Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 105:15 - ಕನ್ನಡ ಸತ್ಯವೇದವು C.L. Bible (BSI)

15 “ನಾನಭಿಷೇಕಿಸಿದವರನಿದೋ ಮುಟ್ಟಬೇಡಿ I ನನ್ನ ಪ್ರವಾದಿಗಳಿಗೆ ಕೇಡು ಮಾಡಬೇಡಿ” II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 “ನಾನು ಅಭಿಷೇಕಿಸಿದವರನ್ನು ಮುಟ್ಟಬಾರದು, ನನ್ನ ಪ್ರವಾದಿಗಳಿಗೆ ಯಾವ ಕೇಡನ್ನೂ ಮಾಡಬಾರದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನಾನು ಅಭಿಷೇಕಿಸಿದವರನ್ನು ಮುಟ್ಟಬಾರದು, ನನ್ನ ಪ್ರವಾದಿಗಳಿಗೆ ಯಾವ ಕೇಡನ್ನೂ ಮಾಡಬಾರದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 “ನಾನು ಆರಿಸಿಕೊಂಡಿರುವ ಜನರಿಗೆ ಕೇಡುಮಾಡಬೇಡಿ. ನನ್ನ ಪ್ರವಾದಿಗಳಿಗೆ ಯಾವ ಕೆಟ್ಟದ್ದನ್ನೂ ಮಾಡಬೇಡಿ” ಎಂದು ಆತನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 “ನನ್ನ ಅಭಿಷಿಕ್ತರನ್ನು ಮುಟ್ಟಬೇಡಿರಿ, ನನ್ನ ಪ್ರವಾದಿಗಳಿಗೆ ಕೇಡು ಮಾಡಬೇಡಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 105:15
14 ತಿಳಿವುಗಳ ಹೋಲಿಕೆ  

ತಮ್ಮ ಮಹಿಮೆಯನ್ನು ತಿಳಿಸುವುದಕ್ಕಾಗಿ ನನ್ನನ್ನು ಕಳುಹಿಸಿದ ಸೇನಾಧೀಶ್ವರ ಸರ್ವೇಶ್ವರ ನಿಮ್ಮನ್ನು ಸೂರೆಮಾಡಿದ ರಾಷ್ಟ್ರಗಳಿಗೆ ಕೊಡುವ ಎಚ್ಚರಿಕೆ ಇದು:


ಬಳಿಕ ತನ್ನ ಪ್ರಜೆಗಳಿಗೆ ಈ ಆಜ್ಞೆಯನ್ನು ಹೊರಡಿಸಿದನು. “ಈ ಮನುಷ್ಯನಿಗಾಗಲಿ ಇವನ ಹೆಂಡತಿಗಾಗಲಿ ಕೇಡುಮಾಡುವವನಿಗೆ ಮರಣದಂಡನೆ ತಪ್ಪದು.”


ಈಗ ಆ ಮನುಷ್ಯನ ಹೆಂಡತಿಯನ್ನು ಮರಳಿ ಅವನಿಗೆ ಒಪ್ಪಿಸಿಬಿಡು. ಅವನೊಬ್ಬ ಪ್ರವಾದಿ. ನಿನ್ನ ಪರವಾಗಿ ನನ್ನನ್ನು ಪ್ರಾರ್ಥಿಸುವನು, ನೀನು ಬದುಕುವೆ. ಆಕೆಯನ್ನು ಒಪ್ಪಿಸಲು ನಿರಾಕರಿಸಿದೆಯಾದರೆ ನೀನೂ ನಿನ್ನವರೆಲ್ಲರೂ ಸತ್ತೇ ಸಾಯುವಿರೆಂದು ತಿಳಿದುಕೊ,” ಎಂದು ಕನಸಿನಲ್ಲಿ ಹೇಳಿದರು.


ನೀವು ಕ್ರಿಸ್ತಯೇಸುವಿನಿಂದ ಅಭಿಷಿಕ್ತರಾಗಿದ್ದೀರಿ. ಆ ಅಭಿಷೇಕವು ನಿಮ್ಮಲ್ಲಿ ನೆಲೆಸಿದೆ. ಆದ್ದರಿಂದ ಯಾರೂ ನಿಮಗೆ ಬೋಧಿಸುವ ಅವಶ್ಯಕತೆಯಿಲ್ಲ. ಆ ಅಭಿಷೇಕವೇ ನಿಮಗೆ ಎಲ್ಲವನ್ನೂ ಬೋಧಿಸುತ್ತಾ ಬರುತ್ತದೆ. ಈ ಬೋಧನೆ ಸತ್ಯವಾದುದು, ಮಿಥ್ಯವಾದುದಲ್ಲ. ಅದರ ಪ್ರಕಾರವೇ ಕ್ರಿಸ್ತಯೇಸುವಿನಲ್ಲಿ ನೆಲೆಸಿರಿ.


ನಿಂಷಿಯ ಮಗ ಯೇಹುವನ್ನು, ಇಸ್ರಯೇಲರ ಅರಸನನ್ನಾಗಿ ಅಭಿಷೇಕಿಸು. ಅಬೇಲ್ ಮಹೋಲದವನೂ ಶಾಫಾಟನ ಮಗನೂ ಆದ ಎಲೀಷನನ್ನು ನಿನ್ನ ಉತ್ತರಾಧಿಕಾರಿಯಾದ ಪ್ರವಾದಿಯನ್ನಾಗಿ ಅಭಿಷೇಕಿಸು.


ದಾವೀದನು, “ಕೈಯೆತ್ತಿ ಸರ್ವೇಶ್ವರನ ಅಭಿಷಿಕ್ತನನ್ನು ಕೊಲ್ಲುವುದಕ್ಕೆ ನೀನು ಹಿಂಜರಿಯಲಿಲ್ಲ ಏಕೆ?” ಎಂದು ಹೇಳಿ


ಬೇತೇಲಿನ ಪೀಠದ ಬಳಿ ನಿಂತಿದ್ದ ಅರಸನು ಆ ದೈವಭಕ್ತನು ಪೀಠಕ್ಕೆ ವಿರೋಧವಾಗಿ ನುಡಿದದ್ದನ್ನು ಕೇಳಿ ಕೈಚಾಚಿ, “ಅವನನ್ನು ಹಿಡಿಯಿರಿ,” ಎಂದು ಆಜ್ಞಾಪಿಸಿದನು. ಕೂಡಲೆ ಅವನ ಕೈ ಒಣಗಿಹೋಯಿತು. ಅವನು ಅದನ್ನು ಹಿಂತೆಗೆದುಕೊಳ್ಳಲಾಗಲಿಲ್ಲ.


ತನ್ನ ಪತ್ನಿ ಜೆರೆಷಳಿಗೂ ಎಲ್ಲಾ ಆಪ್ತರಿಗೂ ತನಗೆ ಸಂಭವಿಸಿದುದನ್ನೆಲ್ಲಾ ವರದಿಮಾಡಿದನು. ಆಗ ಅವನ ಪಂಡಿತರೂ ಪತ್ನಿಯೂ ಅವನಿಗೆ, “ಯಾವನಿಂದ ನಿಮ್ಮ ಪತನವು ಪ್ರಾರಂಭವಾಯಿತೋ ಆ ವ್ಯಕ್ತಿ ಒಂದು ವೇಳೆ ಯೆಹೂದ್ಯನಾಗಿದ್ದರೆ, ನೀವು ಅವನನ್ನೆಂದಿಗೂ ಜಯಿಸಲಾರಿರಿ. ಅವನ ಮುಂದೆ ಬಿದ್ದು ಹಾಳಾಗುವಿರಿ,” ಎಂದು ಎಚ್ಚರವಿತ್ತರು.


ಬದಲಿಗೆ ರಾಜವಂಶೀಯನಾದ ಎರಖ್ಮೆಯೇಲ, ಅಜ್ರಿಯೇಲನ ಮಗ ಸೆರಾಯ, ಅಬ್ದೆಯೇಲನ ಮಗ ಶಲೆಮ್ಯ, ಇವರಿಗೆ ಲೇಖಕನಾದ ಬಾರೂಕನನ್ನು ಮತ್ತು ಪ್ರವಾದಿ ಯೆರೆಮೀಯನನ್ನು ಸೆರೆಹಿಡಿಯಬೇಕೆಂದು ಆಜ್ಞಾಪಿಸಿದನು. ಆದರೆ ಸರ್ವೇಶ್ವರ ಅವರನ್ನು ಮರೆಯಲ್ಲಿಟ್ಟಿದ್ದರು.


“ಇವನನ್ನು ಕರೆದುಕೊಂಡುಹೋಗಿ ಚೆನ್ನಾಗಿ ನೋಡಿಕೊ. ಯಾವ ಹಾನಿಯನ್ನು ಮಾಡಕೂಡದು. ಬೇಡುವುದನ್ನೆಲ್ಲ ಕೊಡು,” ಎಂದು ಆಜ್ಞಾಪಿಸಿದನು.


ಪವಿತ್ರಭೂಮಿಯಲ್ಲಿ ಜುದೇಯ ನಾಡನ್ನು ಸ್ವಾಮಿ ತಮ್ಮ ಸೊತ್ತಾಗಿ ಮಾಡಿಕೊಳ್ಳುವರು. ಜೆರುಸಲೇಮನ್ನು ತಮಗಾಗಿ ಮರಳಿ ಆರಿಸಿಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು