Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 9:13 - ಕನ್ನಡ ಸತ್ಯವೇದವು C.L. Bible (BSI)

13 ಪ್ರತ್ಯುತ್ತರವಾಗಿ ಎಸ್ತೇರಳು ಅರಸನಿಗೆ, “ಇಂದಿನಂತೆ ನಾಳೆಯೂ ರಾಜಾಜ್ಞೆ ಜಾರಿಯಲ್ಲಿರಬೇಕು ಹಾಗು ಹಾಮಾನನ ಹತ್ತು ಮಕ್ಕಳ ಶವಗಳನ್ನು ಗಲ್ಲಿಗೇರಿಸುವಂತೆ ಅಪ್ಪಣೆಯಾಗಬೇಕು,” ಎಂದು ಬೇಡಿಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅದಕ್ಕೆ ಎಸ್ತೇರಳು, “ಅರಸನ ಇಷ್ಟವಿದ್ದರೆ ನಾಳೆಯೂ ಇಂದಿನ ರಾಜಾಜ್ಞೆಯ ಪ್ರಕಾರ ಮಾಡುವುದಕ್ಕೂ ಹಾಮಾನನ ಹತ್ತು ಮಕ್ಕಳ ಶವಗಳನ್ನು ಗಲ್ಲಿಗೆ ಹಾಕುವುದಕ್ಕೂ ಶೂಷನಿನಲ್ಲಿರುವ ಯೆಹೂದ್ಯರಿಗೆ ಅಪ್ಪಣೆಯಾಗಬೇಕು” ಎಂದು ಬೇಡಿಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅದಕ್ಕೆ ಎಸ್ತೇರಳು - ಅರಸನ ಇಷ್ಟವಿದ್ದರೆ ನಾಳೆಯೂ ಇಂದಿನ ರಾಜಾಜ್ಞೆಯ ಪ್ರಕಾರ ಮಾಡುವದಕ್ಕೂ ಹಾಮಾನನ ಹತ್ತು ಮಂದಿ ಮಕ್ಕಳ ಶವಗಳನ್ನು ಗಲ್ಲಿಗೆ ಹಾಕುವದಕ್ಕೂ ಯೆಹೂದ್ಯರಿಗೆ ಅಪ್ಪಣೆಯಾಗಬೇಕು ಎಂದು ಬೇಡಿಕೊಳ್ಳಲು ಅರಸನು ಹಾಗೆ ಮಾಡುವದಕ್ಕೆ ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅದಕ್ಕೆ ಎಸ್ತೇರಳು, “ಅರಸನು ಇಷ್ಟಪಟ್ಟಲ್ಲಿ ನಾಳೆಯೂ ಶೂಷನ್‌ನಲ್ಲಿರುವ ಯೆಹೂದ್ಯರು ಹೀಗೆಯೇ ಮಾಡಲಿ ಮತ್ತು ಹಾಮಾನನ ಆ ಹತ್ತು ಮಂದಿ ಗಂಡುಮಕ್ಕಳನ್ನು ಗಲ್ಲುಕಂಬದಲ್ಲಿ ನೇತಾಡಿಸಲಿ” ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅದಕ್ಕೆ ಎಸ್ತೇರಳು, “ಅರಸನಿಗೆ ಸಮ್ಮತಿಯಾದರೆ, ಇಂದಿನಂತೆಯೇ ರಾಜಾಜ್ಞೆಯು ನಾಳೆಯೂ ಶೂಷನ್ ಪಟ್ಟಣದಲ್ಲಿ ಜಾರಿಗೆ ಬರಲು ಯೆಹೂದ್ಯರಿಗೆ ಅಪ್ಪಣೆ ಆಗಲಿ. ಹಾಮಾನನ ಹತ್ತು ಮಂದಿ ಮಕ್ಕಳ ಶವಗಳನ್ನು ಗಲ್ಲಿಗೇರಿಸುವಂತೆ ಅಪ್ಪಣೆಯಾಗಲಿ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 9:13
7 ತಿಳಿವುಗಳ ಹೋಲಿಕೆ  

ಆ ಪತ್ರಗಳಲ್ಲಿ ಅರಸನ ರಾಜಾಜ್ಞೆ ಹೀಗೆಂದು ಬರೆಯಲಾಗಿತ್ತು: ‘ಅರಸ ಅಹಷ್ವೇರೋಷನ ಎಲ್ಲಾ ಸಂಸ್ಥಾನಗಳ ಆಯಾ ಪಟ್ಟಣಗಳಲ್ಲಿರುವ ಎಲ್ಲಾ ಯೆಹೂದ್ಯರು ಒಂದೇ ದಿನದಲ್ಲಿ


ಅವನ ಶವವನ್ನು ನೀವು ರಾತ್ರಿಯೆಲ್ಲಾ ಆ ಮರದ ಮೇಲೆ ಇರಿಸಬಾರದು; ಅದನ್ನು ಅದೇ ದಿನ ನೆಲದಲ್ಲಿ ಹೂಣಬೇಕು. ಏಕೆಂದರೆ ಮರಕ್ಕೆ ತೂಗಹಾಕಲಾದವನು ದೇವರ ಶಾಪವನ್ನು ಹೊಂದಿದವನು. ಹೀಗೆ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವದೇಶವಾಗಲೆಂದು ಕೊಡುವ ನಾಡನ್ನು ನೀವೇ ಅಪವಿತ್ರಗೊಳಿಸಬಾರದು.


ಮರಕ್ಕೆ ತೂಗುಹಾಕಲಾದ ಪ್ರತಿ ಒಬ್ಬನೂ ಶಾಪಗ್ರಸ್ತನು,” ಎಂದು ಬರೆದಿರುವಂತೆ, ನಮಗೋಸ್ಕರ ಕ್ರಿಸ್ತಯೇಸು ಶಾಪಸ್ವರೂಪಿಯಾಗಿ ಧರ್ಮಶಾಸ್ತ್ರದಲ್ಲಿ ಹೇಳಲಾಗಿರುವ ಶಾಪದಿಂದ ನಮ್ಮನ್ನು ಪಾರುಮಾಡಿದರು.


ಶೂಷನಿನ ಯೆಹೂದ್ಯರು ಫಾಲ್ಗುಣಮಾಸದ ಹದಿನಾಲ್ಕನೆಯ ದಿನದಂದೂ ಒಟ್ಟಾಗಿ ಸೇರಿ ಮುನ್ನೂರು ಮಂದಿಯನ್ನು ಕೊಂದುಹಾಕಿದರು. ಆದರೆ ಸುಲಿಗೆಗೆ ಕೈಹಾಕಲಿಲ್ಲ.


ಅವರು ಇವರನ್ನು ಕೊಂದು ಗುಡ್ಡದ ಮೇಲೆ ಸರ್ವೇಶ್ವರನ ಸನ್ನಿಧಿಯಲ್ಲೆ ನೇತುಹಾಕಿದರು. ಈ ಏಳುಮಂದಿ ಏಕಕಾಲದಲ್ಲಿ ಹತರಾದರು. ಇವರನ್ನು ಕೊಂದಾಗ ಜವೆಗೋದಿ ಸುಗ್ಗಿಯು ಆರಂಭ ಆಗಿತ್ತು.


ಸರ್ವೇಶ್ವರನಿಂದ ಆಯ್ಕೆಯಾದ ಸೌಲನು ವಾಸವಾಗಿದ್ದ ಗಿಬೆಯದಲ್ಲಿ ನಾವು ಅವರನ್ನು ಕೊಂದು ಸರ್ವೇಶ್ವರನ ಸನ್ನಿಧಿಯಲ್ಲೆ ನೇತುಹಾಕುತ್ತೇವೆ,” ಎಂದರು. ಅರಸನು, “ಆಗಲಿ, ಒಪ್ಪಿಸುತ್ತೇನೆ,” ಎಂದನು.


ಅರಸನು ಎಸ್ತೇರಳಿಗೆ ತನ್ನ ಇಚ್ಛೆಯಂತೆ ಮಾಡಲು ಅಪ್ಪಣೆಕೊಟ್ಟನು. ಕೂಡಲೆ ಇದಕ್ಕೆ ಸಂಬಂಧಪಟ್ಟ ರಾಜಾಜ್ಞೆ ಶೂಷನ್ ನಗರದಲ್ಲಿ ಪ್ರಕಟವಾಯಿತು. ಹಾಮಾನನ ಹತ್ತುಮಂದಿ ಮಕ್ಕಳ ಶವಗಳನ್ನು ಗಲ್ಲಿಗೇರಿಸಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು