Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 102:14 - ಕನ್ನಡ ಸತ್ಯವೇದವು C.L. Bible (BSI)

14 ಕಲ್ಲುಕುಪ್ಪೆಯಾಗಿದ್ದರೂ ನಿನ್ನ ಭಕ್ತರಿಗದು ಪ್ರಿಯ I ಅದರ ವಿನಾಶವನು ಕಂಡು ಕರಗಿಹೋಗಿದೆ ಹೃದಯ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅದು ಕಲ್ಲುಕುಪ್ಪೆಯಾಗಿ ಹೋಗಿದ್ದರೂ, ಅದು ನಿನ್ನ ಸೇವಕರಿಗೆ ಅತಿಪ್ರಿಯವಾಗಿದೆ; ಅದರ ಧೂಳಿಗೆ ಅವರು ಮರಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅದು ಕಲ್ಲುಕುಪ್ಪೆಯಾಗಿ ಹೋಗಿದ್ದರೂ ನಿನ್ನ ಸೇವಕರಿಗೆ ಅತಿಪ್ರಿಯವಾಗಿದೆ; ಅದರ ಧೂಳಿಗೆ ಅವರು ಮರಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಿನ್ನ ಸೇವಕರು ಆಕೆಯ (ಜೆರುಸಲೇಮಿನ) ಕಲ್ಲುಗಳನ್ನು ಪ್ರೀತಿಸುವರು. ಅವರು ಆ ಪಟ್ಟಣದ ಧೂಳನ್ನು ಇಷ್ಟಪಡುವರು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅದು ಕಲ್ಲು ಕುಪ್ಪೆಯಾಗಿ ಹೋಗಿದ್ದರೂ, ನಿಮ್ಮ ಸೇವಕರಿಗೆ ಅತಿ ಪ್ರಿಯವಾಗಿದೆ; ಅದರ ಧೂಳಿಗೆ ಅವರು ಮರಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 102:14
20 ತಿಳಿವುಗಳ ಹೋಲಿಕೆ  

“ನನ್ನ ಸಹೋದರರ ಮುಂದೆ ಹಾಗು ಸಮಾರಿಯದ ದಂಡಿನವರ ಮುಂದೆ ಅಶಕ್ತರಾದ ಈ ಯೆಹೂದ್ಯರು ಮಾಡುವುದಾದರೂ ಏನು? ಇವರು ತಮ್ಮನ್ನೇ ಬಲಪಡಿಸಿಕೊಳ್ಳಬೇಕೆಂದು ಇರುವರೋ? ಬಲಿಯರ್ಪಿಸುವರೋ? ಈ ದಿನವೇ ಈ ಕೆಲಸವನ್ನು ಮಾಡಿಮುಗಿಸುವರೋ? ಸುಟ್ಟುಹೋದ ಪಟ್ಟಣದ ಬೂದಿಯ ರಾಶಿಯೊಳಗೆ ಹುದುಗಿಹೋದ ಕಲ್ಲುಗಳನ್ನು ಬದುಕಿಸುವರೋ?’ ಎಂದು ಹೇಳಿ ಯೆಹೂದ್ಯರನ್ನು ಪರಿಹಾಸ್ಯ ಮಾಡಿದನು.


ಹೊಕ್ಕಿದರು ದೇವಾ, ಮ್ಲೇಚ್ಛರು ನಿನ್ನ ಸ್ವಂತನಾಡನು I ಹೊಲೆ ಮಾಡಿಹರು ನಿನ್ನ ಪವಿತ್ರ ದೇವಾಲಯವನುI ಹಾಳುದಿಬ್ಬವನ್ನಾಗಿಸಿಹರು ಜೆರುಸಲೇಮ್ ನಗರವನು II


ಇತ್ತ ಯೆಹೂದ್ಯರೇ, “ಹೊರೆಹೊರುವವರ ಬಲ ಕುಂದಿಹೋಯಿತು. ಧೂಳಿನ ರಾಶಿ ವಿಪರೀತ ಆಗಿದೆ; ಈ ಗೋಡೆಯನ್ನು ಕಟ್ಟುವುದು ನಮ್ಮಿಂದಾಗದು,” ಎಂದರು.


ಇದಾದ ಮೇಲೆ ನಾವು ಕಟ್ಟುವ ಕೆಲಸವನ್ನು ಮುಂದುವರಿಸಿದೆವು. ಜನರು ಮನಸ್ಸುಮಾಡಿ ಅರ್ಧಗೋಡೆಯನ್ನು ಕಟ್ಟಿದರು.


ಬಳಿಕ ನಾನು ಅವರಿಗೆ, “ನಮ್ಮ ದುರವಸ್ಥೆ ನಿಮ್ಮ ಕಣ್ಣಮುಂದಿರುತ್ತದಲ್ಲವೇ? ಜೆರುಸಲೇಮ್ ಪಟ್ಟಣ ಹಾಳುಬಿದ್ದಿದೆ; ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿವೆ; ಬನ್ನಿ, ಜೆರುಸಲೇಮಿನ ಗೋಡೆಯನ್ನು ಕಟ್ಟೋಣ, ಹೀಗೆ ಮಾಡಿದರೆ ನಮ್ಮ ಮೇಲಿನ ನಿಂದೆ ನೀಗುವುದು,” ಎಂದು ಹೇಳಿದೆ.


ನಾನು ರಾಜನಿಗೆ, “ರಾಜಾಧಿರಾಜರು ಚಿರಂಜೀವಿಯಾಗಿರಲಿ! ನನ್ನ ಪೂರ್ವಿಕರ ಸಮಾಧಿಗಳಿರುವ ಪಟ್ಟಣವು ಹಾಳಾಗಿ ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿವೆ; ಹೀಗಿರುವಲ್ಲಿ, ನನ್ನ ಮುಖ ಕಳೆಗುಂದದೆ ಇರಲು ಸಾಧ್ಯವೆ?,” ಎಂದು ಹೇಳಿದೆ.


ಅವರು ನನಗೆ, “ಸೆರೆಯಿಂದ ತಪ್ಪಿಸಿಕೊಂಡು ಈಗ ಆ ನಾಡಿನಲ್ಲಿ ವಾಸಿಸುತ್ತಿರುವವರು ಮಹಾಕಷ್ಟನಿಂದೆಗಳಿಗೆ ಒಳಗಾಗಿದ್ದಾರೆ. ಜೆರುಸಲೇಮಿನ ಪೌಳಿಗೋಡೆಯನ್ನು ಕೆಡವಲಾಗಿದೆ. ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿವೆ,” ಎಂದು ಹೇಳಿದರು.


ಎಜ್ರನ ಮಾತುಗಳು ಇವು: “ನಮ್ಮ ಪಿತೃಗಳ ದೇವರಾದ ಸರ್ವೇಶ್ವರಸ್ವಾಮಿಗೆ ಸ್ತೋತ್ರವಾಗಲಿ! ಜೆರುಸಲೇಮಿನಲ್ಲಿರುವ ದೇವಾಲಯವನ್ನು ಶೋಭಿಸುವ ಸ್ಥಿತಿಗೆ ತರುವುದಕ್ಕೆ ಸರ್ವೇಶ್ವರನ ಪ್ರೇರಣೆಯಿಂದಲೇ ಅರಸನು ಮನಸ್ಸು ಮಾಡಿದ್ದಾನೆ:


ಈ ಪ್ರಕಟನೆಯನ್ನು ಕೇಳಿ, ಯೆಹೂದ ಮತ್ತು ಬೆನ್ಯಾಮೀನ್ ಗೋತ್ರಕ್ಕೆ ಸೇರಿದ ಮುಖ್ಯಸ್ಥರು, ಯಾಜಕರು, ಲೇವಿಯರು ಹಾಗು ದೈವಪ್ರೇರಿತರಾದ ಎಲ್ಲರು ಜೆರುಸಲೇಮಿನಲ್ಲಿ ಸರ್ವೇಶ್ವರನಿಗೆ ಪುನಃ ಆಲಯಕಟ್ಟುವುದಕ್ಕಾಗಿ ಹೊರಟರು.


ಸರ್ವೇಶ್ವರಾ, ನಿಮ್ಮ ಸಮಸ್ತ ಧರ್ಮಕಾರ್ಯಗಳಿಗೆ ಅನುಸಾರವಾಗಿ ನಿಮ್ಮ ನಗರವೂ ನಿಮ್ಮ ಪವಿತ್ರ ಪರ್ವತವೂ ಆದ ಜೆರುಸಲೇಮ್ ಮೇಲೆ ನಿಮಗಿರುವ ಕೋಪವನ್ನೂ ರೋಷಾಗ್ನಿಯನ್ನೂ ದಯಮಾಡಿ ತೊಲಗಿಸಿಬಿಡಿ. ನಮ್ಮ ಮತ್ತು ನಮ್ಮ ಪೂರ್ವಜರ ಪಾಪಾಪರಾಧಗಳ ನಿಮಿತ್ತ ಜೆರುಸಲೇಮ್ ಮತ್ತು ನಿಮ್ಮ ಜನತೆ ನೆರೆಹೊರೆಯವರೆಲ್ಲರ ನಿಂದೆಗೆ ಗುರಿಯಾಗಿವೆ.


ಸರ್ವೇಶ್ವರಸ್ವಾಮಿಯ ಅನುಗ್ರಹದಿಂದ ತನ್ನ ನಾಡಿನಲ್ಲಿ ಒಳ್ಳೆಯ ಮಳೆ ಬೆಳೆಗಳಾಗಿವೆ ಎಂಬ ಸಮಾಚಾರ ಮೋವಾಬ್ ನಾಡಿನಲ್ಲಿದ್ದ ನವೊಮಿಗೆ ತಿಳಿದು ಬಂದಿತು.


ಉಲ್ಲಂಘನೆಯಾಗಿದೆ ಪ್ರಭು, ನಿನ್ನ ಧರ್ಮಶಾಸ್ತ್ರ I ಸಮಯ ಬಂದೊದಗಿದೆ, ಆಗು ನೀನು ಕಾರ್ಯತತ್ಪರ II


ದಯೆತೋರಿಸುವರು ಸರ್ವೇಶ್ವರ ಯಕೋಬ್ಯರಿಗೆ, ಆರಿಸಿಕೊಳ್ಳುವರು ಮತ್ತೆ ಇಸ್ರಯೇಲರನ್ನೆ, ನೆಲೆಗೊಳಿಸುವರವರನ್ನು ತಾಯಿನಾಡಿನಲ್ಲೆ. ಹೊರನಾಡಿಗರು ಕೂಡಿಕೊಳ್ಳುವರು ಅವರೊಡನೆ, ಸೇರಿಕೊಳ್ಳುವರವರು ಯಕೋಬ ಮನೆತನಕ್ಕೆ.


ಜೆರುಸಲೇಮಿನೊಡನೆ ಪ್ರೀತಿಯಿಂದ ಮಾತನಾಡಿ; ಅದರ ಊಳಿಗತನ ಮುಗಿಯಿತೆನ್ನಿ; ತಕ್ಕ ಪ್ರಾಯಶ್ಚಿತ್ತವಾಗಿದೆ ಅದು ಗೈದ ದೋಷಕೆ ಸರ್ವೇಶ್ವರ ಸ್ವಾಮಿಯಿಂದಲೇ ಅದರ ಎಲ್ಲಾ ಪಾಪಕೃತ್ಯಗಳಿಗೆ ಇಮ್ಮಡಿ ಶಿಕ್ಷೆಯಾಗಿದೆ ಎಂದು ಕೂಗಿ ಹೇಳಿ ಆ ನಗರಿಗೆ.”


ಸರ್ವೇಶ್ವರನಾದ ನಾನು ಸಂತೈಸದೆ ಬಿಡೆನು ಸಿಯೋನನ್ನು, ಉದ್ಧರಿಸುವೆನು ಆ ಹಾಳುಬಿದ್ದ ಸ್ಥಳಗಳೆಲ್ಲವನು. ಮಾರ್ಪಡಿಸುವೆನು ಕಾಡುನೆಲವನು ಏದೆನ್ ಉದ್ಯಾನದಂತೆ ಮರುಭೂಮಿಯನು, ದೇವತೆಗಳ ಉದ್ಯಾನವಾಗುವಂತೆ ಹರ್ಷೋಲ್ಲಾಸ, ಸ್ತುತಿಸ್ತೋತ್ರ, ಮಧುರಗಾನ ಅಲ್ಲಿ ನೆಲೆಸುವಂತೆ.


“ಸರ್ವೇಶ್ವರ ಹೀಗೆನ್ನುತ್ತಾರೆ: ‘ಬಾಬಿಲೋನಿನ ರಾಜ್ಯ ಎಪ್ಪತ್ತು ವರ್ಷ ಪ್ರಬಲಿಸಿದ ಮೇಲೆ ನಾನು ನಿಮ್ಮನ್ನು ಸಂಧಿಸಿ ಈ ಸ್ಥಳಕ್ಕೆ ಮರಳಿ ಬರಮಾಡುವೆನು. ಈ ಶುಭವಾಕ್ಯವನ್ನು ನಿಮ್ಮ ಮೇಲ್ಮೆಗಾಗಿ ನೆರವೇರಿಸುವೆನು.


ಯಕೋಬನ ಮನೆಗಳ ದುರವಸ್ಥೆಯನ್ನು ತಪ್ಪಿಸುವೆನು ಜೆರುಸಲೇಮಿನ ನಿವಾಸಗಳನ್ನು ನಿಶ್ಚಯವಾಗಿ ಕರುಣಿಸುವೆನು. ಅದರ ಹಾಳುದಿಬ್ಬಗಳ ಮೇಲೆ ಹೊಸನಗರ ಕಟ್ಟುವೆನು ಅದರ ಅರಮನೆ ಮೊದಲಿದ್ದ ಸ್ಥಳದಲ್ಲೆ ನೆಲೆಯಾಗಿ ನಿಲ್ಲುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು