Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 9:28 - ಕನ್ನಡ ಸತ್ಯವೇದವು C.L. Bible (BSI)

28 ಯುಗಯುಗಾಂತರಕ್ಕೂ ಎಲ್ಲಾ ಗೋತ್ರ, ಸಂಸ್ಥಾನ, ನಗರದವರು ಈ ದಿನಗಳನ್ನು ಸ್ಮರಿಸಿ ಆಚರಿಸಬೇಕು; ಈ ಪೂರಿಮ್ ಹಬ್ಬವು ಯೆಹೂದ್ಯರಲ್ಲಿ ಎಂದಿಗೂ ನಿಂತುಹೋಗಬಾರದು ಹಾಗೂ ಅದರ ಸ್ಮರಣೆ ಅವರ ಸಂತಾನದವರಲ್ಲಿ ಅಳಿದುಹೋಗಲೇಬಾರದು ಎಂದೂ ತೀರ್ಮಾನಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಪ್ರತಿವರ್ಷವೂ ಆ ಎರಡು ದಿನಗಳನ್ನು ಅವುಗಳ ಕುರಿತಾದ ಶಾಸನದ ಪ್ರಕಾರ ನೇಮಿತವಾದ ಕಾಲದಲ್ಲಿ ಆಚರಿಸುವುದು ತಮ್ಮೊಂದಿಗೆ ಸೇರಿಕೊಳ್ಳುವವರಲ್ಲಿಯೂ ಮೀರಬಾರದ ಪದ್ಧತಿ ನಿಯಮಗಳಾಗಬೇಕೆಂದೂ ಯುಗಯುಗಾಂತರಗಳಲ್ಲಿ ಎಲ್ಲಾ ಗೋತ್ರ ಸಂಸ್ಥಾನ ನಗರಗಳವರು ಈ ಪೂರೀಮ್ ಹಬ್ಬದ ಆಚರಣೆ ಯೆಹೂದ್ಯರಲ್ಲಿ ಎಂದೂ ನಿಂತುಹೋಗಬಾರದು. ಅದರ ಜ್ಞಾಪಕವು ಅವರ ಸಂತಾನದವರಲ್ಲಿ ಅಳಿದುಹೋಗಲೇಬಾರದು ಎಂದೂ ಗೊತ್ತುಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಯುಗಯುಗಾಂತರಗಳಲ್ಲಿ ಎಲ್ಲಾ ಗೋತ್ರಸಂಸ್ಥಾನ ನಗರಗಳವರು ಈ ದಿನಗಳನ್ನು ನೆನಪುಮಾಡಿಕೊಂಡು ಆಚರಿಸಬೇಕೆಂದೂ ಈ ಪೂರೀಮ್ ಹಬ್ಬವು ಯೆಹೂದ್ಯರಲ್ಲಿ ಎಂದೂ ನಿಂತುಹೋಗಬಾರದು, ಅದರ ಜ್ಞಾಪಕವು ಅವರ ಸಂತಾನದವರಲ್ಲಿ ಅಳಿದುಹೋಗಲೇಬಾರದು ಎಂದೂ ಗೊತ್ತುಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ತಮ್ಮ ವೈರಿಗಳಿಗಾಗುವ ದಂಡನೆಯನ್ನು ಅವರು ಈ ಹಬ್ಬದ ಸಮಯದಲ್ಲಿ ಜ್ಞಾಪಕ ಮಾಡಿಕೊಳ್ಳುವರು. ಯೆಹೂದ್ಯರ ಎಲ್ಲಾ ಗೋತ್ರಗಳವರು ಮತ್ತು ಅವರ ಪ್ರಾಂತ್ಯಗಳಲ್ಲಿರುವವರು ಈ ದಿನಗಳನ್ನು ಪ್ರತಿ ವರ್ಷ ಸರಿಯಾದ ಸಮಯದಲ್ಲಿ ಸರಿಯಾದ ರೀತಿಯಲ್ಲಿ ಈ ಹಬ್ಬವನ್ನು ಪ್ರತಿಯೊಂದು ಪ್ರಾಂತ್ಯಗಳಲ್ಲಿಯೂ ಪ್ರತಿಯೊಂದು ಊರುಗಳಲ್ಲಿಯೂ ನೆನಪುಮಾಡಿಕೊಳ್ಳುವರು. ಇಂದಿಗೂ ಯೆಹೂದ್ಯರು ಈ ದಿನಗಳನ್ನು ನೆನಪುಮಾಡಿಕೊಂಡು ಪೂರಿಮ್ ಹಬ್ಬವನ್ನು ಆಚರಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಇದಲ್ಲದೆ ಈ ಎರಡು ದಿನಗಳನ್ನು ಪ್ರತಿ ಪ್ರಾಂತದಲ್ಲಿಯೂ ಪ್ರತಿ ಪಟ್ಟಣದಲ್ಲಿಯೂ, ಪ್ರತಿ ತಲೆಮಾರಿನಲ್ಲಿಯೂ, ಪ್ರತಿ ಕುಟುಂಬದಲ್ಲಿಯೂ ಸ್ಮರಿಸಿ ಆಚರಿಸಬೇಕು. ಈ ಪೂರಿಮ್ ದಿನಗಳು ಯೆಹೂದ್ಯರಲ್ಲಿ ಎಂದಿಗೂ ನಿಂತುಹೋಗಬಾರದು. ಅವರ ಸಂತಾನದವರಲ್ಲಿ ಅವುಗಳ ಜ್ಞಾಪಕವು ಅಳಿದು ಹೋಗಬಾರದು ಎಂದೂ ತೀರ್ಮಾನಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 9:28
9 ತಿಳಿವುಗಳ ಹೋಲಿಕೆ  

ಭಜಿಸು ನನ್ನ ಮನವೇ, ಭಜಿಸು ಪ್ರಭುವನು I ಮರೆಯದಿರು ಆತನ ಉಪಕಾರಗಳೊಂದನು II


‘ಸರ್ವೇಶ್ವರನ ಒಡಂಬಡಿಕೆಯ ಮಂಜೂಷವು ಜೋರ್ಡನನ್ನು ದಾಟುವಾಗ ಅದರ ಮುಂದೆ ಜೋರ್ಡನಿನ ನೀರು ನಿಂತುಹೋಯಿತು,’ ಎಂದು ಹೇಳಿರಿ. ಅದರ ನೀರು ನಿಂತುಹೋಯಿತೆಂಬುದಕ್ಕೆ ಈ ಕಲ್ಲುಗಳು ಇಸ್ರಯೇಲರಿಗೆ ಚಿರಸ್ಮಾರಕಗಳಾಗಿರುವುವು,” ಎಂದು ಹೇಳಿದನು.


ಅವರ ಕಿರೀಟವು ಹೇಲಮ್, ತೊಬೀಯ, ಯೆದಾಯ ಮತ್ತು ಜೆಫನ್ಯನ ಮಗ ಹೇನ್ - ಇವರ ಜ್ಞಾಪಕಾರ್ಥವಾಗಿ ಆಲಯದಲ್ಲೇ ಇರುವುದು.”


ಹುಳಿರಹಿತ ರೊಟ್ಟಿಯನ್ನು ತಿನ್ನುವ ಹಬ್ಬವನ್ನು ನೀವು ಆಚರಿಸಬೇಕು. ಏಕೆಂದರೆ ಆ ದಿನದಲ್ಲೇ ನಾನು ನಿಮ್ಮ ಪಾಳೆಯದವರನ್ನು ಈಜಿಪ್ಟ್ ದೇಶದಿಂದ ಕರೆದುಕೊಂಡು ಬಂದದ್ದು . ನೀವೂ ನಿಮ್ಮ ಸಂತತಿಯವರೂ ಆ ದಿನವನ್ನು ಆಚರಣೆಗೆ ತರಬೇಕು.


ಅವುಗಳಿಗೆ ಸಂಬಂಧಪಟ್ಟ ಶಾಸನದ ಪ್ರಕಾರ, ನಿಯಮಿತ ಕಾಲದಲ್ಲಿ ಆಚರಿಸುವುದು ತಮ್ಮಲ್ಲಿಯೂ ತಮ್ಮ ಸಂತಾನದವರಲ್ಲಿಯೂ ತಮ್ಮೊಂದಿಗೆ ಸೇರಿಕೊಳ್ಳುವವರಲ್ಲಿಯೂ ಮೀರಕೂಡದ ಪದ್ಧತಿನಿಯಮಗಳಾಬೇಕು;


ಇದಲ್ಲದೆ ಅಬೀಹೈಲನ ಮಗಳಾದ ಎಸ್ತೇರ್ ರಾಣಿಯು ಪೂರಿಮ್ ಹಬ್ಬದ ಆಚರಣೆಗೆ ಸಂಬಂಧಪಟ್ಟ ಆ ಎರಡನೇ ಶಾಸನವನ್ನು ದೃಢಪಡಿಸುವುದಕ್ಕಾಗಿ ಮೊರ್ದೆಕೈಯ ಸಹಾಯವನ್ನು ಪಡೆದು ಅಧಿಕೃತ ಪತ್ರಗಳನ್ನು ಬರೆದಳು.


ತಲೆಮಾರು ತಲೆಮಾರಿಗೆ ನುತಿಸುವುದು ನಿನ್ನ ಕಾರ್ಯಗಳನು I ತಿಳಸುವುದು ಪ್ರಭು, ನೀ ಮಾಡಿದೆಲ್ಲಾ ಮಹತ್ಕಾರ್ಯಗಳನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು