Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 6:13 - ಕನ್ನಡ ಸತ್ಯವೇದವು C.L. Bible (BSI)

13 ತನ್ನ ಪತ್ನಿ ಜೆರೆಷಳಿಗೂ ಎಲ್ಲಾ ಆಪ್ತರಿಗೂ ತನಗೆ ಸಂಭವಿಸಿದುದನ್ನೆಲ್ಲಾ ವರದಿಮಾಡಿದನು. ಆಗ ಅವನ ಪಂಡಿತರೂ ಪತ್ನಿಯೂ ಅವನಿಗೆ, “ಯಾವನಿಂದ ನಿಮ್ಮ ಪತನವು ಪ್ರಾರಂಭವಾಯಿತೋ ಆ ವ್ಯಕ್ತಿ ಒಂದು ವೇಳೆ ಯೆಹೂದ್ಯನಾಗಿದ್ದರೆ, ನೀವು ಅವನನ್ನೆಂದಿಗೂ ಜಯಿಸಲಾರಿರಿ. ಅವನ ಮುಂದೆ ಬಿದ್ದು ಹಾಳಾಗುವಿರಿ,” ಎಂದು ಎಚ್ಚರವಿತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಗ ಅವನ ಪಂಡಿತರೂ ಮತ್ತು ಹೆಂಡತಿಯೂ ಅವನಿಗೆ, “ಯಾವನ ಮುಂದೆ ನಿನ್ನ ಸೋಲು ಪ್ರಾರಂಭವಾಯಿತೋ ಆ ಮನುಷ್ಯನು ಯೆಹೂದ ಸಂತಾನದವನಾಗಿದ್ದರೆ ನೀನು ಗೆಲ್ಲಲಾರಿ, ಅವನ ಮುಂದೆ ಬಿದ್ದು ಹಾಳಾಗುವಿ” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ತನ್ನ ಹೆಂಡತಿಯಾದ ಜೆರೆಷಳ ಮತ್ತು ಎಲ್ಲಾ ಆಪ್ತರ ಮುಂದೆ ತನಗೆ ಸಂಭವಿಸಿದ್ದನ್ನೆಲ್ಲಾ ತಿಳಿಸಿದನು. ಆಗ ಅವನ ಪಂಡಿತರೂ ಹೆಂಡತಿಯೂ ಅವನಿಗೆ - ಯಾವನ ಮುಂದೆ ನಿನ್ನ ಪತನವು ಪ್ರಾರಂಭವಾಯಿತೋ ಆ ಮನುಷ್ಯನು ಯೆಹೂದಸಂತಾನದವನಾಗಿದ್ದರೆ ನೀನು ಗೆಲ್ಲಲಾರಿ, ಅವನ ಮುಂದೆ ಬಿದ್ದು ಹಾಳಾಗುವಿ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ತನ್ನ ಹೆಂಡತಿ ಜೆರೆಷಳಿಗೂ ಮತ್ತು ತನಗೆ ಸಲಹೆ ಕೊಟ್ಟಿದ್ದ ಮಿತ್ರವೃಂದದವರಿಗೂ ನಡೆದ ವಿಷಯ ತಿಳಿಸಿದನು. ಆಗ ಅವರು ತಿಳಿಸಿದ್ದೇನೆಂದರೆ: “ಮೊರ್ದೆಕೈಯು ಯೆಹೂದ್ಯನಾಗಿದ್ದರೆ ನೀನು ಜಯಗಳಿಸುವುದಿಲ್ಲ. ಈಗಲೇ ನೀನು ಸೋಲುತ್ತಿರುವಿ. ನಿಜವಾಗಿಯೂ ನೀನೇ ನಾಶವಾಗುವಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆಗ ಹಾಮಾನನು ತನ್ನ ಹೆಂಡತಿಯಾದ ಜೆರೆಷಳಿಗೂ ತನ್ನ ಸಮಸ್ತ ಸ್ನೇಹಿತರಿಗೂ ತನಗೆ ಆದದ್ದನ್ನೆಲ್ಲಾ ವಿವರವಾಗಿ ಹೇಳಿದನು. ಆಗ ಅವನ ಸಲಹೆಗಾರರೂ ಹೆಂಡತಿಯಾದ ಜೆರೆಷಳೂ ಅವನಿಗೆ, “ಯಾವನ ಮುಂದೆ ನಿನ್ನ ಬೀಳುವಿಕೆ ಪ್ರಾರಂಭವಾಯಿತೋ, ಆ ಮೊರ್ದೆಕೈ ಯೆಹೂದ್ಯನಾಗಿದ್ದರೆ ನೀನು ಅವನನ್ನು ಜಯಿಸಲಾರೆ. ನಿಶ್ಚಯವಾಗಿ, ನೀನು ಅವನಿಂದ ನಾಶವಾಗುವಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 6:13
16 ತಿಳಿವುಗಳ ಹೋಲಿಕೆ  

ಸನ್ಮಾರ್ಗಿಗಳಿಗೆ ಸಂರಕ್ಷಣೆ, ದುರ್ಮಾರ್ಗಿಗಳಿಗೆ ಪತನ ತಟ್ಟನೆ.


ಬುದ್ಧಿವಂತನು ಈ ಮಾತುಗಳನ್ನು ಗ್ರಹಿಸಿಕೊಳ್ಳಲಿ. ವಿವೇಕಿಯು ಈ ನುಡಿಗಳನ್ನು ಅರ್ಥಮಾಡಿಕೊಳ್ಳಲಿ. ಸರ್ವೇಶ್ವರಸ್ವಾಮಿಯ ಮಾರ್ಗಗಳು ನೇರವಾದವುಗಳು. ಸನ್ಮಾರ್ಗಿಗಳು ಅವುಗಳನ್ನು ಕೈಗೊಂಡು ನಡೆಯುವರು. ದುರ್ಮಾರ್ಗಿಗಳು ಅವುಗಳನ್ನು ಕೈಬಿಟ್ಟು ಮುಗ್ಗರಿಸಿ ಬೀಳುವರು.


ಬೆಳಿಗ್ಗೆ ಅವನ ಮನಸ್ಸು ಕಳವಳಗೊಂಡು ಇತ್ತು. ಈಜಿಪ್ಟ್ ದೇಶದ ಎಲ್ಲ ಜೋಯಿಸರನ್ನೂ ವಿದ್ವಾಂಸರನ್ನೂ ಬರಮಾಡಿದ. ಅವರಿಗೆ ತನ್ನ ಕನಸನ್ನು ವಿವರಿಸಿದ. ಅದರ ಅರ್ಥವನ್ನು ಅವನಿಗೆ ಹೇಳಬಲ್ಲವರು ಯಾರೂ ಸಿಕ್ಕಲಿಲ್ಲ.


ಇನ್ನು ಮೂರು ದಿನದೊಳಗೆ ಫರೋಹನು ನಿನ್ನ ಕುತ್ತಿಗೆಗೆ ನೇಣುಹಾಕಿಸುವನು; ಮರಕ್ಕೆ ತೂಗುಹಾಕಿಸುವನು; ಹಕ್ಕಿಗಳು ಬಂದು ನಿನ್ನ ಮಾಂಸವನ್ನು ತಿಂದುಬಿಡುವುವು,” ಎಂದನು.


ಇದನ್ನು ಕೇಳಿ ರಾಜನು ಉಗ್ರಕೋಪಗೊಂಡನು. ಬಾಬಿಲೋನಿನ ಸಕಲ ವಿದ್ವಾಂಸರನ್ನು ಕೊಲ್ಲಬೇಕೆಂದು ಆಜ್ಞಾಪಿಸಿದನು.


“ಇಂಥ ಎಷ್ಟೋ ಮಾತುಗಳನ್ನು ಕೇಳಿದ್ದೇನೆ ನೀವೆಲ್ಲರು ಆದರಿಸುವವರಲ್ಲ, ಬಾಧಿಸುವವರೇ.


ಸಂಕಟ - ಪೇಚಾಟ ಅವನನ್ನು ಕಾಡುತ್ತಿರುತ್ತವೆ ಯುದ್ಧಸನ್ನದ್ಧ ರಾಜರಂತೆ ಅವನಿಗೆ ಸೋಲನು ತರುತ್ತವೆ.


ಆ ಸೇವಕನು ತಾನು ಮಾಡಿದ ಕಾರ್ಯಗಳನ್ನೆಲ್ಲ ಇಸಾಕನಿಗೆ ವರದಿ ಮಾಡಿದನು.


ಕಾಲು ಮಡಚಿ ಹೊಂಚುಕೂತ ಸಿಂಹದಂತಿದೆ ಆ ಜನಾಂಗ; ಕೆಣಕಲು ಯಾರಿಂದಾದೀತು, ಅದು ಮೃಗೇಂದ್ರನಿಗೆ ಸಮಾನ!


ಬರಿದಾದ ಭೀಕರ ಮರುಭೂಮಿಯಲಿ ಅವರನು ಕಂಡು ಕಣ್ಣಗುಡ್ಡೆಯಂತೆ ಕಾಪಾಡಿದ ಪ್ರೀತಿಯಿಂದವರನು ಅಪ್ಪಿಕೊಂಡು.


“ನಾನಭಿಷೇಕಿಸಿದವರನಿದೋ ಮುಟ್ಟಬೇಡಿ I ನನ್ನ ಪ್ರವಾದಿಗಳಿಗೆ ಕೇಡು ಮಾಡಬೇಡಿ” II


ಪವಿತ್ರಭೂಮಿಯಲ್ಲಿ ಜುದೇಯ ನಾಡನ್ನು ಸ್ವಾಮಿ ತಮ್ಮ ಸೊತ್ತಾಗಿ ಮಾಡಿಕೊಳ್ಳುವರು. ಜೆರುಸಲೇಮನ್ನು ತಮಗಾಗಿ ಮರಳಿ ಆರಿಸಿಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು