Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 9:27 - ಕನ್ನಡ ಸತ್ಯವೇದವು C.L. Bible (BSI)

27 ಅವುಗಳಿಗೆ ಸಂಬಂಧಪಟ್ಟ ಶಾಸನದ ಪ್ರಕಾರ, ನಿಯಮಿತ ಕಾಲದಲ್ಲಿ ಆಚರಿಸುವುದು ತಮ್ಮಲ್ಲಿಯೂ ತಮ್ಮ ಸಂತಾನದವರಲ್ಲಿಯೂ ತಮ್ಮೊಂದಿಗೆ ಸೇರಿಕೊಳ್ಳುವವರಲ್ಲಿಯೂ ಮೀರಕೂಡದ ಪದ್ಧತಿನಿಯಮಗಳಾಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಯೆಹೂದ್ಯರು ಆ ಪತ್ರದ ಮಾತುಗಳನ್ನೂ ಅವುಗಳ ಸಂಬಂಧವಾಗಿ ತಾವೇ ಅನುಭವಿಸಿದ್ದನ್ನೂ, ತಮಗೆ ಸಂಭವಿಸಿದ್ದನ್ನೂ ಮನಸ್ಸಿಗೆ ತೆಗೆದುಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಪ್ರತಿವರುಷವೂ ಆ ಎರಡು ದಿವಸಗಳನ್ನು ಅವುಗಳ ವಿಷಯವಾದ ಶಾಸನದ ಪ್ರಕಾರ ನೇವಿುತವಾದ ಕಾಲದಲ್ಲಿ ಆಚರಿಸುವದು ತಮ್ಮಲ್ಲಿಯೂ ತಮ್ಮ ಸಂತಾನದವರಲ್ಲಿಯೂ ತಮ್ಮೊಂದಿಗೆ ಕೂಡಿಕೊಳ್ಳುವವರಲ್ಲಿಯೂ ಮೀರಕೂಡದ ಪದ್ಧತಿನಿಯಮಗಳಾಗಬೇಕೆಂದೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಯೆಹೂದ್ಯರು ಸ್ಮರಿಸಿಕೊಂಡು ಪ್ರತಿವರ್ಷವೂ ಆ ಎರಡು ದಿನಗಳನ್ನು, ಅವುಗಳಿಗೆ ಸಂಬಂಧಪಟ್ಟ ಶಾಸನದ ಪ್ರಕಾರ, ನಿಯಮಿತ ಕಾಲದಲ್ಲಿ ಆಚರಿಸುವಂತೆ ತಮ್ಮಲ್ಲಿಯೂ ತಮ್ಮ ಸಂತಾನದವರಲ್ಲಿಯೂ ತಮ್ಮೊಂದಿಗೆ ಸೇರಿಕೊಳ್ಳುವವರಲ್ಲಿಯೂ ಯಾವ ವಿಧದಲ್ಲಿಯೂ ಮೀರಕೂಡದ ಪದ್ಧತಿಯನ್ನಾಗಿ ಪಾಲಿಸಲು ತೀರ್ಮಾನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 9:27
18 ತಿಳಿವುಗಳ ಹೋಲಿಕೆ  

ಆ ದಿನದಂದು ಹಲವಾರು ರಾಷ್ಟ್ರಗಳು ಸರ್ವೇಶ್ವರಸ್ವಾಮಿಯನ್ನು ಆಶ್ರಯಿಸಿಕೊಳ್ಳುವರು. ಅವರು ಆ ಸ್ವಾಮಿಯ ಜನರಾಗುವರು. ಸ್ವಾಮಿ ಅವರ ಮಧ್ಯೆ ವಾಸಿಸುವರು. ಸೇನಾಧೀಶ್ವರರಾದ ಆ ಸ್ವಾಮಿಯೇ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ ಎಂಬುದು ಆಗ ನಿಮಗೆ ಗೊತ್ತಾಗುವುದು.


ಅನ್ಯದೇಶೀಯರಲ್ಲಿ ಯಾರು ಯಾರು ‘ಸರ್ವೇಶ್ವರ’ ಎಂದು ನನ್ನನ್ನು ಅವಲಂಭಿಸಿ, ಪೂಜಿಸಿ, ನನ್ನ ನಾಮವನ್ನು ಪ್ರೀತಿಸಿ, ನನಗೆ ದಾಸನಾಗಿ, ಸಬ್ಬತ್‍ದಿನವನ್ನು ಹೊಲೆಮಾಡದೆ ನನ್ನ ದಿನವೆಂದು ಆಚರಿಸಿ, ಜೊತೆಗೆ ನನ್ನ ಒಡಂಬಡಿಕೆಯನ್ನು ಸುಭದ್ರವಾಗಿ ಪಾಲಿಸುತ್ತಾರೋ,


ಸರ್ವೇಶ್ವರನನ್ನು ಅವಲಂಬಿಸುವ ವಿದೇಶಿಯನು, ‘ಸರ್ವೇಶ್ವರ ತನ್ನ ಜನರಿಂದ ನನ್ನನ್ನು ಖಂಡಿತವಾಗಿ ಬಹಿಷ್ಕರಿಸುವನು’ ಎಂದು ಹೇಳದಿರಲಿ.


ರಾಜನಿರ್ಣಯ ಶಾಸನಗಳು ಪ್ರಕಟವಾದ ಸಂಸ್ಥಾನಗಳಲ್ಲೂ ನಗರಗಳಲ್ಲೂ ವಾಸಿಸುತ್ತಿದ್ದ ಯೆಹೂದ್ಯರೆಲ್ಲರಿಗೆ ಶುಭದಿನ ಉದಯವಾಯಿತು. ಅವರು ಅದನ್ನು ಸಂತೋಷದ ಹಾಗೂ ಸಂಭ್ರಮದ ದಿನವನ್ನಾಗಿ ಆಚರಿಸಿದರು. ಜನರಲ್ಲಿ ಅನೇಕರು ಯೆಹೂದ್ಯರಿಗೆ ಭಯಪಟ್ಟು ಅವರ ಮತಕ್ಕೆ ಸೇರಿದರು.


ಆ ದಿನದಲ್ಲಿ ವಿವಿಧ ಭಾಷೆಗಳನ್ನಾಡುವ ರಾಷ್ಟ್ರಗಳಿಂದ ಹತ್ತು ಹತ್ತು ಮಂದಿ ಬಂದು ಯೆಹೂದ್ಯನೊಬ್ಬನ ಸೆರಗನ್ನು ಹಿಡಿದುಕೊಂಡು, ‘ನಾವೂ ನಿಮ್ಮೊಂದಿಗೆ ಬರುತ್ತೇವೆ. ಏಕೆಂದರೆ ದೇವರು ನಿಮ್ಮೊಡನೆ ಇದ್ದಾರೆ ಎಂಬ ಸುದ್ದಿಯನ್ನು ಕೇಳಿದ್ದೇವೆ’ ಎಂದು ಹೇಳುವರು. ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.”


‘ಪ್ರತಿವರ್ಷವೂ ಫಾಲ್ಗುಣಮಾಸದ ಹದಿನಾಲ್ಕನೆ ಮತ್ತು ಹದಿನೈದನೆಯ ದಿನಗಳನ್ನು ಹಬ್ಬದ ದಿನಗಳಾಗಿ ಆಚರಿಸುವುದು ಶಾಶ್ವತ ನಿಯಮ ಎಂದು ಭಾವಿಸಬೇಕು.


ದಾವೀದನು ಇಸ್ರಯೇಲರಲ್ಲಿ ಇದನ್ನು ಒಂದು ಕಟ್ಟಳೆಯನ್ನಾಗಿ ಅಂದು ವಿಧಿಸಿದ್ದರಿಂದ ಇಂದಿನವರೆಗೂ ಹಾಗೆಯೇ ನಡೆಯುತ್ತಾ ಬಂದಿದೆ.


ಯೆಹೋಶುವ ಅವರೊಡನೆ, “ನಿಮ್ಮ ಜೀವವನ್ನು ಕಾಪಾಡುತ್ತೇವೆ” ಎಂದು ಶಾಂತಿಸಂಧಾನ ಮಾಡಿಕೊಂಡನು. ಸಭೆಯ ನಾಯಕರೂ ಅಂತೆಯೇ ಪ್ರಮಾಣ ಮಾಡಿದರು.


ನಮ್ಮ ಪೂರ್ವಿಕರ ಸಂಗಡ ಈ ಒಡಂಬಡಿಕೆಯನ್ನು ಮಾಡದೆ ಈಗ ಇಲ್ಲಿ ಜೀವದಿಂದಿರುವ ನಮ್ಮ ಸಂಗಡವೇ ಇದನ್ನು ಮಾಡಿದರು.


ಮೊರ್ದೆಕೈಯು ಅಹಷ್ವೇರೋಷನ ಸಂಸ್ಥಾನಗಳಲ್ಲಿ ವಾಸಿಸುತ್ತಿದ್ದ ಎಲ್ಲಾ ಯೆಹೂದ್ಯರಿಗೆ, ಸಮೀಪದಲ್ಲೂ ದೂರದಲ್ಲೂ ಇದ್ದವರು ಎಲ್ಲರಿಗೂ ಪತ್ರಗಳ ಮುಖಾಂತರ ಈ ಕೆಳಕಂಡ ಸಂಗತಿಗಳನ್ನು ತಿಳಿಯಪಡಿಸಿದನು:


ಯುಗಯುಗಾಂತರಕ್ಕೂ ಎಲ್ಲಾ ಗೋತ್ರ, ಸಂಸ್ಥಾನ, ನಗರದವರು ಈ ದಿನಗಳನ್ನು ಸ್ಮರಿಸಿ ಆಚರಿಸಬೇಕು; ಈ ಪೂರಿಮ್ ಹಬ್ಬವು ಯೆಹೂದ್ಯರಲ್ಲಿ ಎಂದಿಗೂ ನಿಂತುಹೋಗಬಾರದು ಹಾಗೂ ಅದರ ಸ್ಮರಣೆ ಅವರ ಸಂತಾನದವರಲ್ಲಿ ಅಳಿದುಹೋಗಲೇಬಾರದು ಎಂದೂ ತೀರ್ಮಾನಿಸಿಕೊಂಡರು.


ಸರ್ವರಿಗೂ ಅಂದರೆ ನಿಮಗೂ ನಿಮ್ಮಲ್ಲಿರುವ ಅನ್ಯದೇಶೀಯರಿಗೂ ಒಂದೇ ವಿಧಿಯಿರಬೇಕು. ಇದು ನಿಮಗೆ ಮಾತ್ರವಲ್ಲ, ನಿಮ್ಮ ಸಂತತಿಯವರಿಗೂ ಶಾಶ್ವತ ನಿಯಮವಾಗಿರಲಿ. ಸರ್ವೇಶ್ವರನ ಸನ್ನಿಧಿಯಲ್ಲಿ ನೀವು ಹೇಗೆ ಇರುವಿರೋ ಹಾಗೆಯೇ ಅನ್ಯದೇಶೀಯನೂ ಇರುವನು.


ಇಸ್ರಯೇಲರ ಹೆಣ್ಣು ಮಕ್ಕಳು ಪ್ರತಿ ವರ್ಷ ನಾಲ್ಕುದಿವಸ ಗಿಲ್ಯಾದನಾದ ಯೆಪ್ತಾಹನ ಮಗಳ ಸ್ಮರಣೆಮಾಡುತ್ತಾರೆ. ಅವರಲ್ಲಿ ಇದೊಂದು ಪದ್ಧತಿ.


ಆಗ ತಮ್ಮ ಪ್ರಾಚೀನ ಪೂರ್ವಿಕರಂತೆ ಅವರಾಗರು I ಮೊಂಡರು, ಅವಿಧೇಯರು, ದೈವದ್ರೋಹಿಗಳು, ಚಪಲಚಿತ್ತರು II


ದೇಶವಿದೇಶಗಳವರು ಬಂದು ಹೇಳುವರು ಹೀಗೆ : “ಬನ್ನಿ, ಹೋಗೋಣ ಸರ್ವೇಶ್ವರಸ್ವಾಮಿಯ ಪರ್ವತಕ್ಕೆ ಇಸ್ರಯೇಲರ ದೇವರ ಮಂದಿರಕ್ಕೆ. ಬೋಧಿಸುವನಾತ ನಮಗೆ ತನ್ನ ಮಾರ್ಗಗಳನು ನಾವು ಹಿಡಿದು ನಡೆವಂತೆ ಆತನ ಪಥವನು ಹೊರಡುವುದು ಧರ್ಮಶಾಸ್ತ್ರ ಸಿಯೋನಿನಿಂದ ಸ್ವಾಮಿಯ ದಿವ್ಯವಾಣಿ ಜೆರುಸಲೇಮಿನಿಂದ.


ಇದಕ್ಕನುಸಾರ ನಾನು ಕುವರಿಯನ್ನೋ ಎಂಬಂತೆ ನಿನಗೆ ದಯಪಾಲಿಸುವ ನಿನ್ನ ಅಕ್ಕಂದಿರೂ ತಂಗಿಯರೂ ನಿನ್ನಲ್ಲಿ ಸೇರಿಕೊಳ್ಳುವರು. ಆಗ ನೀನು ನಿನ್ನ ದುರ್ಮಾರ್ಗಗಳನ್ನು ನೆನಸಿಕೊಂಡು ನಾಚಿಕೆಪಡುವೆ; ಈ ನನ್ನ ದಯೆ ನಿನ್ನ ಹಿಂದಿನ ಒಡಂಬಡಿಕೆಯ ಫಲವಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು