Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 103:17 - ಕನ್ನಡ ಸತ್ಯವೇದವು C.L. Bible (BSI)

17 ಭಯಭಕ್ತರಿಗೆ ಪ್ರಭುವಿನ ಪ್ರೀತಿಯಾದರೋ ಯುಗಯುಗಾಂತರಕು I ಅವರ ಮಕ್ಕಳ ಮಕ್ಕಳಿಗೆ ಆತನ ನೀತಿಯು ತಲತಲಾಂತರಕು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆದರೆ ಯೆಹೋವನಲ್ಲಿ ಭಯಭಕ್ತಿಯುಳ್ಳವರ ಮೇಲೆ, ಆತನ ದಯೆಯು ಯುಗಯುಗಾಂತರಗಳವರೆಗೂ ಇರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆದರೆ ಯೆಹೋವನಲ್ಲಿ ಭಯಭಕ್ತಿಯುಳ್ಳವರ ಮೇಲೆ ಆತನ ದಯವು ಯುಗಯುಗಾಂತರಗಳವರೆಗೂ ಇರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆದರೆ ಯೆಹೋವನು ತನ್ನ ಭಕ್ತರನ್ನು ಪ್ರೀತಿಸುತ್ತಲೇ ಬಂದನು. ಇನ್ನು ಮುಂದೆಯೂ ಪ್ರೀತಿಸುತ್ತಲೇ ಇರುವನು. ಆತನು ಅವರ ಮಕ್ಕಳಿಗೂ ಮೊಮ್ಮಕ್ಕಳಿಗೂ ಒಳ್ಳೆಯವನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆದರೆ ಯೆಹೋವ ದೇವರ ಪ್ರೀತಿಯು ಅವರಿಗೆ ಭಯಪಡುವವರ ಮೇಲೆ ಯುಗಯುಗಾಂತರಕ್ಕೂ ಇರುವುದು, ಅವರ ನೀತಿಯು ಮಕ್ಕಳ ಮಕ್ಕಳಿಗೂ ನೆಲೆಸಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 103:17
27 ತಿಳಿವುಗಳ ಹೋಲಿಕೆ  

ಹೌದು, ಪ್ರಭುವೆನಿತೋ ಒಳ್ಳೆಯವನು I ಇರುವುದಾತನ ಪ್ರೀತಿ ಯುಗಯುಗಕು I ಆತನ ಸತ್ಯತೆ ತಲತಲಾಂತರಕು II


ನಾವು ಸ್ವಂತ ಸತ್ಕಾರ್ಯಗಳಿಂದಲ್ಲ, ದೇವರ ಯೋಜನೆ ಹಾಗೂ ಅನುಗ್ರಹಗಳಿಂದಲೇ ಜೀವೋದ್ಧಾರ ವರವನ್ನು ಪಡೆದಿದ್ದೇವೆ; ದೇವರ ಪ್ರಜೆಗಳೆನಿಸಿಕೊಂಡಿದ್ದೇವೆ. ಈ ಅನುಗ್ರಹವನ್ನು ಕ್ರಿಸ್ತಯೇಸುವಿನಲ್ಲಿ ಅನಾದಿಯಿಂದಲೇ ನಮಗೆ ಕೊಡಲಾಯಿತು.


ನನ್ನನ್ನು ಪ್ರೀತಿಸಿ ನನ್ನ ಆಜ್ಞೆಗಳನ್ನು ಕೈಗೊಳ್ಳುವವರಿಗಾದರೋ ಸಾವಿರ ತಲೆಗಳವರೆಗೆ ದಯೆತೋರಿಸುತ್ತೇನೆ.


ದೇವರು ಮಾನವನನ್ನು ಹೇಗೆ ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುತ್ತಾರೆ ಎಂಬುದನ್ನು ಶುಭಸಂದೇಶವು ಪ್ರಕಟಿಸುತ್ತದೆ. ಇಂಥ ಸಂಬಂಧವು ಆದಿಯಿಂದ ಅಂತ್ಯದವರೆಗೂ ವಿಶ್ವಾಸದಿಂದ ಮಾತ್ರ ಸಾಧ್ಯ. “ಯಾರು ದೇವರೊಡನೆ ಸತ್ಸಂಬಂಧ ಹೊಂದಿರುತ್ತಾರೋ ಅವರು ವಿಶ್ವಾಸದಿಂದಲೇ ಸಜ್ಜೀವವನ್ನು ಪಡೆಯುತ್ತಾರೆ," ಎಂದು ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.


ಆಕಾಶಮಂಡಲವನು ನೋಡಿ ಕಣ್ಣೆತ್ತಿ ಭೂಮಂಡಲದತ್ತ ನೋಡಿ ಕೆಳಗೆ ದಿಟ್ಟಿಸಿ. ಆಕಾಶ ಚದರಿಹೋಗುವುದು ಹೊಗೆಯಂತೆ ಭೂಮಿ ಹರಿದುಹೋಗುವುದು ಬಟ್ಟೆಯಂತೆ ಸಾಯುವರು ಭೂನಿವಾಸಿಗಳು ಅದರಂತೆ. ನಾ ಕೊಡುವ ವಿಮೋಚನೆಯೋ ನಿಲ್ಲುವುದು ಶಾಶ್ವತವಾಗಿ ನಾ ನೀಡುವ ಮುಕ್ತಿಯೋ ಅಳಿದುಹೋಗದು ಭಂಗವಾಗಿ.


ಸರ್ವೇಶ್ವರನಾದ ನಾನು ದೂರದಿಂದ ಅದಕ್ಕೆ ದರ್ಶನಕೊಟ್ಟು: ‘ನಾನು ನಿನ್ನನ್ನು ಪ್ರೀತಿಸುವುದು ಶಾಶ್ವತ ಪ್ರೇಮದಿಂದ. ಈ ಕಾರಣದಿಂದ ನಿನ್ನನ್ನು ಆಕರ್ಷಿಸಿಕೊಂಡಿದ್ದೇನೆ ಅಚಲ ಪ್ರೇಮದಿಂದ.


ಸಲ್ಲಿಸಿ ನೀವೆಲ್ಲ ಪ್ರಭುವಿಗೆ ಧನ್ಯವಾದ I ಆತ ಒಳ್ಳೆಯವ, ಆತನ ಪ್ರೀತಿ ಶಾಶ್ವತ II


ನಮ್ಮ ದೇವರ ಮತ್ತು ಉದ್ಧಾರಕ ಯೇಸುಕ್ರಿಸ್ತರ ಸತ್ಸಂಬಂಧದ ಮೂಲಕ ನಮ್ಮಂತೆಯೇ ಅಮೂಲ್ಯವಾದ ವಿಶ್ವಾಸವನ್ನು ಹೊಂದಿರುವ ಭಕ್ತಾದಿಗಳಿಗೆ - ಯೇಸುಕ್ರಿಸ್ತರ ದಾಸನೂ ಪ್ರೇಷಿತನೂ ಆದ ಸಿಮೋನ ಪೇತ್ರನು ಬರೆಯುವ ಪತ್ರ:


ದೇವರು ನಮ್ಮ ಪಿತೃಗಳಿಗೆ ಮಾಡಿದ ವಾಗ್ದಾನಗಳನ್ನು ನೆರವೇರಿಸಿ ತಮ್ಮ ಪ್ರಾಮಾಣಿಕತೆಯನ್ನು ವ್ಯಕ್ತಪಡಿಸುವಂತೆ


ಪ್ರಕಟವಾಗಲಿ ನಿನ್ನ ರಕ್ಷಾಕಾರ್ಯ ಭಕ್ತರಿಗೆ I ನಿನ್ನ ಮಹಿಮಾಶಕ್ತಿ ಅವರ ಸಂತಾನಕೆ II


ನನ್ನ ಜನರೇ, ಮೋವಾಬಿನ ಅರಸನಾದ ಬಾಲಾಕನು ಕೊಟ್ಟ ಸಲಹೆಯನ್ನು ನೆನಪಿಗೆ ತಂದುಕೊಳ್ಳಿ. ಬೆಯೋರನ ಮಗನಾದ ಬಿಳಾಮನು ಕೊಟ್ಟ ಉತ್ತರವನ್ನು ಜ್ಞಾಪಿಸಿಕೊಳ್ಳಿ. ನೀವು ತಿಟ್ಟೀಮನ್ನು ಬಿಟ್ಟಂದಿನಿಂದ ಗಿಲ್ಗಾಲನ್ನು ಸೇರುವ ತನಕ ನಡೆದುದನೆಲ್ಲಾ ಸ್ಮರಿಸಿಕೊಳ್ಳಿ. ಆಗ ಸರ್ವೇಶ್ವರ ನಿಮ್ಮನ್ನು ರಕ್ಷಿಸಲು ಮಾಡಿದ ಮಹತ್ಕಾರ್ಯಗಳು ನಿಮಗೆ ಮನದಟ್ಟಾಗುವುವು.”


ಇಂತಿರಲು ನನ್ನ ದಾಸನಾದ ಇಸ್ರಯೇಲೇ, ನಾನು ಆಯ್ದುಕೊಂಡ ಯಕೋಬೇ, ನನ್ನ ಗೆಳೆಯ ಅಬ್ರಹಾಮನ ಸಂತತಿಯೇ,


ನೆನೆಸಿಕೋ ಪ್ರಭು, ನಿನ್ನ ನಿರಂತರ ಕರುಣೆಯನು I ಆದಿಯಿಂದ ನೀ ತೋರಿದಚಲ ಪ್ರೀತಿಯನು II


ಸಾರುವರು ಮುಂದಿನ ಜನತೆಗುದ್ಧಾರವನು I ಅರುಹುವರು ಆತನೆಸಗಿದ ಮಹತ್ಕಾರ್ಯವನು II


ಆದರೂ ಅವರು ನಿಮ್ಮ ಪಿತೃಗಳಲ್ಲಿ ಇಷ್ಟವುಳ್ಳವರಾಗಿ ಅವರನ್ನು ಪ್ರೀತಿಸಿದರು. ಈಗ ನಿಮ್ಮ ಅನುಭವಕ್ಕೆ ಬಂದಿರುವಂತೆ, ಅವರ ತರುವಾಯ ಅವರ ಸಂತತಿಯವರಾದ ನಿಮ್ಮನ್ನೇ ಎಲ್ಲ ಜನಾಂಗಗಳಿಂದ ಆರಿಸಿಕೊಂಡರು.


“ಅಧರ್ಮವನ್ನು ಕೊನೆಗಾಣಿಸುವುದಕ್ಕೆ ಪಾಪಗಳನ್ನು ತೀರಿಸುವುದಕ್ಕೆ, ಅಪರಾಧವನ್ನು ನಿವಾರಿಸುವುದಕ್ಕೆ, ಸನಾತನ ಧರ್ಮವನ್ನು ಸ್ಥಾಪಿಸುವುದಕ್ಕೆ, ದರ್ಶನವನ್ನೂ ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥ ಮಾಡುವುದಕ್ಕೆ, ಅತಿಪರಿಶುದ್ಧವಾದುದನ್ನು ಅಭಿಷೇಕಿಸುವುದಕ್ಕೆ ನಿನ್ನ ಜನಕ್ಕೂ ನಿನ್ನ ಪವಿತ್ರನಗರಕ್ಕೂ ಏಳೆಪ್ಪತ್ತು ವರ್ಷಗಳು ಕಳೆಯಬೇಕೆಂದು ನಿಷ್ಕರ್ಷೆಯಾಗಿದೆ.


ಬರಮಾಡುವೆನು ಮುಕ್ತಿಯನು ಹತ್ತಿರಕೆ ಅದಿನ್ನು ದೂರವಿರದು ನಿಮಗೆ. ತಡವಾಗದು ನಿಮಗೆ ನನ್ನ ರಕ್ಷಣೆ ಸಾಧಿಸುವೆನು ರಕ್ಷಣೆಯನ್ನು ಸಿಯೋನಿನಲೇ, ಬೀರುವೆನು ನನ್ನ ಮಹಿಮೆಯನ್ನು ಇಸ್ರಯೇಲ ಮೇಲೆ.”


ಘನತೆ ಗೌರವವುಳ್ಳವು ಆತನ ಎಲ್ಲ ಕಾರ್ಯ I ನಿಲ್ಲುವುದು ಆತನ ನ್ಯಾಯನೀತಿಯು ನಿತ್ಯ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು