Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 102:13 - ಕನ್ನಡ ಸತ್ಯವೇದವು C.L. Bible (BSI)

13 ಎದ್ದು ಸಿಯೋನಿಗೆ ತೋರು ಸೌಜನ್ಯತೆ I ಅದಕ್ಕೆ ದಯೆತೋರಿಸುವ ಸಮಯವಿದೇ I ನಿಯಮಿತ ಕಾಲವಿದೋ ಬಂದುಬಿಟ್ಟಿದೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನೀನು ಎದ್ದು ಚೀಯೋನನ್ನು ಕರುಣಿಸುವಿ. ಅದಕ್ಕೆ ಕೃಪೆತೋರಿಸುವ ಸಮಯ ಇದೇ; ನಿಯಮಿತ ಕಾಲವು ಬಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನೀನು ಎದ್ದು ಚೀಯೋನನ್ನು ಕರುಣಿಸುವಿ. ಅದಕ್ಕೆ ಕೃಪೆತೋರಿಸುವ ಸಮಯ ಇದೇ; ನಿಯವಿುತಕಾಲವು ಬಂದದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನೀನು ಎದ್ದು ಚೀಯೋನನ್ನು ಸಂತೈಸುವೆ. ನೀನು ಚೀಯೋನಿಗೆ ದಯೆತೋರುವ ಕಾಲ ಬರುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನೀವು ಎದ್ದು ಚೀಯೋನನ್ನು ಕನಿಕರಿಸುವಿರಿ; ಅದನ್ನು ಕರುಣಿಸುವ ಕಾಲ ಇದೇ; ಹೌದು, ನೀವು ನಿರ್ಣಯಿಸಿದ ಸಮಯವು ಬಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 102:13
26 ತಿಳಿವುಗಳ ಹೋಲಿಕೆ  

ಕಾಲವು ಪರಿಪಕ್ವವಾದಾಗ ದೇವರು ತಮ್ಮ ಪುತ್ರನನ್ನೇ ಕಳುಹಿಸಿಕೊಟ್ಟರು. ಇವರು ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು ಬಿಡುಗಡೆ ಮಾಡುವುದಕ್ಕಾಗಿಯೂ ದೇವಪುತ್ರರ ಪದವಿಯನ್ನು ನಮಗೆ ಒದಗಿಸಿಕೊಡುವುದಕ್ಕಾಗಿಯೂ ಒಬ್ಬ ಸ್ತ್ರೀಯಲ್ಲಿ ಜನಿಸಿದರು. ಧರ್ಮಶಾಸ್ತ್ರಕ್ಕೆ ಅಧೀನರಾಗಿಯೇ ಹುಟ್ಟಿದರು.


ನಿನಗೆ ಬೆಳಕು ಬಂದಿದೆ ಜೆರುಸಲೇಮೇ, ಏಳು, ಪ್ರಕಾಶಿಸು; ನಿನ್ನ ಮೇಲೆ ಉದಯಿಸಿದೆ ಸರ್ವೇಶ್ವರನ ತೇಜಸ್ಸು.


ಜೆರುಸಲೇಮಿನೊಡನೆ ಪ್ರೀತಿಯಿಂದ ಮಾತನಾಡಿ; ಅದರ ಊಳಿಗತನ ಮುಗಿಯಿತೆನ್ನಿ; ತಕ್ಕ ಪ್ರಾಯಶ್ಚಿತ್ತವಾಗಿದೆ ಅದು ಗೈದ ದೋಷಕೆ ಸರ್ವೇಶ್ವರ ಸ್ವಾಮಿಯಿಂದಲೇ ಅದರ ಎಲ್ಲಾ ಪಾಪಕೃತ್ಯಗಳಿಗೆ ಇಮ್ಮಡಿ ಶಿಕ್ಷೆಯಾಗಿದೆ ಎಂದು ಕೂಗಿ ಹೇಳಿ ಆ ನಗರಿಗೆ.”


ಎದ್ದು ಬಂದು ಪ್ರಭು ನಿನ್ನ ನೆರವನ್ನೊದಗಿಸು I ನಿನ್ನಚಲ ಪ್ರೇಮದಿಂದ ನಮ್ಮನು ಉದ್ಧರಿಸು II


ಪ್ರಿಯರೇ, ಮತ್ತೊಂದು ವಿಷಯವನ್ನು ಮರೆಯದಿರಿ: ಪ್ರಭುವಿನ ದೃಷ್ಟಿಯಲ್ಲಿ ಒಂದು ದಿನ ಸಾವಿರ ವರ್ಷಗಳಂತೆಯೂ ಮತ್ತು ಸಾವಿರ ವರ್ಷಗಳು ಒಂದು ದಿನದಂತೆಯೂ ಇವೆ.


ಯೇಸು ಪ್ರತ್ಯುತ್ತರವಾಗಿ, “ಸಮಯ ಸಂದರ್ಭಗಳು ನನ್ನ ಪಿತನ ಸ್ವಾಧೀನದಲ್ಲಿವೆ. ಅವುಗಳನ್ನು ತಿಳಿಯುವುದು ನಿಮ್ಮ ಕೆಲಸವಲ್ಲ.


ದೇವರ ಆ ದಿನವನ್ನು ಎದುರುನೋಡುತ್ತಾ ಅದು ಬೇಗನೆ ಬರಲೆಂದು ಹಾರೈಸಬೇಕು. ಆ ದಿನ, ಆಕಾಶಮಂಡಲವು ಅಗ್ನಿಯಿಂದ ಉರಿದುಹೋಗುವುದು; ಸೂರ್ಯ, ಚಂದ್ರ, ನಕ್ಷತ್ರ, ಗ್ರಹಗಳು ಶಾಖದಿಂದ ಕರಗಿಹೋಗುವುವು.


ಹೇ ಪ್ರಭು, ಎಚ್ಚರಗೊಳ್ಳು : ನ್ಯಾಯವನು ದೇವಾ, ನಿರ್ಣಯಿಸು I ಕೋಪದಿಂದೆದ್ದು ವಿರೋಧಿಗಳ ಕ್ರೋಧವನು ಭಂಗಪಡಿಸು II


ಅವನು, “ದಾನಿಯೇಲನೇ ಹೋಗು; ಈ ಮಾತುಗಳು ಅಂತ್ಯಕಾಲದವರೆಗೂ ಮುಚ್ಚಲ್ಪಟ್ಟು ಮುದ್ರಿತವಾಗಿವೆ.


ಇಸ್ರಯೇಲಿನ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರನ ನುಡಿ ಹೀಗಿದೆ: “ನಾನು ನನ್ನ ಜನರ ಗುಲಾಮಗಿರಿಯನ್ನು ನೀಗಿಸುವೆನು. ಆಗ, ‘ನ್ಯಾಯದ ನಿವಾಸವೇ, ಪರಿಶುದ್ಧ ಪರ್ವತವೇ, ಸರ್ವೇಶ್ವರ ನಿನ್ನನ್ನು ಆಶೀರ್ವದಿಸಲಿ’ ಎಂಬ ಮಾತು ಜುದೇಯ ನಾಡಿನಲ್ಲೂ ಅದರ ನಗರಗಳಲ್ಲೂ ಮತ್ತೆ ಕೇಳಿಬರುವುದು.


ಹೊರನಾಡಿನ ರಾಯಭಾರಿಗಳಿಗೆ ನಮ್ಮ ಉತ್ತರವೇನು? “ಸರ್ವೇಶ್ವರ ಸ್ವಾಮಿ ಸ್ಥಾಪಿಸಿಹರು ಸಿಯೋನನ್ನು, ದೀನದಲಿತರು ಆಶ್ರಯಿಸಿಕೊಳ್ಳುವರು ಅದನ್ನು.”


ಈ ಪರಿ ನುಡಿದಿರುವನಾ ದೇವನು : I “ಕ್ಲುಪ್ತಕಾಲದಲಿ ನಾ ನೀಡುವೆನು I ತೀರ್ಪನು, ನ್ಯಾಯವಾದ ತೀರ್ಪನು II


ಸಿಯೋನಿಗೆ ದೇವಾ, ಶುಭವನು ಕರುಣಿಸು I ಜೆರುಸಲೇಮ್ ಕೋಟೆಯನು ಮರಳಿ ಎಬ್ಬಿಸು II


ದೇವರು ಮೋಶೆಗೆ ಮತ್ತೆ ಇಂತೆಂದರು: “ನೀನು ಇಸ್ರಯೇಲರಿಗೆ, ‘ನಿಮ್ಮ ಪೂರ್ವಜರಾದ ಅಬ್ರಹಾಮ, ಇಸಾಕ ಹಾಗು ಯಕೋಬರ ದೇವರಾಗಿರುವ ಸರ್ವೇಶ್ವರ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ’ ಎಂದು ಹೇಳು. ಇದು ಸದಾಕಾಲಕ್ಕೂ ನನ್ನ ಹೆಸರು. ಈ ಹೆಸರಿನಿಂದಲೆ ತಲತಲಾಂತರಕ್ಕೂ ನನ್ನನ್ನು ಸ್ಮರಿಸಬೇಕು.


ಬೆಟ್ಟಗಳು ಹುಟ್ಟುವುದಕೆ ಮುಂಚಿನಿಂದ I ಭೂದೇಶಗಳು ಆಗುವುದಕೆ ಮೊದಲಿಂದ I ನೀನೆಮಗೆ ದೇವರು ಯುಗಯುಗಗಳಿಂದ II


ಕಾಡುಕೋಣದ ಕೊಂಬಿನ ಬಲವನು ನನಗಿತ್ತಿರುವೆ I ಚೈತನ್ಯದ ತೈಲದಿಂದ ನನ್ನನು ಅಭ್ಯಂಜಿಸಿರುವೆ II


ನಿನ್ನ ನಾಮ ಪ್ರಭು ಶಾಶ್ವತ I ನಿನ್ನ ಸ್ಮರಣೆಯೂ ಅನವರತ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು