Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 110:4 - ಕನ್ನಡ ಸತ್ಯವೇದವು C.L. Bible (BSI)

4 “ಮೆಲ್ಕಿಸೆದೆಕ್ ಪರಂಪರೆಯ ಯಾಜಕ ನೀ ನಿರುತ” I ಬದಲಿಸನು ಪ್ರಭು ತಾನಿತ್ತ ಪ್ರಮಾಣದೀ ಮಾತ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 “ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹ ಯಾಜಕನಾಗಿರುವೆ” ಎಂದು ಯೆಹೋವನು ಆಣೆಯಿಟ್ಟು ನುಡಿದಿದ್ದಾನೆ; ಪಶ್ಚಾತ್ತಾಪಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹದ ಯಾಜಕನು ಎಂದು ಯೆಹೋವನು ಆಣೆಯಿಟ್ಟು ನುಡಿದಿದ್ದಾನೆ; ಪಶ್ಚಾತ್ತಾಪಪಡುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೆಹೋವನು ನನಗೆ, “ನೀನು ಸದಾಕಾಲ ಮೆಲ್ಕಿಜೆದೇಕನಂತಹ ಯಾಜಕನಾಗಿರುವೆ” ಎಂದು ವಾಗ್ದಾನ ಮಾಡಿದ್ದಾನೆ. ಆತನು ತನ್ನ ಮನಸ್ಸನ್ನು ಬದಲಾಯಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 “ನೀವು ಸದಾಕಾಲವೂ ಮೆಲ್ಕಿಜೆದೇಕನ ಕ್ರಮದ ಯಾಜಕರಾಗಿದ್ದೀರಿ,” ಎಂದು ಯೆಹೋವ ದೇವರು ಆಣೆಯಿಟ್ಟು ಹೇಳಿದ್ದಾರೆ. ಅವರು ತಮ್ಮ ಮನಸ್ಸನ್ನು ಬದಲಾಯಿಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 110:4
14 ತಿಳಿವುಗಳ ಹೋಲಿಕೆ  

“ನೀನು ಸದಾಕಾಲವೂ ಮೆಲ್ಕಿಸದೇಕನ ಪರಂಪರೆಗೆ ಸೇರಿದ ಯಾಜಕನು,” ಎಂದು ಪವಿತ್ರಗ್ರಂಥ ಸಮರ್ಥಿಸುತ್ತದೆ.


ಅವರೇ ಮತ್ತೊಂದು ಕಡೆಯಲ್ಲಿ : “ನೀನು ಸದಾಕಾಲವೂ ಮೆಲ್ಕಿಸದೇಕನ ಪರಂಪರೆಗೆ ಸೇರಿದ ಯಾಜಕ,” ಎಂದಿದ್ದಾರೆ.


ಇವರಾದರೋ “ಎಂದೆಂದಿಗೂ ನೀ ಯಾಜಕನೆಂದು ಸರ್ವೇಶ್ವರನೇ ಪ್ರಮಾಣಿಸಿಹರು ಮನಸ್ಸನ್ನೆಂದೂ ಬದಲಾಯಿಸರವರು,” ಎಂಬ ಶಪಥ ಪಡೆದಿರುವ ಯಾಜಕರು.


ಸಾಲೇಮಿನ ಅರಸನೂ ಪರಾತ್ಪರ ದೇವರ ಯಾಜಕನೂ ಆಗಿದ್ದ ಮೆಲ್ಕಿಸದೇಕನು ಸಹ ಅಲ್ಲಿಗೆ ಬಂದು ರೊಟ್ಟಿಯನ್ನೂ ದ್ರಾಕ್ಷಾರಸವನ್ನೂ ಅರ್ಪಿಸಿ ಅಬ್ರಾಮನಿಗೆ ಇಂತೆಂದು ಆಶೀರ್ವಾದ ಮಾಡಿದನು:


ಧರ್ಮಶಾಸ್ತ್ರ ನೇಮಿಸುವ ಪ್ರಧಾನಯಾಜಕರು ಕುಂದುಕೊರತೆಯುಳ್ಳ ಮಾನವರು. ಆದರೆ, ಧರ್ಮಶಾಸ್ತ್ರದ ತರುವಾಯ ಬಂದ ಹಾಗೂ ಶಪಥದಿಂದ ಕೂಡಿದ ದೈವವಾಕ್ಯವು ಸದಾ ಸರ್ವಸಂಪೂರ್ಣರಾದ ಪುತ್ರನನ್ನೇ ಪ್ರಧಾನಯಾಜಕರನ್ನಾಗಿ ನೇಮಿಸುತ್ತದೆ.


ಇಸ್ರಯೇಲರಿಗೆ ಕೊಡಲಾದ ಧರ್ಮಶಾಸ್ತ್ರ ಲೇವಿಯರ ಯಾಜಕತ್ವದ ಮೇಲೆಯೇ ಆಧಾರಗೊಂಡಿದೆ. ಲೇವಿಯರ ಈ ಯಾಜಕತ್ವದಿಂದಲೇ ಸಂಪೂರ್ಣ ಸಿದ್ಧಿ ಪ್ರಾಪ್ತವಾಗುತ್ತಿತ್ತಾದರೆ, ಆರೋನನ ಪರಂಪರೆಗೆ ಸೇರದೆ ಮೆಲ್ಕಿಸದೇಕನ ಪರಂಪರೆಗೆ ಸೇರಿದ ಬೇರೊಬ್ಬ ಯಾಜಕನು ಕಾಣಿಸಿಕೊಳ್ಳುವ ಅವಶ್ಯಕತೆ ಏನಿತ್ತು?


ಸದಾಕಾಲವೂ ಮೆಲ್ಕಿಸದೇಕನ ಪರಂಪರೆಗೆ ಸೇರಿದ ಪ್ರಧಾನಯಾಜಕರಾದ ಯೇಸು ನಮ್ಮ ಮುಂದಾಳಾಗಿ ಹೋಗಿ ಆ ಗರ್ಭಗುಡಿಯನ್ನು ಪ್ರವೇಶಿಸಿದ್ದಾರೆ.


ನರಮಾನವರಂತೆ ದೇವರು ಎರಡು ಮಾತಿನವರಲ್ಲ ನರಪುತ್ರರಂತೆ ಮನಸ್ಸನ್ನು ಬದಲಾಯಿಸಿಕೊಳ್ಳುವವರಲ್ಲ. ಆತ ನುಡಿದಂತೆ ನಡೆಯದಿರುತ್ತಾನೋ?


ತಮ್ಮ ಪಿತನಾದ ದೇವರ ಸೇವೆಗೆ ನಮ್ಮನ್ನು ದೈವೀರಾಜ್ಯದ ಯಾಜಕರನ್ನಾಗಿ ಮಾಡಿದವರೂ ಆದ ಯೇಸುಕ್ರಿಸ್ತರಿಗೆ ಮಹಿಮೆ ಮತ್ತು ಅಧಿಪತ್ಯ ಯುಗಯುಗಾಂತರಕ್ಕೂ ಸಲ್ಲಲಿ! ಆಮೆನ್.


ಹೌದು, ಅವನೇ ಸರ್ವೇಶ್ವರನ ಆಲಯವನ್ನು ಕಟ್ಟಿಸಿದ ಮೇಲೆ, ರಾಜವೈಭವವನ್ನು ತಾಳಿ ತನ್ನ ಸಿಂಹಾಸನದಲ್ಲಿ ಆಸೀನನಾಗಿ ಆಳುವನು. ಯಾಜಕನೊಬ್ಬನು ಅವನ ಆಸ್ಥಾನದಲ್ಲಿರುವನು. ಅವರಿಬ್ಬರೂ ಶಾಂತಿಸಮಾಧಾನದಿಂದಿರುವರು.


ದಾವೀದನಿಗೆ ಪ್ರಭು ಆಣೆಯಿಟ್ಟು ಇಂತೆಂದ: I ಆಣೆಯಿಟ್ಟು ಕೊಟ್ಟಾ ಮಾತಿಗೆ ತಪ್ಪಲಾರನಾತ: I “ನಿನ್ನ ಸಿಂಹಾಸನದಲಿ ಕೂರಿಸುವೆನು ನಿನ್ನ ತನುಜನೊಬ್ಬನನು” II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು