Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 102:18 - ಕನ್ನಡ ಸತ್ಯವೇದವು C.L. Bible (BSI)

18 ಮುಂದಣ ಸಂತತಿಗಿದು ಶಾಸನವಾಗಿರಲಿ I ಮುಂದೆ ಹುಟ್ಟುವ ಪ್ರಜೆ ಪ್ರಭುವನು ಹೊಗಳಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಇದು ಮುಂದಣ ಸಂತಾನದವರಿಗೋಸ್ಕರ ಶಾಸನವಾಗಿರಲಿ, ಮುಂದೆ ಹುಟ್ಟುವ ಪ್ರಜೆಯು ಯೆಹೋವನನ್ನು ಕೊಂಡಾಡುತ್ತಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಇದು ಮುಂದಣ ಸಂತಾನದವರಿಗೋಸ್ಕರ ಶಾಸನವಾಗಿರಲಿ. ಮುಂದೆ ಹುಟ್ಟುವ ಪ್ರಜೆಯು ಯಾಹುವನ್ನು ಕೊಂಡಾಡುತ್ತಾ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಮುಂದಿನ ತಲೆಮಾರುಗಳವರಿಗಾಗಿ ಇವುಗಳನ್ನು ಬರೆದಿಡಿ. ಮುಂದಿನ ಕಾಲದಲ್ಲಿ ಅವರು ಯೆಹೋವನನ್ನು ಸ್ತುತಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಇದು ಮುಂದಿನ ಸಂತತಿಗೋಸ್ಕರ ಲಿಖಿತವಾಗಿರಲಿ; ಹುಟ್ಟಲಿಕ್ಕಿರುವ ಜನರು ಯೆಹೋವ ದೇವರನ್ನು ಸ್ತುತಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 102:18
21 ತಿಳಿವುಗಳ ಹೋಲಿಕೆ  

ಪ್ರಾಚೀನ ಗ್ರಂಥಗಳಲ್ಲಿ ಬರೆದಿರುವುದೆಲ್ಲವೂ ನಮ್ಮ ಉಪದೇಶಕ್ಕಾಗಿಯೇ ಬರೆಯಲಾಗಿದೆ. ಪವಿತ್ರಗ್ರಂಥ ಪಠನದಿಂದ ದೊರಕುವ ಸ್ಥೈರಣೆ ಮತ್ತು ಉತ್ತೇಜನದಿಂದಾಗಿ ನಾವು ನಿರೀಕ್ಷೆಯುಳ್ಳವರಾಗಬೇಕೆಂದೇ ಇವೆಲ್ಲಾ ಬರೆಯಲಾಗಿದೆ.


ನಾ ಸೃಷ್ಟಿಸಿದ ಆಪ್ತ ಜನಕೆ ನೀಡುವೆನು ಜಲಪಾನವನು; ಎಂದೇ ಸ್ತುತಿಸಿಕೊಂಡಾಡುವರು ನನ್ನನು.”


ನನ್ನ ಮರಣಾ ನಂತರವೂ ಈ ವಿಷಯಗಳನ್ನು ನೀವು ಯಾವಾಗಲೂ ಜ್ಞಾಪಕಕ್ಕೆ ತಂದುಕೊಳ್ಳಲು ಸಾಧ್ಯವಾಗುವಂತೆ ಈಗಲೇ ನನ್ನಿಂದಾದಷ್ಟು ಪ್ರಯತ್ನಿಸುತ್ತೇನೆ.


ಇದೆಲ್ಲ ಅವರಿಗೆ ಸಂಭವಿಸಿದುದು ಇತರರಿಗೆ ನಿದರ್ಶನವಾಗಿರಲೆಂದು. ಇವುಗಳನ್ನು ಬರೆದಿಟ್ಟಿರುವುದು, ಯುಗಾಂತ್ಯಕ್ಕೆ ಬಂದಿರುವ ನಮಗೆ ಮುನ್ನೆಚ್ಚರಿಕೆಯಾಗಿರಲೆಂದು.


ನಾವಾದರೋ ದೇವರ ಕಲಾಕೃತಿಗಳು. ಕ್ರಿಸ್ತಯೇಸುವಿನಲ್ಲಿ ನಾವು ಸತ್ಕಾರ್ಯಗಳನ್ನು ಮಾಡುತ್ತಾ ಬಾಳಬೇಕೆಂದು ತಾವು ಮೊದಲೇ ನಿರ್ಣಯಿಸಿದ್ದಂತೆ ದೇವರು ನಮ್ಮನ್ನು ಸೃಷ್ಟಿಸಿದ್ದಾರೆ.


ಇಲ್ಲಿ ಬರೆದವುಗಳ ಉದ್ದೇಶ ಇಷ್ಟೇ; ಯೇಸು, ದೇವರಪುತ್ರ ಹಾಗು ಲೋಕೋದ್ಧಾರಕ ಎಂದು ನೀವು ವಿಶ್ವಾಸಿಸಬೇಕು; ವಿಶ್ವಾಸಿಸಿ ಅವರ ಹೆಸರಿನಲ್ಲಿ ಸಜ್ಜೀವವನ್ನು ಪಡೆಯಬೇಕು.


ದಾನಿಯೇಲನಾದ ನಾನು ಪವಿತ್ರಗ್ರಂಥಗಳನ್ನು ಪರೀಕ್ಷಿಸಿ, ಸರ್ವೇಶ್ವರಸ್ವಾಮಿ ಪ್ರವಾದಿ ಯೆರೆಮೀಯನಿಗೆ ದಯಪಾಲಿಸಿದ ವಾಕ್ಯಾನುಸಾರ ಜೆರುಸಲೇಮ್ ಪಾಳುಬಿದ್ದಿರಬೇಕಾದ ಪೂರ್ಣಕಾಲಾವಧಿ ಎಪ್ಪತ್ತು ವರ್ಷಗಳೆಂದು ತಿಳಿದುಕೊಂಡೆ.


ಕರೆತರುವೆ ಈ ಪರಿ ನನ್ನ ನಾಮಧಾರಿಗಳೆಲ್ಲರನು ನನ್ನ ಮಹಿಮೆಗಾಗಿ ನಾನು ಸೃಷ್ಟಿಸಿ ರೂಪಿಸಿದವರನು.


ದೇವಾ, ನರೆಯ ಮುದುಕನಾಗಿರುವಾಗ ನನ್ನ ಕೈ ಬಿಡಬೇಡಯ್ಯಾ I ನಿನ್ನ ಪರಾಕ್ರಮವನು ಮುಂದಿನ ಪೀಳಿಗೆಗೆ ಸಾರುವ ತನಕ ಬೇಡವಯ್ಯಾ I ನಿನ್ನ ಪ್ರತಾಪವನು ತಲತಲಾಂತರದವರೆಗೆ ಪ್ರಕಟಿಸುವೆನಯ್ಯಾ II


ಕಣ್ಣಿಟ್ಟು ನೋಡಿರಿ ಅದರ ಕೋಟೆಗಳನು I ಚೆನ್ನಾಗಿ ಗಮನಿಸಿರಿ ಅದರ ಪ್ರಾಕಾರಗಳನು II


ಆಗ ಸರ್ವೇಶ್ವರ, “ಭೂಮಿಯ ಮೇಲೆ ಅಮಾಲೇಕ್ಯರ ಹೆಸರೇ ಇಲ್ಲದಂತೆ ಮಾಡುವೆನು ಎಂಬ ಈ ಮಾತನ್ನು ಜ್ಞಾಪಕಾರ್ಥವಾಗಿ ಪುಸ್ತಕದಲ್ಲಿ ಬರೆ ಮತ್ತು ಯೆಹೋಶುವನಿಗೆ ಮನದಟ್ಟಾಗುವಂತೆ ಮಾಡು” ಎಂದು ಮೋಶೆಗೆ ಹೇಳಿದರು.


ಭೂಮ್ಯಾಕಾಶಗಳು ಆತನನು ಕೊಂಡಾಡಲಿ I ಸಾಗರಗಳು, ಜಲಚರಗಳು ಆತನನು ಭಜಿಸಲಿ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು