Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 106:34 - ಕನ್ನಡ ಸತ್ಯವೇದವು C.L. Bible (BSI)

34 ಅನುಸರಿಸಲಿಲ್ಲ ಅವರು ಪ್ರಭುವಿನಾಜ್ಞೆಯನು I ಆತ ಸಂಹರಿಸಲಿಲ್ಲ ಶೋಧಿಸಿದಾ ಜನರನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಅನ್ಯ ಜನಾಂಗದವರನ್ನು ಸಂಹರಿಸಬೇಕೆಂಬ, ಯೆಹೋವನ ಆಜ್ಞೆಗೆ ಅವಿಧೇಯರಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಅನ್ಯಜನಾಂಗದವರನ್ನು ಸಂಹರಿಸಬೇಕೆಂಬ ಯೆಹೋವನ ಆಜ್ಞೆಗೆ ಅವಿಧೇಯರಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಕಾನಾನಿನಲ್ಲಿ ವಾಸವಾಗಿದ್ದ ಅನ್ಯ ಜನಾಂಗಗಳನ್ನು ನಾಶಮಾಡಲು ಯೆಹೋವನು ಅವರಿಗೆ ಹೇಳಿದನು. ಆದರೆ ಇಸ್ರೇಲರು ದೇವರಿಗೆ ವಿಧೇಯರಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಯೆಹೋವ ದೇವರು ಅವರಿಗೆ ಆಜ್ಞಾಪಿಸಿದ ಜನಗಳನ್ನು ಅವರು ದಂಡಿಸದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 106:34
18 ತಿಳಿವುಗಳ ಹೋಲಿಕೆ  

ಜೆರುಸಲೇಮಿನಲ್ಲಿದ್ದ ಯೆಬೂಸಿಯರನ್ನು ಹೊರಡಿಸಲು ಬೆನ್ಯಾಮೀನ್ಯರಿಂದ ಆಗದೆಹೋಯಿತು. ಅವರು ಇಂದಿನವರೆಗೂ, ಬೆನ್ಯಾಮೀನ್ಯರ ಸಂಗಡ ಜೆರುಸಲೇಮಿನಲ್ಲೇ ವಾಸವಾಗಿ ಇದ್ದಾರೆ.


ನಿಮ್ಮ ದೇವರಾದ ಸರ್ವೇಶ್ವರಾ, ನಿಮ್ಮಿಂದ ಪರಾಜಯಪಡಿಸುವ ಜನರುಗಳನ್ನೆಲ್ಲಾ ನೀವು ಕನಿಕರಿಸದೆ ನಾಶಮಾಡಬೇಕು. ಅವರ ದೇವರುಗಳನ್ನು ಪೂಜಿಸಲೇಬಾರದು; ಪೂಜಿಸಿದರೆ ಅವು ನಿಮಗೆ ಉರುಲಾಗುವುವು.


ಅಂಥ ಏಳು ಜನಾಂಗಗಳು ಯಾವುವೆಂದರೆ ಹಿತ್ತಿಯರು, ಗಿರ್ಗಾಷಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು ಹಾಗು ಯೆಬೂಸಿಯರು. ಅವರನ್ನು ನೀವು ಸೋಲಿಸಿ ವಿನಾಶ ಶಾಪಗ್ರಸ್ತರನ್ನಾಗಿಸಬೇಕು. ಅವರ ಸಂಗಡ ಒಪ್ಪಂದಮಾಡಿಕೊಳ್ಳಬಾರದು, ಅವರನ್ನು ಕನಿಕರಿಸಬಾರದು,


ಈಗ ನೀನು ಹೋಗಿ ಅವರನ್ನು ಸೋಲಿಸಿ ಅವರಿಗಿರುವುದನ್ನೆಲ್ಲಾ ಸಂಪೂರ್ಣವಾಗಿ ಹಾಳುಮಾಡು. ಗಂಡಸರನ್ನು, ಹೆಂಗಸರನ್ನು, ಮಕ್ಕಳನ್ನು, ಶಿಶುಗಳನ್ನು ಹಾಗು ಎತ್ತು, ಕುರಿ, ಕತ್ತೆ, ಒಂಟೆ ಇವುಗಳನ್ನೂ ಉಳಿಸದೆ ಕೊಂದುಹಾಕು ಎಂದು ಹೇಳುತ್ತಾರೆ ಸೇನಾಧೀಶ್ವರರಾದ ಸರ್ವೇಶ್ವರ,” ಎಂದನು.


ಸರ್ವೇಶ್ವರ ಯೆಹೂದಕುಲದವರ ಸಂಗಡ ಇದ್ದುದರಿಂದ ಅವರು ಪರ್ವತ ಪ್ರದೇಶಗಳನ್ನೆಲ್ಲಾ ಸ್ವತಂತ್ರಿಸಿಕೊಂಡರು. ಆದರೆ ತಗ್ಗಿನ ಪ್ರದೇಶಗಳಲ್ಲಿ ವಾಸಿಸುವವರಿಗೆ ಕಬ್ಬಿಣ ರಥಗಳಿದ್ದುದರಿಂದ ಅವರನ್ನು ಹೊರಗಟ್ಟಲು ಆಗಲಿಲ್ಲ.


ಅವರು ಗೆಜೆರಿನಲ್ಲಿದ್ದ ಕಾನಾನ್ಯರನ್ನು ಹೊರಡಿಸದೆ ಹೋದುದರಿಂದ ಅವರು ಇಂದಿಗೂ ಎಫ್ರಯಿಮ್ಯರ ನಡುವೆ ಊಳಿಗದವರಾಗಿದ್ದುಕೊಂಡು ಅವರಿಗೆ ಸೇವೆಮಾಡುತ್ತಾರೆ.


ಜೆರುಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಹೊರಡಿಸಲು ಯೆಹೂದ ಕುಲದವರಿಂದ ಆಗದೆ ಹೋಯಿತು. ಆದುದರಿಂದ ಅವರು ಇಂದಿನವರೆಗೂ ಯೆಹೂದ ಕುಲದವರೊಡನೆ ಜೆರುಸಲೇಮಿನಲ್ಲೇ ವಾಸವಾಗಿದ್ದಾರೆ.


ಆ ನಾಡಿನ ನಿವಾಸಿಗಳನ್ನೆಲ್ಲಾ ಹೊರಡಿಸಿಬಿಡಿ. ಅವರ ವಿಚಿತ್ರ ಕಲ್ಲುಗಳನ್ನು ಹಾಗು ಲೋಹವಿಗ್ರಹಗಳನ್ನು ನಾಶಮಾಡಿ ಅವರ ಪೂಜಾಸ್ಥಳಗಳನ್ನು ಹಾಳುಮಾಡಬೇಕು.


ಆಗ, ನೀವು ಈ ನಾಡಿನ ನಿವಾಸಿಗಳ ಸಂಗಡ ಒಡಂಬಡಿಕೆ ಮಾಡಿಕೊಳ್ಳಬಾರದು, ಅವರ ಬಲಿಪೀಠಗಳನ್ನು ಕೆಡವಿಬಿಡಬೇಕು ಎಂದು ಆಜ್ಞಾಪಿಸಿದೆನು. ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ. ಹೀಗೇಕೆ ಮಾಡಿದಿರಿ?


ಅವರು ಇಂದಿನವರೆಗೂ ಬಿಟ್ಟೀಕೆಲಸದವರಾಗಿರುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು