Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 103:8 - ಕನ್ನಡ ಸತ್ಯವೇದವು C.L. Bible (BSI)

8 ಪ್ರಭು ದಯಾಳು, ಕೃಪಾಪೂರ್ಣನು I ಸಹನಶೀಲನು, ಪ್ರೀತಿಮಯನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆಹೋವನು ಕನಿಕರವೂ, ದಯೆಯೂ, ದೀರ್ಘಶಾಂತಿಯೂ, ಪೂರ್ಣಪ್ರೀತಿಯೂ ಉಳ್ಳವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯೆಹೋವನು ಕನಿಕರವೂ ದಯೆಯೂ ದೀರ್ಘಶಾಂತಿಯೂ ಪೂರ್ಣಪ್ರೀತಿಯೂ ಉಳ್ಳವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯೆಹೋವನು ಕನಿಕರವುಳ್ಳವನೂ ಕೃಪಾಪೂರ್ಣನೂ ತಾಳ್ಮೆಯುಳ್ಳವನೂ ಪ್ರೀತಿಪೂರ್ಣನೂ ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೆಹೋವ ದೇವರು, ಅನುಕಂಪವೂ ದಯೆಯೂ ದೀರ್ಘಶಾಂತಿಯೂ ಪೂರ್ಣ ಪ್ರೀತಿಯೂ ಉಳ್ಳವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 103:8
17 ತಿಳಿವುಗಳ ಹೋಲಿಕೆ  

ಪ್ರಭು, ನೀ ದಯಾಳು, ದೇವಾ ನೀ ಕರುಣಾಮೂರ್ತಿ I ಸಹನಶೀಲನು, ಸತ್ಯಸ್ವರೂಪಿ, ಪ್ರೇಮಮೂರ್ತಿ II


ನಿಮ್ಮ ಉಡುಪುಗಳನ್ನು ಅಲ್ಲ, ಹೃದಯಗಳನ್ನು ಸೀಳಿರಿ: ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯ ಕಡೆಗೆ ತಿರುಗಿಕೊಳ್ಳಿ; ಅವರು ದಯಾವಂತರು, ಕರುಣಾಮೂರ್ತಿ, ಸಹನಶೀಲ, ಪ್ರೀತಿಮಯ, ವಿಧಿಸಬೇಕಾಗಿದ್ದ ದಂಡನೆಗಾಗಿ ಮನನೊಂದುಕೊಳ್ಳುವಂಥವರು.


ಸರ್ವೇಶ್ವರ ಶಾಂತಿಸ್ವರೂಪಿ; ಆದರೆ ಆತನ ಶಕ್ತಿ ಅಪಾರ, ಅಪರಾಧಿಗಳನ್ನು ಆತ ಶಿಕ್ಷಿಸದೆ ಬಿಡ; ಗಾಳಿಬಿರುಗಾಳಿಗಳ ನಡುವೆ ಆತನ ಹಾದಿ; ಮೋಡಗಳು ಆತನ ನಡೆಯಿಂದೇಳುವ ಧೂಳಿ.


ಪ್ರಭು ದಯಾನಿಧಿ, ಕೃಪಾಸಾಗರನು I ಸಹನಶೀಲನು, ಪ್ರೀತಿಪೂರ್ಣನು II


ಪ್ರಭು, ನೀನು ದಯಾವಂತನು, ಕ್ಷಮಿಸುವವನು I ಮೊರೆಯಿಡುವವರಿಗೆ ನೀನು ಕೃಪಾಪೂರ್ಣನು II


ತಾಳಿದವನು ಬಾಳಿಯಾನು ಎಂದು ಹೇಳುತ್ತೇವಲ್ಲವೇ? ಯೋಬನ ತಾಳ್ಮೆಯನ್ನು ಕುರಿತು ನೀವು ಕೇಳಿದ್ದೀರಿ. ಅಂತ್ಯದಲ್ಲಿ ಆತನಿಗೆ ಸರ್ವೇಶ್ವರ ದಯಪಾಲಿಸಿದ್ದನ್ನು ಬಲ್ಲಿರಿ. ದೇವರ ದಯೆ ಅನಂತ, ಅವರ ಅನುಕಂಪ ಅಪಾರ.


ಆಗ ಅವನು ಹೀಗೆಂದು ಮೊರೆಯಿಟ್ಟನು: “ಸ್ವಾಮೀ, ಈ ರೀತಿ ಸಂಭವಿಸುವುದೆಂದು ನಾನು ಸ್ವದೇಶವನ್ನು ಬಿಡುವ ಮುನ್ನವೇ ನಿಮಗೆ ಹೇಳಿದ್ದೆನಲ್ಲವೆ? ಈ ಕಾರಣದಿಂದಲೇ ಅಲ್ಲವೆ ನಾನು ತಾರ್ಷಿಷಿಗೆ ಓಡಿಹೋಗಲು ಪ್ರತ್ನಿಸಿದ್ದು? ನೀವು ಪ್ರೀತಿಸ್ವರೂಪಿ, ಕರುಣಾಮಯಿ, ಸಹನಾಶೀಲರಾದ ದೇವರು, ವಿಧಿಸಬೇಕೆಂದಿದ್ದ ಶಿಕ್ಷೆಯನ್ನು ಹಿಂತೆಗೆದುಕೊಳ್ಳುವ ದೇವರು - ಎಂದು ಆಗಲೇ ನನಗೆ ತಿಳಿದಿತ್ತು.


ಬಿಟ್ಟುಬಿಡಲಿ ದುಷ್ಟನು ತನ್ನ ದುರ್ಮಾರ್ಗವನು ತೊರೆದುಬಿಡಲಿ ದುರುಳನು ದುರಾಲೋಚನೆಗಳನು. ಹಿಂದಿರುಗಿ ಬರಲಿ ಸರ್ವೇಶ್ವರನ ಬಳಿಗೆ ಕರುಣೆ ತೋರುವನು ಆತನು ಅವನಿಗೆ. ಆಶ್ರಯಪಡೆಯಲಿ ಅವನು ನಮ್ಮ ದೇವರಿಂದ ಕ್ಷಮಿಸುವನಾತನು ಮಹಾಕೃಪೆಯಿಂದ.


‘ಸರ್ವೇಶ್ವರ ದೀರ್ಘಶಾಂತನು, ಪ್ರೀತಿಮಯನು, ಪಾಪ-ಅಪರಾಧಗಳನ್ನು ಕ್ಷಮಿಸುವವನು, ಆದರೂ ಶಿಕ್ಷಿಸದೆ ಬಿಡದವನು, ತಂದೆಗಳ ಪಾಪಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುವವನು,’ ಎಂದು ಹೇಳಿದ್ದೀರಿ. ಆ ಮಾತನ್ನು ನೆನಪಿಗೆ ತಂದುಕೊಳ್ಳಿ.


ಇಸ್ರಯೇಲೇ, ನಂಬಿಕೊಂಡಿರು ಪ್ರಭುವನೆ I ಆತನಲ್ಲಿದೆ ಕರುಣೆ, ಪೂರ್ಣವಿಮೋಚನೆ II


ಮರೆತುಬಿಟ್ಟರು ನೀವೆಸಗಿದ ಮಹಾತ್ಕಾರ್ಯಗಳನು ಹಟಹಿಡಿದರು ತಮಗೊಬ್ಬ ನಾಯಕನ ನೇಮಿಸಿಕೊಳ್ಳಲು; ಈಜಿಪ್ಟಿಗೆ ತೆರಳಲಿದ್ದರು ಮರಳಿ ಗುಲಾಮರಾಗಲು. ನೀವಾದರೋ ಪಾಪಿಗಳನು ಕ್ಷಮಿಸುವವರು ದಯಾಪೂರಿತರು, ದೀರ್ಘಶಾಂತರು, ಕೃಪಾಳು ದೇವರು, ಅವರನು ಕೈಬಿಡದೆ ಕಾಪಾಡಿ ನಡೆಸಿದವರು.


ನನ್ನನ್ನು ಪ್ರೀತಿಸಿ ನನ್ನ ಆಜ್ಞೆಗಳನ್ನು ಕೈಗೊಳ್ಳುವವರಿಗಾದರೋ ಸಾವಿರ ತಲೆಗಳವರೆಗೆ ದಯೆತೋರಿಸುತ್ತೇನೆ.


ನೀವು ಸಾವಿರಾರು ತಲಾಂತರಗಳವರೆಗೂ ದಯೆತೋರುವವರು. ಆದರೆ ಹೆತ್ತವರ ದೋಷಫಲವನ್ನು ಅವರ ತರುವಾಯ ಮಕ್ಕಳ ಮಡಲಿಗೆ ಹಾಕುವವರು. ನೀವು ಮಹಾಪರಾಕ್ರಮಿಯಾದ ದೇವರು, ‘ಸೇನಾಧೀಶ್ವರ ಸರ್ವೇಶ್ವರ’ ಎಂಬುದು ನಿಮ್ಮ ನಾಮಧೇಯ.


ಪಾರುಮಾಡುವುದವರನು ನಿನ್ನ ಸಾನ್ನಿಧ್ಯ ಸೆರಗು, ಜನರೊಳಸಂಚಿನಿಂದ I ದೂರವಿಡುವುದವರನು ನಿನ್ನಾಸರೆಯು, ವ್ಯಾಜ್ಯಮಾಡುವ ಜಿಹ್ವೆಯಿಂದ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು