Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 110:1 - ಕನ್ನಡ ಸತ್ಯವೇದವು C.L. Bible (BSI)

1 ನುಡಿದಿಹನು ಇಂತೆಂದು ಪ್ರಭು ನನ್ನೊಡೆಯನಿಗೆ I “ಆಸೀನನಾಗಿರು ನೀನು ನನ್ನ ಬಲಗಡೆಗೆ I ಹಗೆಗಳನು ನಿನಗೆ ಕಾಲ್ಮಣೆಯಾಗಿಸುವವರೆಗೆ” II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ನನ್ನ ಒಡೆಯನಿಗೆ, “ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಪೀಠವಾಗುವಂತೆ ಮಾಡುವ ತನಕ, ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು” ಎಂದು ನುಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನು ನನ್ನ ಒಡೆಯನಿಗೆ - ನಾನು ನಿನ್ನ ವಿರೋಧಿಗಳನ್ನು ನಿನಗೆ ಪಾದಪೀಠವಾಗ ಮಾಡುವ ತನಕ ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂದು ನುಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನು ನನ್ನ ಒಡೆಯನಿಗೆ, “ನಾನು ನಿನ್ನ ಶತ್ರುಗಳನ್ನು ನಿನಗೆ ಪಾದಪೀಠವನ್ನಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರು ನನ್ನ ಕರ್ತ ಆಗಿರುವವರಿಗೆ ಹೇಳಿದ್ದೇನೆಂದರೆ: “ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳ ಪೀಠವಾಗಿ ಮಾಡುವವರೆಗೂ ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 110:1
23 ತಿಳಿವುಗಳ ಹೋಲಿಕೆ  

ಶತ್ರುಗಳೆಲ್ಲರನ್ನು ತಮ್ಮ ಪಾದಪೀಠವಾಗಿಸಿಕೊಳ್ಳುವ ತನಕ ಅವರು ರಾಜ್ಯವಾಳಬೇಕಾಗಿದೆ.


ಯಾವ ದೇವದೂತನಿಗಾದರೂ ದೇವರು, “ನಿನ್ನ ಶತ್ರುಗಳನ್ನು ನಾನು ನಿನ್ನ ಪಾದದಡಿ ಹಾಕುವತನಕ ನನ್ನ ಬಲಗಡೆಯಲ್ಲಿ ಆಸೀನನಾಗಿರು,” ಎಂದು ಎಂದಾದರೂ ಹೇಳಿದ್ದುಂಟೇ?


ಇವರೇ ದೇವರ ಮಹಿಮೆಯ ತೇಜಸ್ಸು; ಇವರೇ ದೈವತ್ವದ ಪಡಿಯಚ್ಚು; ತಮ್ಮ ಶಕ್ತಿಯುತ ವಾಕ್ಯದಿಂದ ಇವರೇ ಸಮಸ್ತಕ್ಕೂ ಆಧಾರ; ನಮ್ಮ ಪಾಪಗಳನ್ನು ತೊಡೆದುಹಾಕಿ, ಸ್ವರ್ಗದಲ್ಲಿ ಮಹೋನ್ನತ ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿರುವವರೂ ಇವರೇ.


ವಿಶ್ವಾಸವನ್ನು ಹುಟ್ಟಿಸುವ ಮತ್ತು ಅದನ್ನು ಪರಿಪೂರ್ಣಗೊಳಿಸುವ ಯೇಸುಸ್ವಾಮಿಯನ್ನು ಗುರಿಯಾಗಿಟ್ಟು ಓಡೋಣ. ಅವರು ತಮ್ಮ ಮುಂದಿಡಲಾದ ಸೌಭಾಗ್ಯವನ್ನು ಗಳಿಸಲು ನಿಂದೆ ಅವಮಾನಗಳನ್ನು ಲೆಕ್ಕಿಸದೆ ಶಿಲುಬೆಯ ಮರಣವನ್ನು ಸಹಿಸಿಕೊಂಡರು. ಈಗಲಾದರೋ ದೇವರ ಸಿಂಹಾಸನದ ಬಲಗಡೆ ಆಸೀನರಾಗಿದ್ದಾರೆ.


ಅದಕ್ಕೆ ಯೇಸು, “ಅದು ನಿಮ್ಮ ಬಾಯಿಂದಲೇ ಬಂದಿದೆ; ಮಾತ್ರವಲ್ಲ, ನಾನು ಹೇಳುವುದನ್ನು ಕೇಳಿ; ನರಪುತ್ರನು ಸರ್ವಶಕ್ತ ದೇವರ ಬಲಗಡೆ ಆಸೀನನಾಗಿರುವುದನ್ನೂ ಆಕಾಶದ ಮೇಘಗಳ ಮೇಲೆ ಬರುವುದನ್ನೂ ಇನ್ನು ಮುಂದಕ್ಕೆ ಕಾಣುವಿರಿ,” ಎಂದರು.


ಯೇಸುಕ್ರಿಸ್ತರು ಸ್ವರ್ಗಕ್ಕೆ ಏರಿ, ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿದ್ದಾರೆ; ದೂತಗಣಗಳ ಮೇಲೂ ಸ್ವರ್ಗೀಯ ಶಕ್ತರ ಹಾಗೂ ಅಧಿಕಾರಿಗಳ ಮೇಲೂ ಆಳ್ವಿಕೆ ನಡೆಸುತ್ತಿದ್ದಾರೆ.


ಒಡೆಯನಾಗಿಸಿದೆ ನಿನ್ನಯ ಕರಕೃತಿಗಳಿಗೆ I ಒಳಪಡಿಸಿದೆ ಸಕಲವನು ಅವನ ಪಾದದಡಿಗೆ II


ಈಗ ಹೇಳುತ್ತಿರುವುದರ ಮುಖ್ಯಾಂಶ ಏನೆಂದರೆ: ಸ್ವರ್ಗದಲ್ಲಿ ಮಹೋನ್ನತ ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನರಾಗಿರುವಂಥ ಪ್ರಧಾನಯಾಜಕ ನಮಗಿದ್ದಾರೆ.


ನೀವು ಯೇಸುಕ್ರಿಸ್ತರೊಂದಿಗೆ ಪುನರುತ್ಥಾನ ಹೊಂದಿರುವುದಾದರೆ ಸ್ವರ್ಗೀಯ ವಿಷಯಗಳ ಕಡೆಗೆ ಗಮನಕೊಡಿ. ಕ್ರಿಸ್ತಯೇಸು ಸ್ವರ್ಗದಲ್ಲಿ ದೇವರ ಬಲಗಡೆಯಲ್ಲಿ ಆಸೀನರಾಗಿದ್ದಾರೆ.


ಯೇಸುಸ್ವಾಮಿ ಶಿಷ್ಯರೊಡನೆ ಮಾತನಾಡಿದ ಮೇಲೆ ಸ್ವರ್ಗಾರೋಹಣವಾಗಿ ದೇವರ ಬಲಪಾರ್ಶ್ವದಲ್ಲಿ ಆಸೀನರಾದರು.


ಪ್ರಭು, ಓ ನಮ್ಮ ಪ್ರಭು, ಎನಿತು ಮಹಿಮಾನ್ವಿತ I ಹರಡಿವೆ ನಿನ್ನ ಸಿರಿನಾಮ ಜಗದಾದ್ಯಂತ I ಬೆಳಗಿದೆ ನಿನ್ನ ವೈಭವ ಗಗನಾದ್ಯಂತ II


ಒಂದು ಕಲ್ಲೆಸೆತದಷ್ಟು ದೂರ ಹೋಗಿ, ಮೊಣಕಾಲೂರಿ ಪ್ರಾರ್ಥನೆಮಾಡುತ್ತಾ,


ಅವರು ಕೂಡಿಬಂದಾಗ ಅರಸ ದಾವೀದನು ಎದ್ದು ನಿಂತು ಅವರಿಗೆ, “ನನ್ನ ಸಹೋದರರೇ, ಪ್ರಜೆಗಳೇ, ಕೇಳಿ; ಸರ್ವೇಶ್ವರನ ನಿಬಂಧನ ಮಂಜೂಷಕ್ಕಾಗಿ ಹಾಗೂ ನಮ್ಮ ದೇವರ ಪಾದಪೀಠಕ್ಕಾಗಿ ಆಲಯವನ್ನು ಕಟ್ಟಿಸಬೇಕೆಂದು ಮನಸ್ಸುಮಾಡಿ ಎಲ್ಲವನ್ನೂ ಸಿದ್ಧಪಡಿಸಿದೆ.


ನನಗೆದುರಾಡಿ ತಪ್ಪು ಹೊರಿಸುವವರಿಗೆ I ಅದುವೇ ಪ್ರಭುವಿನಿಂದ ಗಿಟ್ಟುವ ಕೊಡುಗೆ II


ಹೌದು, ಅವನೇ ಸರ್ವೇಶ್ವರನ ಆಲಯವನ್ನು ಕಟ್ಟಿಸಿದ ಮೇಲೆ, ರಾಜವೈಭವವನ್ನು ತಾಳಿ ತನ್ನ ಸಿಂಹಾಸನದಲ್ಲಿ ಆಸೀನನಾಗಿ ಆಳುವನು. ಯಾಜಕನೊಬ್ಬನು ಅವನ ಆಸ್ಥಾನದಲ್ಲಿರುವನು. ಅವರಿಬ್ಬರೂ ಶಾಂತಿಸಮಾಧಾನದಿಂದಿರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು