Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 11:7 - ಕನ್ನಡ ಸತ್ಯವೇದವು C.L. Bible (BSI)

7 ಸತ್ಯಸ್ವರೂಪನಾದ ಪ್ರಭು ಸತ್ಯ ಪ್ರಿಯನು I ಸತ್ಪುರುಷನು ಸೇರುವನು ಆತನ ಸನ್ನಿಧಿಯನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಏಕೆಂದರೆ ನೀತಿಸ್ವರೂಪನಾದ ಯೆಹೋವನು ನೀತಿಯನ್ನು ಮೆಚ್ಚುವವನಾಗಿದ್ದಾನೆ. ಸಜ್ಜನರು ಆತನ ಸಾನ್ನಿಧ್ಯವನ್ನು ಸೇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯಾಕಂದರೆ ನೀತಿಸ್ವರೂಪನಾದ ಯೆಹೋವನು ನೀತಿಯನ್ನು ಮೆಚ್ಚುವವನಾಗಿದ್ದಾನೆ. ಸಜ್ಜನರು ಆತನ ಸಾನ್ನಿಧ್ಯದಲ್ಲಿ ಇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯಾಕೆಂದರೆ ಯೆಹೋವನು ನೀತಿಸ್ವರೂಪನಾಗಿದ್ದಾನೆ; ಆತನು ನ್ಯಾಯವನ್ನು ಪ್ರೀತಿಸುತ್ತಾನೆ. ನೀತಿವಂತರು ಆತನ ಮುಖವನ್ನು ನೋಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಏಕೆಂದರೆ ಯೆಹೋವ ದೇವರು ನೀತಿಯುಳ್ಳವರು. ಅವರು ನ್ಯಾಯವನ್ನು ಪ್ರೀತಿಸುತ್ತಾರೆ; ಯಥಾರ್ಥರು ಅವರ ಮುಖವನ್ನು ದೃಷ್ಟಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 11:7
20 ತಿಳಿವುಗಳ ಹೋಲಿಕೆ  

ಆ ಹೆಸರು ಆ ದಾಸರ ಹಣೆಗಳ ಮೇಲೆ ಲಿಖಿತವಾಗಿರುವುದು.


ಸತ್ಯಸಂಧನಾದ ನಾನೊ ಸೇರುವೆ ನಿನ್ನ ಸಾನ್ನಿಧ್ಯವನು I ಎಚ್ಚೆತ್ತು ನಿನ್ನ ಮುಖದರ್ಶನದಿಂದ ತೃಪ್ತನಾಗುವೆನು II


ನೀತಿವಂತರನು ಕಾಯುವನು ಸರ್ವೇಶ್ವರನು ಅವರ ವಿಜ್ಞಾಪನೆಗೆ ಕಿವಿಗೊಡುವನು. ಕೆಡುಕರಿಗಾದರೋ ಆತನು ವಿಮುಖನು,” ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ.


ಪ್ರೀತಿಸಿದೆ ನೀನು ಧರ್ಮವನು ದ್ವೇಷಿಸಿದೆ ಅಧರ್ಮವನು I ಆನಂದ ತೈಲದಿಂದಭಿಷೇಕಿಸಿಹನು ನಿನ್ನ, ದೇವನು I ಮಿತ್ರರಿಗಿಂತ ಮಿಗಿಲಾಗಿ ಅಭಿಷೇಕಿಸಿಹನು ಆತನು ನಿನ್ನನು II


ತನ್ನ ಕಟಾಕ್ಷವನ್ನು ಸಜ್ಜನರ ಮೇಲೆ ಅಚಲವಾಗಿರಿಸುವನು ರಾಜರಂತೆ ಸಿಂಹಾಸನದ ಮೇಲೆ ಅವರನು ಕುಳ್ಳಿರಿಸುವನು ಅಮರವಾದ ಉನ್ನತ ಪದವಿಗೆ ಅವರನು ಏರಿಸುವನು.


ಪ್ರಿಯರೇ, ನಾವೀಗ ದೇವರ ಮಕ್ಕಳು. ಮುಂದೆ ನಾವು ಎಂಥವರಾಗುತ್ತೇವೆ ಎಂಬುದು ಇನ್ನೂ ವಿಷದವಾಗಿಲ್ಲ. ಆದರೆ ಕ್ರಿಸ್ತಯೇಸು ಪ್ರತ್ಯಕ್ಷವಾಗುವಾಗ ನಾವೂ ಅವರಂತೆಯೇ ಇರುತ್ತೇವೆಂದು ಬಲ್ಲೆವು. ಏಕೆಂದರೆ, ಅವರನ್ನು ನಾವು ಅವರ ಯಥಾರ್ಥರೂಪದಲ್ಲೇ ಕಾಣುತ್ತೇವೆ.


ಎನ್ನ ಮನವೆ, ಚಿಂತಿಸುವೆಯೇಕೆ? I ವ್ಯಥೆಪಡುವುದೇಕೆ? ದೇವನಲ್ಲಿಡು ನಂಬಿಕೆ I ಮತ್ತೆ ಸ್ತುತಿಸುವೆ ನಾನಾತನನು, ಮುಕ್ತಿದಾತ, ಪರಮಾತ್ಮ ಆತನೆನಗೆ II


ಸಜ್ಜನರನು ಪ್ರಭು ಕಟಾಕ್ಷಿಸುವನು I ಅವರ ಮೊರೆಗಾತ ಕಿವಿಗೊಡುವನು II


ಪ್ರಭುವಾದರೋ ಕಟಾಕ್ಷಿಸುವನು ತನಗಂಜಿ ನಡೆದವರನು I ಲಕ್ಷಿಸುವನು ತನ್ನ ಕೃಪೆಯನು ನಿರೀಕ್ಷಿಸುವವರನು II


ಶಕ್ತಿಸ್ವರೂಪಿಯೇ, ನ್ಯಾಯಪ್ರಿಯ ರಾಜನೇ I ನ್ಯಾಯನೀತಿ, ಯಥಾರ್ಥತೆಗೆ ಸ್ಥಾಪಕ ನೀನೆ I ಇಸ್ರಯೇಲ ವಂಶಕ್ಕಿದನು ಮನದಟ್ಟಾಗಿಸಿದವ ನೀನೆ II


ಸತ್ಯಸಂಧನು, ನ್ಯಾಯಪ್ರಿಯನು ಆತನು I ಅಚಲಪ್ರೀತಿಯಿಂದ ಜಗವನು ತುಂಬಿಹನು II


ಅಮರ ಭಾಗ್ಯಗಳನು ನೀನನುಗ್ರಹಿಸಿದೆ I ಶ್ರೀಸನ್ನಿಧಿಯಲಾತನನು ತೋಷಗೊಳಿಸಿದೆ II


“ಸರ್ವೇಶ್ವರ ಆದ ನಾನು ನ್ಯಾಯಪ್ರಿಯ. ಸುಲಿಗೆ ಅನ್ಯಾಯ, ನನಗೆ ಅಸಹ್ಯ. ಪ್ರಾಮಾಣಿಕವಾಗಿ ನೀಡುವೆನು ಇವರಿಗೆ ಪ್ರತಿಫಲ ಮಾಡಿಕೊಳ್ಳುವೆನು ಇವರೊಡನೆ ಅಳಿಯದ ಒಪ್ಪಂದ.


ಕಣ್ಣನ್ನೀಯುವನು ಪ್ರಭು ಕುರುಡರಿಗೆ I ಉದ್ಧಾರಕನಾ ಪ್ರಭು ಕುಗ್ಗಿದವರಿಗೆ I ಆತನ ಒಲವಿರುವುದು ಸಾಧು ಸಜ್ಜನರಿಗೆ II


ಮಾನವರ ಹೃನ್ಮನವನರಿತಿಹ ಸತ್ಯಸ್ವರೂಪಿ ದೇವಾ, I ದುರುಳರ ಕೆಡುಕನಳಿಸಯ್ಯಾ, ಸತ್ಯವಂತರನು ನೀ ಉಳಿಸಯ್ಯಾ II


ನ್ಯಾಯಕ್ಕನುಸಾರ ತೀರ್ಪನೀಡುವಂಥವನು ದೇವನು I ದುರುಳರ ಮೇಲೆ ದಿನಬಿಡದೆ ಕೋಪವುಳ್ಳವನು ಆತನು II


ಪ್ರಭುವು ನ್ಯಾಯಪ್ರಿಯನು, ಭಕ್ತಜನರ ಪರಿಪಾಲಕನು I ಚಿರವುಳಿಸುವನು ಇವರನು, ಅಳಿಸುವನು ದುರುಳರ ಪೀಳಿಗೆಯನು II


ಘಮಘಮಿಸುತಿದೆ ನಿನ್ನುಡಿಗೆ ರಸಗಂಧ, ಅಗರು, ಚಂದನಗಳಿಂದ I ಮನರಂಜನೆಗೊಳ್ಳುತಿರುವೆ ದಂತ ಮಂದಿರದುನ್ನತ ವಾದ್ಯಗಳಿಂದ II


ದುರುಳರ ನಡತೆ ಸರ್ವೇಶ್ವರನಿಗೆ ಹೇಯ; ನೀತಿವಂತರ ನಡತೆ ಆತನಿಗೆ ಸುಪ್ರಿಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು