಹೋಗಿ ರಾಜವಸ್ತ್ರಗಳನ್ನೂ ರಾಜನ ಕುದುರೆಯನ್ನೂ ಕೊಂಡುಹೋಗಿ ಯೆಹೂದ್ಯನಾದ ಮೊರ್ದೆಕೈಗೆ ನೀನು ಹೇಳಿದ ಪ್ರಕಾರವೆ ಮಾಡು. ಮೊರ್ದೆಕೈ ಅರಮನೆಯ ಹೆಬ್ಬಾಗಿಲ ಬಳಿಯಲ್ಲಿ ಕುಳಿತುಕೊಂಡಿರುತ್ತಾನೆ. ನಿನ್ನ ಸಲಹೆಯಂತೆಯೇ ಎಲ್ಲವನ್ನೂ ಮಾಡು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ಅರಸನು ಹಾಮಾನನಿಗೆ, “ನೀನು ಹೇಳಿದ ಪ್ರಕಾರವೇ ಬೇಗನೆ ಹೋಗಿ ರಾಜವಸ್ತ್ರಗಳನ್ನೂ ಪಟ್ಟದ ಕುದುರೆಯನ್ನೂ ತೆಗೆದುಕೊಂಡು ಅರಮನೆಯ ಹೆಬ್ಬಾಗಿಲಲ್ಲಿ ಕುಳಿತಿರುವ ಯೆಹೂದ್ಯನಾದ ಮೊರ್ದೆಕೈಗೆ ಹಾಗೆಯೇ ಮಾಡು. ನೀನು ಸಲಹೆಮಾಡಿದ್ದರಲ್ಲಿ ಒಂದನ್ನೂ ಬಿಡದೆ, ಎಲ್ಲವನ್ನೂ ಮಾಡು,” ಎಂದು ಹಾಮಾನನಿಗೆ ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 6:10
7 ತಿಳಿವುಗಳ ಹೋಲಿಕೆ  

ಅಹಂಭಾವದಿಂದಾಕೆ ಮೆರೆದುದಕೆ ಪೀಡಿಸಿ ಕಾಡಿಸಿರಿ ಸರಿಯಾದ ಅಳತೆಯಲ್ಲೇ. ಹೃದಯದಲಿ ಹೇಳುತಿಹಳು ಅವಳಿಂತು : ರಾಣಿಯಂತೆ ನಾ ಕುಳಿತಿಹೆನು ವಿಧವೆಯಲ್ಲ ನಾನೇನು ಕಾಣೆನೆಂದಿಗೂ ದುಃಖವನು.


ಅಂತೆಯೇ, ತನ್ನನ್ನು ತಾನೇ ಮೇಲಕ್ಕೆ ಏರಿಸಿಕೊಳ್ಳುವವನನ್ನು ದೇವರು ಕೆಳಗಿಳಿಸುವರು; ತನ್ನನ್ನು ತಾನೇ ತಗ್ಗಿಸಿಕೊಳ್ಳುವವನನ್ನು ದೇವರು ಮೇಲಕ್ಕೇರಿಸುವರು,” ಎಂದರು.


ನೆಬೂಕದ್ನೆಚ್ಚರನಾದ ನಾನು ಪರಲೋಕ ರಾಜನನ್ನು ಹೊಗಳಿ, ಕೊಂಡಾಡಿ, ಕೀರ್ತಿಸುತ್ತೇನೆ: ಆತನ ಕಾರ್ಯಗಳೆಲ್ಲವು ಸತ್ಯ, ಆತನ ಮಾರ್ಗಗಳೆಲ್ಲವು ನ್ಯಾಯ, ಗರ್ವಿಷ್ಠರನ್ನು ಆತ ತಗ್ಗಿಸಬಲ್ಲ.


ಇಗೋ, ಅಹಾಬನ ಮನೆಯವರನ್ನುಕುರಿತು ಸರ್ವೇಶ್ವರ ಹೇಳಿದ ಮಾತುಗಳೆಲ್ಲಾ ತಪ್ಪದೆ ನೆರವೇರುವುದೆಂದು ತಿಳಿದುಕೊಳ್ಳಿರಿ. ಸರ್ವೇಶ್ವರ ತಮ್ಮ ದಾಸನಾದ ಎಲೀಯನ ಮುಖಾಂತರ ಹೇಳಿದ್ದನ್ನು ನೆರವೇರಿಸಿದ್ದಾರಷ್ಟೇ,” ಎಂದು ಹೇಳಿದನು.


ಆ ವಸ್ತ್ರಗಳನ್ನೂ ಕುದುರೆಯನ್ನೂ ಅರಸನ ಪ್ರಧಾನ ಸವಾರರಲ್ಲೊಬ್ಬನ ವಶಕ್ಕೆ ಕೊಡಬೇಕು; ಇವನು, ಅರಸನು ಸನ್ಮಾನಿಸಬೇಕೆಂದಿರುವ ವ್ಯಕ್ತಿಗೆ ರಾಜವಸ್ತ್ರಗಳನ್ನು ತೊಡಿಸಿ, ಕುದುರೆಯ ಮೇಲೆ ಕೂರಿಸಿ ಪಟ್ಟಣದ ರಾಜಬೀದಿಗಳಲ್ಲಿ ಮೆರವಣಿಗೆಮಾಡಿಸುತ್ತಾ, ಅವನ ಮುಂದೆ ‘ಅರಸನು ಸನ್ಮಾನಿಸಬೇಕೆಂದಿರುವ ವ್ಯಕ್ತಿಯನ್ನು ಗೌರವಿಸುವ ರೀತಿ ಇದೇ’ ಎಂದು ಪ್ರಕಟಿಸಬೇಕು,” ಎಂದನು.


ಬೇರೆ ವಿಧಿಯಿಲ್ಲದೆ ಹಾಮಾನನು ಹೊರಟು ಆ ವಸ್ತ್ರಗಳನ್ನು, ಕುದುರೆಯನ್ನು ತೆಗೆದುಕೊಂಡು ಮೊರ್ದೆಕೈಗೆ ಆ ವಸ್ತ್ರಗಳನ್ನು ತೊಡಿಸಿ, ಅವನನ್ನು ಕುದುರೆಯ ಮೇಲೆ ಕೂರಿಸಿ ಪಟ್ಟಣದ ರಾಜಬೀದಿಗಳಲ್ಲಿ ಮೆರವಣಿಗೆ ಮಾಡಿಸಿ ಅವನ ಮುಂದೆ, “ಅರಸನು ಸನ್ಮಾನಿಸಬೇಕೆಂದಿರುವ ವ್ಯಕ್ತಿಯನ್ನು ಗೌರವಿಸುವ ರೀತಿ ಇದೇ,” ಎಂದು ಪ್ರಕಟಪಡಿಸಿದನು.


ಪ್ರಭುವಿಗಾಗಿ ಕಾದಿಹ ಜನರೆ, ನಿಮಗಿರಲಿ ಅಭಯ I ಧೈರ್ಯದಿಂದಿರಲಿ ನಿರುತ ನಿಮ್ಮೆಲ್ಲರ ಹೃದಯ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು