Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಓಬದ್ಯ 1:13 - ಕನ್ನಡ ಸತ್ಯವೇದವು C.L. Bible (BSI)

13 ನನ್ನ ಜನರ ಆಪತ್ಕಾಲದಲ್ಲಿ ನೀನು ಅವರ ಪುರದ್ವಾರದೊಳಗೆ ಪ್ರವೇಶಿಸಬಾರದಿತ್ತು. ಅವರ ಸೊತ್ತಿಗೆ ನೀನು ಕೈಹಾಕಬಾರದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನನ್ನ ಜನರ ವಿಪತ್ಕಾಲದಲ್ಲಿ ಅವರ ಪುರದ್ವಾರದೊಳಗೆ ಪ್ರವೇಶಿಸಬಾರದಾಗಿತ್ತು, ಅವರ ವಿಪತ್ಕಾಲದಲ್ಲಿ ಅವರ ಕೇಡಿಗೆ ನಿನ್ನಂಥವನ ಕಣ್ಣು ಅರಳಬಾರದಾಗಿತ್ತು. ಅವರ ವಿಪತ್ಕಾಲದಲ್ಲಿ ಅವರ ಆಸ್ತಿಯ ಮೇಲೆ ನೀನು ಕೈಹಾಕಬಾರದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನನ್ನ ಜನರ ವಿಪತ್ಕಾಲದಲ್ಲಿ ಅವರ ಪುರದ್ವಾರದೊಳಗೆ ಪ್ರವೇಶಿಸಬಾರದಾಗಿತ್ತು; ಅವರ ವಿಪತ್ಕಾಲದಲ್ಲಿ ಅವರ ಕೇಡಿಗೆ ನಿನ್ನಂಥವನ ಕಣ್ಣು ಅರಳಬಾರದಾಗಿತ್ತು; ಅವರ ವಿಪತ್ಕಾಲದಲ್ಲಿ ಅವರ ಸೊತ್ತಿಗೆ ನೀನು ಕೈಹಾಕಬಾರದಾಗಿತ್ತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನನ್ನ ಜನರ ನಗರದ ಬಾಗಿಲನ್ನು ನೀನು ಪ್ರವೇಶಿಸಿ ಅವರ ತೊಂದರೆಗಳನ್ನು ನೋಡಿ ನೀನು ಹಾಸ್ಯ ಮಾಡಿದೆ. ನೀನು ಹಾಗೆ ಮಾಡಬಾರದಾಗಿತ್ತು. ಅವರು ಸಂಕಟಪಡುತ್ತಿರುವಾಗ ನೀನು ಅವರ ಐಶ್ವರ್ಯವನ್ನು ಸೂರೆಮಾಡಿದೆ. ನೀನು ಹಾಗೆ ಮಾಡಬಾರದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನನ್ನ ಜನರ ಆಪತ್ತಿನ ದಿವಸದಲ್ಲಿ ಅವರ ದ್ವಾರಗಳ ಮೂಲಕ ಪ್ರವೇಶಿಸಬಾರದಿತ್ತು. ಹೌದು, ನೀನು ಅವರ ಆಪತ್ತಿನ ದಿವಸದಲ್ಲಿ ಅವರನ್ನು ಕೀಳು ದೃಷ್ಟಿಯಿಂದ ನೋಡಬಾರದಾಗಿತ್ತು. ಅವರ ಆಪತ್ತಿನ ದಿವಸದಲ್ಲಿ ಅವರ ಆಸ್ತಿಯ ಮೇಲೆ ಕೈ ಹಾಕಬಾರದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಓಬದ್ಯ 1:13
9 ತಿಳಿವುಗಳ ಹೋಲಿಕೆ  

ನೆಮ್ಮದಿಯಿಂದ ಬಾಳುವ ರಾಷ್ಟ್ರಗಳ ಮೇಲೆ ಬಹಳ ಸಿಟ್ಟುಗೊಂಡಿದ್ದೇನೆ. ಏಕೆಂದರೆ, ನಾನು ಜೆರುಸಲೇಮಿನ ವಿರುದ್ಧ ಕಿಂಚಿತ್ತೇ ಕೋಪಗೊಂಡಿದ್ದಾಗ ಅವರು ಕೇಡಿಗೆ ಕೇಡು ಕೂಡಿಸಿಬಿಟ್ಟರು.


“ನೀನು ‘ಇವೆರಡು ಜನಾಂಗಗಳೂ ಇವೆರಡು ದೇಶಗಳೂ ನನ್ನ ವಶವಾಗುವುವು, ನಾವು ಅವುಗಳನ್ನು ಅನುಭವಿಸುವೆವು’ ಎಂದುಕೊಂಡು ಅಲ್ಲಿನ ನನ್ನ ಸಾನ್ನಿಧ್ಯವನ್ನು ಅಲಕ್ಷ್ಯಮಾಡಿದ್ದೆ.


“ನೀನು ಇಸ್ರಯೇಲಿನ ಮೇಲೆ ದೀರ್ಘ ದ್ವೇಷವಿಟ್ಟು, ಅವರ ಅಪರಾಧದ ಕಡೆಗಾಲದಲ್ಲಿ ಆಪತ್ತು ಸಂಭವಿಸಿದಾಗ, ಅವರನ್ನು ಕತ್ತಿಯ ಬಾಯಿಗೆ ಗುರಿಮಾಡಿದ್ದೆ.


ಎಣಿಸಬಹುದಿದೆ ನನ್ನೆಲುಬುಗಳೆಲ್ಲವನು I ಹಿಗ್ಗುತಿಹರು ದುರುಗುಟ್ಟಿ ನೋಡೆನ್ನನು II


ಬಹುಶಃ ಸರ್ವೇಶ್ವರ ನನ್ನ ಕಷ್ಟವನ್ನು ನೋಡಿ ಈ ದಿನ ಶಾಪಕ್ಕೆ ಬದಲಾಗಿ ನನಗೆ ಶುಭವನ್ನು ಅನುಗ್ರಹಿಸಿಯಾರು,” ಎಂದು ಹೇಳಿದನು.


ಸಂಬಳಕ್ಕಾಗಿ ಈಜಿಪ್ಟ್ ಸೇರಿದ ದಂಡಾಳುಗಳು ನೋಡಲಿಕ್ಕೆ ಅವರು ಕೊಬ್ಬಿದ ಕರುಗಳು. ಆದರೂ ಬೆಂಗೊಟ್ಟು ಓಡಿಹೋಗಿರುವರು ನಿಲ್ಲದೆ, ವಿಪತ್ಕಾಲ, ದಂಡನೆಯ ದಿನ, ಬಂದೊದಗಿದೆ ಅವರಿಗೆ.


ಶತ್ರು ನಿಮ್ಮನ್ನು ನೋಡಿ, ‘ಆಹಾ ಈ ಪುರಾತನ ದುರ್ಗಗಳು ನಮ್ಮ ವಶವಾಗಿವೆ’ ಎಂದು ಹಿಗ್ಗಿಕೊಂಡದ್ದರಿಂದ ಈ ದೈವೋಕ್ತಿಯನ್ನು ನುಡಿಯಬೇಕೆಂದು ಸರ್ವೇಶ್ವರನಾದ ದೇವರ ಅಪ್ಪಣೆಯಾಯಿತು.”


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ : “ಅಯ್ಯೋ, ಎಲ್ಲಾ ಕಡೆಯೂ ತುಳಿಯಲ್ಪಟ್ಟು, ಹಾಳಾದ ನೀವು, ಜನಾಂಗಗಳಲ್ಲಿ ಉಳಿದವರ ವಶವಾಗಿದ್ದು ಹರಟೆಕೊಚ್ಚುವವರ ಬಾಯಿಗೆ ಬಿದ್ದು, ಜನರ ದೂಷಣೆಗೆ ಗುರಿಯಾಗಿದ್ದೀರಿ.


ನನ್ನ ವೈರಿಗೆ ಕೇಡುಬಂದಾಗ ನಾನು ಹಿಗ್ಗಿದೆನೋ? ಅವನ ವಿನಾಶಕ್ಕಾಗಿ ನಾನು ಸಂತೋಷಪಟ್ಟೆನೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು