Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 9:19 - ಕನ್ನಡ ಸತ್ಯವೇದವು C.L. Bible (BSI)

19 ಈ ಕಾರಣದಿಂದಾಗಿ ಬಯಲುಪ್ರದೇಶದ ಗ್ರಾಮನಿವಾಸಿ ಯೆಹೂದ್ಯರು ಹದಿನಾಲ್ಕನೇ ದಿನವನ್ನು ಶುಭದಿನವೆಂತಲೂ ನಗರವಾಸಿ ಯೆಹೂದ್ಯರು ಹದಿನೈದನೆಯ ದಿನವನ್ನು ಶುಭದಿನವೆಂತಲೂ ಆಚರಿಸಿ, ಉತ್ಸವ ಭೋಜನಮಾಡಿ, ಒಬ್ಬರಿಗೊಬ್ಬರು ತಿಂಡಿತೀರ್ಥಗಳನ್ನು ವಿನಿಮಯಿಸಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆದುದರಿಂದ ಪೌಳಿಗೋಡೆ ಇಲ್ಲದ ಹಳ್ಳಿಪಳ್ಳಿಯ ಯೆಹೂದ್ಯರು ಫಾಲ್ಗುಣಮಾಸದ ಹದಿನಾಲ್ಕನೆಯ ದಿನವನ್ನೂ ನಗರಗಳ ಯೆಹೂದ್ಯರು ಹದಿನೈದನೆಯ ದಿನವನ್ನೂ ಶುಭದಿನವೆಂದು ಆಚರಿಸಿ, ಉತ್ಸವಭೋಜನಮಾಡಿ ಒಬ್ಬರಿಗೊಬ್ಬರು ಭೋಜನ ಪದಾರ್ಥಗಳನ್ನು ವಿನಿಮಯ ಮಾಡಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆದದರಿಂದ ಪೌಳಿಗೋಡೆಯಿಲ್ಲದ ಹಳ್ಳಿಪಳ್ಳಿಯ ಯೆಹೂದ್ಯರು ಫಾಲ್ಗುನಮಾಸದ ಹದಿನಾಲ್ಕನೆಯ ದಿನವನ್ನೂ ನಗರಗಳ ಯೆಹೂದ್ಯರು ಹದಿನೈದನೆಯ ದಿನವನ್ನೂ ಶುಭದಿವಸವೆಂದು ಆಚರಿಸಿ ಉತ್ಸವಭೋಜನಮಾಡಿ ಒಬ್ಬರಿಗೊಬ್ಬರು ಭೋಜನಭಾಗಗಳನ್ನು ಕಳುಹಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ದೇಶದ ಎಲ್ಲಾ ಹಳ್ಳಿಗಳಲ್ಲಿದ್ದ ಯೆಹೂದ್ಯರು ಅದಾರ್ ತಿಂಗಳಿನ ಹದಿನಾಲ್ಕನೆಯ ದಿವಸವನ್ನು ಪೂರಿಮ್ ದಿವಸವನ್ನಾಗಿ ಆಚರಿಸಿದರು. ಹದಿನಾಲ್ಕನೆಯ ದಿವಸವು ಅವರಿಗೆ ಸಂತಸದ ಹಬ್ಬ. ಆ ದಿವಸ ಅವರು ಔತಣಮಾಡಿ ಒಬ್ಬರಿಗೊಬ್ಬರು ಉಡುಗೊರೆಗಳನ್ನು ಕೊಟ್ಟು ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆದಕಾರಣ ಗ್ರಾಮಗಳಲ್ಲಿಯೂ ಬಯಲು ಪ್ರಾಂತಗಳ ಪಟ್ಟಣಗಳಲ್ಲಿಯೂ ವಾಸವಾಗಿರುವ ಯೆಹೂದ್ಯರು ಆದಾರ್ ಮಾಸದ ಹದಿನಾಲ್ಕನೆಯ ದಿನವನ್ನು ಶುಭದಿನವಾಗಿಯೂ, ಸಂಭ್ರಮದ ದಿನವಾಗಿಯೂ, ಒಬ್ಬರಿಗೊಬ್ಬರು ಭೋಜನ ಕೊಡುಗೆಗಳನ್ನು ಕಳುಹಿಸುವ ದಿನವಾಗಿಯೂ ಆಚರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 9:19
13 ತಿಳಿವುಗಳ ಹೋಲಿಕೆ  

ರಾಜನಿರ್ಣಯ ಶಾಸನಗಳು ಪ್ರಕಟವಾದ ಸಂಸ್ಥಾನಗಳಲ್ಲೂ ನಗರಗಳಲ್ಲೂ ವಾಸಿಸುತ್ತಿದ್ದ ಯೆಹೂದ್ಯರೆಲ್ಲರಿಗೆ ಶುಭದಿನ ಉದಯವಾಯಿತು. ಅವರು ಅದನ್ನು ಸಂತೋಷದ ಹಾಗೂ ಸಂಭ್ರಮದ ದಿನವನ್ನಾಗಿ ಆಚರಿಸಿದರು. ಜನರಲ್ಲಿ ಅನೇಕರು ಯೆಹೂದ್ಯರಿಗೆ ಭಯಪಟ್ಟು ಅವರ ಮತಕ್ಕೆ ಸೇರಿದರು.


ಭೂನಿವಾಸಿಗಳನ್ನು ಪೀಡಿಸಿದ್ದ ಆ ಇಬ್ಬರು ಪ್ರವಾದಿಗಳು ಸತ್ತದ್ದಕ್ಕಾಗಿ ಲೋಕದ ಜನರು ಸಂತೋಷದಿಂದ ಸಂಭ್ರಮಿಸುವರು. ಒಬ್ಬರಿಗೊಬ್ಬರು ಬಹುಮಾನಗಳನ್ನು ಹಂಚಿಕೊಳ್ಳುವರು.


ಆ ದಿಗಳಲ್ಲಿ ಯೆಹೂದ್ಯರಿಗೆ ಶತ್ರುಗಳ ಕಾಟ ತಪ್ಪಿ ವಿಶ್ರಾಂತಿ ದೊರೆಯಿತು. ಆ ತಿಂಗಳಿನಲ್ಲಿ ಸಂಕಟವು ಪರಿಹಾರವಾಗಿ ಸಂತೋಷ ಪ್ರಾಪ್ತಿಯಾಯಿತು; ದುಃಖವು ಕಳೆದು ಸುಖಕಾಲ ಬಂದಿತು. ಆದ್ದರಿಂದ ಆ ದಿನಗಳಲ್ಲಿ ಹಬ್ಬದ ಭೋಜನಮಾಡಿ ಪರಸ್ಪರ ತಿಂಡಿತೀರ್ಥಗಳನ್ನು ವಿನಿಮಯಮಾಡಿಕೊಳ್ಳಬೇಕು. ಹಾಗೂ ಬಡಬಗ್ಗರಿಗೆ ದಾನಧರ್ಮ ಮಾಡಬೇಕು.


ಅದರಲ್ಲಿ ನೀವೂ ನಿಮ್ಮ ಗಂಡುಹೆಣ್ಣು ಮಕ್ಕಳೂ ಗಂಡುಹೆಣ್ಣು ಆಳುಗಳೂ ನಿಮ್ಮ ಊರಲ್ಲಿರುವ ಲೇವಿಯರೂ ಪರದೇಶದವರೂ ತಾಯಿತಂದೆಯಿಲ್ಲದವರೂ ಹಾಗು ವಿಧವೆಯರೂ ಸಂಭ್ರಮದಿಂದಿರಬೇಕು.


ಮತ್ತು ಅವರು ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳದಲ್ಲಿ ನೀವು, ನಿಮ್ಮ ಗಂಡುಹೆಣ್ಣು ಮಕ್ಕಳು, ಗಂಡುಹೆಣ್ಣು ಆಳುಗಳು, ನಿಮ್ಮ ಊರಲ್ಲಿರುವ ಲೇವಿಯರು, ಪರದೇಶದವರು, ತಾಯಿತಂದೆಯಿಲ್ಲದವರು ಹಾಗು ವಿಧವೆಯರು ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ಸಂಭ್ರಮದಿಂದಿರಬೇಕು.


ನಿಮ್ಮ ತಟ್ಟೆ, ಲೋಟಗಳಲ್ಲಿ ಇರುವುದನ್ನು ಮೊಟ್ಟಮೊದಲು ದಾನಮಾಡಿರಿ. ಆಗ ಸಮಸ್ತವು ನಿಮಗೆ ಶುದ್ಧಿಯಾಗಿರುವುದು.


“ಅಳೆಯಲು ಹೋಗುತ್ತಿರುವ ಆ ಯುವಕನಿಗೆ ಓಡಿಹೋಗಿ ಈ ಮಾತನ್ನು ತಿಳಿಸು: ‘ಜೆರುಸಲೇಮಿನಲ್ಲಿ ಜನರ ಮತ್ತು ದನಕರುಗಳ ಸಂಖ್ಯೆ ಅಪಾರವಾಗುವುದು. ಅದು ಪೌಳಿಗೋಡೆಗಳಿಲ್ಲದ ಊರುಕೇರಿಗಳಂತೆ ಹರಡಿಕೊಳ್ಳುವುದು.


ಅವೆಲ್ಲವು ಎತ್ತರವಾದ ಪೌಳಿಗೋಡೆಗಳಿಂದ, ಕದಗಳಿಂದ ಹಾಗು ಅಗುಳಿಗಳಿಂದ ಸುಭದ್ರವಾದ ಪಟ್ಟಣಗಳಾಗಿದ್ದವು. ಅವುಗಳಲ್ಲದೆ ಅನೇಕ ಹಳ್ಳಿಪಳ್ಳಿಗಳು ಇದ್ದವು.


ನಿನ್ನ ಆಳುಗ಼ಳನ್ನೇ ಕೇಳು, ಅವರೇ ಹೇಳುವರು. ಹೀಗಿರುವುದರಿಂದ ಶುಭಕಾಲದಲ್ಲಿ ನಿನ್ನ ಬಳಿಗೆ ಬಂದಿರುವ ನನ್ನ ಸೇವಕರಿಗೆ ನಿನ್ನ ದೃಷ್ಟಿಯಲ್ಲಿ ದಯೆ ದೊರಕಲಿ. ಕೃಪೆಮಾಡಿ ನಿನ್ನ ಸೇವಕರಿಗೂ ಮಗನಾದ ದಾವೀದನಿಗೂ ನಿನಗಿರುವುದರಲ್ಲಿ ಸಾಧ್ಯವಾದುದ್ದನ್ನು ಕೊಡು,’ ಎಂದು ಅವನಿಗೆ ಹೇಳಿರಿ,” ಎಂದು ಅವರನ್ನು ಕಳುಹಿಸಿದನು.


ಮೊರ್ದೆಕೈಯು ಅಹಷ್ವೇರೋಷನ ಸಂಸ್ಥಾನಗಳಲ್ಲಿ ವಾಸಿಸುತ್ತಿದ್ದ ಎಲ್ಲಾ ಯೆಹೂದ್ಯರಿಗೆ, ಸಮೀಪದಲ್ಲೂ ದೂರದಲ್ಲೂ ಇದ್ದವರು ಎಲ್ಲರಿಗೂ ಪತ್ರಗಳ ಮುಖಾಂತರ ಈ ಕೆಳಕಂಡ ಸಂಗತಿಗಳನ್ನು ತಿಳಿಯಪಡಿಸಿದನು:


“ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಡುವ ನಾಡಿನ ಯಾವ ಊರಲ್ಲಿಯಾದರೂ ಸ್ವದೇಶದವನಾದ ಬಡವನು ಇದ್ದರೆ, ನೀವು ಆ ಬಡ ಸಹೋದರನ ಬಗ್ಗೆ ಮನಸ್ಸನ್ನು ಕಠಿಣಮಾಡಿಕೊಳ್ಳಬೇಡಿ. ಅವನಿಗೆ ಸಹಾಯಮಾಡದೆ ಇರಬೇಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು