Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 9:18 - ಕನ್ನಡ ಸತ್ಯವೇದವು C.L. Bible (BSI)

18 ಶೂಷನಿನ ಯೆಹೂದ್ಯರು ಹದಿಮೂರನೇ ಹಾಗೂ ಹದಿನಾಲ್ಕನೇ ದಿನ ಒಟ್ಟಾಗಿ ಸೇರಿಬಂದುದರಿಂದ, ಅವರು ಹದಿನೈದನೆಯ ದಿನದಲ್ಲಿ ವಿಶ್ರಮಿಸಿಕೊಂಡರು. ಅಂದು ಸಂಭ್ರಮದ ಉತ್ಸವದಿನವನ್ನಾಗಿ ಆಚರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆದರೆ ಶೂಷನಿನ ಯೆಹೂದ್ಯರು ಹದಿಮೂರನೆಯ ಮತ್ತು ಹದಿನಾಲ್ಕನೆಯ ದಿನಗಳನ್ನು ವೈರಿಗಳನ್ನು ವಧಿಸುವುದಕ್ಕೆ ನೇಮಿಸಿಕೊಂಡಿದ್ದರಿಂದ ಹದಿನೈದನೆಯ ದಿನದಲ್ಲಿ ವಿಶ್ರಮಿಸಿಕೊಂಡು ಆ ದಿನವನ್ನು ಉತ್ಸವಭೋಜನ ದಿನವನ್ನಾಗಿ ಆಚರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆದರೆ ಶೂಷನಿನ ಯೆಹೂದ್ಯರು ಹದಿಮೂರನೆಯ ಮತ್ತು ಹದಿನಾಲ್ಕನೆಯ ದಿನಗಳಲ್ಲಿ [ವೈರಿಗಳನ್ನು ವಧಿಸುವದಕ್ಕೆ] ಕೂಡಿಕೊಂಡಿದ್ದದರಿಂದ ಹದಿನೈದನೆಯ ದಿನದಲ್ಲಿ ವಿಶ್ರವಿುಸಿಕೊಂಡು ಆ ದಿನವನ್ನು ಉತ್ಸವಭೋಜನದಿನವನ್ನಾಗಿ ಆಚರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಅದಾರ್ ತಿಂಗಳಿನ ಹದಿಮೂರನೇ ಮತ್ತು ಹದಿನಾಲ್ಕನೇ ದಿವಸಗಳಲ್ಲಿ ಶೂಷನ್ ನಗರದ ಯೆಹೂದ್ಯರು ಒಟ್ಟಾಗಿ ಸೇರಿಬಂದಿದ್ದರಿಂದ ಹದಿನೈದನೆಯ ದಿವಸದಲ್ಲಿ ಅವರು ವಿಶ್ರಾಂತಿ ತೆಗೆದುಕೊಂಡರು. ಹದಿನೈದನೆಯ ದಿವಸವನ್ನು ಅವರು ಸಂತಸದ ಹಬ್ಬವನ್ನಾಗಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆದರೆ ಶೂಷನಿನಲ್ಲಿದ್ದ ಯೆಹೂದ್ಯರು ಹದಿಮೂರನೆಯ ಹಾಗೂ ಹದಿನಾಲ್ಕನೆಯ ದಿನಗಳಲ್ಲಿ ಒಟ್ಟಾಗಿ ಸೇರಿಬಂದದ್ದರಿಂದ, ಹದಿನೈದನೆಯ ದಿನದಲ್ಲಿ ಅವರು ವಿಶ್ರಮಿಸಿಕೊಂಡು, ಅದೇ ದಿನವನ್ನು ಸಂಭ್ರಮದ ಉತ್ಸವದಿನವನ್ನಾಗಿ ಆಚರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 9:18
7 ತಿಳಿವುಗಳ ಹೋಲಿಕೆ  

‘ಪ್ರತಿವರ್ಷವೂ ಫಾಲ್ಗುಣಮಾಸದ ಹದಿನಾಲ್ಕನೆ ಮತ್ತು ಹದಿನೈದನೆಯ ದಿನಗಳನ್ನು ಹಬ್ಬದ ದಿನಗಳಾಗಿ ಆಚರಿಸುವುದು ಶಾಶ್ವತ ನಿಯಮ ಎಂದು ಭಾವಿಸಬೇಕು.


ಶೂಷನಿನ ಯೆಹೂದ್ಯರು ಫಾಲ್ಗುಣಮಾಸದ ಹದಿನಾಲ್ಕನೆಯ ದಿನದಂದೂ ಒಟ್ಟಾಗಿ ಸೇರಿ ಮುನ್ನೂರು ಮಂದಿಯನ್ನು ಕೊಂದುಹಾಕಿದರು. ಆದರೆ ಸುಲಿಗೆಗೆ ಕೈಹಾಕಲಿಲ್ಲ.


ಪ್ರತ್ಯುತ್ತರವಾಗಿ ಎಸ್ತೇರಳು ಅರಸನಿಗೆ, “ಇಂದಿನಂತೆ ನಾಳೆಯೂ ರಾಜಾಜ್ಞೆ ಜಾರಿಯಲ್ಲಿರಬೇಕು ಹಾಗು ಹಾಮಾನನ ಹತ್ತು ಮಕ್ಕಳ ಶವಗಳನ್ನು ಗಲ್ಲಿಗೇರಿಸುವಂತೆ ಅಪ್ಪಣೆಯಾಗಬೇಕು,” ಎಂದು ಬೇಡಿಕೊಂಡಳು.


ಅರಸನ ಆಜ್ಞೆಯನ್ನು, ನಿರ್ಣಯವನ್ನು ನೆರವೇರಿಸತಕ್ಕ ದಿನವು ಅಂದರೆ, ಹನ್ನೆರಡನೆಯ ತಿಂಗಳಾದ ಫಾಲ್ಗುಣಮಾಸದ ಹದಿಮೂರನೆಯ ದಿನವು ಬಂದಿತು. ಆ ದಿನದಲ್ಲಿ ಯೆಹೂದ್ಯರನ್ನು ತಾವೇ ಸ್ವಾಧೀನಪಡಿಸಿಕೊಳ್ಳಬಹುದೆಂದು ಅವರ ವೈರಿಗಳು ನಿರೀಕ್ಷಿಸಿದ್ದರು. ಆದರೆ ಅದಕ್ಕೆ ಬದಲಾಗಿ ಯೆಹೂದ್ಯರೇ ತಮ್ಮ ವೈರಿಗಳನ್ನು ಸ್ವಾಧೀನಮಾಡಿಕೊಂಡರು.


ಆ ದಿನ ಶೂಷನ್ ನಗರದಲ್ಲಿ ಹತರಾದವರ ಸಂಖ್ಯೆ ಅರಸನಿಗೆ ತಿಳಿದುಬಂದಾಗ ಅವನು ಎಸ್ತೇರ್ ರಾಣಿಗೆ,


ಆ ಪತ್ರಗಳಲ್ಲಿ ಅರಸನ ರಾಜಾಜ್ಞೆ ಹೀಗೆಂದು ಬರೆಯಲಾಗಿತ್ತು: ‘ಅರಸ ಅಹಷ್ವೇರೋಷನ ಎಲ್ಲಾ ಸಂಸ್ಥಾನಗಳ ಆಯಾ ಪಟ್ಟಣಗಳಲ್ಲಿರುವ ಎಲ್ಲಾ ಯೆಹೂದ್ಯರು ಒಂದೇ ದಿನದಲ್ಲಿ


ಆದುದರಿಂದ ಅರಸ ಅಹಷ್ವೇರೋಷನ ಸಮಸ್ತ ಸಂಸ್ಥಾನಗಳ ಪ್ರತಿಯೊಂದು ನಗರದಲ್ಲಿದ್ದ ಯೆಹೂದ್ಯರು ತಮಗೆ ಕೇಡು ಬಗೆದವರಿಗೆ ವಿರುದ್ಧವಾಗಿ ಕೈಯೆತ್ತಲು ಒಟ್ಟಾಗಿ ಸೇರಿದರು. ಎಲ್ಲರಿಗೂ ಅವರ ಭಯ ಇದ್ದುದರಿಂದ ಯಾರೂ ಅವರ ಮುಂದೆ ನಿಲ್ಲಲಾಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು