Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 112:4 - ಕನ್ನಡ ಸತ್ಯವೇದವು C.L. Bible (BSI)

4 ಸಜ್ಜನನಿಗೆ ಮೂಡುವುದು ಜ್ಯೋತಿ ಕತ್ತಲೊಳು I ನ್ಯಾಯಪ್ರಿಯನು ಆತ, ದಯಾವಂತ, ಕೃಪಾಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯಥಾರ್ಥರಿಗೆ ಕತ್ತಲೆಯಲ್ಲಿಯೂ ಜ್ಯೋತಿ ಮೂಡುವುದು; ದಯೆಯೂ, ಕನಿಕರವೂ, ನೀತಿಯುಳ್ಳ ದೇವರೇ ಆ ಜ್ಯೋತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯಥಾರ್ಥರಿಗೆ ಕತ್ತಲೆಯಲ್ಲಿಯೂ ಜ್ಯೋತಿ ಮೂಡುವದು; ದಯೆಯೂ ಕನಿಕರವೂ ನೀತಿಯೂ ಉಳ್ಳ ದೇವರೇ ಆ ಜ್ಯೋತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆತನು ನೀತಿವಂತರಿಗೆ ಕತ್ತಲೆಯಲ್ಲಿ ಪ್ರಕಾಶಿಸುವ ಬೆಳಕಿನಂತಿರುವನು. ಆತನು ಒಳ್ಳೆಯವನೂ ದಯಾಮಯನೂ ಕೃಪಾಮಯನೂ ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯಥಾರ್ಥರಿಗೆ ಕತ್ತಲಲ್ಲಿ ಬೆಳಕು ಮೂಡುವುದು; ಅವರು ಕೃಪೆಯೂ, ಅನುಕಂಪವೂ, ನೀತಿಯೂ ಉಳ್ಳವವರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 112:4
26 ತಿಳಿವುಗಳ ಹೋಲಿಕೆ  

ಆಗ ನಿನ್ನ ಬಾಳು ನಡುಹಗಲಿಗಿಂತ ಪ್ರಜ್ವಲ ಕತ್ತಲು ಕೂಡ ಪ್ರಾತಃಕಾಲದಂತೆ ಉಜ್ವಲ!


ಹಾಗೂ ಹಸಿದವರಿಗೆ ಜೀವನಾಂಶವನ್ನೂ ಬಡವರಿಗೆ ಅಗತ್ಯವಾದುದನ್ನೂ ನೀಡಿದರೆ, ನಿಮ್ಮ ಜ್ಯೋತಿ ಕತ್ತಲಲ್ಲಿ ಬೆಳಗುವುದು; ಅಂಧಕಾರ ನೀಗಿ ಮಧ್ಯಾಹ್ನವಾಗುವುದು.


ಉದಯವಾಗುವುದು ಜ್ಯೋತಿ ಸಜ್ಜನರಿಗೆ I ಆನಂದವಿದೆ ಯಥಾರ್ಥ ಹೃದಯಿಗಳಿಗೆ II


ಪ್ರಿಯಮಕ್ಕಳೇ, ನಿಮ್ಮನ್ನು ಸನ್ಮಾರ್ಗದಿಂದ ತಪ್ಪಿಸುವುದಕ್ಕೆ ಯಾರಿಗೂ ಅವಕಾಶ ಕೊಡಬೇಡಿ. ಕ್ರಿಸ್ತಯೇಸು ಸತ್ಯಸ್ವರೂಪಿಯಾಗಿರುವಂತೆಯೇ ಸತ್ಯಕ್ಕನುಸಾರ ನಡೆಯುವ ಪ್ರತಿಯೊಬ್ಬನೂ ಸತ್ಯವಂತನೇ.


ನಿಮ್ಮ ತಂದೆಯಾದ ದೇವರಂತೆ ನೀವೂ ದಯಾವಂತರಾಗಿರಿ.


ಕ್ರಿಸ್ತಯೇಸು ಸತ್ಯಸ್ವರೂಪಿ ಎಂಬುದನ್ನು ನೀವು ಬಲ್ಲಿರಿ. ಎಂದೇ, ಸತ್ಯಮಾರ್ಗದಲ್ಲಿ ನಡೆಯುವ ಪ್ರತಿಯೊಬ್ಬನೂ ಅವರಿಂದ ಜನಿಸಿದವನು ಎಂಬುದು ನಿಮಗೆ ವೇದ್ಯವಾಗಿರಬೇಕು.


ಪರಸ್ಪರ ಕರುಣೆಯಿಂದಲೂ ಕನಿಕರದಿಂದಲೂ ವರ್ತಿಸಿರಿ. ಯೇಸುಕ್ರಿಸ್ತರಲ್ಲಿ ದೇವರು ನಿಮ್ಮನ್ನು ಕ್ಷಮಿಸಿದಂತೆಯೇ, ನೀವು ಸಹ ಒಬ್ಬರನ್ನೊಬ್ಬರು ಕ್ಷಮಿಸಿರಿ.


ಪ್ರಭು ದಯಾಪೂರಿತ, ಆತನ ಪ್ರೀತಿ ಶಾಶ್ವತ I ತೋರಿ ಆತನಿಗೆ ನಿಮ್ಮ ಸ್ತೋತ್ರ ಕೃತಜ್ಞತಾ II


ಕಾರಣ -ಸಚ್ಚರಿತೆ, ಸದಾಚಾರ ಮತ್ತು ಸತ್ಯಸಂಧತೆ ಇವೆಲ್ಲವೂ ಬೆಳಕಿನ ಕುಡಿಗಳು.


ನನ್ನಲ್ಲಿ ವಿಶ್ವಾಸವಿಡುವವನು ಅಂಧಕಾರದಲ್ಲಿ ಉಳಿಯಬಾರದೆಂದು ನಾನೇ ಜಗಜ್ಯೋತಿಯಾಗಿ ಬಂದಿದ್ದೇನೆ.


ಬೆಳಗಿಸುವನು ನಿನ್ನ ಸತ್ಯಸಂಧತೆಯನು ಸೂರ್ಯೋದಯದಂತೆ I ಪ್ರಕಟಿಸುವನು ನಿನ್ನಾ ನ್ಯಾಯನಿಷ್ಠೆಯನು ನಡುಹಗಲಿನಂತೆ II


“ನನ್ನ ನಾಮದಲ್ಲಿ ಭಯಭಕ್ತಿಯಿಂದ ಇರುವ ನಿಮಗಾದರೋ ಜೀವೋದ್ಧಾರಕನೆಂಬ ಸೂರ್ಯನು ಉದಯಿಸಿ, ಸುಕ್ಷೇಮವನ್ನೀಯುವ ಕಿರಣಗಳನ್ನು ಬೀರುವನು. ಕೊಟ್ಟಿಗೆಯಿಂದ ಹೊರಬಂದ ಕರುಗಳಂತೆ ನೀವು ಕುಣಿದು ಕುಪ್ಪಳಿಸುವಿರಿ.


ಸನ್ಮಾರ್ಗದಲ್ಲಿ ನಡೆಯದವನೂ ಸಹೋದರನನ್ನು ಪ್ರೀತಿಸದವನೂ ದೇವರಿಂದ ಜನಿಸಿದವನಲ್ಲ. ಹೀಗೆ ದೇವರ ಮಕ್ಕಳು ಯಾರು ಮತ್ತು ಸೈತಾನನ ಮಕ್ಕಳು ಯಾರು ಎಂಬುದನ್ನು ತಿಳಿಯಬಹುದು.


ಆದುದರಿಂದ ನಿಮ್ಮ ನಡತೆಯ ವಿಷಯದಲ್ಲಿ ನೀವು ಅತ್ಯಂತ ಜಾಗರೂಕರಾಗಿರಿ; ಮೂಢರಂತಿರದೆ ಜಾಣರಾಗಿ ಜೀವಿಸಿರಿ.


ಸರ್ವೇಶ್ವರನ ದಾಸನಾದ ನನ್ನ ಮಾತುಗಳನು ಕೇಳಿ : ಭಯಭಕ್ತಿಯುಳ್ಳವನಾರು ನಿಮ್ಮೊಳು ಆ ಸರ್ವೇಶ್ವರನಲಿ? ಬೆಳಕಿಲ್ಲದೆ ಕತ್ತಲಲಿ ನಡೆಯುವವನು ಭರವಸೆಯಿಡಲಿ ಆ ಸರ್ವೇಶ್ವರನ ನಾಮದಲಿ; ಆಶ್ರಯ ಪಡೆಯಲಿ ತನ್ನಾ ದೇವನಲಿ.


ನಿನ್ನ ಯೋಜನೆಗಳು ಸಫಲವಾಗುವುವು ನಿನ್ನ ಮಾರ್ಗಗಳು ಪ್ರಜ್ವಲಿಸುವುವು.


ಆಗ ಬೆಳಗುತ್ತಿತ್ತು ಆತನ ದೀಪ ತಲೆಯ ಮೇಲೆ ಇರುಳಲ್ಲೂ ಸಂಚರಿಸುತ್ತಿದ್ದೆ ಆತನ ಬೆಳಕಿನಲೇ.


ಪ್ರಭು ಕೃಪಾಳು, ನ್ಯಾಯಪ್ರಿಯನು I ಕರುಣಾಮಯನು, ನಮ್ಮ ದೇವನು II


ಎಲ್ಲ ಜೀವಿಗಳಿಗೆ ನೀ ಕೈ ನೀಡುವವನು I ಎಲ್ಲರ ಕೋರಿಕೆಗಳನು ಈಡೇರಿಸುವವನು II


ನೀತಿ ಪ್ರೀತಿ ಪಾಲಿಸುವವನಿಗೆ ಲಭಿಸುವುದು ಆಯುಸ್ಸು, ಕೀರ್ತಿ, ದೊಡ್ಡಸ್ತಿಕೆ.


“ಇದನ್ನು ಆಚರಿಸುವಾಗ ನೀವು ಉದಯಕಾಲದ ಸೂರ್ಯನಂತೆ ಪ್ರಜ್ವಲಿಸುವಿರಿ. ಆರೋಗ್ಯಭಾಗ್ಯವು ನಿಮಗೆ ಬೇಗನೆ ದೊರಕುವುದು. ನಿಮ್ಮ ಸದಾಚಾರವೆ ನಿಮಗೆ ಮುಂಬಲವಾಗಿ ನಡೆಸುವುದು; ಸರ್ವೇಶ್ವರ ಸ್ವಾಮಿಯ ಮಹಿಮೆ ನಿಮಗೆ ಹಿಂಬಲವಾಗಿ ಇರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು