Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 7:3 - ಕನ್ನಡ ಸತ್ಯವೇದವು C.L. Bible (BSI)

3 ಎಸ್ತೇರಳು ಪ್ರತ್ಯುತ್ತರವಾಗಿ, “ಅರಸರು ನನ್ನ ಮೇಲೆ ಕೃಪಾಕಟಾಕ್ಷವನ್ನಿಟ್ಟು ಈಡೇರಿಸುವುದಾದರೆ ನನ್ನ ವಿಜ್ಞಾಪನೆಯನ್ನು, ಪ್ರಾರ್ಥನೆಯನ್ನು ಆಲಿಸಿ, ನನ್ನ ಪ್ರಾಣವನ್ನು ಹಾಗು ನನ್ನ ಜನರ ಪ್ರಾಣವನ್ನು ಉಳಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ ಎಸ್ತೇರ್ ರಾಣಿಯು, “ಅರಸನು ನನ್ನ ಮೇಲೆ ಕಟಾಕ್ಷವಿಟ್ಟು ಸಮ್ಮತಿಸುವುದಾದರೆ ನನ್ನ ವಿಜ್ಞಾಪನೆಯನ್ನೂ, ಪ್ರಾರ್ಥನೆಯನ್ನೂ ಲಾಲಿಸಿ ನನ್ನ ಜೀವವನ್ನೂ ಮತ್ತು ನನ್ನ ಜನಾಂಗವನ್ನೂ ಉಳಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಗ ಎಸ್ತೇರ್‍ರಾಣಿಯು - ಅರಸನು ನನ್ನ ಮೇಲೆ ಕಟಾಕ್ಷವಿಟ್ಟು ಸಮ್ಮತಿಸುವದಾದರೆ ನನ್ನ ವಿಜ್ಞಾಪನೆಯನ್ನೂ ಪ್ರಾರ್ಥನೆಯನ್ನೂ ಲಾಲಿಸಿ ನನ್ನ ಜೀವವನ್ನೂ ಜನಾಂಗವನ್ನೂ ಉಳಿಯಗೊಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆಗ ಎಸ್ತೇರ್ ರಾಣಿಯು, “ರಾಜನೇ, ನೀನು ನನ್ನನ್ನು ಮೆಚ್ಚಿ ಪ್ರೀತಿಸುವದಾದರೆ ದಯಮಾಡಿ ನಾನು ಬದುಕುವಂತೆ ಮಾಡು. ಅಲ್ಲದೇ ನನ್ನ ಜನರನ್ನು ಉಳಿಸು. ಇದೇ ನನ್ನ ಬಿನ್ನಹ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಎಸ್ತೇರ್ ರಾಣಿಯು ಉತ್ತರವಾಗಿ, “ಅರಸನೇ, ನಾನು ನಿನ್ನ ದೃಷ್ಟಿಯಲ್ಲಿ ದಯೆಹೊಂದಿದವಳಾಗಿದ್ದರೆ, ನನ್ನ ಪ್ರಾಣವನ್ನೂ ನನ್ನ ಜನರ ಪ್ರಾಣವನ್ನೂ ಉಳಿಸಬೇಕು. ಇದೇ ನನ್ನ ವಿಜ್ಞಾಪನೆ. ಇದೇ ನನ್ನ ಬೇಡಿಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 7:3
9 ತಿಳಿವುಗಳ ಹೋಲಿಕೆ  

ನೀನು ಅವರಿಗೆ, ‘ಯೆಹೋನಾಥಾನನ ಮನೆಗೆ ನನ್ನನ್ನು ಮರಳಿ ಸೇರಿಸಬೇಡ. ಅಲ್ಲೇ ಸತ್ತೇನು ಎಂದು ಅರಸನಲ್ಲಿ ಬಿನ್ನಹ ಮಾಡಿಕೊಂಡೆ’ ಎಂಬುದಾಗಿ ಹೇಳು,” ಎಂದು ಅಪ್ಪಣೆಮಾಡಿದನು.


ಅದಕ್ಕೆ ಸೈತಾನನು, “ಚರ್ಮಕ್ಕೆ ಚರ್ಮ, ಎಂದ ಹಾಗೆ ಒಬ್ಬ ಮನುಷ್ಯ ಪ್ರಾಣ ಉಳಿಸಿಕೊಳ್ಳಲು ತನ್ನ ಸರ್ವಸ್ವವನ್ನೂ ತೊರೆದುಬಿಡುತ್ತಾನೆ.


ರೌದ್ರಾವೇಶಗೊಂಡ ಅರಸ ದ್ರಾಕ್ಷಾರಸ ಪಾನಮಾಡುವುದನ್ನು ಬಿಟ್ಟೆದ್ದು, ತೋಟಕ್ಕೆ ಹೋದನು. ಅರಸನಿಂದ ತನಗೆ ಶಿಕ್ಷೆ ನಿಶ್ಚಿತವೆಂದರಿತ ಹಾಮಾನನು ಎಸ್ತೇರ್ ರಾಣಿಯ ಮುಂದೆ ಪ್ರಾಣಭಿಕ್ಷೆಗಾಗಿ ಅಂಗಲಾಚಿ ಬೇಡುತ್ತಾ ನಿಂತನು.


ಅಲ್ಲದೆ ಯೆಹೂದ್ಯರನ್ನೆಲ್ಲಾ ಸಂಹರಿಸಬಿಡುವುದಕ್ಕೋಸ್ಕರ ಶೂಷನ್ ನಗರದಲ್ಲಿ ಪ್ರಕಟಗೊಂಡ ರಾಜಶಾಸನದ ಒಂದು ಪ್ರತಿಯನ್ನು ಅವನ ಕೈಗಿತ್ತನು. ಅದನ್ನು ಎಸ್ತೇರಳಿಗೆ ತೋರಿಸಿ ವಿವರಿಸುವಂತೆಯೂ ಆಕೆ ಅರಸನ ಸಮ್ಮುಖಕ್ಕೆ ಹೋಗಿ, ಆತ ದಯೆತೋರುವಂತೆ ಆತನ ಸನ್ನಿಧಿಯಲ್ಲಿ ತನ್ನ ಜನರಿಗೋಸ್ಕರ ಬಿನ್ನಹಮಾಡುವಂತೆ ಆಕೆಗೆ ತಿಳಿಸಬೇಕೆಂತಲೂ ಹೇಳಿಕಳುಹಿಸಿದನು.


ಅರಸನು ಮತ್ತೊಬ್ಬ ಪಚಾಶದಧಿಪತಿಯನ್ನು ಅವನ ಐವತ್ತುಮಂದಿ ಸಿಪಾಯಿಗಳೊಡನೆ ಕಳುಹಿಸಿದನು. ಇವನು ಬಂದು, ಎಲೀಯನ ಮುಂದೆ ಮೊಣಕಾಲೂರಿ, “ದೈವಪುರುಷರೇ, ನನ್ನ ಮತ್ತು ನನ್ನ ಸೇವಕರಾದ ಈ ಐವತ್ತುಮಂದಿಯ ಪ್ರಾಣ ನಿಮ್ಮ ದೃಷ್ಟಿಯಲ್ಲಿ ಮೌಲ್ಯವುಳ್ಳದ್ದಾಗಿರಲಿ;


ಆಗ ಅವನ ಅಧಿಕಾರಿಗಳು, “ಇಸ್ರಯೇಲರ ಅರಸರು ದಯೆಯುಳ್ಳವರೆಂದು ನಾವು ಕೇಳಿದ್ದೇವೆ; ಆದುದರಿಂದ ಸೊಂಟಕ್ಕೆ ಗೋಣೀತಟ್ಟು ಕಟ್ಟಿಕೊಂಡು, ಕುತ್ತಿಗೆಗೆ ಹಗ್ಗ ಸುತ್ತಿಕೊಂಡು ಆ ಅರಸನ ಬಳಿಗೆ ಹೋಗುವುದಕ್ಕೆ ನಮಗೆ ಅಪ್ಪಣೆಯಾಗಲಿ; ಹೀಗೆ ಮಾಡಿದರೆ ಅವನು ತಮ್ಮ ಜೀವವನ್ನು ಉಳಿಸಬಹುದು,” ಎಂದು ಹೇಳಿದರು.


ನಾನು ತಮಗೋಸ್ಕರ ಮಾಡಿಸಲಿರುವ ಔತಣಕ್ಕೆ ನಾಳೆಯೂ ಹಾಮಾನನೊಂದಿಗೆ ದಯಮಾಡಿಸಬೇಕು. ಆಗ ತಾವು ಹೇಳಿದಂತೆ ನಾನು ಮಾಡುವೆನು. ಇದೇ ನನ್ನ ದೈನ್ಯ ಮನವಿ,” ಎಂದು ಉತ್ತರವಿತ್ತಳು.


“ತಾವು ನನ್ನ ಮೇಲೆ ಕೃಪಾಕಟಾಕ್ಷವಿರಿಸಿ, ನನ್ನನ್ನು ಮೆಚ್ಚಿ, ನಾನು ಹೇಳುವ ಮಾತು ಸಮಂಜಸವಾದುದೆಂದು ಎಣಿಸಿ, ಅದಕ್ಕೆ ಸಮ್ಮತಿಸುವುದಾದರೆ, ತಮ್ಮ ಎಲ್ಲಾ ಸಂಸ್ಥಾನಗಳಲ್ಲಿರುವ ಯೆಹೂದ್ಯರನ್ನು ಸಂಹರಿಸುವ ಸಲುವಾಗಿ ಅಗಾಗನ ವಂಶದವನೂ ಹಮ್ಮೆದಾತನ ಮಗನೂ ಆದ ಹಾಮಾನನು ಬರೆಸಿದ ಪತ್ರಗಳನ್ನು ರದ್ದುಗೊಳಿಸಲು ಆಜ್ಞೆ ಹೊರಡಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು