Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 100:2 - ಕನ್ನಡ ಸತ್ಯವೇದವು C.L. Bible (BSI)

2 ಅತಿ ಸಂತೋಷದಿಂದ ಸೇವೆ ಮಾಡಿ ಆತನಿಗೆ I ಹಾಡುತ, ಪಾಡುತ, ಬನ್ನಿ ಆತನ ಸನ್ನಿಧಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯೆಹೋವನನ್ನು ಸಂತೋಷದಿಂದ ಸೇವಿಸಿರಿ; ಕೀರ್ತನೆ ಹಾಡುತ್ತಾ ಆತನ ಸನ್ನಿಧಿಗೆ ಬನ್ನಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯೆಹೋವನನ್ನು ಸಂತೋಷದಿಂದ ಸೇವಿಸಿರಿ; ಉತ್ಸಾಹಧ್ವನಿಮಾಡುತ್ತಾ ಆತನ ಸನ್ನಿಧಿಗೆ ಬನ್ನಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೆಹೋವನ ಸೇವೆಯನ್ನು ಸಂತೋಷದಿಂದ ಮಾಡಿರಿ; ಹರ್ಷಗೀತೆಗಳೊಡನೆ ಆತನ ಸನ್ನಿಧಿಗೆ ಬನ್ನಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಸಂತೋಷದಿಂದ ಯೆಹೋವ ದೇವರನ್ನು ಆರಾಧಿಸಿರಿ; ಆನಂದದಿಂದ ಹಾಡುತ್ತಾ ಅವರ ಮುಂದೆ ಬನ್ನಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 100:2
15 ತಿಳಿವುಗಳ ಹೋಲಿಕೆ  

ಪ್ರಭುವಿನಲ್ಲಿ ನೀವು ಸತತವೂ ಆನಂದಿಸಿರಿ. ಆನಂದಿಸಬೇಕೆಂದು ಮತ್ತೆ ಒತ್ತಿ ಹೇಳುತ್ತೇನೆ.


ಮಧುರದನಿಗೈವುದು ಎನ್ನಧರ ನಿನ್ನ ಗುಣಗಾನದಲಿ I ನೀನುದ್ಧರಿಸಿದ ಎನ್ನ ಮನ ಭಾಗಿಯಾಗುವುದಾ ಗಾನದಲಿ II


ಆತನ ಸನ್ನಿಧಿ ಸೇರೋಣ ಕೃತಜ್ಞತಾಸ್ತುತಿಯೊಂದಿಗೆ I ಜಯಜಯಕಾರ ಮಾಡೋಣ ಕೀರ್ತನೆಗಳಿಂದಾತನಿಗೆ II


“ನಿಮಗೆ ಸರ್ವಸಮೃದ್ಧಿಯುಂಟಾದ ಕಾಲದಲ್ಲಿ ನೀವು ನಿಮ್ಮ ದೇವರಾದ ಸರ್ವೇಶ್ವರನಿಗೆ ಹರ್ಷಾನಂದದಿಂದ ಸೇವೆಮಾಡದೆಹೋದಿರಿ.


ಜನಸಮೂಹದೊಡನೆ ನಾ ಜಯಜಯಕಾರ ಮಾಡುತ I ಸ್ತುತಿಗೀತೆಗಳ ಹಾಡುತ, ತೀರ್ಥಯಾತ್ರೆ ಗೈಯುತ I ದೇಗುಲಕೆ ತೆರಳಿದಾ ಸವಿನೆನಪು ಮನಕರಗಿಪುದು ನಿರುತ II


ನೀವು, ನಿಮ್ಮ ಗಂಡು ಹೆಣ್ಣು ಮಕ್ಕಳು, ದಾಸದಾಸಿಯರು ಹಾಗು ನಿಮ್ಮೊಡನೆ ಸೊತ್ತನ್ನು ಹೊಂದದೆ ಇರುವ ನಿಮ್ಮ ಊರಿನ ಲೇವಿಯರು ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ಸಂತೋಷವಾಗಿರಬೇಕು.


ಮತ್ತು ಅವರು ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳದಲ್ಲಿ ನೀವು, ನಿಮ್ಮ ಗಂಡುಹೆಣ್ಣು ಮಕ್ಕಳು, ಗಂಡುಹೆಣ್ಣು ಆಳುಗಳು, ನಿಮ್ಮ ಊರಲ್ಲಿರುವ ಲೇವಿಯರು, ಪರದೇಶದವರು, ತಾಯಿತಂದೆಯಿಲ್ಲದವರು ಹಾಗು ವಿಧವೆಯರು ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ಸಂಭ್ರಮದಿಂದಿರಬೇಕು.


ಅದರಲ್ಲಿ ನೀವೂ ನಿಮ್ಮ ಗಂಡುಹೆಣ್ಣು ಮಕ್ಕಳೂ ಗಂಡುಹೆಣ್ಣು ಆಳುಗಳೂ ನಿಮ್ಮ ಊರಲ್ಲಿರುವ ಲೇವಿಯರೂ ಪರದೇಶದವರೂ ತಾಯಿತಂದೆಯಿಲ್ಲದವರೂ ಹಾಗು ವಿಧವೆಯರೂ ಸಂಭ್ರಮದಿಂದಿರಬೇಕು.


ಎಂಟನೆಯ ದಿವಸ ಜನರಿಗೆ ಹೋಗುವುದಕ್ಕೆ ಅಪ್ಪಣೆಯಾಯಿತು. ಅವರು ಅರಸನನ್ನು ವಂದಿಸಿ, ಸರ್ವೇಶ್ವರ ತಮ್ಮ ದಾಸ ದಾವೀದನಿಗೂ ತಮ್ಮ ಪ್ರಜೆಗಳಾದ ಇಸ್ರಯೇಲರಿಗೂ ಮಾಡಿದ ಸರ್ವೋಪಕಾರಗಳನ್ನು ಸ್ಮರಿಸಿ, ಆನಂದಚಿತ್ತರಾಗಿ ಹರ್ಷಿಸುತ್ತಾ, ತಮ್ಮ ತಮ್ಮ ನಿವಾಸಗಳಿಗೆ ತೆರಳಿದರು.


ಯಾಜಕರ ಮತ್ತು ಲೇವಿಯರ ಆಯಾ ವರ್ಗಗಳವರನ್ನು ಅವರವರಿಗೆ ನೇಮಕವಾದ ಸೇವೆಗೆ ಅಂದರೆ, ದಹನಬಲಿ, ಶಾಂತಿಸಮಾಧಾನ ಬಲಿ ಇವುಗಳನ್ನು ಸಮರ್ಪಿಸುವುದಕ್ಕೂ ಸರ್ವೇಶ್ವರನ ಪಾಳೆಯದ ದ್ವಾರಗಳಲ್ಲಿ ಸೇರಿ ಸರ್ವೇಶ್ವರನನ್ನು ಆರಾಧಿಸುತ್ತಾ ಕೀರ್ತಿಸುತ್ತಾ ಕೃತಜ್ಞತಾಸ್ತುತಿ ಮಾಡುತ್ತಾ ಇರುವುದಕ್ಕೂ ಹಿಜ್ಕೀಯನು ನೇಮಿಸಿದನು.


ಅರಸ ಹಿಜ್ಕೀಯನೂ ಪದಾಧಿಕಾರಿಗಳೂ ದಾವೀದನ ಮತ್ತು ದರ್ಶಿಯಾದ ಆಸಾಫನ ಕೀರ್ತನೆಗಳಿಂದ ಸರ್ವೇಶ್ವರನನ್ನು ಸ್ತುತಿಸಬೇಕೆಂದು ಲೇವಿಯರಿಗೆ ಆಜ್ಞಾಪಿಸಿದರು. ಅವರು ಉತ್ಸಾಹದಿಂದ ಸ್ತುತಿಸುತ್ತಾ ತಲೆಬಾಗಿ ನಮಸ್ಕರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು