Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 111:7 - ಕನ್ನಡ ಸತ್ಯವೇದವು C.L. Bible (BSI)

7 ನೀತಿ ಸತ್ಯತೆಯುಳ್ಳವು ಆತನ ಸತ್ಕಾರ್ಯಗಳು I ಸುಸ್ಥಿರವಾದವು ಆತನ ನಿಯಮ ನಿಬಂಧನೆಗಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆತನ ಕೈಕೆಲಸಗಳು ನೀತಿ, ಸತ್ಯತೆಗಳನ್ನು ಪ್ರಕಟಿಸುತ್ತವೆ; ಆತನ ನಿಯಮಗಳೆಲ್ಲಾ ಸ್ಥಿರವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆತನ ಕೈಕೆಲಸಗಳು ನೀತಿಸತ್ಯತೆಗಳನ್ನು ಪ್ರಕಟಿಸುತ್ತವೆ; ಆತನ ನಿಯಮಗಳೆಲ್ಲಾ ಸ್ಥಿರವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆತನ ಪ್ರತಿಯೊಂದು ಕಾರ್ಯವು ಒಳ್ಳೆಯದೂ ನ್ಯಾಯವಾದದ್ದೂ ಆಗಿದೆ. ಆತನ ಆಜ್ಞೆಗಳೆಲ್ಲಾ ನಂಬಿಕೆಗೆ ಯೋಗ್ಯವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ದೇವರ ಕೈಕೆಲಸಗಳು ಸತ್ಯವೂ, ನ್ಯಾಯವೂ ಆಗಿವೆ; ಅವರ ಸೂತ್ರಗಳೆಲ್ಲಾ ವಿಶ್ವಾಸಕ್ಕೆ ಯೋಗ್ಯವಾದವುಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 111:7
16 ತಿಳಿವುಗಳ ಹೋಲಿಕೆ  

ಪ್ರಭುವಿನ ಆಜ್ಞೆ ಪರಿಪೂರ್ಣ; ಜೀವನಕದು ನವಚೇತನ I ನಂಬಲರ್ಹ; ಪ್ರಭುವಿನ ಶಾಸನ ಮುಗ್ದರಿಗದು ಸುಜ್ಞಾನ II


ನೀತಿನ್ಯಾಯ ನಿನ್ನ ಸಿಂಹಾಸನದಸ್ತಿವಾರ I ಪ್ರೀತಿಸತ್ಯತೆ ನಿನ್ನ ಸಾನ್ನಿಧ್ಯ ಪರಿವಾರ II


ಸತ್ಯವೇ ನಿನ್ನ ವಾಕ್ಯದ ಸಾರಾಂಶ I ನಿನ್ನಯ ನೀತಿವಿಧಿಗಳೆಲ್ಲವೂ ಅನಿಶ II


ಹೇ ಪ್ರಭೂ, ನೀನಿರುವೆ ಹತ್ತಿರ I ನಿನ್ನ ಆಜ್ಞೆಗಳೆಲ್ಲ ಸುಸ್ಥಿರ II


ನೆನಪಿನಲ್ಲಿಡುವನು ಪ್ರಭು ತನ್ನ ವಾಗ್ದಾನವನು I ಸಾವಿರಾರು ತಲೆಗಳವರೆಗೂ ತನ್ನೊಪ್ಪಂದವನು II


ಕಂಡುಬಂದಿತು ಜಗದ ಎಲ್ಲೆ ಎಲ್ಲೆಗೆ I ನಮ್ಮ ದೇವ ಸಾಧಿಸಿದ ಜಯಗಳಿಕೆ II ಸ್ಮರಿಸಿಕೊಂಡನಾ ಪ್ರಭು ತನ್ನ ಪ್ರೀತಿಯನು I ಇಸ್ರಯೇಲ್ ಕುಲದ ಬಗ್ಗೆ ತನ್ನ ಸತ್ಯತೆಯನು II


“ನಿಮಗೆ ಪೊರೆಬಂಡೆ ಆತ, ಆತನ ಕಾರ್ಯ ದೋಷರಹಿತ ಆತನ ಮಾರ್ಗ ನ್ಯಾಯಯುತ, ಆ ದೇವ ನಂಬಿಕಸ್ತ. ಆತ ನಿರ್ವಂಚಕ, ಯಥಾರ್ಥನು ಹಾಗು ನೀತಿವಂತ.”


ನಿನ್ನ ಆಜ್ಞೆಗಳೆಲ್ಲ ನಂಬಲರ್ಹವಾದುವಯ್ಯಾ I ನಿಷ್ಕಾರಣವಾಗಿ ಹಿಂಸಿಸುತಿಹರು, ನೆರವಾಗಯ್ಯಾ II


ನಿನ್ನ ಆಜ್ಞೆಗಳು ಪ್ರಭು, ಸುಸ್ಥಿರ I ನಿನ್ನ ಆಲಯಕೆ ಪವಿತ್ರತೆ ಅರ್ಹ I ಯುಗಯುಗಾಂತರಕೂ ಅದು ಅರ್ಹ II


ಪ್ರೀತಿಯೂ ಸತ್ಯವೂ ಒಂದನ್ನೊಂದು ಕೂಡಿರುವುವು I ನೀತಿಯೂ ಶಾಂತಿಯೂ ಒಂದನ್ನೊಂದು ಚುಂಬಿಸುವುವು II


ನಾವು ವಿಶ್ವಾಸಭ್ರಷ್ಟರಾದರೂ ವಿಶ್ವಾಸಪಾತ್ರನಾತ; ಕಾರಣ, ತನ್ನ ಸ್ವಭಾವಕ್ಕೆ ವಿರುದ್ಧ ವರ್ತಿಸನಾತ.


ಪ್ರಭುವಿನ ನಿಯಮ ನೀತಿಬದ್ಧ; ಮನಸ್ಸಿಗದು ಒಸಗೆ I ಪ್ರಭುವಿನ ಕಟ್ಟಳೆ ಪರಿಶುದ್ಧ; ಕಣ್ಣಿಗದು ದೀವಿಗೆ II


ಹೇ ಪ್ರಭು, ನಿನ್ನ ವಾಕ್ಯ ಶಾಶ್ವತ I ಪರಲೋಕದಲಿ ಅದು ಚಿರ ಶಾಶ್ವತ II


ಗುರುತಿಸಲಾಗಿದ್ದ ಕಾಲವು ಕಳೆಯಿತು. ನೆಬೂಕದ್ನೆಚ್ಚರನು, “ನಾನು ಪರಲೋಕದ ಕಡೆಗೆ ಕಣ್ಣೆತ್ತಿ ನೋಡಿದೆ. ನನ್ನ ಬುದ್ಧಿ ಮತ್ತೆ ನನಗೆ ಸ್ವಾಧೀನವಾಯಿತು. ಆಗ ನಾನು ಪರಾತ್ಪರ ದೇವರನ್ನು ಕೊಂಡಾಡಿದೆ. ಜೀವಸ್ವರೂಪರಾದ ಅವರಿಗೆ ಸ್ತುತಿಸ್ತೋತ್ರಗಳನ್ನು ಸಲ್ಲಿಸಿದೆ: ಆತನ ಆಳ್ವಿಕೆ ಶಾಶ್ವತ ಆತನ ರಾಜ್ಯ ತಲತಲಾಂತರಕ್ಕೂ ಸ್ಥಿರ.


ಆದಕಾರಣ ಸರ್ವೇಶ್ವರ ಈ ಕೇಡನ್ನು ಸಕಾಲಕ್ಕೆ ನಮ್ಮ ಮೇಲೆ ಬರಮಾಡಿದ್ದಾರೆ. ನಮ್ಮ ದೇವರಾದ ಸರ್ವೇಶ್ವರ ತಾವು ಮಾಡುವ ಸಕಲ ಕಾರ್ಯಗಳಲ್ಲೂ ನ್ಯಾಯಸ್ವರೂಪರು. ನಾವೋ ಅವರ ಮಾತನ್ನು ಕೇಳಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು