Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 110:6 - ಕನ್ನಡ ಸತ್ಯವೇದವು C.L. Bible (BSI)

6 ನ್ಯಾಯತೀರಿಸುವನು ಪ್ರಭು ಸಕಲ ಜನಾಂಗಗಳಲಿ I ಛೇಧಿಸುವನು ಶತ್ರುಗಳ ಶಿರಸನು ರಣರಂಗದಲಿ I ತುಂಬಿಸುವನು ಹೆಣಗಳನು ಎಲ್ಲೆಡೆಗಳಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆತನು ಜನಾಂಗಗಳಲ್ಲಿ ನ್ಯಾಯಸ್ಥಾಪಿಸುವಾಗ, ವಿಸ್ತಾರವಾದ ರಣರಂಗದಲ್ಲಿ ಶತ್ರುಗಳ ಶಿರಸ್ಸನ್ನು ಛೇದಿಸಿ, ಹೆಣಗಳಿಂದ ಅದನ್ನು ತುಂಬಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆತನು ಜನಾಂಗಗಳಲ್ಲಿ ನ್ಯಾಯಸ್ಥಾಪಿಸುವಾಗ ವಿಸ್ತಾರವಾದ ರಣರಂಗದಲ್ಲಿ ಶತ್ರುಗಳ ಶಿರಸ್ಸನ್ನು ಛೇದಿಸಿ ಹೆಣಗಳಿಂದ ಅದನ್ನು ತುಂಬಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆತನು ಜನಾಂಗಗಳಿಗೆ ತೀರ್ಪು ಮಾಡುವನು. ರಣರಂಗವು ಅವರ ಹೆಣಗಳಿಂದ ತುಂಬಿಹೋಗುವುದು. ಬಲಿಷ್ಠ ರಾಷ್ಟ್ರಗಳ ನಾಯಕರನ್ನು ಆತನು ದಂಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ದೇವರು ಜನಾಂಗಗಳನ್ನು ನ್ಯಾಯತೀರಿಸುವಾಗ, ವಿಸ್ತಾರವಾದ ರಣರಂಗದಲ್ಲಿ ಶತ್ರುಗಳನ್ನು ದಂಡಿಸಿ ಅವರಿಗೆ ಮರಣದಂಡನೆ ವಿಧಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 110:6
22 ತಿಳಿವುಗಳ ಹೋಲಿಕೆ  

ಸಂಹರಿಸುವನಾತನು ಶತ್ರುಗಳಾ ಶಿರಸ್ಸನು I ನಸುಕುವನು ದುರ್ಮಾರ್ಗಿಗಳ ಕೇಶ ಕಿರೀಟವನು II


ನಾನು ಈ ದೃಶ್ಯವನ್ನೂ ಕಂಡೆ: ಸ್ವರ್ಗವು ತೆರೆದಿತ್ತು. ಬಿಳಿಯ ಕುದುರೆಯೊಂದು ಕಾಣಿಸಿತು. ಅದರ ಮೇಲೆ ಒಬ್ಬನು ಕುಳಿತಿದ್ದನು. ನಂಬಿಕಸ್ಥನೆಂದೂ ಸತ್ಯವಂತನೆಂದೂ ಆತನ ಹೆಸರು; ಆತನು ನಿಷ್ಪಕ್ಷಪಾತದಿಂದ ನ್ಯಾಯತೀರ್ಪು ಕೊಡುವವನು; ನ್ಯಾಯಬದ್ಧವಾಗಿ ಯುದ್ಧಮಾಡುವವನು.


ಅಲ್ಲದೆ, ಪಿತನು ಯಾರನ್ನೂ ತೀರ್ಪಿಗೆ ಗುರಿಮಾಡುವುದಿಲ್ಲ. ತೀರ್ಪುಕೊಡುವ ಅಧಿಕಾರವನ್ನೆಲ್ಲಾ ಅವರು ಪುತ್ರನಿಗೆ ಕೊಟ್ಟಿದ್ದಾರೆ.


ಬಗೆಹರಿಸುವನಾತ ಹಲವು ರಾಷ್ಟ್ರಗಳಾ ವ್ಯಾಜ್ಯವನು ತೀರಿಸುವನು ಪ್ರಬಲ ಜನಾಂಗಗಳಿಗೆ ನ್ಯಾಯವನು. ಹಾಕುವರವರು ಕುಲುಮೆಗೆ ತಮ್ಮ ಕತ್ತಿಗಳನು ಮಾರ್ಪಡಿಸುವರು ಅವುಗಳನ್ನು ಗುಳಗಳನ್ನಾಗಿ ಭರ್ಜಿಗಳನ್ನೂ ಕುಡುಗೋಲುಗಳನ್ನಾಗಿ.


ಬಗೆಹರಿಸುವನು ದೇಶದೇಶಗಳ ವ್ಯಾಜ್ಯವನು ತೀರಿಸುವನು ರಾಷ್ಟ್ರರಾಷ್ಟ್ರಗಳ ನ್ಯಾಯವನು ಹಾಕುವರವರು ಕುಲುಮೆಗೆ ತಮ್ಮಾಯುಧಗಳನು. ಮಾರ್ಪಡಿಸುವರು ಕತ್ತಿಗಳನು ನೇಗಿಲ ಗುಳಗಳನ್ನಾಗಿ ಭರ್ಜಿಗಳನು ಕುಡುಗೋಲುಗಳನ್ನಾಗಿ. ಕತ್ತಿಯ ನೆತ್ತರು ಜನಾಂಗ ಜನಾಂಗದೆದುರಿಗೆ ಯುದ್ಧವಿದ್ಯೆಯ ಕಲಿಕೆ ಅಗತ್ಯವಿರದು ಅವರಿಗೆ.


ಪಟ್ಟಣದ ಹೊರಗಿನ ಆಲೆಯಲ್ಲಿ ದ್ರಾಕ್ಷಿಯ ಹಣ್ಣನ್ನು ಹಿಂಡಲಾಯಿತು. ಆ ಆಲೆಯಿಂದ ರಕ್ತವು ಹರಿಯಿತು. ಅದು ಮುನ್ನೂರು ಕಿಲೊಮೀಟರಿನಷ್ಟು ದೂರವಾಗಿಯೂ ಎರಡು ಮೀಟರಿನಷ್ಟು ಆಳವಾಗಿಯೂ ಹರಿಯಿತು.


ಎಡವಿ ಬೀಳನವನು, ಎದೆಗುಂದನವನು ಜಗದೊಳು ಸ್ಥಾಪಿಸುವ ತನಕ ಸದ್ಧರ್ಮವನು, ಎದುರುನೋಡುವುವು ದ್ವೀಪ-ದ್ವೀಪಾಂತರಗಳು ಆತನ ಧರ್ಮಶಾಸ್ತ್ರವನು.


ಹೊರಟಿರುವೆ ನಿನ್ನ ಪ್ರಜೆಗಳ ರಕ್ಷಣೆಗೆ ನಿನ್ನ ಅಭಿಷಿಕ್ತನ ಜೀವೋದ್ಧಾರಕೆ. ಬಡಿದುಹಾಕಿರುವೆ ದುರುಳನ ಬುರುಡೆಯನು ನೆಲಸಮಮಾಡಿರುವೆ ಅವನ ಮನೆಯನು.


ನೀನು, ನಿನ್ನ ಸೇನೆ ಹಾಗು ಪರಿವಾರ ಇಸ್ರಯೇಲಿನ ಪರ್ವತಗಳಲ್ಲಿ ಬಿದ್ದುಬಿಡುವಿರಿ; ನಾನು ನಿಮ್ಮನ್ನು ಮಾಂಸಾಹಾರಿಗಳಾದ ಬಗೆಬಗೆಯ ಹಕ್ಕಿಗಳಿಗೂ ಭೂಜಂತುಗಳಿಗೂ ಆಹಾರ ಮಾಡುವೆನು. ನೀವು ಬಯಲಿನಲ್ಲೇ ಬೀಳುವಿರಿ.


ಅವರು ಹೊರಟುಹೋಗುವಾಗ ನೋಡುವರು ನನಗೆ ದ್ರೋಹವೆಸಗಿದವರ ಹೆಣಗಳನು ಸಾಯುವುದಿಲ್ಲ ಅವುಗಳನ್ನು ಕಡಿಯುವ ಹುಳು ಆರುವುದಿಲ್ಲ ಅವುಗಳನ್ನು ಸುಡುವ ಬೆಂಕಿಯು ಎಲ್ಲ ಮನುಜರಿಗವು ಅಸಹ್ಯವಾಗಿರುವುವು.”


ಹತ್ತಿರದಲ್ಲೇ ಇದೆ ನಾ ನೀಡುವ ಮುಕ್ತಿ ಸಿಗುವದು ನನ್ನಿಂದ ವಿಮೋಚನಾ ಶಕ್ತಿ ನ್ಯಾಯ ನೀಡುವೆನು ರಾಷ್ಟ್ರಗಳಿಗೆ ನನ್ನ ಭುಜಬಲದಿಂದ ನನ್ನನ್ನು ನಿರೀಕ್ಷಿಸಿಕೊಂಡಿರುವರು ಜನರು ದೂರದೇಶಗಳಿಂದ ಕಾದಿರುವರು ಆ ಭುಜಬಲ ಸಾಧನೆಗಾಗಿ ನಂಬಿಕೆಯಿಂದ.


ಇಗೋ, ನನ್ನ ದಾಸನು ! ನನ್ನ ಆಧಾರ ಪಡೆದವನು ನನ್ನಿಂದ ಆಯ್ಕೆಯಾದವನು ನನಗೆ ಪರಮ ಪ್ರಿಯನು. ನೆಲೆಗೊಳಿಸಿರುವೆ ಇವನಲ್ಲಿ ನನ್ನ ಆತ್ಮವನು ಅನ್ಯರಾಷ್ಟ್ರಗಳಿಗೆ ಸಾರುವನಿವನು ಸದ್ಧರ್ಮವನು.


ಸರ್ವೇಶ್ವರನ ಭಯಭಕ್ತಿ ಅವಗೆ ಪರಿಮಳದಂತೆ. ತೀರ್ಪಿಡನಾತ ಕಣ್ಣಿಗೆ ತೋಚಿದಂತೆ ನಿರ್ಣಯಿಸನಾತ ಕಿವಿಗೆ ಬಿದ್ದಂತೆ.


ಚದರಿಹೋಗುವರು ಸರ್ವೇಶ್ವರನ ವಿರೋಧಿಗಳು ಆಗಸದಿಂದಾತ ಅವರ ವಿರುದ್ಧ ಗರ್ಜಿಸಲು! ನ್ಯಾಯ ತೀರಿಸುವನಾತ ಜಗದ ಕಟ್ಟಕಡೆಯವರೆಗೆ ಶಕ್ತಿಸಾಮರ್ಥ್ಯವನೀವನು ತಾ ನೇಮಿಸಿದರಸನಿಗೆ ಏರಿಸುವನು ತನ್ನಭಿಷಿಕ್ತನ ಒಲುಮೆಯನು ಉನ್ನತಿಗೆ.


ಹಗೆತನವಿರಿಸುವೆನು ನಿನಗೂ ಈ ಮಹಿಳೆಗೂ ನಿನ್ನ ಸಂತಾನಕ್ಕೂ ಇವಳ ಸಂತಾನಕ್ಕೂ ಜಜ್ಜುವುದಿವಳ ಸಂತಾನ ನಿನ್ನ ತಲೆಯನ್ನು ಕಚ್ಚುವೆ ನೀನಾ ಸಂತಾನದ ಹಿಮ್ಮಡಿಯನ್ನು.”


ಪ್ರಭುವಿನ ನುಡಿ : “ನಿನ್ನ ಶತ್ರುಗಳ ನೆತ್ತರಲಿ ನೀ ಕಾಲ್ತೊಳೆವಂತೆ I ನಿನ್ನ ನಾಯಿಗಳಿಗದನೆಕ್ಕಲು ಸಾಕಷ್ಟು ಸಿಗುವಂತೆ I ಬಾಷಾನಿನಿಂದವರನು ನಾ ಮರಳಿ ಬರಮಾಡುವೆ I ಸಮುದ್ರ ತಳದಿಂದವರನು ನಾ ಮತ್ತೆ ಮೇಲೆತ್ತುವೆ” II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು