Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 10:14 - ಕನ್ನಡ ಸತ್ಯವೇದವು C.L. Bible (BSI)

14 ಹೌದು ದೇವಾ, ನೀ ವಿಚಾರಿಪವನು; ದುಃಖದುಗುಡ ಲೆಕ್ಕಿಸುವವನು I ತಬ್ಬಲಿಗಳಿಗೆ ತಂದೆ ನೀನು, ನಿರ್ಗತಿಕ ನಿನಗೆ ಶರಣಾಗತನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನೀನು ಅವರ ಅನ್ಯಾಯ ಹಾಗು ಬಲಾತ್ಕಾರಗಳನ್ನು ನೋಡಿದ್ದಿ; ಅವುಗಳನ್ನು ವಿಚಾರಿಸುತ್ತೀ, ಗತಿಯಿಲ್ಲದವನು ತನ್ನನ್ನು ನಿನಗೇ ಒಪ್ಪಿಸುವನು; ದಿಕ್ಕಿಲ್ಲದವನಿಗೆ ನೀನೇ ದಿಕ್ಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನೀನು ಅವರ ಅನ್ಯಾಯಬಲಾತ್ಕಾರಗಳನ್ನು ನೋಡಿಯೇ ಇದ್ದೀ; ಅವುಗಳನ್ನು ವಿಚಾರಿಸುತ್ತೀ. ಗತಿಯಿಲ್ಲದವನು ತನ್ನನ್ನು ನಿನಗೇ ಒಪ್ಪಿಸುವನು; ದಿಕ್ಕಿಲ್ಲದವನಿಗೆ ನೀನೇ ದಿಕ್ಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೆಹೋವನೇ, ಆ ದುಷ್ಟರ ಕ್ರೂರವಾದ ಕಾರ್ಯಗಳನ್ನೂ ದುಷ್ಕೃತ್ಯಗಳನ್ನೂ ನೀನು ಖಂಡಿತವಾಗಿ ನೋಡುವೆ. ಅವುಗಳನ್ನು ನೋಡಿ ಕಾರ್ಯನಿರತನಾಗು. ಅನೇಕ ತೊಂದರೆಗಳಲ್ಲಿ ಸಿಕ್ಕಿಕೊಂಡಿರುವವರು ಸಹಾಯಕ್ಕಾಗಿ ನಿನ್ನ ಬಳಿಗೆ ಬರುವರು. ಅನಾಥರಿಗೆ ಸಹಾಯ ಮಾಡುವವನು ನೀನೇ. ಆದ್ದರಿಂದ ಅವರಿಗೆ ಸಹಾಯಮಾಡು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ದೇವರೇ, ನೀವಾದರೋ ಬಾಧೆಪಡುವವರ ಕಷ್ಟಗಳನ್ನು ನೋಡಿದ್ದೀರಿ; ಅವರ ಸಂಕಟವನ್ನು ಪರಿಗಣಿಸಿ, ನೀವೇ ನೋಡಿಕೊಳ್ಳಿರಿ. ಗತಿಯಿಲ್ಲದವರು ತಮ್ಮನ್ನು ನಿಮಗೇ ಒಪ್ಪಿಸಿಕೊಡುತ್ತಾರೆ; ನೀವೇ ದಿಕ್ಕಿಲ್ಲದವರಿಗೆ ಸಹಾಯ ಮಾಡುವವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 10:14
35 ತಿಳಿವುಗಳ ಹೋಲಿಕೆ  

ದಿವ್ಯಧಾಮದಲ್ಲಿಹ ಆ ದೇವ I ತಬ್ಬಲಿಗೆ ತಂದೆ, ವಿಧವೆಗಾಶ್ರಯ II


ರಕ್ಷಿಸುವನು ಪ್ರಭು ಪರದೇಶಿಗಳನು I ಆದರಿಸುವನು ಅನಾಥರನು, ವಿಧವೆಯರನು I ನಿರ್ಮೂಲ ಮಾಡುವನು ದುರ್ಜನರ ಮಾರ್ಗವನು II


ಅಸ್ಸೀರಿಯದಿಂದ ನಮಗೆ ರಕ್ಷಣೆ ದೊರಕದು. ನಾವು ಕಾಳಗದ ಕುದುರೆಗಳ ಮೇಲೆ ಇನ್ನೆಂದೂ ಸವಾರಿಮಾಡೆವು. ನಮ್ಮ ಕೈಗಳು ನಿರ್ಮಿಸಿರುವ ವಿಗ್ರಹಗಳನ್ನು ವೀಕ್ಷಿಸಿ, ‘ನೀವೇ ನಮ್ಮ ದೇವರು’ ಎಂದು ಜಪಿಸೆವು. ಓ ದೇವಾ, ದಿಕ್ಕಿಲ್ಲದವರಿಗೆ ಕರುಣೆ ತೋರಿಸುವವನು ನೀನೇ,” ಎಂದು ಹೇಳು.


ನೀನು ನಿನ್ನ ಅನಾಥರನ್ನು ನನಗೆ ಬಿಡು. ನಾನೇ ಅವರನ್ನು ನೋಡಿಕೊಳ್ಳುತ್ತೇನೆ. ನಿನ್ನ ವಿಧವೆಯರು ನನ್ನಲ್ಲಿ ಭರವಸೆ ಇಡಲಿ.”


ಪ್ರಭುವಿನ ಮೇಲೆ ಹಾಕು ನಿನ್ನ ಚಿಂತಾಭಾರವನು I ಉದ್ಧರಿಸುವನು, ಸಜ್ಜನರನೆಂದಿಗೂ ಕದಲಗೊಡಿಸನು II


ಅನಾಥರಿಗೆ ಮತ್ತು ವಿಧವೆಯರಿಗೆ ನ್ಯಾಯ ದೊರಕಿಸುತ್ತಾರೆ; ಪರದೇಷಿಗಳಾದವರಿಗೆ ಪ್ರೀತಿಯಿಂದ ಅನ್ನ ವಸ್ತ್ರಗಳನ್ನು ನೀಡುತ್ತಾರೆ.


ನಿಮ್ಮ ಚಿಂತೆಯನ್ನೆಲ್ಲಾ ಅವರಿಗೇ ಬಿಟ್ಟುಬಿಡಿ. ನಿಮ್ಮ ಮೇಲೆ ಅವರಿಗೆ ಲಕ್ಷ್ಯವಿದೆ.


ಆದ್ದರಿಂದ, ದೇವರ ಚಿತ್ತಾನುಸಾರ ಹಿಂಸೆಬಾಧೆಯನ್ನು ಅನುಭವಿಸುವವರು ತಮ್ಮ ಸತ್ಕ್ರಿಯೆಗಳಲ್ಲಿ ನಿರತರಾಗಿರಲಿ. ಸೃಷ್ಟಿಕರ್ತನಿಗೆ ಶರಣಾಗಲಿ. ಆತ ಅವರನ್ನೆಂದಿಗೂ ಕೈಬಿಡನು.


ಇದಕ್ಕಾಗಿಯೇ ಇಷ್ಟೆಲ್ಲಾ ಕಷ್ಟಕಾರ್ಪಣ್ಯಗಳನ್ನು ನಾಚಿಕೆಪಡದೆ ಅನುಭವಿಸುತ್ತಿದ್ದೇನೆ. ನಾನು ಯಾರಲ್ಲಿ ವಿಶ್ವಾಸವನ್ನಿಟ್ಟಿದ್ದೇನೆ ಎಂದು ಚೆನ್ನಾಗಿ ಬಲ್ಲೆ. ನನ್ನ ವಶಕ್ಕೆ ಒಪ್ಪಿಸಿರುವುದನ್ನು ಆ ದಿನದವರೆಗೂ ಕಾಪಾಡುವುದಕ್ಕೆ ಅವರು ಶಕ್ತರು. ಆದ್ದರಿಂದ ನಾನು ಪೂರ್ಣ ಭರವಸೆಯಿಂದ ಇದ್ದೇನೆ.


ಕೇಡನ್ನು ನೋಡಲಾರದಷ್ಟು ನಿಷ್ಕಳಂಕ ನಿಮ್ಮ ಕಣ್ಣು. ಕೆಡುಕನ್ನು ಸಹಿಸಲಾಗದಸ್ಟು ಪವಿತ್ರರು ನೀವು. ಇಂತಿರಲು ಕೆಡುಕನ್ನು ನೋಡಿಕೊಂಡಿರುವಿರೇಕೆ? ದುಷ್ಟನು ಶಿಷ್ಟನಾದವನನ್ನು ಕಬಳಿಸುತ್ತಿರುವುದನ್ನು ನೋಡಿ ಸುಮ್ಮನಿರುವಿರೇಕೆ?


ವಿನಾಶಕಾರನು ಬಂದೆರಗಿದ್ದಾನೆ ಬಾಬಿಲೋನಿನ ಮೇಲೆ ಅದರ ಶೂರರೋ ಸೆರೆಯಾಗಿಬಿಟ್ಟಿದ್ದಾರೆ ಅವರ ಬಿಲ್ಲುಗಳೋ ಮುರಿದುಹೋಗಿವೆ. ಸರ್ವೇಶ್ವರನು ಮುಯ್ಯಿತೀರಿಸುವ ದೇವರು ಆತ ಪ್ರತಿಕ್ರಿಯೆ ವ್ಯಕ್ತಪಡಿಸದೆ ಇರನು.


ಈ ಜನರ ನಡತೆ ನನ್ನ ಮುಖಕ್ಕೆ ಮರೆಯಾಗಿಲ್ಲ, ಎಲ್ಲವು ನನ್ನ ಕಣ್ಣಿಗೆ ಕಟ್ಟಿದಂತಿದೆ. ಅವರ ಅಕ್ರಮ ನನಗೆ ಗುಟ್ಟೇನೂ ಅಲ್ಲ, ಎಲ್ಲವು ಬಟ್ಟಬಯಲಾಗಿದೆ.


ಸರ್ವೇಶ್ವರನ ದೃಷ್ಟಿ ಸರ್ವವ್ಯಾಪ್ತ; ಕೆಟ್ಟವರ ಮೇಲೂ ಒಳ್ಳೆಯವರ ಮೇಲೂ ಆತನ ನೋಟ.


ನೀನೇ ನೋಡಿರುವೆ ಪ್ರಭು, ಇನ್ನು ಸುಮ್ಮನಿರಬೇಡ I ನನ್ನೊಡೆಯಾ, ನನಗಿನ್ನಾದರು ದೂರವಾಗಿರಬೇಡ II


ದುರುಳರು ಅರುಗಲೇ ಇರೆ, ನೆರವಿಗಾರೂ ಇಲ್ಲ I ನನ್ನಿಂದ ನೀ ದೂರಸರಿವುದು ಸರಿಯಲ್ಲ II


ನೀವು ಪರಲೋಕದಿಂದ ಅದನ್ನು ಕೇಳಿ ನಿಮ್ಮ ಭಕ್ತರ ವ್ಯಾಜ್ಯವನ್ನು ತೀರಿಸಿರಿ. ದುಷ್ಟನನ್ನು ಖಂಡಿಸಿ ಅವನ ತಪ್ಪನ್ನು ಅವನ ಮೇಲೆಯೇ ಹೊರಿಸಿರಿ; ಅವನು ಅಪರಾಧಿಯೆಂದು ತೋರಿಸಿಕೊಡಿ. ನೀತಿವಂತನಿಗೆ ಅವನ ನೀತಿಯ ಫಲವನ್ನು ಅನುಗ್ರಹಿಸಿ, ಅವನು ನೀತಿವಂತನೆಂದು ತೋರಿಸಿಕೊಡಿ.


ಅಹಾಬನಿಗೆ ಸರ್ವೇಶ್ವರ, ‘ನನ್ನ ಮಾತನ್ನು ಕೇಳು, ನೀನು ನಿನ್ನೆ ಸುರಿಸಿದ ನಾಬೋತನ ಮತ್ತು ಅವನ ಮಕ್ಕಳ ರಕ್ತವನ್ನು ನಿಶ್ಚಯವಾಗಿ ನೋಡಿದ್ದೇನೆ. ನೀನು ಅವರ ರಕ್ತವನ್ನು ಸುರಿಸಿದ ಹೊಲದಲ್ಲೇ ನಿನಗೆ ಮುಯ್ಯಿತೀರಿಸುವೆನು,’ ಎಂದು ಪ್ರವಾದಿಯಿಂದ ಹೇಳಿಸಿದ್ದು ನಿನಗೆ ನೆನಪಿರುತ್ತದಲ್ಲವೆ?’ ಎಂದಿದ್ದರು. ಸರ್ವೇಶ್ವರನ ಆ ನುಡಿ ನೆರವೇರುವಂತೆ ಇವನ ಶವವನ್ನು ಆ ಹೊಲದಲ್ಲೇ ಹಾಕಿಬಿಡು,” ಎಂದು ಹೇಳಿದನು.


ಆಗ ಅದೋನೀಬೆಜೆಕನು, “ಎಪ್ಪತ್ತು ಮಂದಿ ಅರಸರ ಕೈಕಾಲುಗಳ ಹೆಬ್ಬೆರಳುಗಳನ್ನು ನಾನು ಕತ್ತರಿಸಿದೆ; ನನ್ನ ಊಟದ ಮೇಜಿನ ಕೆಳಗೆ ಬೀಳುತ್ತಿದ್ದ ಚೂರುಪಾರುಗಳನ್ನು ಅವರು ತಿನ್ನುತ್ತಿದ್ದರು; ನಾನು ಅವರಿಗೆ ಮಾಡಿದಂತೆಯೇ ದೇವರು ನನಗೆ ಮಾಡಿದ್ದಾರೆ,” ಎಂದನು. ಅವನನ್ನು ಜೆರುಸಲೇಮಿಗೆ ಕರೆತರಲು ಅವನು ಅಲ್ಲೇ ನಿಧನನಾದನು.


ನಾವು ಯಾರಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ, ಅವರ ಕಣ್ಣಿಗೆ ಮುಚ್ಚುಮರೆಯಾದುದು ಯಾವುದೂ ಇಲ್ಲ. ಅವರ ದೃಷ್ಟಿಗೆ ಎಲ್ಲವೂ ಬಟ್ಟಬಯಲು.


“ಟೈರ್, ಸಿದೋನ್ ಮತ್ತು ಫಿಲಿಷ್ಟಿಯ ಪ್ರಾಂತ್ಯಗಳೇ, ನನ್ನ ಮೇಲೆ ನಿಮಗಿರುವ ದೂರು ಯಾವುದು? ನನಗೆ ಪ್ರತೀಕಾರ ಮಾಡಬೇಕೆಂದಿರುವಿರೋ? ಹಾಗೇನಾದರೂ ಮಾಡಿದ್ದೇ ಆದರೆ, ನೀವು ಮಾಡಿದ ಕೇಡನ್ನು ತಡಮಾಡದೆ ನಿಮ್ಮ ತಲೆಗೇ ತರುವೆನು.


ದಂಡನೆಯ ದಿನದಂದು ಏನು ಮಾಡುವಿರಿ? ದೂರದಿಂದ ಬರುವ ವಿನಾಶದಿಂದ ಹೇಗೆ ಪಾರಾಗುವಿರಿ? ಸಹಾಯಕ್ಕಾಗಿ ಯಾರ ಬಳಿಗೆ ಓಡುವಿರಿ? ನಿಮ್ಮ ಆಸ್ತಿಪಾಸ್ತಿಯನ್ನು ಎಲ್ಲಿ ಅವಿತಿಡುವಿರಿ?


ನನ್ನ ಕಣ್ಣಿಗೆ ಬೀಳದಂತೆ ಯಾವನಾದರು ಗುಪ್ತಸ್ಥಳಗಳಲ್ಲಿ ಮರೆಮಾಚಿಕೊಳ್ಳಲು ಸಾಧ್ಯವೇ? ನಾನು ಭೂಮ್ಯಾಕಾಶಗಳಲ್ಲಿ ವ್ಯಾಪಿಸಿರುವವನಲ್ಲವೆ?


ಇತ್ತ ಆ ಹುಡುಗನ ಕೂಗು ದೇವರಿಗೆ ಕೇಳಿಸಿತು. ದೇವದೂತನು ಆಕಾಶದಿಂದ ಹಾಗರಳನ್ನು ಕರೆದು, “ಹಾಗರಳೇ, ನಿನಗೇನು ಆಯಿತು? ಅಂಜಬೇಡ; ಆ ಹುಡುಗನು ಬಿದ್ದು ಇರುವ ಸ್ಥಳದಿಂದಲೇ ಅವನ ಕೂಗು ದೇವರನ್ನು ಮುಟ್ಟಿತು;


ಆತ ನನಗೆ, ‘ಲಾಬಾನನು ನಿನ್ನ ವಿಷಯದಲ್ಲಿ ನಡೆದುಕೊಂಡ ರೀತಿಯನ್ನು ನಾನು ನೋಡಿದ್ದೇನೆ. ಆದುದರಿಂದಲೇ ಮೇಕೆಗಳ ಮೇಲೆ ಹಾರುವ ಹೋತಗಳೆಲ್ಲವು ರೇಖೆ, ಚುಕ್ಕೆ, ಮಚ್ಚೆಗಳುಳ್ಳವುಗಳಾಗಿವೆ, ಕಣ್ಣೆತ್ತಿನೋಡು.


ಇಸ್ರಯೇಲರನ್ನು ನೋಡಿ ಅವರಲ್ಲಿ ಕನಿಕರಗೊಂಡರು.


ವಿಧವೆಯರನ್ನಾಗಲಿ ದಿಕ್ಕಿಲ್ಲದ ಮಕ್ಕಳನ್ನಾಗಲಿ ಬಾಧಿಸಬಾರದು.


“ನೀನು ಒಬ್ಬನ ಕಂಬಳಿಯನ್ನು ಅಡವು ಇಟ್ಟುಕೊಂಡರೆ ಸೂರ್ಯನು ಮುಳುಗುವಷ್ಟರಲ್ಲಿ ಅದನ್ನು ಹಿಂದಕ್ಕೆ ಕೊಡು.


ಬಹುಶಃ ಸರ್ವೇಶ್ವರ ನನ್ನ ಕಷ್ಟವನ್ನು ನೋಡಿ ಈ ದಿನ ಶಾಪಕ್ಕೆ ಬದಲಾಗಿ ನನಗೆ ಶುಭವನ್ನು ಅನುಗ್ರಹಿಸಿಯಾರು,” ಎಂದು ಹೇಳಿದನು.


ಜೆಕರ್ಯನ ತಂದೆ ಯೆಹೋಯಾದನಿಂದ ತನಗಾದ ಉಪಕಾರವನ್ನು ನೆನಪುಮಾಡಿಕೊಳ್ಳದೆ ಈ ಯೆಹೋವಾಷನು ಅವನ ಮಗನನ್ನು ಕೊಲ್ಲಿಸಿದನು. ಜೆಕರೀಯನು ಸಾಯುವಾಗ, “ಸರ್ವೇಶ್ವರಸ್ವಾಮಿಯೇ ಇದನ್ನು ನೋಡಿ ತಕ್ಕ ಶಾಸ್ತಿಮಾಡಲಿ,” ಎಂದನು.


ವಿರೋಧಿಗಳ ವಶಕ್ಕೆ ಎನ್ನನು ನೀ ಬಿಟ್ಟುಬಿಡಲಿಲ್ಲ I ನಿರಾತಂಕದೆಡೆಯಲಿ ನನ್ನ ನಿಲ್ಲಿಸಿದೆಯಲ್ಲಾ II


ನೀಡುವನು ಮಡದಿ ಮಕ್ಕಳನು ಒಂಟಿಗನಿಗೆ I ಬಿಡುಗಡೆಯ ಭಾಗ್ಯವನು ನೊಂದ ಬಂಧಿಗಳಿಗೆ I ದ್ರೋಹಿಗಳಿಗಾದರೋ ಮರಳುಗಾಡೇ ಮಾಳಿಗೆ II


ಗರ್ವಿಷ್ಠನ ಮನೆಯನ್ನು ಸರ್ವೇಶ್ವರ ಕೆಡವಿಬಿಡುವನು; ವಿಧವೆಯ ಎಲ್ಲೆ ಮೇರೆಯನ್ನು ಸುಭದ್ರಪಡಿಸುವನು.


ಸರ್ವೇಶ್ವರಾ, ನಿನಗೆ ತಿಳಿದಿದೆ ನನಗಾದ ಅನ್ಯಾಯ ದೊರಕುವಂತೆ ಮಾಡು ನನಗೆ ನ್ಯಾಯ.


ನೀನೇ ನೋಡಿರುವೆ ವೈರಿಗಳು ನನ್ನ ವಿರುದ್ಧ ಸಾಧಿಸಿದ ಹಗೆಯನ್ನು ಅವರು ಕಲ್ಪಿಸಿಕೊಂಡ ಕುಯುಕ್ತಿಯನ್ನು.


ಸರ್ವೇಶ್ವರ ಇಂತೆನ್ನುತ್ತಾರೆ: ಪರಿಹರಿಸುವೆನು ಜನರ ಭ್ರಷ್ಟತನವನು ಪ್ರೀತಿಸುವೆನು ಮನಃಪೂರ್ವಕವಾಗಿ ಅವರನು ತ್ಯಜಿಸಿಬಿಡುವೆನು ಅವರ ಮೇಲಿದ್ದ ಕೋಪವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು